ಶಾಲೆ ಎದುರು ಬಿಯರ್ ಬಾಟಲಿ, ಪ್ರಶ್ನಿಸಿದ ಯುವಕನನ್ನು ಹತ್ಯೆಗೈದ ಕುಡುಕರು

Thursday, December 14th, 2023
Beer-Bottol

ಉಳ್ಳಾಲ : ಕುಡುಕರಿಬ್ಬರು ಸೇರಿ ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಕೊಲ್ಯ ಸಾರಸ್ವತ ಕಾಲನಿ ನಿವಾಸಿ ವರುಣ್ ಗಟ್ಟಿ(28) ಎಂದು ಗುರುತಿಸಲಾಗಿದೆ. ಮೃತ ಯುವಕ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್ ಮತ್ತು ರವಿರಾಜ್ ಬಿಯರ್ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದರೆನ್ನಲಾಗಿದೆ. […]

ಬೆಳ್ತಂಗಡಿ ಮಸೀದಿಯಲ್ಲಿ ಬಿಯರ್ ಬಾಟಲಿ, ಸ್ಥಳೀಯರಲ್ಲಿ ಆತಂಕ

Thursday, February 24th, 2022
Mosque

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ  ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬುಧವಾರ ತಡ ರಾತ್ರಿಯವೇಳೆ ಮಸೀದಿಯ ಆವರಣದೊಳಗೆ ಬಿಯರ್ ಬಾಟಲಿ ಎಸೆದಿದ್ದಾರೆ. ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೇ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ತಿಳಿದು ಬಂದಿದೆ. ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಲು ಕಾರಣವಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದವರ ಬಗ್ಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ