ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ತಳ್ಳಿ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು

Tuesday, January 18th, 2022
Ramanatha Rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಮಾಜಿ ಸಚಿವ ಬಿ.ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ರೈ ಅವರನ್ನು ತಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆಯಿತು. ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು. ಏಕಾಏಕಿ ನಿರ್ಧಾರ ಕೈಗೊಂಡು ಜಾಥಾ ನಡೆಸಿದ ವಿಚಾರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು. ಆಗ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ […]

ಬುಡೋಳಿ ನೇತಾಜಿ ಕಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Sunday, November 21st, 2021
Badoli Netaji School

ಬಂಟ್ವಾಳ: ಸಮಾಜದಲ್ಲಿ ದೇವಾಲಯ ಮತ್ತು ಶಾಲೆಗಳನ್ನು ನೋಡಿದಾಗ ಅಲ್ಲಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಅದೇ ರೀತಿ ನಾವು ಹಣವಂತರಿಗೆ ಬದಲಾಗಿ ಗುಣವಂತಿಕೆ ಹೊಂದಿರುವ ಶಿಕ್ಷಣವಂತರಿಗೆ ಗೌರವ ನೀಡುವ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಗ್ರಾಮ ಪುಂಚೋಡಿ ಸಮೀಪದ ಬುಡೋಳಿ ನೇತಾಜಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡಕ್ಕೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ನೂತನ ಕಟ್ಟಡಕ್ಕೆ ಶಿಲಾನ್ಯಾಸ ಇದರ ಸಭಾ ಕಾರ್ಯಕ್ರಮವನ್ನು ಗಣೇಶಪುರ ಕ್ಷೇತ್ರದ ವೇದಮೂರ್ತಿ […]

ಸಿ ಟಿ ರವಿ ಸಲಹೆ, ದೇಶದ್ರೋಹದ ಹೇಳಿಕೆಯಾಗಿದೆ : ಬಿ ರಮಾನಾಥ ರೈ

Monday, August 16th, 2021
Ramantha Rai

ಮಂಗಳೂರು : ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿ ಹುಕ್ಕಾ ಬಾರ್ ಮಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸಲಹೆ ನೀಡಿರುವುದು  ದೇಶದ್ರೋಹದ ಹೇಳಿಕೆಯಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ರೈ ದೇಶದ ಸ್ವಾತಂತ್ರ್ಯಕ್ಕಾಗಿ ಯಾರೇ ನಾಲ್ಕು ದಿನ ಜೈಲಿಗೆ ಹೋಗಿದ್ದರೂ ಅವರನ್ನು ಅಪಮಾನ ಮಾಡುವುದು ದೇಶದ್ರೋಹ. ಅಂತಹುದರಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ್ದ ನೆಹರು ಅವರನ್ನು […]

ಅಲೆತ್ತೂರು: ಹಡಿಲು ಗದ್ದೆಗೆ ಕಾಯಕಲ್ಪ ನೇಜಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ರೈ ಚಾಲನೆ

Wednesday, July 21st, 2021
Ramanatha-Rai

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜ್ಯೋತಿ ಸಂಘದ ವತಿಯಿಂದ ಅಲೆತ್ತೂರು ಲೋಕೇಶ್ ಸುವರ್ಣ ಇವರ ಹಡಿಲು ಗದ್ದೆಯಲ್ಲಿ ನೇಜಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಬುಧವಾರ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಶಾಂತ ಕುಲಾಲ್, ಕಾಮರ್ಿಕ ಘಟಕ ಅಧ್ಯಕ್ಷ […]

ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು, ಮನೆಮನೆಗೆ ಕಿಟ್ ಹೋಗುತ್ತಿತ್ತು : ಮಾಜಿ ಸಚಿವ ರಮಾನಥ ರೈ

Tuesday, May 18th, 2021
Ramanatha Rai

ಮಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಇದೊಂದು ರಾಷ್ಟ್ರೀಯ ವಿಪತ್ತು. ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಾ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆ ಸಿಗುತ್ತಿಲ್ಲ. ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿರುವವರ ಕೆಲಸ. ಎರಡನೇ ಡೋಸ್ ಯಾವಾಗ ಕೊಡಬೇಕೂಂತ ಸಿಎಂಗೆ ಗೊತ್ತಿಲ್ಲ. ಆಕ್ಸಿಜನ್, ಐಸಿಯು, ಚಿಕಿತ್ಸೆ […]

ವೃದ್ಧಾಶ್ರಮದಲ್ಲಿ ಹುಟ್ಟು ಹಬ್ಬ ಆಚರಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

Monday, September 14th, 2020
Ramanatha Rai

ಬಂಟ್ವಾಳ:  ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ 68 ನೇ ಹುಟ್ಟು ಹಬ್ಬವನ್ನು ಮೇರಮಜಲುವಿನ ಶ್ರೀ ಮಾತಾ ಲಕ್ಷ್ಮಣಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಕೇಕ್ ಕಟ್  ಮಾಡಿ  ಆಶ್ರಮವಾಸಿಗಳೊಂದಿಗೆ ಸಹಭೋಜನವನ್ನು ಮಾಡುವುದರೊಂದಿಗೆ ಆಚರಿಸಿದರು. ಜೊತೆಗೆ ಬಂಟ್ವಾಳ ತಾಲೂಕಿನಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಕಾರ್ಯಕರ್ತರು ಅಲ್ಲಲ್ಲಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ಮಾತನಾಡಿದ ರೈ, ತಮ್ಮ ಹುಟ್ಟುಹಬ್ಬ ಸಂದರ್ಭ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಕಾರ್ಯಕರ್ತರು ನನ್ನ ಆಶಯವನ್ನು ಅನುಷ್ಠಾನಕ್ಕೆ […]

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​ಗೆ

Sunday, August 2nd, 2020
Ramanatha rai

ಬಂಟ್ವಾಳ : ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ  ಬೆನ್ನಲೇ  ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಐವನ್ ಡಿ ಸೋಜ ಜೊತೆ ನಾನು ಇದ್ದೆ  ಹಾಗಾಗಿ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಕ್ಷೇತ್ರದ ಜನರು […]

ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿ ವಿತರಣೆ

Tuesday, April 7th, 2020
ramanatha-rai

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ವೈಯಕ್ತಿಕ ಖರ್ಚಿನಲ್ಲಿ ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಹಸ್ತಾಂತರಿಸಿದ್ದಾರೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಆಹಾರ ಸಾಮಗ್ರಿ ಹಸ್ತಾಂತರಿಸಿದ್ದಾರೆ. ಸೋಮವಾರ ಈ ಕಾರ್ಯಕ್ಕೆ ಸ್ವತಃ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು.

ಬಂಟ್ವಾಳ : ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

Tuesday, December 17th, 2019
bantwal

ಬಂಟ್ವಾಳ : ರಾಷ್ಟ್ರೀಯ ಪೌರತ್ವ ಕಾಯ್ದೆ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಕಾಂಗ್ರೆಸ್ ನಾಯಕ ಮತ್ತು ನ್ಯಾಯವಾದಿ ಸುಧೀರ್ ಕುಮಾರ್ ರವರು, ರಾಷ್ಟ್ರ ಪೌರತ್ವ ತಿದ್ದುಪಡಿ ಕಾಯ್ದೆ ಎನ್ನುವುದು ಬಿಜೆಪಿಯ ಮತಗಳಿಕೆಯ ಕಾನೂನೇ ಹೊರತು ದೇಶದ ಅಭಿವೃದ್ಧಿಗಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ಒಂದು ಸಮುದಾಯವನ್ನು ವಿಭಜಿಸುವ ಗಲಭೆ ಪೀಡಿತ ಹಿಂಸಾ ಮಾತೃ ಭೂಮಿಯಾಗಲಿದೆ. ನಮಗೆ ಹಿಟ್ಲರ್ ಭಾರತ ಬೇಕಾಗಿಲ್ಲ. ಗಾಂಧೀ ಪ್ರೇರಿತ ಭಾರತ […]

ಬಂಟ್ವಾಳ : ಜಿಲ್ಲಾ ಎಸ್.ಪಿ ಕಚೇರಿ ಸ್ಥಳಾಂತರಗೊಳ್ಳಲಿ; ಬಿ.ರಮಾನಾಥ ರೈ

Monday, September 16th, 2019
bantwal

ಬಂಟ್ವಾಳ : ಜಿಲ್ಲಾ ಎಸ್.ಪಿ.ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವ ಇದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ ಕೇಂದ್ರ ಸ್ಥಾನವಾಗಿರುವುದರಿಂದ ಬಂಟ್ವಾಳಕ್ಕೆ ಎಸ್ಪಿ ಕಚೇರಿಯನ್ನು ಸ್ಥಳಾಂತರಿಸಲಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಪಿ ಅವರ ಕಚೇರಿ ಪೂತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಚರ್ಚೆಯಾಗುತ್ತಿವೆ. ಹಾಗಾಗಿ ಬಂಟ್ವಾಳದಲ್ಲಿ ಎಸ್ಪಿ ಕಚೇರಿಯಾಗಲಿ. ಅಲ್ಲದೆ ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ […]