Blog Archive

ಆರ್.ಎಸ್.ಎಸ್ ಸುದರ್ಶನ್ ಹೇಳಿಕೆಯನ್ನು ಪ್ರತಿರೋಧಿಸಿ ಯುವಕಾಂಗ್ರೆಸ್ ಪ್ರತಿಭಟನೆ.

Friday, November 12th, 2010
ಯುವಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಆರ್.ಎಸ್.ಎಸ್ ಮುಖಂಡ ಸುದರ್ಶನ್ ಜೀ ಹೇಳಿಕೆಯನ್ನು ಖಂಡಿಸಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಯಿತು. ದಿವಂಗತ ರಾಜೀವ್ ಗಾಂಧೀ ಹಾಗೂ ಇಂದಿರಾ ಗಾಂಧಿಯವರನ್ನು ಕೊಂದಿದ್ದು ಸೋನಿಯಾಗಾಂಧಿ  ಎಂದು ಆರ್.ಎಸ್.ಎಸ್ ಮಾಜಿ ಗುರು ಸುದರ್ಶನ್ ಜೀ ಹೇಳಿಕೆ ಅವಿವೇಕ ತನದ್ದು. ಅಲ್ಲದೆ ಸೋನಿಯಾ ಗಾಂಧಿಯವರನ್ನು ಸಿಐಎ ಏಜೆಂಟ್ ಎಂದು ಬಿಂಬಿಸಿರುವುದು ತೀರ ಕೀಳುಮಟ್ಟದ ಹೇಳಿಕೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಎಂ.ಜಿ ಹೆಗ್ಡೆ ಹೇಳಿದರು. ಬಿಜೆಪಿಯು ಎಲ್ಲಾ […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

Wednesday, October 20th, 2010
ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

ಮಂಗಳೂರು: ರಾಜ್ಯದ ರಾಜಕಾರಣದಲ್ಲಿ ಕುತಂತ್ರ ನೀತಿಯಿಂದ ಆಡಳಿತ ಸರಕಾರಕ್ಕೆ ತೊಂದರೆಕೊಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಎದುರು ಇಂದು ಸಂಜೆ ಪ್ರತಿಭಟನೆ ನಡೆಯಿತು. ಸ್ಪಷ್ಟ ಜನಾದೇಶದಿಂದ ಅಧಿಕಾರಕ್ಕೆ ಬಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಬಿಜೆಪಿ ಸರಕರಾದ ಕಾರ್ಯವೈಖರಿಯನ್ನು ಕಂಡು ಸಹಿಸದ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಮಾಡುವ ಕುತಂತ್ರಗಳು ಇನ್ನು ನಡೆಯುವುದಿಲ್ಲ ರಾಜ್ಯದಲ್ಲಿ ಇನ್ನು ಐದು ವರ್ಷಗಳವರೆಗೆ ಸರಕಾರ ಅಧಿಕಾರದಲ್ಲಿರುತ್ತದೆ. ಎಂದು ಮಂಗಳೂರು ಶಾಸಕ ಎನ್. ಯೋಗೀಶ್ ಭಟ್ […]

ಎಸ್.ಡಿ.ಪಿ.ಐ ನಿಂದ ರಾಜಕೀಯ ಅಸ್ಥಿರತೆ ಸರಿದೂಗಿಸಲು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

Friday, October 15th, 2010
ಎಸ್.ಡಿ.ಪಿ.ಐ ನಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಜನತೆ ಹಿಂದೆಂದೂ ಕಂಡಿರದ ನಾಟಕೀಯ ರಾಜಕೀಯ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ತಮ್ಮದು ಭ್ರಷ್ಟಾಚಾರ ರಹಿತ, ರೈತರ ಬಡವರ ಪರ ಆಡಳಿತ ನೀಡುತ್ತೇವೆಂದು ಜನತೆಗೆ ಆಶ್ವಾಸನೆ ನೀಡಿ ಈ ಸರಕಾರದಿಂದ ನಿರೀಕ್ಷಿಸಿದ್ದ ಎಲ್ಲಾ ಭರವಸೆಗಳನ್ನು ಹುಸಿಯಾಗಿಸಿದೆ. ಬಿಜೆಪಿ ಸರಕಾರಕ್ಕೆ ಆಡಳಿತ ನಡೆಸಲು ಈ ರಾಜ್ಯದ ಜನತೆ ಸ್ಪಷ್ಟ ಜನಾದೇಶ ನೀಡಿದ್ದರೂ, ಇತರ ಪಕ್ಷಗಳಿಂದ ಚುನಾಯಿತರಾದ ಜನಪ್ರತಿನಿಧಿಗಳನ್ನು ಹಣ ಹಾಗೂ ಮಂತ್ರಿಗಿರಿಯ ಅಮಿಷ ತೋರಿಸಿ ಕುದುರೆ ವ್ಯಾಪಾರ  ನಡೆಸುವ ಮೂಲಕ “ಆಪರೇಶನ್ ಕಮಲ”ದ […]

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರಾಜಿನಾಮೆ ನೀಡಲು ಜಿಲ್ಲಾ ಕಾಂಗ್ರೆಸ್ ಆಗ್ರಹ

Tuesday, October 5th, 2010
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಐ.ಎ.ಡಿ.ಬಿ ಹಗರಣದಲ್ಲಿ ಭಾಗಿಯಾಗಿರುವ ವಸತಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಟು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯೆದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಹಗರಣಗಳ ಸರಮಾಲೆಯೇ ನಡೆದಿದೆ, ಮುಖ್ಯಮಂತ್ರಿಗಳು ಅದಕ್ಕೆ ರಕ್ಷಣೆ ನೀಡುತ್ತಿದ್ದಾರೆ. ಕಟ್ಟಾ ಸುಬ್ರಹ್ಮಣ್ಯ ಹಾಗೂ ಅವರ ಮಗ ಕಟ್ಟಾ ಜಗದೀಶ್ ನಾಯ್ಡು ಅಧಿಕಾರವನ್ನು ದುರುಪಯೋಗ ಮಾಡಿ ರಾಜ್ಯದ ಸಂಪತ್ತನ್ನು ಲೂಟಿಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ […]

ಗೋವಂಶ ರಕ್ಷಣೆಗೆ ಬಿಜೆಪಿ ಕಾರ್ಯಕರ್ತರ ಒಕ್ಕೊರಳ ಧ್ವನಿ

Saturday, September 4th, 2010
ಗೋವಂಶ ರಕ್ಷಣೆಗೆ ಬಿಜೆಪಿ ಕಾರ್ಯಕರ್ತರ ಒಕ್ಕೊರಳ ಧ್ವನಿ

ಮಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆಗೆ ಅಂಕಿತ ಹಾಗೂ ಕಾಶ್ಮೀರಕ್ಕೆ ಸ್ವಾಯತ್ತತೆ ವಿರೋಧಿಸಿ, ಭಾರತೀಯ ಜನತಾಪಾರ್ಟಿ ವತಿಯಿಂದ ಪ್ರತಿಭಟನೆಯು ಇಂದು ಬೆಳಿಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಜರಗಿತು.