Blog Archive

ಹೋಂವರ್ಕ್ ಮಾಡದ್ದಕ್ಕೆ ಉಪನ್ಯಾಸಕನಿಂದ ಹಲ್ಲೆ ಆರೋಪ… ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

Wednesday, September 12th, 2018
manglore

ಪುತ್ತೂರು: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯೋರ್ವನ ಕೆನ್ನೆ ಮತ್ತು ತಲೆಗೆ ಕೈಯಿಂದ ಬಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ವಿದ್ಯಾರ್ಥಿ ಈಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷದ ಡಿಪ್ಲೋಮ ವಿದ್ಯಾರ್ಥಿ, ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಕೊಡಾಜೆ ನಿವಾಸಿ ಮಹಮ್ಮದ್ ಶರೀಫ್ ಅವರ ಪುತ್ರ ಮಹಮ್ಮದ್ ಮನ್ಸೂರ್ (18) ಹಲ್ಲೆಗೊಳಗಾದ ವಿದ್ಯಾರ್ಥಿ. ಪ್ರಥಮ ಇಂಟರ್ನಲ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ ಪ್ರಶ್ನೆಗಳಿಗೆ 2 ಸಲ […]

ರೇಬಿಸ್​​ನಿಂದ ಯುವಕ‌ ಸಾವು… ಅಂತ್ಯಕ್ರಿಯೆಗೆ ಹೋಗಿದ್ದವರಿಗೆ ಆತಂಕ!

Tuesday, September 4th, 2018
rabees

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಇಚಿಲಂಪಾಡಿ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಆರು ದಿನಗಳ ಹಿಂದೆ ರೇಬಿಸ್ನಿಂದ ಮೃತಪಟ್ಟ ಯುವಕನ ಅಂತಿಮ ದರ್ಶನದಲ್ಲಿ ಭಾಗವಹಿಸಿದ್ದ ನೂರಾರು ಮಂದಿ‌ ಇದೀಗ ಆತಂಕದಲ್ಲಿದ್ದಾರೆ. ವೈರಾಣು ಹರಡುವಿಕೆಯಿಂದ ಆತಂಕಕ್ಕೊಳಗಾಗಿರುವ ಸ್ಥಳೀಯರು ಇದೀಗ ಆ್ಯಂಟಿ ರೇಬಿಸ್ ಇಂಜೆಕ್ಷನ್ ಹಾಕಿಸಿಕೊಳ್ಳುತ್ತಿದ್ದಾರೆ‌. ಸುಳ್ಯದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಇಚ್ಲಂಪಾಡಿಯ ಕಾಯರ್ತಡ್ಕ ನಿವಾಸಿ ಆಶಿತ್ ಪೂಜಾರಿ (24) ಇತ್ತೀಚೆಗೆ ನಿಧನರಾಗಿದ್ದರು. ಹಠಾತ್ ಅನಾರೋಗ್ಯಕ್ಕೀಡಾಗಿ ಆ. 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಬಿಜೆಪಿಗೆ 25, ಉಳ್ಳಾಲದಲ್ಲಿ ಕಾಂಗ್ರೆಸಿಗೆ 13, ಬಂಟ್ವಾಳದಲ್ಲಿ ಕಾಂಗ್ರೆಸಿಗೆ 12

Monday, September 3rd, 2018
puttur

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಬಿಜೆಪಿ ಪಾಲಾಗಿದೆ. ಆಗಸ್ಟ್ 31 ರಂದು ದಕ್ಷಿಣ ಕನ್ನಡ ಜಿಲ್ಲೆಯ 2 ನಗರಸಭೆ ಹಾಗೂ 1 ಪುರಸಭೆಗೆ ಚುನಾವಣೆ ನಡೆದಿತ್ತು. ಪುತ್ತೂರು ನಗರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಜಿದ್ದಾಜಿದ್ದಿಯ ಹೋರಾಟದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಪುತ್ತೂರಿನಲ್ಲಿ ಬಿಜೆಪಿ ದಾಖಲೆಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಧೂಳಿಪಟವಾಗಿದೆ. ಇಲ್ಲಿ ಇನ್ನೊಂದು ಗಮನಾರ್ಹ ಸಂಗತಿ ಎಂದರೆ ಇದೇ ಮೊದಲಬಾರಿಗೆ ಪುತ್ತೂರು ನಗರಸಭೆಯಲ್ಲಿ ಎಸ್ ಡಿಪಿಐ ಖಾತೆ ತೆರೆದಿದೆ. ಆಗಸ್ಟ್ 31 ರಂದು […]

ಪುತ್ತೂರು ನಗರಸಭೆ ಚುನಾವಣೆಯಲ್ಲಿ  ಮತ ಹಕ್ಕು ಚಲಾಯಿಸಿದ ಕೇಂದ್ರ ಸಚಿವ ಸದಾನಂದಗೌಡ

Friday, August 31st, 2018
sadanand-gowda

ಮಂಗಳೂರು: ಪುತ್ತೂರು ನಗರಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಮತದಾನ ಮಾಡಿದರು. ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಮತ ಚಲಾಯಿಸಿದ ಸದಾನಂದಗೌಡ, ಚುನಾವಣೆಯಲ್ಲಿ ಹೆಚ್ಚಿನ ಕಡೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರಕಾರದ ನೂರು ದಿನಕ್ಕೆ ಜನರು ಬೇಸರದಲ್ಲಿದ್ದಾರೆ. ಸರಕಾರ ಬರೀ ಘೋಷಣೆ, ಆಶ್ವಾಸನೆಗಳಿಗೆ ಸೀಮಿತವಾಗಿದೆ. ಸಮ್ಮಿಶ್ರ ಸರಕಾರದಲ್ಲಿ ಅಸಮಾಧಾನವೇ ತುಂಬಿದೆ. ಇಂತಹ ಅಸ್ಥಿರ ಸರಕಾರ ಕರ್ನಾಟಕದಲ್ಲಿ ಹಿಂದೆಂದೂ ಇರಲಿಲ್ಲ ಎಂದರು. ಪದೇ ಪದೆ ನಡೆಯುವ ಚುನಾವಣೆಯಿಂದ ಅಭಿವೃದ್ಧಿ ಕಾರ್ಯಗಳಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 11ರವರೆಗೆ ಶೇ 30.78ರಷ್ಟು ಮತ ಚಲಾವಣೆ

Friday, August 31st, 2018
election

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆಗಳು ಹಾಗೂ ಬಂಟ್ವಾಳ ಪುರಸಭೆಯ 89 ವಾರ್ಡ್ ಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಎಲ್ಲ ವಾರ್ಡ್ ಗಳಲ್ಲಿ ಏಕಕಾಲಕ್ಕೆ ಮತದಾನ ಆರಂಭವಾಯಿತು. ಬೆಳಿಗ್ಗೆ 9 ಗಂಟೆ ವೇಳೆಗೆ ಉಳ್ಳಾಲದಲ್ಲಿ ಶೇಕಡ 13ರಷ್ಟು, ಪುತ್ತೂರಿನಲ್ಲಿ ಶೇ 14ರಷ್ಟು ಮತ್ತು ಬಂಟ್ವಾಳದಲ್ಲಿ ಶೇ 15ರಷ್ಟು ಮತದಾನ ನಡೆದಿದೆ. ಬೆಳಿಗ್ಗೆ 11 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡ 30.78ರಷ್ಟು ಮತದಾನವಾಗಿದೆ. ಉಳ್ಳಾಲ ನಗರಸಭೆಯಲ್ಲಿ ಶೇ 28.70ರಷ್ಟು, […]

ಉಳ್ಳಾಲ, ಪುತ್ತೂರು, ಬಂಟ್ವಾಳ ನಗರಸಭೆ ಚುನಾವಣೆ

Friday, August 31st, 2018
election

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆ, ಪುತ್ತೂರು ನಗರಸಭೆ ಹಾಗೂ ಬಂಟ್ವಾಳ ಪುರಸಭೆಗೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಮುಂಜಾನೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನದಲ್ಲಿ ಭಾಗಿಯಾಗಿದ್ದಾರೆ. ಉಳ್ಳಾಲ ನಗರಸಭೆಯ 31 ವಾರ್ಡುಗಳಿಗೆ 102 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇಲ್ಲಿ 44132 ಮತದಾರರಿದ್ದು, 43 ಮತಗಟ್ಟೆಗಳಲ್ಲಿ 43 ಇವಿಎಂ ವ್ಯವಸ್ಥೆ ಮಾಡಲಾಗಿದೆ. 172 ಮತಗಟ್ಟೆ ಸಿಬ್ಬಂದಿ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಂಟ್ವಾಳ ಪುರಸಭೆಯ 27 ವಾರ್ಡ್ಗಳಿಗೆ 71 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇಲ್ಲಿ 34102 ಮತದಾರರಿದ್ದು, 32 ಮತಗಟ್ಟೆಗಳಲ್ಲಿ […]

ಪುತ್ತೂರು ಅಗ್ನಿಶಾಮಕ ಠಾಣೆಯ ಎನ್.ಸಿ.ರಾಮಚಂದ್ರ ನಾಯ್ಕಗೆ ರಾಷ್ಟ್ರಪತಿ ಪದಕ..!

Wednesday, August 15th, 2018
ramachandra

ಮಂಗಳೂರು: 2018ನೇ ಸಾಲಿನ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ವತಿಯಿಂದ ಉತ್ತಮ ಕೆಲಸ ನಿರ್ವಹಿಸಿರುವುದಕ್ಕೆ ನೀಡಲ್ಪಡುವ ಗೌರವಾನ್ವಿತ ರಾಷ್ಟ್ರಪತಿ ಪದಕಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಅಗ್ನಿಶಾಮಕ ಠಾಣೆಯ ಎನ್.ಸಿ.ರಾಮಚಂದ್ರ ನಾಯ್ಕರವರನ್ನು ಘೋಷಿಸಲಾಗಿದೆ. ಎನ್.ಸಿ.ರಾಮಚಂದ್ರ ನಾಯ್ಕ ಅವರು 1993ರಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಅಗ್ನಿಶಾಮಕ ಚಾಲಕರಾಗಿ ಸೇರ್ಪಡೆಗೊಂಡು ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಬಳಿಕ ಅಗ್ನಿಶಾಮಕ ಚಾಲಕ ಹುದ್ದೆಯಿಂದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ […]

ಬಂಟ್ವಾಳ ಪುರಸಭೆ ಹಾಗೂ ಪುತ್ತೂರು, ಉಳ್ಳಾಲ ನಗರಸಭೆಗೆ ಆ. 29ರಂದು ಚುನಾವಣೆ

Saturday, August 4th, 2018
ullal town panchayath

ಮಹಾನಗರ : ಜಿಲ್ಲೆಯ ಬಂಟ್ವಾಳ ಪುರಸಭೆ ಹಾಗೂ ಪುತ್ತೂರು, ಉಳ್ಳಾಲ ನಗರಸಭೆಗೆ ಆ. 29ರಂದು ಚುನಾವಣೆ ನಡೆಯಲಿದ್ದು, ಈಗಾಗಲೇ ಪಾಲಿಕೆಯ ವಾರ್ಡ್‌ ವಾರು ಮೀಸಲಾತಿ ಪ್ರಕಟವಾಗಿದ್ದು,ಇದಕ್ಕೆ ಆಕ್ಷೇಪಗಳು ದಾಖಲಾಗಿದ್ದು, ಒಂದೆರಡು ದಿನದಲ್ಲಿ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಬಿಡುಗಡೆಯಾದ ಕರಡು ಮೀಸಲಾತಿಗೆ ಸುಮಾರು 100ಕ್ಕೂ ಅಧಿಕ ಆಕ್ಷೇಪಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಗಿದೆ. ಇದನ್ನು ಪರಾಮರ್ಶಿಸಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಿದ್ದು, ಇದರಂತೆ ಈಗಾಗಲೇ ಮೀಸಲಾದ 5ರಿಂದ 6 ಸ್ಥಾನಗಳಲ್ಲಿ ಬದಲಾವಣೆಯಾಗುವ ಸಂಭವವಿದೆ. ಅಂತಿಮ ಮೀಸಲಾತಿ […]

ಪುತ್ತೂರಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ..ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು!

Saturday, July 14th, 2018
fighiting

ಮಂಗಳೂರು: ಪುತ್ತೂರಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು, ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ದರ್ಬೆ ಜಂಕ್ಷನ್ ಬಳಿ ಮೂವರು ವಿದ್ಯಾರ್ಥಿಗಳು ಓರ್ವ ವಿದ್ಯಾರ್ಥಿ ಜೊತೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ವಿದ್ಯಾರ್ಥಿ ವಿನಯಕುಮಾರ್ಗೆ ಗಾಯವಾಗಿದ್ದು, ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಮೂವರು ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚನೆ..ಆರೋಪಿ ಸೆರೆ!

Saturday, July 7th, 2018
arrested

ಪುತ್ತೂರು: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದು, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಹಾರಾಡಿ ನಿವಾಸಿ ರಿಕ್ಷಾ ಚಾಲಕ ರವಿ ಎಂಬಾತ ಬಂಧಿತ ಆರೋಪಿ. ಈತ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಕಿವಿ ಓಲೆ ಹಾಗೂ ಬೇರೆ ಬೇರೆ ಸಂದರ್ಭದಲ್ಲಿ ಒಟ್ಟು 70,000 ರೂಪಾಯಿಯನ್ನು ಪಡೆದಿದ್ದ. ಜೊತೆಗೆ 2018ರ ಎಪ್ರಿಲ್ 12ರಂದು ತನ್ನ ಮನೆಯನ್ನು ತೋರಿಸುವುದಾಗಿ ಹೇಳಿ ಪುತ್ತೂರು […]