Blog Archive

ಧಾರವಾಡ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Tuesday, August 11th, 2020
karave

ಧಾರವಾಡ : ಜಿಲ್ಲೆಯ ಬೇಗೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಸಾವು ಧಾರವಾಡ ಜಿಲ್ಲೆ ಜನತೆಗೆ ಹೆಣ್ಣು ಮಕ್ಕಳನ್ನು ಕಾಪಾಡುವ ಭಯದ ವಾತಾವರಣ ಬಂದಿದೆ, ಆರೋಪಿಗೆ ಶೀಘ್ರವೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ನೇಹ ಬಳಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದೆ. ಅಪರಾಧಿಯನ್ನು ಮಾತ್ರ ಬಂಧಿಸಿದ್ದೀರಿ ಆದರೆ ಅಪರಾಧಿ ಬಶೀರ ನ ಸಂಬಂಧಿಕರು ಪೂಜಾಳಾ ಕುಟುಂಬಕ್ಕೆ ಜೀವ ಬೆದರಿಕೆ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. […]

ಕೊರೋನಾ ವೈರಸ್‌ನಿಂದಾಗಿ ಅಕ್ಷರದಾಸೋಹ ನೌಕರರರಿಗೆ ವೇತನವಿಲ್ಲ, ಪ್ರತಿಭಟನೆ

Friday, August 7th, 2020
citu

ಮಂಗಳೂರು : ಮುಂದೆ ಸಿಐಟಿಯು ನೇತೃತ್ವದ ಅಕ್ಷರದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಸಂಘದ ಅಧ್ಯಕ್ಷರಾದ ಪದ್ಮಾವತಿ ಶೆಟ್ಟಿಯವರು ಮಾತನಾಡುತ್ತಾ, ಕೊರೋನಾ ವೈರಸ್‌ನಿಂದಾಗಿ ಸ್ಕೀಂ ಕಾರ್ಮಿಕರಲ್ಲಿ ಒಂದು ವಿಭಾಗವಾದ ಅಕ್ಷರ ದಾಸೋಹ ನೌಕರರಿಗೆ ಕೆಲಸ ಹಾಗೂ ವೇತನವಿಲ್ಲವಾಗಿದೆ. ಕೊರೋನಾ ವೈರಸ್ ಲಾಕ್‌ಡೌನ್ ಅವಧಿಯ ಹಾಗೂ ಬೇಸಿಗೆ ರಜೆಯ ಪರಿಹಾರವನ್ನು ನೀಡಬೇಕೆಂದು ವಿನಂತಿಸಿದರೂ ಲಕ್ಷಾಂತರ ಕಾರ್ಮಿಕರಿಗೆ ಪರಿಹಾರವನ್ನು ನೀಡಿಲ್ಲ. ಬಿಸಿಯೂಟ ನೌಕರರಿಗೆ ಮುಂದಿನ 6 ತಿಂಗಳ ತನಕ ಕನಿಷ್ಟ ರೂ.7.500/- […]

ದಕ್ಷಿಣ ಕೊಡಗಿನಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಗೋಣಿಕೊಪ್ಪದಲ್ಲಿ ಪ್ರತಿಭಟನೆ

Friday, February 28th, 2020
goni-koppa-protest

ಮಡಿಕೇರಿ : ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೋಣಿಕೊಪ್ಪ ಚೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಬಾಳೆಲೆ, ಶ್ರೀಮಂಗಲ, ಹುದಿಕೇರಿ ಹಾಗೂ ಪೊನ್ನಂಪೇಟೆ ಹೋಬಳಿಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು, ಬೆಳೆಗಾರರು, ಸಾರ್ವಜನಿಕರು ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡು ಮಾನವ ಸರಪಳಿ ನಿರ್ಮಿಸಿ ಇಲಾಖಾ ಅಧಿಕಾರಿಗಳ ಕಾರ್ಯವೈಖರಿಯನ್ನು ಟೀಕಿಸಿದರು. ಗೋಣಿಕೊಪ್ಪ, ಪೊನ್ನಂಪೇಟೆ ಮುಖ್ಯ ರಸ್ತೆತಡೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಚೆಸ್ಕಾಂನ […]

ಕುಶಾಲನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ

Thursday, February 27th, 2020
SDPI

ಮಡಿಕೇರಿ : ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದಾಳಿಯಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಕುಶಾಲನಗರ ಎಸ್.ಡಿ.ಪಿ.ಐ ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಪಟ್ಟಣದ ಕಾರ್ಯಪ್ಪ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹನೀಫ್, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಎದುರಿಸಲಾಗುವುದು ಎಂದು ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರ ಹೇಳಿಕೆಯ ಬೆನ್ನಲ್ಲೇ ಈ ಘರ್ಷಣೆ […]

ದೆಹಲಿ ಹಿಂಸಾಚಾರ : ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

Wednesday, February 26th, 2020
dehli

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗಲಭೆ ಹತ್ತಿಕ್ಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯ ಜಾಫ್ರಾಬಾದ್‌, ಸೀಲಂಪುರ್ ಪ್ರದೇಶಗಳಲ್ಲಿ ನಡೆದ ಹಿಂಸಾಚಾರದಲ್ಲಿ 20 ಜನರು ಪ್ರಾಣ ಕಳೆದುಕೊಂಡಿದ್ದು 160 ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದೆಹಲಿಯ ಹಿಂಸಾಚಾರವನ್ನು ಹತ್ತಿಕ್ಕುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಹಾಗೂ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರುವಲ್ಲಿ ದೆಹಲಿ ಸಿಎಂ ವಿಫಲರಾಗಿದ್ದಾರೆ ಎಂದು ಆರೋಪಿಸಿ […]

ಮಳೆಹಾನಿ ಸಂತ್ರಸ್ತೆಯಿಂದ ಹಣ ಕಸಿದುಕೊಂಡ ಆರೋಪ : ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

Wednesday, February 26th, 2020
protest

ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡ ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಂತ್ರಸ್ತ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಪರಿಹಾರದ ಹಣದಲ್ಲಿ ಸುಮಾರು 40 ಸಾವಿರ ರೂ.ಗಳನ್ನು ನಗರಸಭಾ ಸಿಬ್ಬಂದಿಯೊಬ್ಬರು ಬೆದರಿಕೆವೊಡ್ಡಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರಸಭಾ ಕಚೇರಿ ಎದುರು ದಿಢೀರ್ ಧರಣಿ ಕುಳಿತ ವೇದಿಕೆಯ ಪ್ರಮುಖರು ಬಾಕಿ ಉಳಿಸಿಕೊಂಡಿರುವ ಪರಿಹಾರದ ಹಣವನ್ನು ತಕ್ಷಣ ನೀಡಬೇಕು ಮತ್ತು ತಪ್ಪಿತಸ್ತ ಅಧಿಕಾರಿಯನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು […]

ಗ್ರಾ.ಪಂ ನೌಕರರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭ

Tuesday, February 25th, 2020
protest

ಮಡಿಕೇರಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾ.ಪಂ ನೌಕರರ ಸಂಘ ಅನಿರ್ದಿಷ್ಟಾವಧಿ ಧರಣಿ ಮುಷ್ಕರವನ್ನು ಆರಂಭಿಸಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾ.ಪಂ ನೌಕರರ ಸಂಘದ ಜಿಲ್ಲಾ ಘಟಕ ಸರ್ಕಾರಗಳ ನಿರ್ಲಕ್ಷ್ಯ ಮನೋಭಾವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನೌಕರರಿಂದ ದುಡಿಸಿಕೊಳ್ಳುವ ಆಸಕ್ತಿಯನ್ನು ತೋರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನೌಕರರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲವೆಂದು ಆರೋಪಿಸಿದರು. ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಗ್ರಾ.ಪಂ.ಗಳಲ್ಲಿ ಸುಮಾರು 65 ಸಾವಿರ ಸಿಬ್ಬಂದಿಗಳು ಕೆಲಸ […]

ದೇಶ ದ್ರೋಹ ಕೂಗು : ಅಮೂಲ್ಯ ಲಿಯೋನ್ ಪೊಲೀಸರ ವಶಕ್ಕೆ

Friday, February 21st, 2020
amulya

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಯುವತಿ ಅಮೂಲ್ಯ ಸದ್ಯ ಪರಪ್ಪನ ಅಗ್ರಹಾರದಲ್ಲಿ ಪೊಲೀಸರ ವಶದಲ್ಲಿದ್ದಾಳೆ. ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಆದೇಶದಂತೆ ಕಾರ್ಯಕ್ರಮ ಆಯೋಜನೆ ‌ಮಾಡಿದವರ ವಿರುದ್ಧ ಕೂಡ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಪಶ್ಚಿಮ ವಿಭಾಗ ಪೊಲೀಸರು ನಿರ್ಧರಿಸಿದ್ದಾರೆ. ಅಮೂಲ್ಯ ಲಿಯೋನ್ ದೇಶದ್ರೋಹದ ಕೂಗು ಕೂಗಿದಾಗ ಕಾರ್ಯಕ್ರಮದಲ್ಲಿ ನೆರೆದಿದ್ದ ಸಂಸದ ಒವೈಸಿ ಹಾಗೂ ಆಯೋಜಕರು ವಿಚಲಿತರಾಗಿ ‌ಮೈಕ್ ಕಸಿದುಕೊಂಡರು. ಆದರೆ ಆಕೆಯನ್ನ […]

ಗೋವಾ ಇತಿಹಾಸ ಪಠ್ಯಪುಸ್ತಕದ ವಿವಾದ : ಬಗೆಹರಿಯದಿದ್ದರೆ ಪ್ರತಿಭಟನೆ

Thursday, February 20th, 2020
Goa

ಪಣಜಿ : ಇಂದು ಒಂದೆಡೆ ಹಿಂದವೀ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸುತ್ತಿರುವಾಗಲೇ ಗೋವಾ ರಾಜ್ಯದ ಉಚ್ಚ ಮಾಧ್ಯಮಿಕ ಪಠ್ಯಪುಸ್ತಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಛತ್ರಪತಿ ಸಂಭಾಜಿ ಮಹಾರಾಜರ ಅವಮಾನವನ್ನು ಮಾಡುವ ಲೇಖನ ಇರುವುದು ಬಹಿರಂಗವಾಗಿದೆ, ಇದು ಅತ್ಯಂತ ಖೇದಕರವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಇದನ್ನು ತೀವ್ರ ಶಬ್ಧಗಳಲ್ಲಿ ಖಂಡಿಸುತ್ತದೆ. ನಮ್ಮ ರಾಜರ ಬಗೆಗಿನ ಈ ರೀತಿಯ ಸುಳ್ಳು ಇತಿಹಾಸವನ್ನು ಯಾವುದೇ ಹಿಂದೂ ಸಹಿಸುವುದಿಲ್ಲ. ಈ ಇತಿಹಾಸದ ಪುಸ್ತಕವನ್ನು ಸರಕಾರ ಕೂಡಲೇ ಹಿಂಪಡೆಯಬೇಕು […]

ಸೌದೆಯಲ್ಲೇ ಅಡುಗೆ, ಡಿಸಿ ಕಚೇರಿ ಎದುರೇ ಸಿಲಿಂಡರ್ : ಮಹಿಳಾ ಕಾಂಗ್ರೆಸ್‌ನಿಂದ ವಿನೂತನ ಪ್ರತಿಭಟನೆ

Wednesday, February 19th, 2020
mahila-congress

ಮಡಿಕೇರಿ : ಅಡುಗೆ ಅನಿಲದ ಸಹವಾಸ ಬೇಡವೆಂದು ಸೌದೆಯಲ್ಲೇ ಅಡುಗೆ ಮಾಡಿದರು, ಖಾಲಿ ಸಿಲಿಂಡರ್ ಗಳನ್ನು ಜಿಲ್ಲಾಡಳಿತದ ಭವನಕ್ಕೆ ತಂದರು. ಕೇಂದ್ರ ಸರ್ಕಾರದ ವಿರುದ್ಧ ಮಹಿಳೆಯರು ಘೋಷಣೆಗಳನ್ನು ಕೂಗಿದರು. ಹೀಗೆ, ಅಡುಗೆ ಅನಿಲದ ಬೆಲೆಯನ್ನು ದುಬಾರಿ ಮಾಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಹಿಳಾ ಕಾರ್ಯಕರ್ತರು ಸೌದೆ ಒಲೆಯಲ್ಲಿ ಕಾಫಿ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು […]