Blog Archive

ಕಾಂಗ್ರೆಸ್ ಮುಖಂಡ ಮಾಧವ ಮಾವೆ ಹಾಗೂ ಪತ್ನಿ ಬಿಜೆಪಿಗೆ ಸೇರ್ಪಡೆ

Saturday, December 19th, 2020
Madhava Mave

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿದ್ದ ಮಾಧವ ಮಾವೆ ಹಾಗೂ ಪತ್ನಿ ಜಿಪಂ ಸದಸ್ಯೆ ಮಂಜುಳಾ ಮಾಧವ ಮಾವೆ, ಸೇರಿದಂತೆ ಹಲವಾರು ಮಂದಿ ಕಾರ್ಯಕರ್ತರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಲ್ಲರಿಗೂ ಬಿಜೆಪಿ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿಗೆ ಸೇರ್ಪಡೆಯಾಗಿರುವ ಮಾಧವ ಮಾವೆ ಮಾತನಾಡಿ, ಕಟೀಲ್ ಅವರು ಯಾವಾಗಲೂ ಬೆನ್ನುತಟ್ಟಿ ಬಿಜೆಪಿಗೆ ಬರಬೇಕೆಂದು ಆಹ್ವಾನ ನೀಡುತ್ತಿದ್ದರು‌. ಅವರ ಕೈಯ ಸ್ಪರ್ಶ ದಿಂದ  ಇಂದು ನಾವು […]

ಕಾಸರಗೋಡು ನಗರಸಭೆ : ಎಲ್‌ಡಿಎಫ್ 21, ಬಿಜೆಪಿ 14 ಸ್ಥಾನಗಳಲ್ಲಿ ಜಯ

Thursday, December 17th, 2020
Kasaragod Election

ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಸರಗೋಡು, ಕಾಂಞಂ ಗಾಡ್‌, ನೀಲೇಶ್ವರ ನಗರಸಭೆ ಚುನಾವಣೆ ಫ‌ಲಿತಾಂಶ ಹೊರಬಿದ್ದಿದೆ. ಕಾಸರಗೋಡು ನಗರಸಭೆಯು ಐಕ್ಯರಂಗದ ಪಾಲಾದರೆ, ಕಾಂಞಂಗಾಡ್‌, ನೀಲೇಶ್ವರ ನಗರ ಸಭೆಯಲ್ಲಿ ಮತ್ತೆ ಎಲ್‌ಡಿಎಫ್‌ ಅಧಿಕಾರಕ್ಕೇರಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ನ 15 ಸ್ಥಾನಗಳ ಪೈಕಿ  ಬಿಜೆಪಿ 6, ಯುಡಿಫ್ 6, ಎಲ್ ಡಿ ಎಫ್ 2 ಮತ್ತು ಎಲ್ ಡಿ ಎಫ್ ಬೆಂಬಲಿತ 1 ಅಭ್ಯರ್ಥಿ ಜಯಗಳಿಸಿದ್ದಾರೆ. ಮಂಜೇಶ್ವರ ಬ್ಲಾಕ್  ಸಂಭಂದಿಸಿದಂತೆ  ಜಿಲ್ಲಾ ಪಂಚಾಯತ್ ನ  4 ಸ್ಥಾನಗಳ ಪೈಕಿ, ಬಿಜೆಪಿ 1, ಯುಡಿಎಫ್ 3 ಅಭ್ಯರ್ಥಿಗಳು […]

ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ, ಬಂಟ್ವಾಳದಲ್ಲಿ ಹಲವು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Monday, December 7th, 2020
Bantwala BJP

ಬಂಟ್ವಾಳ  : ಕಾಂಗ್ರೆಸ್ ನಾಯಕರ ನಡುವಿನ ಹೊಂದಾಣಿಕೆ ಕೊರತೆಯಿಂದ ಅಸಮಾಧಾನಗೊಂಡು ಪಕ್ಷದ ಕೆಲವು ಕಾರ್ಯಕರ್ತರು  ಬಿಜೆಪಿಗೆ  ಸೇರ್ಪಡೆ ಗೊಂಡಿದ್ದಾರೆ. ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮವಂತೂರು, ಚಂದ್ರಹಾಸ ಕರ್ಕೆರ ಅರಳ, ಮುಸ್ತಫ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ […]

ರಾಜ್ಯದಲ್ಲಿದ್ದ ರೌಡಿಸಂ ರಾಜಕಾರಣ ಕೊನೆಗೊಳಿಸಲು ಬಿಜೆಪಿಗೆ ಬಂದೆವು, ಆದರೆ ಕಡೆಗಣಿಸಿದರು : ಎಚ್.ವಿಶ್ವನಾಥ್

Tuesday, December 1st, 2020
HVishwanath

ಬೆಂಗಳೂರು: ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆಆದರೆ ಕಡೆಗಣಿಸಿದರು  ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ  ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ. ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿದ್ದ ರೌಡಿಸಂ ರಾಜಕಾರಣ, ಕುಟುಂಬ ರಾಜಕಾರಣ ಕೊನೆಗೊಳಿಸಲು ಬಿಜೆಪಿಗೆ ಬಂದೆವು. ಕ್ಷಿಪ್ರ ಕ್ರಾಂತಿ ನಡೆದು ಬಿಜೆಪಿ ಸರ್ಕಾರ ಬಂತು. ನಾವು ಮಂತ್ರಿ ಆಗಬೇಕು ಎಂದು ಬಯಸಿ ಸರ್ಕಾರ ಬೀಳಿಸಲಿಲ್ಲ. ಕೆಲವರು ಅನಾವಶ್ಯಕವಾಗಿ ಮಾತನಾಡುತ್ತಿದ್ದಾರೆ ಎಂದರು. […]

ಡಿ.ಕೆ.ಶಿವಕುಮಾರ್ ಅವರ ಆಟ ಕರಾವಳಿಯಲ್ಲಿ ನಡೆಯುದಿಲ್ಲ: ಶೋಭಾ ಕರಂದ್ಲಾಜೆ

Monday, November 30th, 2020
Shobha Karandlaje

ಉಡುಪಿ : ಹಿಂದೂ ಧರ್ಮ ಬಿಜೆಪಿಯ ಆಸ್ತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಉಡುಪಿ-ಚಿಕ್ಕಮಗಳೂರು ಸಂಸದೆ  ಶೋಭಾ ಕರಂದ್ಲಾಜೆ, “ಬಿಜೆಪಿ ಕರಾವಳಿ ಕ್ಷೇತ್ರಗಳನ್ನು ದತ್ತು ಪಡೆದಿರುವುದು ನಿಜ. ಕರಾವಳಿ ಜಿಲ್ಲೆಗಳು ನಮ್ಮವು. ಉಡುಪಿ ಜಿಲ್ಲೆಯ ಎಲ್ಲಾ ಐದು ಶಾಸಕರು ಬಿಜೆಪಿಯವರು. ನಾವು ಈ ಪ್ರದೇಶವನ್ನು ದತ್ತು ಪಡೆದಿದ್ದೇವೆ ಮತ್ತು ಅದನ್ನು ಅಭಿವೃದ್ಧಿಪಡಿಸುತ್ತೇವೆ. ಕರಾವಳಿ ಪ್ರದೇಶದ ಜನರು ತಮ್ಮ ವಿರೋಧಿ ನೀತಿಗಳಿಗಾಗಿ ಸೂಕ್ತವಾದ ಪಾಠವನ್ನು ಕಲಿಸಿದ್ದಾರೆ. ಡಿ.ಕೆ.ಶಿವಕುಮಾರ್ […]

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಪಡೆಯುವುದು ಪಕ್ಷದ ಗುರಿ : ಅಶ್ವತ್ಥ್ ನಾರಾಯಣ

Saturday, November 28th, 2020
Ashwath Narayana

ಮಂಗಳೂರು : ವಿವಿಧ ಜ್ಞಾನ ಕ್ಷೇತ್ರ ಗಳ ನಡುವೆ ಪರಸ್ಪರ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲಾಗಿದೆ. ವಿಜ್ಞಾನ ತಂತ್ರಜ್ಞಾನ ಸೇರಿದಂತೆ ವಿವಿಧ ಶೈಕ್ಷಣಿಕ ಕ್ಷೇತ್ರಗಳ ನಡುವೆ ಪರಸ್ಪರ ಸಮನ್ವಯ ಸಾಧಿಸಲು ಸಮಗ್ರ ವ್ಯವಸ್ಥೆಯಲ್ಲಿ ಸುಧಾರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿ ಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿ ಮುಂದಿನ ಹಂತದಲ್ಲಿ ಮಗುವಿಗೆ ಮೂರು ವರ್ಷ ತುಂಬುವ ಹಂತದಿಂದಲೇ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಡಾ.ಅಶ್ವತ್ಥ್ […]

ನ.28ರಂದು‌ ಬಿಜೆಪಿಯ ಎರಡು ‘ಗ್ರಾಮ ಸ್ವರಾಜ್ಯ ಸಮಾವೇಶ’

Wednesday, November 25th, 2020
Sudarshan MoodaBidre

ಮಂಗಳೂರು:  ದಕ್ಷಿಣಕನ್ನಡ ಜಿಲ್ಲೆಯ 200ಕ್ಕೂ ಹೆಚ್ಚು ಗ್ರಾಪಂನಲ್ಲಿ ಬಿಜೆಪಿ ಅಧಿಕಾರ ಪಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ  ಮಾತನಾಡಿದ ಅವರು, ಬಿಜೆಪಿ ಗ್ರಾಪಂ ಚುನಾವಣೆ ಎದುರಿಸಲು  ರಾಜ್ಯಾದ್ಯಂತ ಆರು ತಂಡಗಳು ರಚನೆಯಾಗಿದೆ. ಈ ತಂಡಗಳು ಗ್ರಾಪಂ ಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡುವ ಮೂಲಕ ‘ಗ್ರಾಮ ಸ್ವರಾಜ್ಯ ಸಮಾವೇಶ’ ಮಾಡುವ ನಿರ್ಧಾರವನ್ನು ರಾಜ್ಯ ಸಮಿತಿ ಪ್ರಕಟಿಸಿದೆ ಎಂದು ಹೇಳಿದರು. ಬಿಜೆಪಿ ಪ್ರತಿಯೊಂದು ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಲು ಸಂಘಟನಾತ್ಮಕವಾದ ಕೆಲಸ ಕಾರ್ಯಗಳನ್ನು […]

ಬಿಹಾರ ವಿಧಾನಸಭೆ ಚುನಾವಣೆ, ಬಿಜೆಪಿ ಮೊದಲ ಗೆಲುವು

Tuesday, November 10th, 2020
Murari

ಪಟ್ನಾ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ  ಹೊರಬೀಳುತ್ತಿದ್ದು, ಬಿಜೆಪಿ ಮೊದಲ ಗೆಲುವು ಕಂಡಿದೆ. ಕೆಯೊಟಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರಾರಿ ಮೋಹನ್ ಝಾ ಗೆಲುವು ಸಾಧಿಸಿದ್ದಾರೆ. ಆರ್‌ಜೆಡಿ ಅಭ್ಯರ್ಥಿ ಅಬ್ದುಲ್ ಬಾರಿ ಸಿದ್ದಿಕಿ ಅವರನ್ನು ಮುರಾರಿ ಸುಮಾರು 8,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಹಿರಿಯ ಮುಖಂಡರಾಗಿರುವ ಸಿದ್ದಿಕಿ, 2015ರಲ್ಲಿ ಆರ್‌ಜೆಡಿ-ಜೆಡಿಯು ಸರ್ಕಾರದಲ್ಲಿ ಸಚಿವರಾಗಿದ್ದರು. ದರ್ಭಾಂಗಾ ಗ್ರಾಮೀಣ ಕ್ಷೇತ್ರದಲ್ಲಿ ಆರ್‌ಜೆಡಿಯ ಲಲಿತ್ ಕುಮಾರ್ ಯಾದವ್, ತಮ್ಮ ಎದುರಾಳಿ ಜೆಡಿಯುದ ಫರಾಜ್ ಫತ್ಮಿ ಅವರನ್ನು ಸೋಲಿಸಿದ್ದಾರೆ. ದರ್ಭಾಂಗಾ ಕ್ಷೇತ್ರದಲ್ಲಿ […]

ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

Tuesday, November 10th, 2020
By election

ತುಮಕೂರು: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದರೆ, ಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. ಶಿರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಎದುರಾಳಿ ಮಾಜಿ ಸಚಿವ ಜಯಚಂದ್ರ ವಿರುದ್ಧ 1,488 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದು, 14,206 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. […]

ನಟಿ ಖುಷ್ಬೂ ಬಿಜೆಪಿ ರಾಜ್ಯಸಭಾ ಉಪ ಚುನಾವಣಾ ಸ್ಪರ್ಧೆಯ ಆಯ್ಕೆ ಪಟ್ಟಿಯಲ್ಲಿ

Thursday, November 5th, 2020
Kushboo

ಮಂಗಳೂರು  : ರಾಜ್ಯದ ಒಂದು ರಾಜ್ಯಸಭಾ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪ ಚುನಾವಣೆ ನಡೆಯಲಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಶೇಷ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪವಾಗಿದೆ. ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಕುರಿತು ವಿಸ್ತಾರವಾದ ಚರ್ಚೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ನಟಿ ಖುಷ್ಬೂ ಬಿಜೆಪಿ ಸೇರ್ಪಡೆ ಇದಕ್ಕೆ ನಿದರ್ಶನವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಗೂ ಬಿಜೆಪಿ ಗಾಳ ಹಾಕಿರುವುದು ಗುಟ್ಟಾಗೇನು ಉಳಿದಿಲ್ಲ. ಈ ನಡುವೆ ಈ […]