Blog Archive

ನಗರದ ನಂತೂರು ವೃತ್ತದ ಬಳಿ ಪರಿಸರದ ನಾಗರಿಕರಿಂದ ಪೂರ್ಣಗೊಳ್ಳದ ಕಾಮಗಾರಿಯನ್ನು ಖಂಡಿಸಿ ಉಪವಾಸ ಸತ್ಯಾಗ್ರಹ

Friday, October 4th, 2013
nantoor

ಮಂಗಳೂರು : ಗುರುವಾರ ನಗರದ ನಂತೂರು ವೃತ್ತದ ಬಳಿ ಪರಿಸರದ ನಾಗರಿಕರು ವರ್ಷಗಳು ಕಳೆದರೂ ತಾಂತ್ರಿಕ ದೋಷ ಪೂರಿತ ನಂತೂರು ವೃತ್ತದಲ್ಲಿನ ಪೂರ್ಣಗೊಳ್ಳದ ಕಾಮಗಾರಿಯನ್ನು ಖಂಡಿಸಿ  ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಿದರು . ಸ್ಥಳೀಯ ನಾಗರಿಕರಾದ ಎ.ಜಿ.ಶರ್ಮ ಅವರು, ಪ್ರತಿಭಟನೆಯನ್ನುದ್ದೇಶಿಸಿ ನಂತೂರು ವೃತ್ತದ ದುಸ್ಥಿತಿ ಕೇಳುವವರಿಲ್ಲ. ಇಲ್ಲಿಯ ಸಮಸ್ಯೆಯ ಬಗ್ಗೆ ಜನಪ್ರತಿನಿಧಿಗಳಿಗೆ, ರಾಷ್ಟ್ರೀಯ ಇಲಾಖೆಯ ಗಮನಕ್ಕೆ ತಂದರೂ ಈ ಬಗ್ಗೆ ಯಾರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ. ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಮಳೆಗಾಲದಲ್ಲಂತೂ ಕೆಸರು ನೀರುಗಳು ರಸ್ತೆಯ […]

ಡಿವೈಎಫ್‌ಐ ವತಿಯಿಂದ ಪಡೀಲ್ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

Tuesday, October 1st, 2013
DYFI-stage

ಮಂಗಳೂರು : ಪಡೀಲ್ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಡಿವೈಎಫ್‌ಐ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ , ಬಜಾಲ್ ಪಡೀಲ್ ವಾಸಿಗಳ ಎರಡು ದಶಕಗಳ ಬೇಡಿಕೆ ಈಡೇರಿಸಲಾಗದ ಸರಕಾರ ಇರುವುದಾದರೂ ಏತಕ್ಕೆ , ಒಂದು ಗಂಟೆಯಲ್ಲಿ ನಾಲ್ಕೈದು ಬಾರಿ ಗೇಟ್ ಹಾಕುವುದರಿಂದ ಸಾರ್ವಜ ನಿಕರು ಪರದಾಡುವಂತಾಗಿದೆ. ಜನ ಪ್ರತಿನಿಧಿಗಳ ಸೋಮಾರಿತನವೇ ರೈಲ್ವೆ ಇಲಾಖೆಯ ನಿರ್ಲಕ್ಷಕ್ಕೆ ಕಾರಣ ಎಂದು ಅವರು ಆರೋಪಿಸಿದರು. ಪಡೀಲ್ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬೇಡಿಕೆಯೂ ಸೇರಿದಂತೆ […]

ಸಿ‌ಐಟಿಯು ವತಿಯಿಂದ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಪ್ರದರ್ಶನ ಹಾಗೂ ಬೃಹತ್ ಮೆರವಣಿಗೆ

Saturday, September 21st, 2013
mangalore-protest

ಮಂಗಳೂರು :  ಕಾರ್ಮಿಕ ಕ್ಷೇತ್ರದಲ್ಲಿನ ಅವ್ಯವಸ್ಥೆಗಳನ್ನು  ಖಂಡಿಸಿ ಸಿ‌ಐಟಿಯು ವತಿಯಿಂದ, ಕನಿಷ್ಠ ಕೂಲಿ, ಮನೆ ನಿವೇಶನ ಎಲ್ಲಾ ಕುಟುಂಬಗಳಿಗೂ ರೇಷನ್, ಕಾರ್ಮಿಕ ಕಾನೂನಿನ ಕಟ್ಟುನಿಟ್ಟಿನ ಜಾರಿ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಶುಕ್ರವಾರ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ  ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಪ್ರದರ್ಶನ ನಡೆಯಿತು. ಸಿ‌ಐಟಿಯು ಕೇಂದ್ರ ಸಮಿತಿ ಮುಖಂಡ ಬಿ.ಮಾಧವ ಪ್ರತಿಭಟನಕಾರರನ್ನು ಉದ್ದೇಶಿಸಿ  ಕಾರ್ಮಿಕರು ಬಿಪಿ‌ಎಲ್ ರೇಷನ್ ಕಾರ್ಡ್, ಸಂಬಳದಲ್ಲಿ ಹೆಚ್ಚಳ, ಸಾಮಾಜಿಕ ಭದ್ರತೆ, ಪಿಂಚಣಿ ಸೌಲಭ್ಯ ಹಾಗೂ ಎಫ್ ಡಿ‌ಐ […]

ಡಿ.ಸಿ. ಆಪೀಸ್ ಬಳಿ ಡಾ. ನರೇಂದ್ರ ದಾಬೊಲ್ಕರ್ ಹತ್ಯೆ ಖಂಡಿಸಿ ಪ್ರತಿಭಟನೆ

Tuesday, August 27th, 2013
Narenra Dabolkar Murder

ಮಂಗಳೂರು : ಡಾ. ನರೇಂದ್ರ ದಾಬೊಲ್ಕರ್ ಹಂತಕರನ್ನು ಶೀಘ್ರವಾಗಿ ಬಂಧಿಸಬೇಕೆಂದು ಮಂಗಳೂರಿನ ವಿಚಾರವಾದಿ ಸಂಘಟನೆಯ ವತಿಯಿಂದ ನಗರದ ಡಿ.ಸಿ. ಆಪೀಸ್ ಬಳಿ ಆಗಸ್ಟ್ 26ರಂದು ಪ್ರತಿಭಟನೆ ನಡೆಯಿತು. ವಿಚಾರವಾದಿ ಡಾ. ನರೇಂದ್ರ ದಾಬೊಲ್ಕರ್ ಅವರ ತೀವ್ರ ವಿಚಾರಗಳನ್ನು ಸಹಿಸದ ಕೆಲವು ವ್ಯಕ್ತಿಗಳು ಅವರನ್ನು ಮುಗಿಸಿದ್ದಾರೆ, ಆದರೆ ಅವರ ವಿಚಾರಗಳನ್ನು ಎಂದಿಗೂ ಹತ್ಯೆ ಮಾಡಲು ಸಾಧ್ಯವಿಲ್ಲ. ಜನರ ಮೂಡನಂಬಿಕೆಗಳು ತೊಲಗಬೇಕು, ವೈಜ್ಞಾನಿಕ ಮನೋಭಾವ ಬೆಳೆಯಬೇಕೆಂದು ವಿಚಾರವಾದಿ ಸಂಘಟನೆಯ ಮುಖಂಡರಾದ ನರೇಂದ್ರ ನಾಯಕ್ ತಿಳಿಸಿದರು. ನಮ್ಮ ಕೊನೆಯ ಶ್ವಾಸ ಇರುವವರೆಗೆ […]

ನಗರದ ಹೊಟೇಲ್‌ಗಳಲ್ಲಿ ವಿಪರೀತ ಬೆಲೆ ಏರಿಕೆ, ಜಿಲ್ಲಾ ದಿವೈಎಫ್ಐ ಸಮಿತಿ ವತಿಯಿಂದ ಪ್ರತಿಭಟನೆ

Monday, August 26th, 2013
dyfi protest

ಮಂಗಳೂರು : ದ.ಕ  ಜಿಲ್ಲಾ ದಿವೈಎಫ್ಐ ಸಮಿತಿ ವತಿಯಿಂದ  ಹೊಟೇಲ್‌ ಗಳಲ್ಲಿ ಆಹಾರ, ಪಾನೀಯಗಳ ಬೆಲೆಗಳ ಬೆಲೆ ನಿಯಂತ್ರಿಸಲು  ಏಕರೂಪದ ದರ ಪದ್ಧತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸೋಮವಾರ  ನಗರದ ಜಿಲ್ಲಾಧಿಕಾರಿ ಕಚೇರಿಯ ಸಮೀಪದ ಹೊಟೇಲ್‌ಗಳ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ , ಹೊಟೇಲ್, ಉಪಹಾರ ಗೃಹಗಳಲ್ಲಿ  ಆಹಾರ, ಪಾನೀಯಗಳ ಬೆಲೆ ವಿಪರೀತ ಏರಿಕೆಯಿಂದಾಗಿ ಮದ್ಯಮ ವರ್ಗದ ಜನರು ಕಷ್ಟಪದುವಂತಾಗಿದೆ. ಜಿಲ್ಲಾಡಳಿತ  ಹೊಟೇಲ್, ಬೆಲೆಗಳನ್ನು  ನಿಯಂತ್ರಣ ಮಾಡಿ , ಏಕರೂಪದ […]

ಗ್ರಾಮಾಂತರ ರಿಕ್ಷಾಗಳ ನಗರ ಪ್ರವೇಶ ವಿರೋಧಿಸಿ ವಿವಿಧ ರಿಕ್ಷಾ ಸಂಘಟನೆಗಳಿಂದ ಪ್ರತಿಭಟನೆ

Friday, July 12th, 2013
auto drivers protest

ಮಂಗಳೂರು: ಗ್ರಾಮಾಂತರ ರಿಕ್ಷಾಗಳು ಮಂಗಳೂರು ನಗರವನ್ನು ಪ್ರವೇಶಿಸುವುದನ್ನು ವಿರೋಧಿಸಿ ಮಂಗಳೂರಿನ ವಿವಿಧ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಶುಕ್ರವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜ್ಯೊತಿ ವೃತ್ತ ದಿಂದ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ದ.ಕ ಜಿಲ್ಲಾ ಆಟೋರಿಕ್ಷಾ ಸಮನ್ವಯ ಸಮಿತಿಯ ಅಧ್ಯಕ್ಷರಾದ ಅಲಿಹಸನ್ ಮಾತನಾಡಿ,  ಗ್ರಾಮಾಂತರ ರಿಕ್ಷಾಗಳು ಕಾನೂನು ಬಾಹಿರವಾಗಿ ನಗರದೊಳಗೆ ಪ್ರವೇಶಿಸಿ ಬಾಡಿಗೆ ಮಾಡುತ್ತಿದೆ.  ಗ್ರಾಮದಲ್ಲಿ ಸುಮಾರು 20  ಸಾವಿರ ರಿಕ್ಷಾಗಳು ಒಡಾಡುತ್ತಿವೆ. […]

ರಾಜ್ಯ ಕಾಂಗ್ರೆಸ್ ಸರಕಾರ ಕಳ್ಳಕಾಕರ ಸರಕಾರವಾಗಿದೆ : ನಳಿನ್ ಕುಮಾರ್

Friday, July 12th, 2013
Bantwal BJP

ಬಂಟ್ವಾಳ: ರಾಜ್ಯ ಸರಕಾರದ ಹೊರಡಿಸಿರುವ ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ನೀತಿಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ವತಿಯಿಂದ ಗುರುವಾರ ಬಿ.ಸಿ ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಅಧಿಕಾರ ಬಂದು ಎರಡು ತಿಂಗಳಲ್ಲಿಯೇ  ಪಂಚಾಯತ್ ಸದಸ್ಯರ ಹಕ್ಕನ್ನು ಮೊಟಕುಗೊಳಿಸಲು ಮುಂದಾಗಿರುವ ಕ್ರಮ ಸರಿಯಲ್ಲ, ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತರುವ ಕರಾಳ ಮಸೂದೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲು ಮುಂದಾಗಿರುವುದು ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯನ್ನು ಕಿತ್ತುಗೊಳ್ಳುವ ಪ್ರಜಾತಂತ್ರ ವಿರೋಧಿ ನಿಲುವಾಗಿದೆ ಎಂದು ಸಂಸದ […]

ಉಡುಪಿ ಕೃಷ್ಣ ಮಠ ಹಾಗೂ ಇತರ ದೇವಸ್ಥಾನಗಳಲ್ಲಿ ಪಂಕ್ತಿಭೇದದ ವಿರುದ್ದ ದಲಿತ ಸಮಿತಿ ಪ್ರತಿಭಟನೆ

Wednesday, July 10th, 2013
Dalith samithi protest

ಮಂಗಳೂರು: ದ.ಕ. ಜಿಲ್ಲಾ ಸಮಿತಿ,  ಸಿಪಿಐಎಂ ಹಾಗೂ ದಲಿತ ಹಕ್ಕುಗಳ ಸಮಿತಿ ವತಿಯಿಂದ ಉಡುಪಿ ಕೃಷ್ಣ ಮಠ ಹಾಗೂ ಸರಕಾರದ ಸ್ವಾಧೀನದಲ್ಲಿರುವ ಇತರ ಸಂಸ್ಥೆಗಳಲ್ಲಿ ಮಡೆಮಡಸ್ನಾನ ಹಾಗೂ ಭೋಜನದಲ್ಲಿ ಪಂಕ್ತಿಭೇದ ನಡೆಸುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ, ಮಾತನಾಡಿ ಉಡುಪಿಯ ಪೇಜಾವರ ಶ್ರೀಗಳು ಒಂದೆಡೆ ದಲಿತರ ಕೇರಿಗಳಲ್ಲಿ ಪಾದಯಾತ್ರೆ ಮಾಡುತ್ತಾರೆ ಇನ್ನೊಂದೆಡೆ ಕೃಷ್ಣ ಮಠ ದಲ್ಲೆ ಪಂಕ್ತಿಬೇಧ ಮಾಡುತ್ತಾರೆ. ಅರಕೆ […]

ಮಣಿಪಾಲದಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಖಂಡಿಸಿ ಅಭಾವಿಪದಿಂದ ಬೃಹತ್ ಪ್ರತಿಭಟನೆ

Sunday, June 23rd, 2013
abvp students protest

ಮಂಗಳೂರು : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮಂಗಳೂರು ಅಭಾವಿಪವು ಬೆಸೆಂಟ್ ಕಾಲೇಜು ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಸಭೆಯನ್ನು ನಡೆಸಿತು. ನೂರಾರು ವಿದ್ಯಾರ್ಥಿ/ ವಿದ್ಯಾರ್ಥಿನಿಯರು  ಪ್ರತಿಭಟನೆಯಲ್ಲಿ ಭಾಗವಹಿಸಿ ಅತ್ಯಾಚಾರ ಪ್ರಕರಣದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಅಭಾವಿಪದ ಮಾಜಿ ರಾಜ್ಯ ಕಾರ್ಯದರ್ಶಿ ರವಿಚಂದ್ರ ಪಿ.ಎಂ. ಇದೊಂದು ಹೇಯ ಕೃತ್ಯವಾಗಿದ್ದು, ಸರಕಾರ 24 ತಾಸೊಳಗೆ ಆರೋಪಿಗಳನ್ನು […]

ಎ.ಎಸ್.ಐ ಶ್ರೀಕಲಾ ನೀಡಿರುವ ದೂರಿನ ಹಿನ್ನಲೆಯಲ್ಲಿ ಎಸಿಪಿ ಜಗನ್ನಾಥ್ ರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿವೈಎಫ್ ಐ ಒತ್ತಾಯ

Saturday, May 25th, 2013
DYFI protest at DC office

ಮಂಗಳೂರು : ಎಸಿಪಿ ಜಗನ್ನಾಥ್ ರಿಂದ ದೌರ್ಜನ್ಯಕ್ಕೊಳಗಾದ ಪಾಂಡೇಶ್ವರ ಠಾಣಾ ಎ.ಎಸ್.ಐ ಶ್ರೀಕಲಾ ರವರಿಗೆ ಕಿರುಕುಳ ನೀಡಿದ ಎಸಿಪಿ ಟಿ.ಆರ್. ಜಗನ್ನಾಥ್ ರವರ ಮೇಲೆ ಈ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ  ಶುಕ್ರವಾರ ಡಿವೈಎಫ್ ಐ ಜಿಲ್ಲಾ ಘಟಕ ಹಾಗೂ ಜಿಲ್ಲಾ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಡಿ.ವೈ.ಎಫ್.ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ತೀವ್ರ […]