Blog Archive

ಅಣ್ಣನ ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿದ ಚಿಕ್ಕಪ್ಪ

Thursday, July 16th, 2020
hasan murder

ಹಾಸನ: ಯುವತಿಯೊಬ್ಬಳನ್ನು ಒಂದು ಬಾರಿ ಅಪಹರಿಸಿ ಬುದ್ದಿ ಮಾತು ಹೇಳಿದ್ದರು ಕೇಳದೆ ಎರಡನೇ ಬಾರಿ ಅಪಹರಣಕ್ಕೆ ಯತ್ನಿಸಿದಾಗ  30 ವರ್ಷದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ. ಮಧು (30) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮಧು ಸೊಪ್ಪಿನಹಳ್ಳಿಯ ನಿವಾಸಿಯಾಗಿದ್ದು, ಇದೇ ಗ್ರಾಮದ ಮತ್ತೊಬ್ಬ ನಿವಾಸಿ ರೂಪೇಶ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಮೃತಪಟ್ಟ ಮಧು ಆರೋಪಿ ರೂಪೇಶ್ ಅಣ್ಣನ ಮಗಳನ್ನು ಪ್ರೀತಿಸಿದ್ದು, ಕೆಲ ತಿಂಗಳ ಹಿಂದಷ್ಟೇ ಆಕೆಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ […]

ವೆನ್ ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ, ಪತ್ತೆಗಾಗಿ ಪೊಲೀಸ್ ತಂಡ ರಚನೆ

Sunday, July 5th, 2020
Devaraj

ಮಂಗಳೂರು  : ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಇಂದು ಈತನಿಗೆ ಕೋವಿಡ್ 19 ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ‌. ಈತನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದರೆ […]

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ರಸ್ತೆ ಬದಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ

Thursday, January 23rd, 2020
subrahmanya

ಸುಳ್ಯ : ಜಿಲ್ಲೆಯ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಾಲಯದ ರಸ್ತೆ ಬದಿಯಲ್ಲಿನ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಯಿತು. ಮಂಗಳೂರು ಎ.ಡಿ.ಸಿ ರೂಪ ಅವರ ಮುಂದಾಳತ್ವದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಯಿತು. ವ್ಯಾಪಾರಿಗಳು ಆದಿ ಸುಬ್ರಹ್ಮಣ್ಯದ ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತಿದ್ದರು. ಇದು ಇಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು. ಈ ಕಾರಣಗಳಿಂದಾಗಿ ರಸ್ತೆಯ ಅಗಲೀಕರಣ ನಿಧಾನವಾಗಿ ಸಾಗುತ್ತಿತ್ತು ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡಗಳ ತೆರವು […]

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣೆ : ಶಿವಮೊಗ್ಗ ರೈಲ್ವೆ ನಿಲ್ಧಾಣದಲ್ಲಿ 15 ರೈತರು ಪೊಲೀಸ್ ವಶಕ್ಕೆ

Thursday, January 2nd, 2020
shivamogga

ಶಿವಮೊಗ್ಗ : ತುಮಕೂರಿನಲ್ಲಿ ಇಂದು ನಡೆಯಲಿರುವ ಬೃಹತ್ ರೈತ ಸಮಾವೇಶಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲು ಹೊರಟಿದ್ದ 15 ರೈತರನ್ನು ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ಬೃಹತ್ ರೈತ ಸಮಾವೇಶ ನಡೆಯಲಿದ್ದು, 1 ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದು ವೇದಿಕೆಯಲ್ಲಿ ಪ್ರಧಾನಿ ಮೋದಿ ಬಟನ್ ಒತ್ತುವುದರ ಮೂಲಕ 6 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಆ […]

ದೆಹಲಿ ಕಿರಾರಕಿ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ : 9 ಮಂದಿ ಸಾವು; 10 ಮಂದಿಗೆ ತೀವ್ರ ಗಾಯ

Monday, December 23rd, 2019
benki

ನವದೆಹಲಿ : ಭಾರತದ ರಾಜಧಾನಿ ದೆಹಲಿಯ ಕಿರಾರಿ ಎಂಬ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಸೋಮವಾರ ತಡರಾತ್ರಿ 12.30 ಗಂಟೆಗೆ ಸಂಭವಿಸಿದ ಈ ಬೆಂಕಿ ಅನಾಹುತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 10ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಲ್ಲಿನ ಬಟ್ಟೆಯ ಗೋದಾಮಿ ಅಂದರೆ ವೇರ್ ಹೌಸ್ನಲ್ಲಿ ಮಧ್ಯರಾತ್ರಿ 12.30ಕ್ಕೆ ದಿಢೀರ್ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಮೂರು ಅಂತಸ್ತಿನ ಕಟ್ಟಡದಲ್ಲಿ ವೇರ್ ಹೌಸ್ ಇತ್ತು ಎನ್ನಲಾಗಿದೆ. ಈ […]

ಕರಾವಳಿ ಕಾವಲು ಪೊಲೀಸ್ ಬಲವರ್ಧನೆಗೆ ಸರ್ಕಾರದ ಕ್ರಮ : ಬಸವರಾಜ ಬೊಮ್ಮಾಯಿ ಹೇಳಿಕೆ

Friday, October 25th, 2019
basavaraj

ಬಂಟ್ವಾಳ : ಕರಾವಳಿ ಕಾವಲು ಪೊಲೀಸ್ ಪಡೆ ಬಲವರ್ಧನೆಗೊಳಿಸಿ, ತೀರ ಪ್ರದೇಶ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಭದ್ರತಾ ಪಡೆಗೆ ಅಗತ್ಯ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗೃಹಸಚಿವರು ಗುರುವಾರ ಬೆಳಗ್ಗೆ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಸಿದರು. ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಕಣ್ಣಿಗೆ ಖಾರದಪುಡಿ ಎರಚಿ 2.5 ಲಕ್ಷ ದರೋಡೆ : ಮೂವರು ದುಷ್ಕರ್ಮಿಗಳು ಪರಾರಿ

Tuesday, October 8th, 2019
vijayapura

ವಿಜಯಪುರ : ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ ಮೂವರು ದುಷ್ಕರ್ಮಿಗಳು ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ದರೋಡೆ ಮಾಡಿದ್ದಾರೆ. ಗ್ರಾಮೀಣ ಕೋಟಕ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನೋದ್ ಕುಮಾರ ಹಂಚನಾಳ, ಹಂಜಗಿ ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘದಿಂದ 1.5 ಲಕ್ಷ ಹಣ ಸಂಗ್ರಹಿಸಿ ಕೊಂಡುಬರುವಾಗ ಈ ಕೃತ್ಯ ಎಸಗಲಾಗಿದೆ. ದರೋಡೆ ಮಾಡುವ ಸಂದರ್ಭದಲ್ಲಿ ವಿನೋದ್‍ಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಗ್ರಾಮದಲ್ಲಿ ಹಣವನ್ನು ಸಂಗ್ರಹಿಸಿ ಬರುತ್ತಿದ್ದನ್ನು ಗಮನಿಸಿ ಬೈಕಿನಲ್ಲಿ ಹಿಂಬಾಲಿಸಿ ಬಂದ ಮೂವರು ಮುಸುಕುಧಾರಿಗಳು ಸಿನಿಮಾ ಶೈಲಿಯಲ್ಲಿ ಕಣ್ಣಿಗೆ […]

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಬರ್ಬರ ಹತ್ಯೆ

Wednesday, September 4th, 2019
kartik

ಪುತ್ತೂರು : ಯುವಕನೋರ್ವನಿಗೆ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ. ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬವರು ಚೂರಿಯಿಂದ ಇರಿದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈಯ್ದಿದ್ದಾರೆ. ಬಳಿಕ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ […]

ಉಡುಪಿ : ರಿಕ್ಷಾ ಮಗುಚಿ ಬಿದ್ದು 8 ಮಕ್ಕಳಿಗೆ ಗಾಯ

Tuesday, September 3rd, 2019
riksha

ಉಡುಪಿ: ಮಣಿಪಾಲ ಶಾಂತಿನಗರದಿಂದ ಕಡಿಯಾಳಿ ಕಡೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾ ಮಗುಚಿ ಬಿದ್ದು, ರಿಕ್ಷಾದಲ್ಲಿದ್ದ 8 ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡಿರುವ ಎಂಟು ಮಕ್ಕಳನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳನ್ನು ಕರೆದುಕೊಂಡು ಕಡಿಯಾಳಿಗೆ ಕಡೆಗೆ ಬರುತ್ತಿದ್ದ ವೇಳೆ ಇಂದ್ರಾಳಿ ಸಮೀಪ ಎದುರಿನಿಂದ ಸಾಗುತ್ತಿದ್ದ ಬೈಕ್ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದ. ಇದರಿಂದಾಗಿ ಆಟೋರಿಕ್ಷಾ ಚಾಲಕ ಅವಘಡ ತಪ್ಪಿಸಲು ಬ್ರೇಕ್ ಹಾಕಿದ್ದಾರೆ. […]

ಡ್ರೆಜ್ಜಿಂಗ್ ಮಷಿನ್ ಬಳಸಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಪೊಲೀಸ್​ ದಾಳಿ ಅರಿತು ಇಬ್ಬರು ಪರಾರಿ

Friday, November 30th, 2018
escaped

ಮಂಗಳೂರು: ಡ್ರೆಜ್ಜಿಂಗ್ ಮಷಿನ್ ಬಳಸಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ‌. ಮಂಗಳೂರಿನ ತೆಂಕುಳಿಪಾಡಿ ಗ್ರಾಮದ ಮಳಲಿ ಸಾದೂರಿನಲ್ಲಿ ಫಲ್ಗುಣಿ ನದಿಯಲ್ಲಿ ಡ್ರೆಜ್ಜಿಂಗ್ ಮಷಿನ್ ಬಳಸಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಳಿಕ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರನ್ನು ಕಂಡು ಮರಳುಗಾರಿಕೆ ಮಾಡುತ್ತಿದ್ದ ಇಬ್ಬರು ಪರಾರಿಯಾಗಿದ್ದಾರೆ‌. ಮರಳನ್ನು ತೆಗೆಯುತ್ತಿದ್ದ ಡ್ರೆಜ್ಜಿಂಗ್ ಮಷಿನ್ ಮತ್ತು ದೋಣಿಯನ್ನು ವಶಕ್ಕೆ […]