Blog Archive

ಮಂಗಳೂರು : ಪಂಪ್​ವೆಲ್​ ಮೇಲ್ಸೇತುವೆ ಕಾಮಗಾರಿ; ಟೋಲ್​​ ಗೇಟ್ ಬಂದ್​ ಮಾಡಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Wednesday, January 1st, 2020
tollgate

ಮಂಗಳೂರು : ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾಮಗಾರಿ ಗುತ್ತಿಗೆ ಪಡೆದಿರುವ ನವಯುಗ ಸಂಸ್ಥೆ ವಿರುದ್ಧ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿಯ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ತಲಪಾಡಿಯಲ್ಲಿರುವ ನವಯುಗ ಉಡುಪಿ ಪ್ರೈವೇಟ್ ಲಿಮಿಟೆಡ್ನ ಟೋಲ್ ಗೇಟ್ ಅನ್ನು ಬಿಜೆಪಿ ಕಾರ್ಯಕರ್ತರು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಜನವರಿ 1ಕ್ಕೆ ಈ ಸೇತುವೆ ಉದ್ಘಾಟನೆ ಆಗಲಿದೆ ಎಂದು ಸಂಸ್ಥೆ ಮಾತು ಕೊಟ್ಟಿತ್ತು. ಆದರೆ, ಇನ್ನೂ ಸಹ […]

ಉಪಚುನಾವಣೆ : ಬಿಜೆಪಿ-12 ಸ್ಥಾನ, ಕಾಂಗ್ರೆಸ್ -2, ಪಕ್ಷೇತರ-1, ಜೆಡಿಎಸ್-0

Monday, December 9th, 2019
yediyurappa

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಆಡಳಿತಾರೂಢ ಬಿಜೆಪಿ 12 ಸ್ಥಾನಗಳನ್ನು ಪಡೆದು, ಜೆಡಿಎಸ್ ಸೂನ್ಯ,  ಪಕ್ಷೇತರ-1  ಹಾಗೂ ಕಾಂಗ್ರೆಸ್ ಕೇವಲ 2 ಸ್ಥಾನಗಳ ಮೂಲಕ ಭಾರೀ ಹಿನ್ನಡೆಯನ್ನು ಪಡೆದಿದೆ. ಬಿಜೆಪಿ ಸರಕಾರ ರಚನೆಗೆ ಕಾರಣವಾದ  ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ […]

ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ -ವಸಂತ ಬಂಗೇರ ಆರೋಪ

Saturday, December 7th, 2019
vasanth-bangera

ಬೆಳ್ತಂಗಡಿ :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದ್ದ ಕಾಮಗಾರಿಯನ್ನು ಮತ್ತೆ ಉದ್ಘಾಟಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದು, ಕಾಮಗಾರಿಯ ಲಾಭಪಡೆಯಲು ಮುಂದಾಗಿದ್ದಾರೆ . ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸುತ್ತಿರುವುದು ವಿಷಾದನೀಯ  ಎಂದು ಮಾಜಿ ಶಾಸಕ ವಸಂತ ಬಂಗೇರ ಆರೋಪಿಸಿದ್ದಾರೆ. ಪಟ್ಟಣ ಪಂಚಾಯತಿಗೆ ಬಂದಿರುವ ಹತ್ತು ಕೋಟಿ ಅನುದಾನದ ಕಾಮಗಾರಿಗಳಲ್ಲಿ ಕೆಲ ಕಾಮಗಾರಿಗಳ ಶಿಲಾನ್ಯಾಸವನ್ನು ಈ ಹಿಂದೆ ಯೇ ನಡೆದಿತ್ತು ಎಂದು ಅವರು ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಹಿಂದೆ ಕಾಂಗ್ರೆಸ್ ಸರಕಾರದ […]

ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮುಖಂಡರ ಮೇಲೆ ಹಲ್ಲೆ

Wednesday, December 4th, 2019
Hasan

ಹಾಸನ : ಹಣ ಹಂಚುವುದಕ್ಕೆ ಬಂದಿದ್ದಾರೆ ಎಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮುಖಂಡರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ದಂಡಿಗನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ನಂಬಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೆ.ಆರ್ ಪೇಟೆ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆದಿದ್ದು, ಬಿಜೆಪಿಯ ನಾರಾಯಣಗೌಡ ಮತ್ತು ಜೆಡಿಎಸ್ ನ ಕೆಬಿ ಚಂದ್ರಶೇಖರ್ ನಡುವೆ […]

15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ : ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

Friday, November 29th, 2019
Govinda-karajola

ಬೆಂಗಳೂರು : ಈಗಾಗಲೇ  12 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಬಂದಿದ್ದು, ಜನ ಬಿಜೆಪಿ ಪರ ಇದ್ದಾರೆ. 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಯಾಕೆ ಅಷ್ಟೊಂದು ಭಯ ಶುರುವಾಗಿದೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ಇದರಿಂದ ಅವರ ಯೋಗ್ಯತೆಗೆ, ಘನತೆಗೆ ಕುಂದು ಬರುತ್ತದೆ. ಕೂಡಲೇ ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಮಲ್ಲಿಕಾರ್ಜುನ ಖರ್ಗೆ, […]

ದ.ಕ. ಜಿ.ಪಂ. ಸ್ಥಾಯೀ ಸಮಿತಿ ಚುನಾವಣೆ – ಬಿಜೆಪಿಗೆ 32, ಕಾಂಗ್ರೆಸ್‌ಗೆ 1

Wednesday, November 20th, 2019
zp-election

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಐದು ಸ್ಥಾಯೀ ಸಮಿತಿಗಳ ಒಟ್ಟು 33 ಸದಸ್ಯ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ವಿಪಕ್ಷ ಕಾಂಗ್ರೆಸ್‌ ಒಂದು ಸ್ಥಾನ ಗಳಿಸಿತು. ಉಳಿದೆಲ್ಲ ಸ್ಥಾನಗಳು ಬಿಜೆಪಿ ಪಾಲಾಗಿವೆ. ಸಾಮಾನ್ಯವಾಗಿ ದ.ಕ. ಜಿ.ಪಂ.ನಲ್ಲಿ ಸ್ಥಾಯೀ ಸಮಿತಿಗಳ ಸದಸ್ಯರ ಆಯ್ಕೆ ಜಿ.ಪಂ. ಸದಸ್ಯರು, ಮುಖಂಡರ ನಡುವಿನ ಪರಸ್ಪರ ಮಾತುಕತೆ, ಹೊಂದಾಣಿಕೆಯ ಮೂಲಕ ನಡೆಯುತ್ತಿತ್ತು. ಆದರೆ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್‌ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳಿಗೆ ಪಟ್ಟು ಹಿಡಿದ ಕಾರಣ ಚುನಾವಣೆ ನಡೆಯಿತು. ಜಿ.ಪಂ.ನಲ್ಲಿ […]

16 ಅನರ್ಹ ಶಾಸಕರನ್ನು ತನ್ನ ಬಳಿ ಸೆಳೆದುಕೊಂಡ ಬಿಜೆಪಿ

Thursday, November 14th, 2019
Shasakaru

ಬೆಂಗಳೂರು : ಕಾಂಗ್ರೆಸ್- ಜೆಡಿಎಸ್ ನ ಹದಿನಾರು ಅನರ್ಹ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕರ್ನಾಟಕದ ಅನರ್ಹ ಶಾಸಕರಾದ ಮಹೇಶ್ ಕುಮಟಹಳ್ಳಿ, ರಮೇಶ್ ಜಾರಕಿಹೊಳಿ, ಹೆಚ್.ವಿಶ್ವನಾಥ್, ಶಂಕರ್, ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ನಾರಾಯಣ ಗೌಡ, ಎಚ್.ಟಿ.ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜು, ಮುನಿರತ್ನ, ಎಂಟಿವಿ ನಾಗರಾಜ್,ಡಾ.ಸುಧಾಕರ್, ಶ್ರೀಮಂತ್ ಪಾಟೀಲ್, ಬಿ.ಸಿ. ಪಾಟೀಲ್ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಸರಿ ಶಾಲು ಹೊದ್ದು, ಬಿಜೆಪಿ ಬಾವುಟ ಹಿಡಿಯುವ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡರು. ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ

Thursday, November 14th, 2019
MCC-Election

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಾಲಿಕೆಯಲ್ಲಿ ಈ ಬಾರಿ ಭಾರತೀಯ ಜನತಾಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. 60 ವಾರ್ಡ್ ಗಳಲ್ಲಿ 44ರಲ್ಲಿ ಬಿಜೆಪಿ ಗೆಲುವು ತನ್ನದಾಗಿಸಿದ್ದು, ಕಾಂಗ್ರೆಸ್ 14 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. ಇದರಿಂದ ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಗೆ ಇದರಿಂದ ತೀವ್ರ ಮುಖಭಂಗವಾಗಿದೆ. ಎಸ್ ಡಿಪಿಐ 2 ವಾರ್ಡ್ ಗಳಲ್ಲಿ ಜಯಗಳಿಸಿದೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತವರಲ್ಲಿ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 18 ಗೆಲುವು, ಕಾಂಗ್ರೆಸ್ ಗೆ 7ರಲ್ಲಿ ಗೆಲುವು

Thursday, November 14th, 2019
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಪ್ರಕಟವಾಗಿರುವ ವಾರ್ಡ್ ಗಳಲ್ಲಿ ಬಿಜೆಪಿ 18, ಕಾಂಗ್ರೆಸ್ ಗೆ 7ರಲ್ಲಿ ಗೆಲುವು ಸಾಧಿಸಿದೆ. ವಾರ್ಡ್ ನಂ.3 ಕಾಟಿಪಳ್ಳ ಪೂರ್ವ: 2486 ಮತಗಳನ್ನು ಗಳಿಸಿರುವ ಬಿಜೆಪಿಯ ಲೋಕೇಶ್ ಬೊಳ್ಳಾಜೆ ಗೆಲುವು ಸಾಧಿಸಿದ್ದಾರೆ. ನಿಕಟಪೂರ್ವ ಕಾರ್ಪೊರೇಟರ್ ಬಶೀರ್ ಅಹ್ಮದ್ ಗೆ‌ ಸೋಲುಂಡಿದ್ದಾರೆ. ವಾರ್ಡ್ ನಂ.57 ಹೊಯ್ಗೆ ಬಝಾರ್: ಬಿಜೆಪಿಯ ರೇವತಿ ಶ್ಯಾಂಸುಂದರ್ 2116 ಮತಗಳನ್ನು ಪಡೆದು ಜಯಸಿದ್ದಾರೆ. ವಾರ್ಡ್ ನಂ.6 ಇಡ್ಯಾ ಪೂರ್ವ: ಬಿಜೆಪಿಯ ಸರಿತಾ ಶಶಿಧರ್ […]

ಅನರ್ಹರಿಗೆ ಅನ್ಯಾಯವಾಗಲು ಬಿಡಲ್ಲ, ಎಲ್ಲರಿಗೂ ಟಿಕೆಟ್ ಸಿಗುತ್ತೆ : ಕಂದಾಯ ಸಚಿವ ಆರ್.ಅಶೋಕ್

Wednesday, November 13th, 2019
R-Ashok

ಬೆಂಗಳೂರು : ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅನರ್ಹರು ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು ಸಹ ಇದಕ್ಕೆ ಪೂರಕವಾದ ಹೇಳಿಕೆಯನ್ನು ನೀಡುತ್ತಿದ್ದಾರೆ. ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿ, ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಎಲ್ಲರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ನಿರಾಳರಾಗಿದ್ದೇವೆ. ಅನರ್ಹರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಎಲ್ಲರಿಗೂ ಟಿಕೆಟ್ ನೀಡಲಾಗುವುದು. ಮತ್ತೆ ಶಾಸಕರಾಗಿ […]