Blog Archive

ಎಎಂಆರ್ ಜಲ ವಿದ್ಯುತ್‌ ಕಂಪೆನಿಯ ವಿರುದ್ದ ಸೂಕ್ತ ಪರಿಹಾರಕ್ಕಾಗಿ ಪ್ರತಿಭಟನೆ

Thursday, December 8th, 2011
ಎಎಂಆರ್ ಜಲ ವಿದ್ಯುತ್‌ ಕಂಪೆನಿಯ ವಿರುದ್ದ ಸೂಕ್ತ ಪರಿಹಾರಕ್ಕಾಗಿ ಪ್ರತಿಭಟನೆ

ಬಂಟ್ವಾಳ : ಶಂಭೂರು ಜಲ ವಿದ್ಯುತ್‌ ಯೋಜನೆಯಿಂದ ಒಮ್ಮೆಲೆ ಹರಿದು ಬಿಡುವ ನೀರಿನಿಂದ ಹಲವು ಜೀವಗಳು ಬಲಿಯಾಗುತ್ತಿವೆ. ಮಂಗಳವಾರ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ವಿದ್ಯಾರ್ಥಿಗಳ ಸಾವಿಗೆ ಎಎಂಆರ್ ಜಲ ವಿದ್ಯುತ್‌ ಕಂಪೆನಿಯೇ ಕಾರಣ ಎಂದು ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು, ಊರಿನ ಜನರು ಬಂಟ್ವಾಳ ತಹಶೀಲ್ದಾರ್‌ ಕಚೇರಿಯಲ್ಲಿ ಡಿ. 7ಬುಧವಾರದಂದು ಪ್ರತಿಭಟನೆ ನಡೆಸಿ ಸೂಕ್ತ ಪರಿಹಾರಕ್ಕೆ ಆಗ್ರಹಿಸಿದರು. ಮಾಜಿ ಜಿ.ಪಂ. ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಜಲ ವಿದ್ಯುತ್‌ […]

ದಲಿತರಿಂದ ಮಲ ತೆಗೆಸುವ ಪದ್ಧತಿಯನ್ನು ನಿಷೇಧಿಸಬೇಕು :ದ.ಸಂ.ಸ

Thursday, November 17th, 2011
Dalit Protest

ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ| ಕೃಷ್ಣಪ್ಪ ಸ್ಥಾಪಿತ) ಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯದಲ್ಲಿ ಮಾನವ ಕೈಗಳಿಂದ ಮಲ ತೆಗೆಸುವ ಪದ್ಧತಿಯನ್ನು ಸಂಪೂರ್ಣ ನಿಷೇಧಿಸಬೇಕು ಹಾಗೂ ಐ.ಪಿ.ಡಿ. ಸಾಲಪ್ಪ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಇತ್ತೀಚೆಗೆ ಮಂಗಳೂರು ತಾಲೂಕಿನ ಕಿನ್ನಿಗೋಳಿಯಲ್ಲಿ ಕೃಷ್ಣ ಕೊರಗ ಮತ್ತು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌. ನಲ್ಲಿ ಓರ್ವ ಪೌರ ಕಾರ್ಮಿಕ ಶೌಚಾಲಯ ಗುಂಡಿಯಲ್ಲಿ ಸಾವನ್ನಪ್ಪಿರುವುದರ ಪ್ರತಿಭಟನಾರ್ಥ ಈ […]

ಪ.ಪೂ. ಕಾಲೇಜುಗಳ ಉಪನ್ಯಾಸಕರರಿಂದ ವೇತನ ನೀತಿ ಜಾರಿಗೊಳಿಸಲು ಪ್ರತಿಭಟನೆ

Tuesday, September 6th, 2011
Shikshaka/ಉಪನ್ಯಾಸಕರ ಸಂಘ

ಮಂಗಳೂರು: ಕರ್ನಾಟಕ ರಾಜ್ಯ ಪ.ಪೂ. ಕಾಲೇಜುಗಳ ಉಪನ್ಯಾಸಕರ ಸಂಘದ ಕರೆಯ ಮೇರೆಗೆ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ವೇತನ ತಾರತಮ್ಯ ಅಧ್ಯಯನ ಸಮಿತಿಯ ವರದಿಯನ್ನು ಜಾರಿಗೊಳಿಸ ಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸಂಘದ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ ಶೆಟ್ಟಿ ಮಾತನಾಡಿ 1998 ರಿಂದ ಪ.ಪೂ. ಶಿಕ್ಷಣ ಕ್ಷೇತ್ಸದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ 4ನೇ ಮತ್ತು 5 ನೇ ವೇತನ ಆಯೋಗದ ಶಿಫಾರಸು ಅನುಷ್ಠಾನದ […]

ಅಡುಗೆ ಅನಿಲ ಸಮಸ್ಯೆ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Saturday, July 30th, 2011
Congress Protest/ ಕಾಂಗ್ರೆಸ್‌ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಮಂಗಳೂರು: ಅಡುಗೆ ಅನಿಲ ಪೂರೈಕೆಯ ಸಮಸ್ಯೆಯನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವಿಶೇಷ ರೀತಿಯ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಒಲೆ ಉರಿಸಿ, ಚಹಾ ತಯಾರಿಸಿ, ಹಪ್ಪಳ ವನ್ನು ಕಾಯಿಸಿ, ಖಾಲಿ ಗ್ಯಾಸ್‌ ಸಿಲಿಂಡರ್‌ಗಳನ್ನು ಪ್ರದರ್ಶಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯ ನೇತೃತ್ವವಹಿಸಿದ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಐವನ್‌ ಡಿ’ಸೋಜಾ ಮಾತನಾಡಿ ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಗ್ಯಾಸ್‌ […]

ದೇಶದಲ್ಲಿ ದುಷ್ಕೃತ್ಯವೆಸಗುವ ಕೆ.ಎಫ್.ಡಿ. ಮತ್ತು ಪಿ.ಎಫ್.ಐ ಸಂಘಟನೆಗಳನ್ನು ನಿಷೇಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Saturday, June 25th, 2011
ABVP protest

ಮಂಗಳೂರು: ಭಯೋತ್ಪಾದಕ ಕೃತ್ಯ ಮತ್ತು ಸಮಾಜಘಾತಕ ಕೃತ್ಯಗಳಲ್ಲಿ ತೊಡಗಿರುವ ಕರ್ನಾಟಕ ಫೋರಂ ಫಾರ್  ಡಿಗ್ನಿಟಿ (ಕೆ.ಎಫ್.ಡಿ)  ಸಂಘಟನೆಯನ್ನು ರಾಜ್ಯ ಸರ್ಕಾರ ಕೂಡಲೇ ನಿಷೇಧಿಸಬೇಕೆಂದು ಅಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ನಗರದ ಬೆಸೆಂಟ್ ವೃತ್ತದ ಬಳಿ  ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಬಿ. ಹರ್ಷ ಮಾತನಾಡಿ ಹುಣಸೂರಿನ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ 5. ಕೋಟಿ ಹಣ ನೀಡಬೇಕೆಂದು ತಂದೆ-ತಾಯಿಗಳಿಗೆ ಬೆದರಿಕೆ ಹಾಕಿ ಬರ್ಬರವಾಗಿ ಹತ್ಯೆಗೈದಿದ್ದನ್ನು ಅಭಾವಿಪ ತೀವ್ರವಾಗಿ ಖಂಡಿಸುತ್ತದೆ ಅಲ್ಲದೇ ಕೆ.ಎಫ್.ಡಿ […]

ಎಂಡೋಸಲ್ಫಾನ್ ನಿಷೇಧ ಕೂಡಲೇ ಜಾರಿಗೆ ಆಗ್ರಹಿಸಿ ರೈತಸಂಘಟನೆಗಳ ಪ್ರತಿಭಟನೆ

Tuesday, May 17th, 2011
ಎಂಡೋಸಲ್ಫಾನ್ ನಿಷೇಧ ಕೂಡಲೇ ಜಾರಿಗೆ ಆಗ್ರಹಿಸಿ ರೈತಸಂಘಟನೆಗಳ ಪ್ರತಿಭಟನೆ

ಮಂಗಳೂರು : ಭಾರತೀಯ ಕಿಸಾನ್ ಸಂಘ ಮತ್ತು ದ.ಕ ಜಿಲ್ಲಾ ಸಾವಯವ ಕೃಷಿ ಪರಿವಾರ ಇವರ ಜಂಟಿ ಆಶ್ರಯದಲ್ಲಿ ದಿನಾಂಕ ಇಂದು ಬೆಳಿಗ್ಗೆ 11-00 ರಿಂದ ಜಿಲ್ಲಾಧಿಕಾರಿ ಕಛೇರಿ ಎದುರುಗಡೆ ಎಂಡೋಸಲ್ಫಾನ್ ನಿಷೇಧ ಕೂಡಲೇ ಜಾರಿಗೆ ಆಗ್ರಹಿಸಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾವಯವ ಕೃಷಿಕ ಸುಂದರ್ ರಾವ್ ಅವರು ಎಂಡೋಸಲ್ಫಾನ್ ಎಂಬ ಮಹಾಮಾರಿ ಕೀಟ ನಾಶಕವು ಸಂಪೂರ್ಣ ಜೀವ ಜಗತ್ತಿಗೇ ಮಾರಕವಾಗಿರುವುದು  ಇಂದು ಗುಟ್ಟಾಗಿ ಉಳಿದಿಲ್ಲ. ಜಗತ್ತಿನ 84 ದೇಶಗಳು ಈ ಮಾರಕ […]

ವಿವಿಧ ಹಿಂದೂ ಸಂಘಟನೆಗಳಿಂದ ಮತಾಂತರದ ವಿರುದ್ಧ ಪ್ರತಿಭಟನೆ

Sunday, April 10th, 2011
ವಿವಿಧ ಹಿಂದೂ ಸಂಘಟನೆಗಳಿಂದ ಮತಾಂತರದ ವಿರುದ್ಧ ಪ್ರತಿಭಟನೆ

ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಹಾಗೂ ಇನ್ನಿತರ ಹಿಂದೂ ಸಂಘಟನೆಗಳು, ಮತಾಂತರದ ವಿರುದ್ಧ ಶನಿವಾರ ದ.ಕ ಜಿಲ್ಲಾಧಿಕಾರಿ ಕಚೇರಿಯ  ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮತಾಂತರದ ವಿರದ್ಧ ಕೂಡಲೇ ಕ್ರಮ ಜರಗಿಸುವಂತೆ ಮನವಿ ಸಲ್ಲಿಸಿತು. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ  ಬಡ ಹಿಂದೂ ಕುಟುಂಬಗಳ ಎಳೆಯ ಮಕ್ಕಳಿಗೆ ಉಚಿತ ಸೌಲಭ್ಯ ನೀಡುವ  ಆಮಿಷದ ಮೂಲಕ ಕ್ರೈಸ್ತ ಮಿಶನರಿಗಳು ಮತಾಂತರ ಕಾರ್ಯವನ್ನು ಮಾಡುತ್ತಿದೆ. ಕರಾವಳಿ ಜಿಲ್ಲೆಯಲ್ಲಿ 40ಕ್ಕೂ ಮಿಕ್ಕಿದ ಮತಾಂತರ ಕೇದ್ರಗಳು […]

ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಕಾರ್ಮಿಕ ಸಂಘದ ಪ್ರತಿಭಟನೆ

Tuesday, February 15th, 2011
ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಪ್ರತಿಭಟನೆ

ಮಂಗಳೂರು : ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆ, ಸಿಬ್ಬಂದಿಗಳ ಮತ್ತು ಅಲ್ಲಿನ ವೈದ್ಯರುಗಳ ನಿರ್ಲಕ್ಷ್ಯ, ಆರೋಗ್ಯ ರಕ್ಷಾ ಕವಚ ಸಮಿತಿ ಹೆಸರಿನಲ್ಲಿ ಖಾಸಗೀಕರಣದ ವಿರುದ್ಧ ಅಖಿಲ ಭಾರತ ಕಾರ್ಮಿಕ ಸಂಘ ಶೀರ್ತಾಡಿ, ಮಂಗಳೂರು ಇದರ ವತಿಯಿಂದ ಇಂದು ಬೆಳಿಗ್ಗೆ 10.00ರಿಂದ  ನಗರದ ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಅಹೋ ರಾತ್ರಿ ಪ್ರತಿಭಟನೆ ಆರಂಭಗೊಂಡಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ ಅಖಿಲ ಭಾರತ ಕಾರ್ಮಿಕ ಸಂಘ  ಪ್ರಧಾನ ಕಾರ್ಯದರ್ಶಿ ಸುದತ್ತ ಜೈನ್ ಶೀರ್ತಾಡಿ ಅವರು ಮಾತನಾಡಿ, […]

ಟಿ.ಡಿ.ಪಿ.ಯ ಅಧ್ಯಕ್ಷ ಎಮ್.ರಾಜಗೊಪಾಲನ್ ನಾಯರ್ ಅಮಾನತಿಗಾಗಿ ಶ್ರೀ ರಾಮ ಸೇನೆ ಪ್ರತಿಭಟನೆ

Tuesday, February 8th, 2011
ಶ್ರೀ ರಾಮ ಸೇನೆ ಪ್ರತಿಭಟನೆ

ಮಂಗಳೂರು: ಶ್ರೀ ರಾಮ ಸೇನೆ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮಂಗಳೂರು ಇದರ ಮುಂಭಾಗದಲ್ಲಿ ಶಬರಿಮಲೆ ದೇವಸ್ವಂ ಮಂಡಳಿ ಮತ್ತು ಟಿ.ಡಿ.ಪಿ.ಯ ಅಧ್ಯಕ್ಷ ಎಮ್.ರಾಜಗೊಪಾಲನ್ ನಾಯರ್ ಹೇಳಿಕೆಯನ್ನು ವಿರೋಧಿಸಿ ಸೋಮವಾರ ಬೆಳಿಗ್ಗೆ ಪ್ರತಿಭಟನೆಯನ್ನು ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ರಾಮ ಸೇನೆ ಜಿಲ್ಲಾಧ್ಯಕ್ಷ ಕುಮಾರ್ ಮಾಲೆಮಾರ್, ಶಬರಿಮಲೆ ಮಕರ ಜ್ಯೋತಿ ಮಾನವ ನಿರ್ಮಿತ ಎಂದು ದೇವಸ್ವಂ ಮಂಡಳಿ ಮತ್ತು ಟಿ.ಡಿ.ಪಿ.ಯ ಅಧ್ಯಕ್ಷ ಎಮ್.ರಾಜಗೊಪಾಲನ್ ನಾಯರ್ ಸ್ಪಷ್ಟನೆ ನೀಡಿರುವುದನ್ನು ಶ್ರೀ ರಾಮಸೇನೆ […]

ಆರ್.ಎಸ್.ಎಸ್ ಗುರು ಸುದರ್ಶನ್ ಹೇಳಿಕೆಯನ್ನು ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Tuesday, November 16th, 2010
ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಗುರು ಸುದರ್ಶನ್ ಸೋನಿಯಾಗಾಂಧಿಯವರ ಮೇಲೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತಾನಾಡಿದ ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ ಬಿಜೆಪಿ ಮತ್ತು ಆರ್.ಎಸ್.ಎಸ್ ಗಳು ಒಂದೇ ನಾಣ್ಯದ  ಎರಡು ಮುಖಗಳು ಬಿಜೆಪಿ ಮುಖಂಡರು ಬಹಿರಂಗವಾಗಿ ನಾವು ಆರ್.ಎಸ್.ಎಸ್ ಕಾರ್ಯಕರ್ತರು ಎಂದು ಹೇಳುತ್ತಿದ್ದಾರೆ. ಆರ್.ಎಸ್.ಎಸ್ ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ ಎಂದು ಅವರು […]