Blog Archive

ಜ್ಯೋತಿಷಿ ಪ್ರಭಾವದಿಂದ ಡಿವೋರ್ಸ್ : ರಾಡ್​ನಿಂದ ಹಲ್ಲೆ ಮಾಡಿದ ವ್ಯಕ್ತಿ

Tuesday, March 23rd, 2021
Astrologer

ಬಂಟ್ವಾಳ: ವರ್ಷದ ಹಿಂದೆ  ತನ್ನ ಪತ್ನಿ ಬಿಟ್ಟು ಹೋಗಲು ಜ್ಯೋತಿಷಿಯೇ ಕಾರಣ ಎಂದು ಆರೋಪಿಸಿ ರಾಡ್ನಿಂದ ಹಲ್ಲೆಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಸಿ. ರೋಡ್ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಎಂಬಾತನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷ್ಯದ ಮೂಲಕ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದ. ತನ್ನ ಹೆಂಡತಿ ಬಿಟ್ಟು ಹೋಗಲು ಕಾರಣವಾಗಿದ್ದ ಎಂಬ ಕೋಪದಲ್ಲಿ ಪ್ರಭು, […]

ಹಲವು ಬಾರಿ ಅದೇ ಅಂಗಡಿಯಿಂದ ಮಾಂಸ ಖರೀದಿಸಿದ ವ್ಯಕ್ತಿಯೇ ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ್ದ !

Saturday, January 16th, 2021
N.ShashiKumar

ಮಂಗಳೂರು :  ತೊಕ್ಕೊಟ್ಟುವಿನಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆಯಲ್ಲಿ ತಾಯಿ ಜೊತೆ ವಾಸವಿದ್ದ ನಿವಾಸಿ ನಾಗರಾಜ (37) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಆರೋಪಿ ನಾಗರಾಜ ತೊಕ್ಕೊಟ್ಟಿನ ಇದೇ ಬೀಫ್ ಸ್ಟಾಲ್‌ನಿಂದ ಹಲವು ಬಾರಿ ಮಾಂಸ ಖರೀದಿಸಿ ತನ್ನ ಸ್ನೇಹಿತನ ಮನೆಯಲ್ಲಿ ಅಡುಗೆ ಮಾಡಿ ಸೇವಿಸಿದ್ದ ಎಂದು ತಿಳಿಸಿದ್ದಾರೆ. ಆತ  ಈ ಹಿಂದೆ ಬೀಫ್ ಸ್ಟಾಲ್‌ ಮಾಲಕ […]

ವಿಟ್ಲದಲ್ಲಿ ಎಸ್‌ಡಿಪಿಐ ಕಚೇರಿಗೆ ಬೆಂಕಿ

Monday, January 4th, 2021
sdpi

ವಿಟ್ಲ :  ಎಸ್‌ಡಿಪಿಐ ವಿಟ್ಲ ವಲಯ ಕಚೇರಿಗೆ ಬೆಂಕಿ ಹಾಕಿರುವ ಘಟನೆ ಮೇಗಿನಪೇಟೆಯಲ್ಲಿ ನಡೆದಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದ್ದು, ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಕಚೇರಿಯ ಮುಂಭಾಗ ಹಾನಿಗೊಂಡಿದೆ. ಸೋಮವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.  

ಮಲ್ಲಿಕಟ್ಟೆಯಲ್ಲಿ 9 ವರ್ಷದ ಬಾಲಕನ ಸಹಿತ ಕಾರನ್ನು ಟೋಯಿಂಗ್‌ ಮಾಡಿದ ಪೊಲೀಸರು

Friday, December 25th, 2020
towing

ಮಂಗಳೂರು: ಮಲ್ಲಿಕಟ್ಟೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು 9 ವರ್ಷದ ಬಾಲಕನ ಸಹಿತ ಕಾರನ್ನು ಸಂಚಾರ ಪೊಲೀಸರು ಟೋಯಿಂಗ್‌ ಮಾಡಿ ಠಾಣೆಗೆ ಎಳೆದೊಯ್ದ ಘಟನೆ ಗುರುವಾರ ನಡೆದಿದೆ. ಕಾರನ್ನು ವಸತಿ ಸಮುಚ್ಚಯವೊಂದರ ಪಕ್ಕದಲ್ಲಿ ನಿಲ್ಲಿಸಿ ಮಿಜಾರಿನ  ದಿವ್ಯಾ ಮತ್ತು ಅವರ ಓರ್ವ ಮಗ ಅಂಗಡಿಗೆ ತೆರಳಿದ್ದರು. ಚಾಲಕ ಮತ್ತು ದಿವ್ಯಾ ಅವರ ಕಿರಿಯ ಪುತ್ರ, ನಾಲ್ಕನೇ ತರಗತಿ ವಿದ್ಯಾರ್ಥಿ ಪ್ರಖ್ಯಾತ್‌ ಕಾರಿನಲ್ಲೇ ಇದ್ದ. ದಿವ್ಯಾ ಅವರು ಮೊಬೈಲನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದನ್ನು ಗಮನಿಸಿದ ಚಾಲಕ ಅದನ್ನು ದಿವ್ಯಾರಿಗೆ ನೀಡಲೆಂದು […]

ಉಜಿರೆಯ ಎಂಟರ ಬಾಲಕ ಅನುಭವ್ ಕೋಲಾರದಲ್ಲಿ ಪತ್ತೆ, ಆರು ಮಂದಿ ಅಪಹರಣಕಾರರು ವಶಕ್ಕೆ

Saturday, December 19th, 2020
Anubhav

ಬೆಳ್ತಂಗಡಿ : ಉಜಿರೆಯ ಎಂಟರ ಹರೆಯದ ಬಾಲಕ ಅನುಭವ್ ನನ್ನು ಕೋಲಾರದಲ್ಲಿ ಸುರಕ್ಷಿತವಾಗಿ ಪತ್ತೆ ಹಚ್ಚವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು  ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5ರ ಹೊತ್ತಿಗೆ ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನೂ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು ಕೋಲಾರದಿಂದ ವಿಶೇಷ ತನಿಖಾ ತಂಡ ಪ್ರಯಾಣ ಆರಂಭಿಸಿದೆ. ಕೋಲಾರದ ಮಾಲೂರು ತಾಲೂಕಿನ ಕೂರ್ನ ಹೊಸಹಳ್ಳಿ […]

ಪದವಿನಂಗಡಿಯಲ್ಲಿ ಶಿವಾಜಿ ಮೂರ್ತಿ ಸ್ಥಾಪಿಸಲು ಕಟ್ಟಲಾಗಿದ್ದ ಕಟ್ಟೆ ತೆರವುಗೊಳಿಸಿದ ಪೊಲೀಸರು

Monday, December 7th, 2020
Shivaji

ಮಂಗಳೂರು :  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಹೊರವಲಯದ ಪದವಿನಂಗಡಿ ಬಳಿ ಅಶ್ವತ್ಥಮರದ ಕಟ್ಟೆ ಎದುರುಗಡೆ ಶಿವಾಜಿ ಮೂರ್ತಿ ಇರಿಸಲು ಸಿದ್ಧತೆಗಳನ್ನು ನಡೆಸಿದ್ದರು, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಮೂರ್ತಿ ಸ್ಥಾಪಿಸಲು ಕಟ್ಟಲಾಗಿದ್ದ ಕಟ್ಟೆಯನ್ನು ತೆರವುಗೊಳಿಸಿದ್ದಾರೆ. ಪದವಿನಂಗಡಿ ಅಶ್ವತ್ಥಕಟ್ಟೆಯ ಎದುರಿನ ಜಾಗದಲ್ಲಿ ಶಿವಾಜಿ ಮೂರ್ತಿ ಇರಿಸಲು ಹಿಂಜಾವೇ ಕಾರ್ಯಕರ್ತರು ಶನಿವಾರ ರಾತ್ರಿ ಕಟ್ಟೆಯೊಂದನ್ನು ಕಟ್ಟಿ ಕೆಲಸ ಆರಂಭಿಸಲು ಮುಂದಾದಾಗ ಇನ್ನೊಂದು ಗುಂಪಿನಿಂದ ವಿರೋಧ ವ್ಯಕ್ತವಾಯಿತು. ಈ ವಿಚಾರ ಪೊಲೀಸರಿಗೆ ಗೊತ್ತಾಯಿತು. ರವಿವಾರ ಸ್ಥಳಕ್ಕೆ ಆಗಮಿಸಿದ […]

ಮಂಗಳೂರು ವ್ಯಾಪ್ತಿಯ ಎಂಟು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

Friday, November 20th, 2020
Police Medal

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಎಸ್ಪಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಎಂಟು ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಪಶ್ಚಿಮ ವಲಯದ ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಎ.ಸಿ., ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದು, ಪ್ರಸ್ತುತ ಬೆಂಗಳೂರು ವಿವೇಕ ನಗರ ಇನ್‌ಸ್ಪೆಕ್ಟರ್ ಆಗಿರುವ ರಫೀಕ್ ಕೆ.ಎಂ., ಸಿಸಿಬಿ ಎಎಸ್‌ಐ ಆಗಿರುವ ಹರೀಶ್ ಪದವಿನಂಗಡಿ, ಎನ್‌ಸಿಪಿಎಸ್‌ನ ಚಂದ್ರಶೇಖರ್, ಡಿಸಿಐಬಿನ ಉದಯ ರೈ ಮಂದಾರ, ಸಿಎಆರ್ ಹೆಡ್ ಕಾನ್‌ಸ್ಟೇಬಲ್ […]

ಕೂಳೂರು ಮೇಲ್ಸೇತುವೆಯಿಂದ ಹಾರಿದ ವ್ಯಕ್ತಿ ನಾಪತ್ತೆ

Tuesday, November 3rd, 2020
Kuluru River

ಮಂಗಳೂರು : ಪ್ರತ್ಯಕ್ಷದರ್ಶಿಯೊಬ್ಬರು  ಕೂಳೂರು ಮೇಲ್ಸೇತುವೆಯಿಂದ ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವ ನದಿಗೆ ಹಾರಿರುವ  ಬಗ್ಗೆ  ಪೊಲೀಸರಿಗೆ ದೂರು  ನೀಡಿದ ಹಿನ್ನಲೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 10:30ರ ಸುಮಾರಿಗೆ ವ್ಯಕ್ತಿಯೊಬ್ಬರು ಮೇಲ್ಸೇತುವೆಯಲ್ಲಿ ಸ್ವಲ್ಪ ನಡೆದು ಬಳಿಕ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ‌‌ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪಣಂಬೂರು ಹಾಗೂ ಕಾವೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜತೆಗೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಕಾರ್ಯಾಚರಣೆ […]

ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ, ಪೊಲೀಸರು ಎಚ್ಚೆತ್ತು ಕೊಳ್ಳಬೇಕು

Wednesday, October 28th, 2020
vhp

ಮಂಗಳೂರು: ಕರಾವಳಿಯಲ್ಲಿ ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ. ಕಿಶನ್ ಹೆಗ್ಡೆ, ಸಂಪತ್ ಕುಮಾರ್, ಹಾಗೂ ಸುರೇಂದ್ರ ಬಂಟ್ವಾಳ್ ಎಂಬ ಯುವಕ ರು ಪರಸ್ಪರ ವೈಯಕ್ತಿಕ ದ್ವೇಷ ಗಂಗ್ವಾರ್ ಗಳಿಗೆ ಬಲಿಯಾಗಿದ್ದರೆ, ಇಂತಹ ಕೃತ್ಯಗಳು ಮುಂದೆ ನಡೆಯಬಾರದು ಎಂದು ಪೊಲೀಸರಿಗೆ ಮನವಿ ಸಲ್ಲಿಸಿರುವುದಾಗಿ ವಿಶ್ವ ಹಿಂದೂ ಪರಿಷತ್ತಿನ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇಂತಹ ಕೃತ್ಯಗಳು ನಡೆದ ಕೂಡಲೇ ಆ ಪ್ರದೇಶದ ಯುವಕರನ್ನು ಕರೆಸಿ […]

ಮಂಡ್ಯ: ಅರ್ಚಕರ ಕೊಲೆ ಆರೋಪಿಗಳನ್ನುಗುಂಡು ಹಾರಿಸಿ, ಬಂಧಿಸಿದ ಪೊಲೀಸರು

Monday, September 14th, 2020
Accused

ಮಂಡ್ಯ: ಗುತ್ತಲು ಅರಕೇಶ್ವರಸ್ವಾಮಿ ದೇಗುಲದ ಅರ್ಚಕರ ಕೊಲೆ ಆರೋಪಿಗಳನ್ನು ಪೊಲೀಸರು ಸೋಮವಾರ ನಸುಕಿನಲ್ಲಿ ಗುಂಡು ಹಾರಿಸಿ, ಬಂಧಿಸಿದ್ದಾರೆ. ಮೂವರು ಆರೋಪಿಗಳು ಮದ್ದೂರು ತಾಲ್ಲೂಕು ಸಾದೊಳಲು ಗೇಟ್‌ನ ಬಸ್ ತಂಗುದಾಣದಲ್ಲಿ ಮಲಗಿದ್ದರು. ಸೋಮವಾರ ನಸುಕಿನಲ್ಲಿ ಆರೋಪಿಗಳನ್ನು ಸುತ್ತುವರಿದ ಪೊಲೀಸರು ಶರಣಾಗಲು ಸೂಚನೆ ನೀಡಿದರು ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹರಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧಿಸಲಾಯಿತು. ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಆರೋಪಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಆರೋಪಿಗಳು ನಡೆಸಿದ ಹಲ್ಲೆಯಿಂದ ಗಾಯಗೊಂಡ ಒಬ್ಬರು ಸಬ್ […]