Blog Archive

ಬೆಳ್ತಂಗಡಿ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ವಸಂತ ಬಂಗೇರ ನಾಮಪತ್ರ ಸಲ್ಲಿಕೆ

Friday, April 20th, 2018
vasanth-bangera

ಬೆಳ್ತಂಗಡಿ : ಬೆಳ್ತಂಗಡಿ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ವಸಂತ ಬಂಗೇರ ರವರು ಇಂದು ನಾಮಪತ್ರವನ್ನು ಸಲ್ಲಿಸಿದರು. ಬಿ. ಜನಾರ್ದನ ಪೂಜಾರಿ ಯವರನ್ನು ಭೇಟಿಯಾಗಿ ಅವರ ಆಶಿರ್ವಾದವನ್ನು ಪಡೆದರು. ಈ ಸಂಧರ್ಭ, ನಿಮ್ಮ ಗೆಲುವು ನಿಶ್ಚಿತ, ಆ ದೇವರು ಸಚಿವನಾಗಿ ಜನಸೇವೆ ಗೈಯುವ ಅವಕಾಶ ನಿಮಗೆ ನೀಡಲಿ, ಎಂದು ಜನಾರ್ದನ ಪೂಜಾರಿ ಹರಸಿದರು. ಮಾನ್ಯ ಶಾಸಕರೊಂದಿಗೆ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾದ ಮುಗುಳಿ ನಾರಾಯಣ ಭಟ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಕಿಣಿ, ಯುವ ಕಾಂಗ್ರೆಸ್ ಬೆಳ್ತಂಗಡಿ […]

ಈ ಬಾರಿಯ ಚುನಾವಣೆಯಲ್ಲಿ ರೈ ಟಾರ್ಗೆಟ್‌: ಯಶಸ್ವಿಯಾಗುತ್ತಾ ಬಿಜೆಪಿ ತಂತ್ರ!?

Wednesday, February 14th, 2018
ramanath-rai

ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಮಟ್ಟಿಗೆ ಬಿಜೆಪಿಗೆ ಸಚಿವ ರಮಾನಾಥ ರೈಯವರೇ ಟಾರ್ಗೆಟ್‌ ಎನ್ನಲಾಗುತ್ತಿದೆ. ಕರಾವಳಿ ಜಿಲ್ಲೆಯ ಕಾಂಗ್ರೆಸ್‌ನ ಹೈಕಮಾಂಡ್ ಆಗಿರುವ ಸಚಿವ ರೈ ಅದ್ಯಾಕೋ ಗೊತ್ತಿಲ್ಲ ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದನ್ನೇ ಲಾಭ ಮಾಡಿಕೊಂಡಿರುವ ಬಿಜೆಪಿ ಗೆಲುವಿನ ತಂತ್ರ ಹೂಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಜಿಲ್ಲೆ ಮಾತ್ರವಲ್ಲ, ರಾಜ್ಯ, ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗುತ್ತಿವೆ. ಅಧಿಕಾರಿಗಳ ವರ್ಗಾವಣೆ, ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಗಳು […]

ಈ ಚುನಾವಣೆಯೇ ರಮಾನಾಥ ರೈ ಕೊನೆಯ ಬಯಲಾಟ ಎಂದ ಹರಿಕೃಷ್ಣ ಬಂಟ್ವಾಳ

Wednesday, January 17th, 2018
harikrishna

ಮಂಗಳೂರು : ಈ ಬಾರಿಯ ಚುನಾವಣೆ ಸಚಿವ ರಮಾನಾಥ ರೈ ಅವರ ಕೊನೆಯ ಬಯಲಾಟ. ರಮಾನಾಥ ರೈ ಮಹಿಷಾಸುರನಾದರೆ, ಜನರು ದೇವಿಯ ರೂಪದಲ್ಲಿ ಅವರನ್ನು ಮುಗಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ನೀಡಲಿ ಎಂದು ಸಚಿವ ರಮಾನಾಥ ರೈ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಬಿಲ್ಲವರ ಬಗ್ಗೆ ಮಾತನಾಡುವ ನೈತಿಕತೆ ರಮಾನಾಥ ರೈಗಿಲ್ಲ ಎಂದು ಕಿಡಿ ಕಾರಿದರು. […]

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಗೆಲುವಿಗಾಗಿ ಕುದ್ರೋಳಿಯಲ್ಲಿ ವಿಶೇಷ ಪೂಜೆ

Monday, November 7th, 2016
pray-for-kudroli

ಮಂಗಳೂರು: ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಗೆಲುವಿಗಾಗಿ ಹಿರಿಯ ಕಾಂಗ್ರೆಸ್‌ ನಾಯಕ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣನಾಥ ದೇವರಿಗೆ ಅಭಿಷೇಕ ಹಾಗೂ ಕೃಷ್ಣ ದೇವರಿಗೆ ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾರಿ, ಹಿಲರಿ ಕ್ಲಿಂಟನ್‌ಗೆ ಇಡೀ ಜಗತ್ತನ್ನು ಕಾಪಾಡುವ ಶಕ್ತಿ ಇದೆ. ಆಕೆ ಪಾಕಿಸ್ತಾನ ಪರವಾದ ನಿಲುವನ್ನು ಹೊಂದಿಲ್ಲ. ಭಾರತ ಪರವಾಗಿಯೇ ಇದ್ದಾರೆ. ಅಮೆರಿಕಾದಲ್ಲಿ ಇರುವ ಅನಿವಾಸಿ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ

Wednesday, October 12th, 2016
mangalore-dasara

ಮಂಗಳೂರು: ಮಂಗಳೂರಿಗೆ ಮಂಗಳೂರೇ ವರ್ಣಮಯವಾಗಿ ಕಂಗೊಳಿಸಿ- ವಿಜೃಂಭಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ ಭಾರೀ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ, ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ಸಂಜೆ ಆರಂಭವಾಗಿ ಬುಧವಾರ ಮುಂಜಾನೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರದಿಂದ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ವಿಗ್ರಹಗಳ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ಕುದ್ರೋಳಿಯಿಂದ ಹೊರಟು ಕಂಬಾರ […]

ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇನೆ : ಪೂಜಾರಿ

Friday, March 28th, 2014
ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇನೆ : ಪೂಜಾರಿ

ಮಂಗಳೂರು : ಕಾಂಗ್ರೆಸ್‌ ಚುನಾವಣಾ ಪ್ರಚಾರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ. ಜನಾರ್ದನ ಪೂಜಾರಿ ಜನರಿಗೆ ಬೇಡವಾದ ಪಿಸಿಪಿಐಆರ್‌ (ಪೆಟ್ರೋಕೆಮಿಕಲ್‌ ಆ್ಯಂಡ್‌ ಪೆಟ್ರೋ ಇನ್ವೆಸ್ಟ್‌ಮೆಂಟ್‌ ರೀಜನ್‌) ಅನುಷ್ಠಾನಗೊಳಿಸಲು ಹೋಗುವುದಿಲ್ಲ ಎಂದು ಹೇಳಿದರು. ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ, ಜನತೆ ಬಯಸಿದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದೆ. ಆದರೆ ಈ ಯೋಜನೆ ನಮ್ಮ ಜಿಲ್ಲೆಗೆ ಬೇಡ ಎಂದು ನಾಗರಿಕ ಸಮಿತಿಯವರು ಹೇಳಿದ್ದಾರೆ. ಜನರಿಗೆ ಬೇಡವಾದ ಯೋಜನೆಗಳು ಪೂಜಾರಿಗೂ ಬೇಡ. […]

ದ.ಕ.: ಕಾಂಗ್ರೆಸ್‌ ಅಭ್ಯರ್ಥಿ ಸ್ಥಾನಕ್ಕೆ ಮೂವರಿಂದ ನಾಮಪತ್ರ

Saturday, March 1st, 2014
ದ.ಕ.: ಕಾಂಗ್ರೆಸ್‌ ಅಭ್ಯರ್ಥಿ ಸ್ಥಾನಕ್ಕೆ ಮೂವರಿಂದ ನಾಮಪತ್ರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಆಯ್ಕೆಗೆ ಅವಕಾಶ ನೀಡುವ ಕುರಿತಂತೆ ಮೂವರು ಸ್ಪರ್ಧಾಕಾಂಕ್ಷಿಗಳು ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಮೂರೂ ನಾಮಪತ್ರಗಳು ಸ್ವೀಕೃತವಾಗಿವೆ. ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ, ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರ ಪುತ್ರ ಹರ್ಷ ಮೊಯಿಲಿ ಹಾಗೂ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ರಾಜ್ಯ ಉಪಾಧ್ಯಕ್ಷ ಕಣಚೂರು ಮೋನು ನಾಮಪತ್ರ ಸಲ್ಲಿಸಿದ್ದು, ಅಂತಿಮ ಕಣದಲ್ಲಿದ್ದಾರೆ. ಶುಕ್ರವಾರ ಮಧ್ಯಾಹ್ನ 12ರಿಂದ ನಾಮಪತ್ರ […]

ಫೆಬ್ರವರಿ 22, 23ರಂದು ನಡೆಯಲಿರುವ ‘ಸಾನಿಧ್ಯ ಪನಾಮ ಕ್ರೀಡಾ ಮಹೋತ್ಸವ-2013′ ರ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ

Friday, February 22nd, 2013
Saanidhya Panama Kreeda Mahotsava

ಮಂಗಳೂರು : ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆ ಮತ್ತು ತರಬೇತಿ ಸಂಸ್ಥೆಯ ದಶಮಾನೋತ್ಸವ ಆಚರಣೆಯ ಹಿನ್ನಲೆಯಲ್ಲಿ ಶಕ್ತಿನಗರದ ನಾಲ್ಯಪದವು ಸರಕಾರಿ ಕುವೆಂಪು ಮಾದರಿ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಮೈದಾನದಲ್ಲಿ ಫೆಬ್ರವರಿ 22, 23ರಂದು ನಡೆಯಲಿರುವ ‘ಸಾನಿಧ್ಯ ಪನಾಮ ಕ್ರೀಡಾ ಮಹೋತ್ಸವ-2013’ ರಾಜ್ಯ ಮಟ್ಟದ ಕ್ರೀಡಾಕೂಟದ ಅಂಗವಾಗಿ ನಡೆದ ಕ್ರೀಡಾ ಜ್ಯೋತಿ ಮೆರವಣಿಗೆಗೆ ಗುರುವಾರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ  ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ವಿಶೇಷ ಮಕ್ಕಳು ವಿವಿಧ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಣರಂಜಿತ ದಸರಾ ಶೋಭಾಯಾತ್ರೆ

Thursday, October 25th, 2012
Kudroli Sharadha

ಮಂಗಳೂರು: ಮಂಗಳೂರು ದಸರಾದ ಭವ್ಯ ಶೋಭಾಯಾತ್ರೆಯು ಬುಧವಾರ ವೈಭವದಿಂದ ನಡೆಯಿತು. ನೂರರ ಸಂಭ್ರಮ ಆಚರಣೆಯ ಅಲೆಯಲ್ಲಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನನರಾತ್ರಿಯ ಉತ್ಸವದ ಅಂಗವಾಗಿ ನಡೆಯುವ ನವದುರ್ಗೆಯರು ಸೇರಿದಂತೆ ಟ್ಯಾಬ್ಲೋಗಳ ಭವ್ಯ ಮೆರವಣಿಗೆ ಸಂಜೆ 4.15ರ ವೇಳಗೆ ಕ್ಷೇತ್ರದ ನವೀಕರಣ ಮತ್ತು ಮಂಗಳೂರು ದಸರಾ ರೂವಾರಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ಕುದ್ರೋಳಿ ದೇವಸ್ಥಾನದ ಸ್ವರ್ಣ ಮಂಟಪದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ, ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಧವಾ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ

Wednesday, September 21st, 2011
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಧವಾ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ಈ ಬಾರಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಪತ್ರಿಕಾಭಾವನದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಗಂಡ ಮೃತಪಟ್ಟ ಮಹಿಳೆಯನ್ನು ಸಮಾಜ ಇತರ ಮಹಿಳೆಯರಂತೆ ಗೌರವ ಭಾವದಿಂದ ನೋಡುವಂತಾಗಬೇಕು. ಅದಕ್ಕಾಗಿ ಸುಮಾರು 1500 ಮಂದಿ ವಿಧವೆಯರಿಗೆ ಸೀರೆ, ಕುಂಕುಮದ ಕರಡಿಗೆ, ಹೂವು, ಬಳೆಗಳನ್ನು ದಸರಾ ಉತ್ಸವ ಸಂದರ್ಭದಲ್ಲಿ ನೀಡಲಾಗುವುದು ಎಂದು ಹೇಳಿದರು. ಮಹಿಳೆಯರಿಗೆ ವಿಶೇಷ ಗೌರವ […]