ವಿಟ್ಲದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

Wednesday, February 15th, 2023
vitla-BJP

ವಿಟ್ಲ : ಇಲ್ಲಿನ ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ ಅರುಣ್ ವಿಟ್ಲ ರವರು ಪ್ರತಿನಿಧಿಸುವ 11ನೇ ವಾರ್ಡಿನ ಅಧ್ಯಕ್ಷ ಮೋಹನ್ ಕಟ್ಟೆ ಅವರು ಕಾಂಗ್ರೆಸ್ ಪಕ್ಷದ ಸೇರಿದ ಪ್ರಮುಖರು ಅಲ್ಲದೇ ವಿಟ್ಲ ತಾಲೂಕು ಆರ್.ಎಸ್. ಎಸ್ ಜವಾಬ್ದಾರಿ ಹೊಂದಿರುವ ಪ್ರಮುಖರ ತೀರಾ ಹತ್ತಿರದ ಸಂಬಂಧಿ ಯೋಗಿಶ್ ಗೌಡ ದೇವಸ್ಯ ಸೇರಿದಂತೆ ರಾಜೇಶ್, ಮಹಾಬಲ, […]

ಕಾಂಗ್ರೆಸ್‌ನವರು ಕಳಸಾ ಬಂಡೂರಿಗೆ ಗೋಡೆ ಕಟ್ಟಿದ ದೋಹಿಗಳು : ಪ್ರಹ್ಲಾದ ಜೋಶಿ

Sunday, January 1st, 2023
ಕಾಂಗ್ರೆಸ್‌ನವರು ಕಳಸಾ ಬಂಡೂರಿಗೆ ಗೋಡೆ ಕಟ್ಟಿದ ದೋಹಿಗಳು : ಪ್ರಹ್ಲಾದ ಜೋಶಿ

ಹುಬ್ಬಳ್ಳಿ : (ಶಂಭು ನಾಗನೂರಮಠ) ಕಾಂಗ್ರೆಸ್‌ನವರು ಕಳಸಾ ಬಂಡೂರಿಗೆ ಗೋಡೆ ಕಟ್ಟಿದ ದೋಹಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಕಳಸಾ-ಬಂಡೂರಿ ನಾಲಾ ವಿಸ್ತ್ರತ ಯೋಜನೆಗೆ ಕೇಂದ್ರದ ಜಲ ಆಯೋಗ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಬಿಜೆಪಿ ಹು-ಧಾ ಮಹಾನಗರ ಹಾಗೂ ಗ್ರಾಮಾಂತರ ಘಟಕದಿಂದ ವಿಜಯೋತ್ಸವದಲ್ಲಿ ಪಾಲ್ಗೊಂಡು ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾತನಾಡಿ ಕಾಂಗ್ರೆಸ್‌ ನಾಯಕರ ಮೇಲೆ ಕಿಡಿ ಕಾರಿ, ಸೋನಿಯಾ ಗಾಂಧಿ ಹಣ ನೀರು ಕಾರಣವಾಗಿದೆ. ಬಿಡಬಾರದು ಎಂದಿದ್ದಾರೆ. ಅವರನ್ನ ಹೋಗಿ ನೀವು […]

ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಸರಕಾರಗಳು ದುರ್ಬಲಗೊಳಿಸುತ್ತಿವೆ : ರೈ

Tuesday, October 18th, 2022
Ramanatha Rai

ಬಂಟ್ವಾಳ : ಅಧಿಕಾರ ವಿಕೇಂದ್ರೀಕರಣದ ಕನಸು ಹೊತ್ತು ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಸಶಕ್ತಗೊಳಿಸುವ ಕಾರ್ಯವನ್ನು ಕಾಂಗ್ರೆಸ್‌ ಮಾಡಿದ್ದರೆ, ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರಕಾರಗಳು ಇಡೀ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕು ಪಂಚಾಯಿತಿ ಮುಂಭಾಗ ಮಂಗಳವಾರ ಕಾಂಗ್ರೆಸ್‌ನ ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ, ಬಂಟ್ವಾಳ ಮತ್ತು ಪಾಣೆ ಮಂಗಳೂರು ಬ್ಲಾಕ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅವಧಿ […]

ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ತೆರವು

Friday, August 19th, 2022
Savarkar

ಉಡುಪಿ: ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ಅನ್ನು ಶುಕ್ರವಾರ ತೆರವುಗೊಳಿಸಲಾಯಿತು. ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಕಟೌಟನ್ನು ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಲು ಹಾಕಲಾಗಿತ್ತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.  ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಈ ಕಟೌಟ್ ಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ಕಾಂಗ್ರೆಸ್ ಕಚೇರಿಗೆ […]

ಕಾಂಗ್ರೆಸ್ ಕೊಡುಗೆ ಸ್ಮರಿಸಿದರೆ ಸ್ಪಷ್ಟ ಬಹುಮತ: ಮಧು ಬಂಗಾರಪ್ಪ

Tuesday, July 5th, 2022
congress

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿಗೆ ಸೇರ್ಪಡೆಗೊಂಡು ಕೇವಲ 9 ತಿಂಗಳಲ್ಲೇ ಮರಳಿ ಬರುವ ಮೂಲಕ ಬಿಜೆಪಿ ದೇಶಕ್ಕೆ ಒಳ್ಳೆಯ ಪಕ್ಷವಲ್ಲ ಎಂದು ಸಾಬೀತು ಪಡಿಸಿದ್ದಾರೆ. ರಾಜ್ಯದಲ್ಲಿ ಹಿಂದುಳಿದ ವರ್ಗದ ಜನತೆಗೆ ಭೂ ಮಸೂದೆ ಕಾಯ್ದೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ರಾಜಕೀಯ ಮೀಸಲಾತಿ ಜೊತೆಗೆ ಉಚಿತ ಪಡಿತರ ಹಾಗೂ ರೈತರಿಗೆ ಉಚಿತ ವಿದ್ಯುತ್ ನೀಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ ಈ ಕೊಡುಗೆ ಸ್ಮರಿಸಿ ಜನತೆ ಮತ ಚಲಾಯಿಸಿದರೆ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ […]

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್

Saturday, May 7th, 2022
Pramod Madhwaraj

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಗೆ ಶನಿವಾರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಹೆಸರಿನಲ್ಲಿ ಚುನಾವಣಾ ಕಣಕ್ಕೆ ಇಳಿದ ಪ್ರಮೋದ್ ಮಧ್ವರಾಜ್ ಸೋತಿದ್ದರು. ಪ್ರಚಾರದ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಯೆಂದು ಗುರುತಿಸಿಕೊಂಡಿದ್ದರು. ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]

ಕೋಟೆಕಾರು ಪಟ್ಟಣ ಪಂಚಾಯತ್‍ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ

Thursday, December 30th, 2021
Kotekar panchayath

  ಉಳ್ಳಾಲ :  ಡಿ.27ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಮಂಗಳೂರು ತಾಲೂಕು ಪಂಚಾ ಯತ್ ಸಭಾಂಗಣದಲ್ಲಿ ನಡೆಯಿತು. ಕೋಟೆಕಾರು ಪಟ್ಟಣ ಪಂಚಾಯತ್‍ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಮತ್ತೆ ಅಧಿಕಾರ ಪಡೆದಿದೆ. ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿದೆ, ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ. ಪ […]

ಸೋಲುವ ಭೀತಿಯಿಂದ ಕಾಂಗ್ರೆಸ್ ಒಳಒಪ್ಪಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

Friday, December 10th, 2021
Nalinkumar-Kateel

ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಯಾವುದೇ ಪಕ್ಷದ ಜತೆ ಒಳ ಒಪ್ಪಂದ ಅಗತ್ಯ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಹಾಗಾಗಿ ಒಳ ಒಪ್ಪಂದದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು `ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಘಟನಾತ್ಮಕವಾಗಿ ಎದುರಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ […]

ದ.ಕ. ಜಿಲ್ಲೆಯಿಂದ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್

Friday, November 19th, 2021
srinivas Poojary

ಮಂಗಳೂರು :ವಿಧಾನ ಪರಿಷತ್  ಚುನಾವಣೆಗೆ ದ.ಕ. ಜಿಲ್ಲೆಯಿಂದ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು  ಪಡೆದಿದ್ದು , ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ […]

ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ ಎಂಬ ಶಬ್ದ ಬಳಕೆ ಮಾಡಿದ್ದಕ್ಕೆ ನಾನು ಕ್ಷಮೆ ಕೇಳುತ್ತೇನೆ : ಧರ್ಮೇಂದ್ರ

Sunday, September 19th, 2021
Dharmendra

ಮಂಗಳೂರು : “ನಾವು ಗಾಂಧಿಯನ್ನೇ ಬಿಟ್ಟಿಲ್ಲ ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧಿಯನ್ನೇ ಬಿಟ್ಟಿಲ್ಲ. ಇನ್ನು ನಿಮ್ಮನ್ನು ಬಿಡುತ್ತೇವಾ?. ಬಿಜೆಪಿ ಒಂದು ಬೆನ್ನುಮೂಳೆ ಇಲ್ಲದ ಸರ್ಕಾರ. ಇವರಿಗಿಂತ ತಾಲಿಬಾನ್‌‌ಗಳು ವಾಸಿ. ಇವರ ಸರ್ಕಾರ ತಾಲಿಬಾನ್‌‌ಗಳಿಗಿಂತ ಕೀಳು” ಎಂದಿದ್ದ  ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ  ಕ್ಷಮೆಯಾಚಿಸಿದ್ದಾರೆ. “ಸುದ್ದಿಗೋಷ್ಠಿಯಲ್ಲಿ ಗಾಂಧೀಜಿ ಅವರ ಹಿಂದುತ್ವದ ವಿರೋಧ ನೀತಿ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಯಾರಿಗೂ ಕೂಡಾ ಬೆದರಿಕೆ ಹಾಕಿಲ್ಲ” ಎಂದಿದ್ದಾರೆ. “ನನ್ನ ಹೇಳಿಕೆಯಲ್ಲಿ […]