Blog Archive

ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಸಾಯುವ ಸೂಚನೆ ಇರಲಿಲ್ಲ

Wednesday, August 7th, 2019
sushma-swaraj

ನವದೆಹಲಿ:  ಜಮ್ಮು-ಕಾಶ್ಮೀರದ ಐತಿಹಾಸಿಕ ನಿರ್ಣಯಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಅವರಿಗೆ ರಾತ್ರಿ 9 ಗಂಟೆ ವೇಳೆಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಕೆಯನ್ನು ಏಮ್ಸ್ ಗೆ ಕರೆದೊಯ್ಯಲಾಗಿದೆ. 9:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆ ನೀಡುವ ವಾರ್ಡ್ ಗೆ ದಾಖಲಿಸಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಪ್ರಾರಂಭಿಸಲಾಯಿತು. ಸುಷ್ಮಾ ಸ್ವರಾಜ್ ಅವರನ್ನು ಉಳಿಸಿಕೊಳ್ಳುವುದಕ್ಕೆ ಸತತ 70 ನಿಮಿಷಗಳ ಕಾಲ ವೈದ್ಯರು ಯತ್ನಿಸಿದರು. ಗಂಭೀರ ಸ್ಥಿತಿಯಿಂದ ಆಕೆಯನ್ನು ಪಾರುಮಾಡುವುದಕ್ಕೆ […]

ಭಾರತದ ಸೇರಿದಂತೆ ವಿಶ್ವದಾದ್ಯಂತ ಸಹಸ್ರಾರು ಜನತೆ ಯೋಗಾಭಾಸ್ಯ!

Thursday, June 21st, 2018
narendra-modi

ನವದೆಹಲಿ: ಇಡೀ ಜಗತ್ತು ಇಂದು ನಾಲ್ಕನೇ ವಿಶ್ವ ಯೋಗ ದಿನಾಚರಣೆಯಲ್ಲಿ ತೊಡಗಿದೆ. ಭಾರತದ ಸೇರಿದಂತೆ ವಿಶ್ವದಾದ್ಯಂತ ಸಹಸ್ರಾರು ಜನತೆ ಯೋಗಾಭಾಸ್ಯ ಮಾಡುತ್ತಿದ್ದಾರೆ. ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವ ಮಟ್ಟದಲ್ಲಿ ಯೋಗ ತರಬೇತಿ ಕಾರ್ಯಕ್ರಮಗಳು, ಕ್ಯಾಂಪ್‌‌ಗಳು, ಉಪನ್ಯಾಸಗಳು, ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್‌ನ ರಾಜಧಾನಿ ಡೆಹ್ರಾಡೂನ್‌ನಲ್ಲಿ ಸಾವಿರಾರು ಜನರ ಮುಂದೆ ಯೋಗ ದಿನ ಆಚರಿಸಿದರು. ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡರು. ಇಂದು ವಿಶ್ವ ಮಟ್ಟದಲ್ಲಿ ಯೋಗ […]

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಲೀಗಲ್‌ ನೋಟಿಸ್‌ , ಕ್ಷಮೆ ಕೇಳದಿದ್ದರೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ..!

Monday, May 7th, 2018
narendra-modi

ಬೆಂಗಳೂರು: ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್‌ ಸರ್ಕಾರ ಎಂದು ಜರಿದಿದ್ದಕ್ಕೆ ಪ್ರತಿಯಾಗಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ರಾಜ್ಯ ಚುನಾವಣಾ ಪ್ರಚಾರದ ವೇಳೆ, ಪ್ರಧಾನಿ ಮೋದಿ ನಿರಂತರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವುಗಳಿಗೆ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪ್ರಧಾನಿ ಬಳಸಿದ ‘ಸೀದಾ ರೂಪಯ್ಯ’ ಸರ್ಕಾರ ಎಂಬ ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಮಾನನಷ್ಟವಾಗಿರುವ ಬಗ್ಗೆ ಲೀಗಲ್‌ ನೋಟಿಸ್‌ ನೀಡಿದ್ದಾರೆ. ಅಷ್ಟೇ ಅಲ್ಲ ಪ್ರಧಾನಿ ನರೇಂದ್ರ ಮೋದಿ, […]

ಪ್ರಧಾನಿ ಮೋದಿ ನನ್ನ ಪ್ರತಿಸ್ಪರ್ಧಿ: ಹುಚ್ಚ ವೆಂಕಟ್

Wednesday, April 11th, 2018
huccha-venkat

ಮಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪ್ರಧಾನ ಮಂತ್ರಿಯಾಗೋದು ನನ್ನ ಗುರಿ. ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರತಿಸ್ಪರ್ಧಿ ಎಂದು ಹುಚ್ಚ ವೆಂಕಟ್ ಹೇಳಿಕೊಂಡಿದ್ದಾರೆ. ಅವರು ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮತ ಹಾಕುವಂತೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾಡಲ್ಲ, ಡ್ರಿಂಕ್ಸ್, ಸೀರೆ ಹಂಚಲ್ಲ ಎಂದರು. ನಾನು ಸ್ಪರ್ಧಿಸುತ್ತಿರುವ ಕ್ಷೇತ್ರದ ಜನತೆಯ ಕಷ್ಟ ಅರಿತುಕೊಂಡು ಏನು ಮಾಡಬೇಕಾಗಿತ್ತು. ಏನು ಮಾಡಬಹುದು ಎಂದು ತಿಳಿದುಕೊಂಡು […]

ಪ್ರಧಾನಿ ಮೋದಿ ದಾವೋಸ್‌ ಭಾಷಣಕ್ಕೆ ತಲೆದೂಗಿದ ಚೀನಾ!

Friday, January 26th, 2018
modi-speak

ನವದೆಹಲಿ: ಸ್ವಿಡ್ಜರ್‌ಲ್ಯಾಂಡ್‌‌ನ ದಾವೋಸ್‌ನಲ್ಲಿ ನಡೆದ ವರ್ಲ್ಡ್‌‌‌ ಎಕನಾಮಿಕ್ಸ್‌ ಫೋರಂ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಭಾಷಣವನ್ನು ಚೀನಾ ಸ್ವಾಗತಿಸಿದೆ. ದಾವೋಸ್‌ನಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಆರ್ಥಿಕ ರಕ್ಷಣಾ ನೀತಿ ಭಯೋತ್ಪಾದನೆಯಷ್ಟೇ ಅಪಾಯಕಾರಿ ಎಂದು ಪ್ರತಿಪಾದಿಸಿದ್ದರು. ಈ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌‌ ಟ್ರಂಪ್‌ ಅವರ ‘ಅಮೆರಿಕ ಫಸ್ಟ್‌‌’ ನೀತಿ ವಿರುದ್ಧ ಪರೋಕ್ಷವಾಗಿ ಮೋದಿ ದನಿ ಎತ್ತಿದ್ದರು. ಪ್ರಧಾನಿ ಮೋದಿ ಅವರ ಈ ಭಾಷಣವನ್ನು ಸ್ವಾತಿಸಿರುವ ಚೀನಾ ಮೆಚ್ಚುಗೆ ವ್ಯಕ್ತಪಡಿಸಿದೆ. ‘ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು […]

ವಾಜಪೇಯಿ ಜನ್ಮದಿನಕ್ಕೆ ಗಣ್ಯರ ಶುಭಾಶಯ: ಹಿರಿಯ ನಾಯಕನ ನಿವಾಸಕ್ಕೆ ಪ್ರಧಾನಿ ಭೇಟಿ

Monday, December 25th, 2017
vajpayee

ನವದೆಹಲಿ: ಇಂದು ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ವರಿಷ್ಠ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ. ವಾಜಪೇಯಿ ಇಂದು 93ನೇ ವಸಂತಕ್ಕೆ ಕಾಲಿಟ್ಟಿದ್ದು, ‘ನಮ್ಮೆಲ್ಲರ ಪ್ರೀತಿಪಾತ್ರರಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ರಾಷ್ಟ್ರಪತಿ ರಾಮನಾಥ್‌ ಟ್ವೀಟ್‌ ಮಾಡಿದ್ದಾರೆ. ಪ್ರಧಾನಿ ಮೋದಿ ಕೂಡ ಟ್ವೀಟ್‌ ಮೂಲಕ ವಾಜಪೇಯಿ ಅವರಿಗೆ ಶುಭಕೋರಿದ್ದು, ‘ನಮ್ಮ ಅಟಲ್‌ಜೀ ಅವರಿಗೆ ಜನ್ಮದಿನದ […]

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ

Monday, December 18th, 2017
modi

ಮಂಗಳೂರು: ಕಡಲ ನಗರಿ ಮಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ .ಲಕ್ಷದ್ವೀಪಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿಯೇ ತಂಗಲಿದ್ದಾರೆ. ಗುಜರಾತ್ ಹಾಗು ಹಿಮಾಚಲ ಪ್ರದೇಶ ಚುನಾವಣೆಯ ಗೆಲುವಿನ ವಿಜಯೋತ್ಸವದ ನಡುವೆ ಇಂದು ಪ್ರಧಾನಿ ಮೋದಿ ಮಂಗಳೂರಿನಲ್ಲಿ ತಂಗುವ ಹಿನ್ನೆಲೆಯಲ್ಲಿ ಕರಾವಳಿಯ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಡಿ. 18ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು […]

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಮನಮೋಹನ್ ಸಿಂಗ್ ವಿರುದ್ಧ ಆರೋಪಕ್ಕೆ ಶರದ್ ಪವಾರ್ ಕಿಡಿ

Wednesday, December 13th, 2017
shard-power

ನಾಗ್ಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನದ ಜತೆಗೆ ಪಿತೂರಿ ನಡೆಸಿದ್ದಾರೆ ಎಂದು ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎನ್ಸಿಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತಿರುವ ಪವಾರ್, ವಿಶ್ವದಲ್ಲಿ ಯಾರು ಕೂಡಾ ಮನಮೋಹನ್ ಸಿಂಗ್ ಅವರ ಕಡೆ ಬೊಟ್ಟು ಮಾಡಲಾಗದಂತ ವ್ಯಕ್ತಿತ್ವ ಅವರದ್ದು ಅಂತಹವರ ವಿರುದ್ಧ ನರೇಂದ್ರ ಮೋದಿ ಅವರು ಕೀಳುಮಟ್ಟದ ಆರೋಪ […]

ವೀರೇಂದ್ರ ಹೆಗ್ಗಡೆ ನಿಷ್ಕಾಮ ಕರ್ಮಯೋಗಿ :ಪ್ರಧಾನಿ ಮೋದಿ

Monday, October 30th, 2017
darmasthala

ಮಂಗಳೂರು:ಸಂಸ್ಕೃತದಲ್ಲಿ ಹೇಳಿದಂತೆ ಅವರು ನಿಷ್ಕಾಮ ಕರ್ಮಯೋಗಿ ಎಂದು ಧರ್ಮಸ್ಥಳ ಧರ್ಮಾಧಿಕಾರಿಯನ್ನು ಪ್ರಧಾನಿ ಮೋದಿ ಬಣ್ಣಿಸಿದರು. ವೀರೇಂದ್ರ ಹೆಗ್ಗಡೆಯವರ 50 ವರ್ಷದ ಸುದೀರ್ಘ ಸೇವೆ ಕೋಟ್ಯಂತರ ಜನರಿಗೆ ಪ್ರೇರಣೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ರುದ್ರಾಭಿಷೇಕ ನೆರವೇರಿಸಿದ ನಂತರ ಉಜಿರೆಯಲ್ಲಿ ನಡೆದ ರುಪೇ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದರು. ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, ಧರ್ಮಸ್ಥಳದ ನನ್ನ ಪ್ರೀತಿಯ ಅಭಿಮಾನಿಗಳಿಗೆ ಅಭಿನಂದನೆಗಳು. ಹೆಗ್ಗಡೆಯವರ 50 ವರ್ಷಗಳ ಸಾಧನೆ ಬಣ್ಣನೆಗೆ ನಿಲುಕದ್ದು. ಅವರನ್ನು ಗೌರವಿಸುವ ಕ್ಷಣ […]

ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು: ಪರಮೇಶ್ವರ್

Saturday, August 27th, 2016
Parameshwar

ಮಂಗಳೂರು: ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ಮಂಗಳೂರು ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋ ರಕ್ಷಣೆಯ ಹೆಸರಿನಲ್ಲಿ ದೇಶದೆಲ್ಲೆಡೆ ಹಲ್ಲೆ, ಕೊಲೆ ನಡೆಯುತ್ತಿವೆ. ಪ್ರಧಾನಿ ಮೋದಿಯವರು ಗೋ ರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುವವರ ದಾಖಲೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬಳಿಕವೂ ಕರಾವಳಿಯಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆ […]