Blog Archive

ಬಿಜೆಪಿ :ಶಾಸಕ ಸ್ಥಾನಕ್ಕೆ ಬಿ ಎಸ್ ವೈ ರಾಜೀನಾಮೆ

Friday, November 30th, 2012
Yeddyurappa resignation

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಮೂಡಿದ್ದ ಕುತೂಹಲಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ಸುಮಾರು 40 ವರ್ಷಗಳ ಕಾಲ ಭಾರೀ ಪರಿಶ್ರಮ ಪಟ್ಟು ತಾನೇ ಕಟ್ಟಿದ ಮನೆಯಿಂದ ಯಡಿಯೂರಪ್ಪ ಹೊರ ನಡೆದಿದ್ದಾರೆ. ಮಧ್ಯಾಹ್ನ 1.00 ಗಂಟೆಯ ಸುಮಾರಿಗೆ ವಿಧಾನಸೌಧಕ್ಕೆ ತೆರಳಿದ ಯಡಿಯೂರಪ್ಪ ಸ್ಪೀಕರ್ ಬೋಪಯ್ಯಗೆ ತನ್ನ ರಾಜೀನಾಮೆಯನ್ನು ಸಲ್ಲಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡುವುದಕ್ಕೂ ಮುನ್ನ ಯಡಿಯೂರಪ್ಪ ಫ್ರೀಡಂ ಪಾರ್ಕ್ ನಲ್ಲಿ ತನ್ನ […]

ಕರಾವಳಿಯಲ್ಲಿ ಗರಿಕೆದರಿದ ಯಡ್ಡಿ ಪಕ್ಷ ಕುಂದಾಪುರದಲ್ಲಿ ಹಾಲಾಡಿ ಶೆಟ್ಟರಿಗೆ ಮಣೆ

Saturday, November 24th, 2012
Yadyurappa & Halaadi

ಮಂಗಳೂರು :ರಾಜ್ಯದ ಬಿಜೆಪಿ ಪಕ್ಷದ ಭವಿಷ್ಯ ಸಧ್ಯಕ್ಕಂತೂ ನೆಟ್ಟಗೆ ಇಲ್ಲ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿಸಿಕೊಳ್ಳಲು ಆರಂಭವಾಗಿದೆ. ಕಾರಣ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಯನ್ನು ಬಿಟ್ಟು ತನ್ನದೇ ಹೊಸ ಪಕ್ಷ ಕೆಜೆಪಿಯನ್ನು ಕಟ್ಟಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗಾಗಲೇ ಹೊಸ ಪಕ್ಷ ಘೋಷಣೆ ಮಾಡಿರುವ ಯಡಿಯೂರಪ್ಪರ ನೂತನ ಪಕ್ಷದ ರಾಜಾಧ್ಯಕ್ಷರಾಗಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಧನಂಜಯ ಕುಮಾರ್ ನೇಮಕವಾದ ಬೆನ್ನಲ್ಲೇ ರಾಜ್ಯದ ನಾನಾ ಕಡೆ ಕೆಜೆಪಿ ಪಕ್ಷಕ್ಕೆ ನಾಯಕರ ಹುಡುಕಾಟ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಡಿಸೆಂಬರ್ ತಿಂಗಳ 9ರಂದು […]

ಇದು ಕರಾವಳಿ “ಪೊಲಿ’ಟಿಕ್ಸ್”!

Tuesday, November 13th, 2012
Karavali Politics

ಮಂಗಳೂರು :2013ರಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಮತ್ತು 2014ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈಗಾಗಲೆ ಮಂಗಳೂರಿನಲ್ಲಿ ತನ್ನ ಚುನಾವಣಾ ಕಸರತ್ತು ಆರಂಭಿಸಿದೆ. ಅಕ್ಟೋಬರ್ 18ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳೂರಿಗೆ ಆಗಮಿಸಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವಂತೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರಕಾರವನ್ನು ಕಿತ್ತೊಗೆಯುವಂತೆ ಕರೆ ನೀಡಿದ್ದಾರೆ. ಸೋನಿಯಾರ ಮಂಗಳೂರು ಭೇಟಿಯ ಸಂಪೂರ್ಣ ಹೊಣೆ […]

ಸೀಲಿಂಗ್‌ ಫ್ಯಾನ್‌ ಹಿಡಿದು ಬೀದಿಗಿಳಿದ ಶ್ರೀರಾಮುಲು

Thursday, November 17th, 2011
Sri Ramulu

ಬಳ್ಳಾರಿ: ಇಷ್ಟು ದಿನ ಬಿಜೆಪಿಯಲ್ಲಿದ್ದು  ಇದೀಗ ಬಳ್ಳಾರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮುಲು ತಮ್ಮ ಚಿಹ್ನೆ‌ ಸೀಲಿಂಗ್‌ ಫ್ಯಾನ್‌ ಹಿಡಿದು ಪ್ರಚಾರ ನಡೆಸಲು  ಬೀದಿಗಿಳಿದಿದ್ದಾರೆ. ಬಳ್ಳಾರಿ  ಜನರಿಗೆ ಶ್ರೀರಾಮುಲು ಅಂದರೆ ಬಿಜೆಪಿ ಹಾಗೂ ಕಮಲ ಎಂದರೆ ರಾಮುಲು ಎಂಬಾಂತಾಗಿತ್ತು. ಹೀಗಾಗಿ ಹಳ್ಳಿಗಾಡಿನ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ರಾಮುಲು ಮತದಾರರಿಗೆ ತನ್ನ  ಚುನಾವಣಾ ಪ್ರಚಾರದಲ್ಲಿ ತಿಳಿಸಿದರು. ಬುಧವಾರ ಮೋಕಾ, ಯರಗುಡಿ, ಬೆಣಕಲ್ಲು, ಸಿಂಧವಾಳ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ […]

ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಭವ್ಯ ಪೂಜಾರ್ತಿ

Friday, February 11th, 2011
ಮಂಗಳೂರು ತಾಲೂಕು ಪಂಚಾಯತ್

ಮಂಗಳೂರು : ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಭವ್ಯ ಪೂಜಾರ್ತಿ ಯವರು ಆಯ್ಕೆಯಾಗಿರುತ್ತಾರೆ. ಇವರು ಕಲ್ಲಮುಂಡ್ಕೂರು ತಾಲೂಕು ಪಂಚಾಯತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಪದವೀಧರರಾಗಿದ್ದಾರೆ. ತಾಲೂಕುಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಭವ್ಯಾ ಪೂಜಾರ್ತಿಯವರು 19 ಮತಗಳನ್ನು ಪಡೆದು, ಕಾಂಗ್ರೆಸ್ನ ಸುರೇಖಾ ಚಂದ್ರಹಾಸ್ ರವರನ್ನು 1 ಮತದ ಅಂತರದಿಂದ ಸೋಲಿಸಿದರು. ಸುರೇಖಾ ಚಂದ್ರಹಾಸ್ರವರು 18 ಮತಗಳನ್ನು ಪಡೆದಿದ್ದರು. ಹಾಗೆಯೇ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಇವರು […]

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು

Tuesday, January 4th, 2011
ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶ

ಬೆಂಗಳೂರು : ಎರಡು ಹಂತದಲ್ಲಿ ನಡೆದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಕಡೆ ಮತದಾರ ಒಲವು ತೋರಿಸಿದ್ದಾನೆ ಬಿಜೆಪಿಯ ಭದ್ರಕೋಟೆ  ಬಳ್ಳಾರಿಯಲ್ಲಿ ಮತ್ತು ಉತ್ತರ ಕನ್ನಡದಲ್ಲಿ ಬಿಜೆಪಿ ಬಹುತೇಕ ಹಿಂದೆ ಬಿದ್ದಿದೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಶಿವಮೂಗ್ಗದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಯಡಿಯೂರಪ್ಪ ಮುಖಭಂಗವನ್ನು ತಪ್ಪಿಸಿಕೊಂಡಿದ್ದಾರೆ. ರಾಮನಗರ, ಹಾಸನ, ತುಮಕೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಜೆಡಿಎಸ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜಯಭೇರಿ

Tuesday, January 4th, 2011
ದ.ಕ.ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಫಲಿತಾಂಶ

ಮಂಗಳೂರು : ಡಿ.31ರಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಚುನಾವಣೆಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿ.ಪಂ., ತಾ.ಪಂ. ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ಮೇಲುಗೈ ಸಾಧಿಸಿದೆ ಇಂದು ಬೆಳಿಗ್ಗೆ ಮತ ಎಣಿಕೆ ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ 24 ಸ್ಥಾನಗಳನ್ನು  ತನ್ನದಾಗಿಸಿಕೊಂಡಿದೆ, ಕಾಂಗ್ರೆಸ್ 11 ಸ್ಥಾನಗಳನ್ನು ಪಡೆಯಿತು. ಬಂಟ್ವಾಳದಲ್ಲಿ ಜಿ.ಪಂ. ಕ್ಷೇತ್ರದಲ್ಲಿ 6ಸ್ಥಾನಗಳಲ್ಲಿ ಬಿಜೆಪಿ ,ಕಾಂಗ್ರೆಸ್ 3 ಸ್ಥಾನಗಳನ್ನು ಗಳಿಸಿದೆ. ಗೋಳ್ತಮಜಲು ಕ್ಷೇತ್ರದಲ್ಲಿ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]

ಅಲ್ಪ ಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭ

Saturday, November 27th, 2010
ಅಲ್ಪ ಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಾಗಿ ಅನ್ಪರ್ ಮಾಣಿಪ್ಪಾಡಿ

ಮಂಗಳೂರು: ಅಲ್ಪ ಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಾಗಿ ಅನ್ಪರ್ ಮಾಣಿಪ್ಪಾಡಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿ ಸಂಘನಿಕೇತನಕ್ಕೆ ಬೇಟಿ ನೀಡಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಆಯೋಜಿಸಿದ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡರು. ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದರು. ರಾಜ್ಯ ಬಿಜೆಪಿ ಸರಕಾರ ಅಲ್ಪ ಸಂಖ್ಯಾತರ ರಕ್ಷಣೆಗೆ ಸಂಪೂರ್ಣ ಬದ್ದವಾಗಿದೆ. ಅಲ್ಪ ಸಂಖ್ಯಾತರಿಗೆ ಬಿಜೆಪಿ ಮೇಲಿರುವ ಅಪನಂಬಿಕೆಯನ್ನು ಅಧಿಕಾರಿಗಳು ಮನವರಿಕೆ ಮಾಡಬೇಕು ಎಂದರು. ಅಲ್ಪ […]