Blog Archive

ಕಾರ್ಮಿಕ ವರ್ಗದ ಒಗ್ಗಟ್ಟಿನ ಪ್ರತಿಭಟನೆ : ಕೊಡಗಿನ ಜನಜೀವನಕ್ಕೆ ತೊಂದರೆ ನೀಡದ ಮುಷ್ಕರ

Thursday, January 9th, 2020
bank

ಮಡಿಕೇರಿ : ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾರ್ಮಿಕರ 18 ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದವು. ಮುಷ್ಕರಕ್ಕೆ ಜಿಲ್ಲೆಯ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದವಾದರೂ, ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಆದರೆ […]

ಎನ್‌ಆರ್‌ಸಿ, ಸಿಎಎ ಕಾಯ್ದೆ ವಿರುದ್ಧ ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

Friday, January 3rd, 2020
CPIM

ಮಡಿಕೇರಿ : ಕೇಂದ್ರ ಸರ್ಕಾರದ ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಯನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಡಾ.ಇ.ರ.ದುರ್ಗಾಪ್ರಸಾದ್, ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮೂಲ ಆಶಯಗಳಿಗೆ ವಿರೋಧವಾಗಿದ್ದು, ದೇಶದ ಐಕ್ಯತೆಗೆ ಧಕ್ಕೆ ತಂದರುವಂತಾಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಅನುಸರಿಸುತ್ತಿರುವ […]

ಮಡಿಕೇರಿ : ಡಿ.31 ರಂದು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Thursday, December 26th, 2019
manjunath

ಮಡಿಕೇರಿ : ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ವಿರುದ್ಧ ಡಿ.30 ಕ್ಕೆ ಬದಲಾಗಿ ಡಿ.30 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಅಂದು ಬೆಳಗ್ಗೆ10.30 ಗಂಟೆಗೆ ಸಮಾವೇಶಗೊಂಡು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಪತ್ರಿಕಾ ಪ್ರಕಟಣೆ […]

ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ : ಕೇಂದ್ರದ ನಿಲುವಿಗೆ ಖಂಡನೆ

Wednesday, December 25th, 2019
Protest

ಮಡಿಕೇರಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಮತ್ತು ಪೌರತ್ವ ನೋಂದಣಿ(ಎನ್‌ಆರ್‌ಸಿ)ಯನ್ನು ವಿರೋಧಿಸಿ ಹಾಗೂ ಮಂಗಳೂರು ಗೋಲಿಬಾರ್ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದ ಕಾರ್ಯಾಧ್ಯಕ್ಷ ಪಿ.ಎಂ. ಖಾಸಿಂ ಮತ್ತು ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾಸ್ಟರ್ ಅವರ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ’ರಿಜೆಕ್ಟ್ ಸಿಎಎ, ಬಾಯ್‌ಕಾಟ್ […]

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ

Monday, December 23rd, 2019
Protest

ಮಡಿಕೇರಿ : ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಬೆಂಬಲಿತ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ, ಎನ್‌ಆರ್‌ಸಿ ಮತ್ತು ಸಿಎಎ ಸಂವಿಧಾನ ಬಾಹಿರ ಕಾಯ್ದೆಯಾಗಿದ್ದು, ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸಬಾರದೆಂದು ಒತ್ತಾಯಿಸಿದರು. […]

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಒತ್ತಾಯ : ಬಾಣಾವರದಲ್ಲಿ ಪ್ರತಿಭಟನೆ

Wednesday, December 18th, 2019
somavarapete

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಬಾಣಾವರ ವ್ಯಾಪ್ತಿಯ ಸಿದ್ದಲಿಂಗಪುರ, ಸಂಗಯ್ಯನಪುರ, ಬಸರಿಗುಪ್ಪೆ, ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಡಿವಾಣ ಹಾಕುವಂತೆ ಆಗ್ರಹಿಸಿ ಸಾರ್ವಜನಿಕರು ಬಾಣಾವರ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು. 12 ಕಾಡಾನೆಗಳ ಹಿಂಡು ಈ ಭಾಗದಲ್ಲಿ ಬೀಡುಬಿಟ್ಟಿದ್ದು, ಜನವಸತಿ ಪ್ರದೇಶದಲ್ಲಿಯೇ ಸಂಚರಿಸುತ್ತಿವೆ. ಗ್ರಾಮಸ್ಥರ ಕೃಷಿ ಫಸಲು ನಷ್ಟಗೊಳಿಸುತ್ತಿವೆ. ಕಳೆದ ವಾರ ಅರಣ್ಯ ರಕ್ಷಕನ ಮೇಲೆಯೇ ಧಾಳಿ ನಡೆಸಿದೆ. ಇದರೊಂದಿಗೆ ರಸ್ತೆ, ಹೊಲಗಳಿಗೆ ತೆರಳುವ ಕೃಷಿಕರ ಮೇಲೂ ಧಾಳಿ ನಡೆಸುತ್ತಿವೆ. ಆನೆಗಳನ್ನು ಕಾಡಿಗಟ್ಟುವಂತೆ ಹಲವಷ್ಟು ಬಾರಿ ಮನವಿ […]

ಬಂಟ್ವಾಳ : ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

Tuesday, December 17th, 2019
bantwal

ಬಂಟ್ವಾಳ : ರಾಷ್ಟ್ರೀಯ ಪೌರತ್ವ ಕಾಯ್ದೆ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಕಾಂಗ್ರೆಸ್ ನಾಯಕ ಮತ್ತು ನ್ಯಾಯವಾದಿ ಸುಧೀರ್ ಕುಮಾರ್ ರವರು, ರಾಷ್ಟ್ರ ಪೌರತ್ವ ತಿದ್ದುಪಡಿ ಕಾಯ್ದೆ ಎನ್ನುವುದು ಬಿಜೆಪಿಯ ಮತಗಳಿಕೆಯ ಕಾನೂನೇ ಹೊರತು ದೇಶದ ಅಭಿವೃದ್ಧಿಗಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ಒಂದು ಸಮುದಾಯವನ್ನು ವಿಭಜಿಸುವ ಗಲಭೆ ಪೀಡಿತ ಹಿಂಸಾ ಮಾತೃ ಭೂಮಿಯಾಗಲಿದೆ. ನಮಗೆ ಹಿಟ್ಲರ್ ಭಾರತ ಬೇಕಾಗಿಲ್ಲ. ಗಾಂಧೀ ಪ್ರೇರಿತ ಭಾರತ […]

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ : ಜಪಾನ್​ ಪ್ರಧಾನಿ ಭಾರತದ ಪ್ರವಾಸ ರದ್ದು

Friday, December 13th, 2019
modi

ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಜಪಾನ್ ಪ್ರಧಾನಿ ಭಾರತದ ಪ್ರವಾಸ ರದ್ದುಗೊಳಿಸಿದ್ದಾರೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಈ ಭಾನುವಾರ ಸಭೆ ನಿರ್ಧಾರವಾಗಿತ್ತು. ಈ ಸಭೆ ಅಸ್ಸಾಂನ ಗೌವಹತಿಯಲ್ಲಿ ಆಯೋಜಿಸಲಾಗಿತ್ತು. ಆದರೆ, ಈಶಾನ್ಯ ರಾಜ್ಯದಲ್ಲಿ ಪ್ರತಿಭಟನೆ ಉಲ್ಭಣಗೊಂಡ ಹಿನ್ನೆಲೆ ಈ ಪ್ರವಾಸವನ್ನು ರದ್ದು ಗೊಳಿಸಲಾಗಿದೆ ಎಂದು ರಾಯಿಟರ್ ವರದಿ ಮಾಡಿದೆ. ಇನ್ನು ಗುರುವಾರ ಬಾಂಗ್ಲಾದೇಶ ವಿದೇಶಾಂಗ ಸಚಿವ ಎಕೆ ಅಬ್ದುಲ್ […]

ಮೀನು ಸಾಗಾಟ ಲಾರಿಗಳ ತ್ಯಾಜ್ಯ ನೀರು ಹೊರ ಬಿಡಲು ಸ್ಥಳಾವಕಾಶ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Thursday, December 12th, 2019
minu

ಮಂಗಳೂರು : ವಿವಿಧ ನೆಪವೊಡ್ಡಿ ಸಾರ್ವಜನಿಕರು ಮತ್ತು ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಗುರುವಾರ ಮೀನು ಸಾಗಾಟ ಸ್ಥಗಿತಗೊಳಿಸಿದ ಲಾರಿ ಚಾಲಕರು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು. ಮಂಗಳೂರು ದಕ್ಕೆ ಮೀನು ಲಾರಿ ಚಾಲಕರ ಸಂಘ (ಸಿಐಟಿಯು) ಮತ್ತು ಕರಾವಳಿ ಕರ್ನಾಟಕ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಮುಖಂಡ ವಸಂತ ಆಚಾರಿ ಮಾತನಾಡಿದರು. ಮೀನು ಸಾಗಾಟ ಲಾರಿಗಳ ಮೀನು ತ್ಯಾಜ್ಯ ನೀರು ಸಂಗ್ರಹವಾಗುವ ಟ್ಯಾಂಕ್‌ಗಳಿಂದ ನೀರು ಹೊರಚೆಲ್ಲಲು […]

ಪೌರತ್ವ ತಿದ್ದುಪಡಿ ಕಾಯ್ದೆ : ಈಶಾನ್ಯ ಭಾರತದಲ್ಲೆಡೆ ಕೇಂದ್ರದ ವಿರುದ್ಧ ಪ್ರತಿಭಟನೆ

Wednesday, December 11th, 2019
Assam

ಅಸ್ಸಾಂ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲೆ ಇಂದು ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿರುವ ಬೆನ್ನಿಗೆ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕೇಂದ್ರ ಸರ್ಕಾರ 2016ರ ರಿಂದಲೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ತುದಿಗಾಲಲ್ಲಿ ನಿಂತಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ “ರಾಷ್ಟ್ರೀಯ ಪೌರತ್ವ ನೋಂದಣಿ” (ಎನ್ಆರ್ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಬಿ)ಯನ್ನು ಈಶಾನ್ಯ ರಾಜ್ಯಗಳು ಕಟುವಾಗಿ ವಿರೋಧಿಸುತ್ತಲೇ […]