Blog Archive

ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮ ದ ಲೇಕ್ ಗಾರ್ಡನ್‌ನಲ್ಲಿ ಮಿನಿ ಐಫೆಲ್ ಟವರ್‌

Thursday, July 28th, 2016
Pilikula-mini-tower

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮಕ್ಕೆ ಮತ್ತಷ್ಟು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಯಾಗಿ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ನಿರ್ಮಿಸಲಾಗಿರುವ ಮಿನಿ ಐಫೆಲ್ ಟವರ್‌ನ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅನಾವರಣಗೊಳಿಸಿದರು. ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ಲ್ಲಿ ಪ್ರಪಂಚ ಹಾಗೂ ದೇಶದ ಸುಮಾರು 10 ಅದ್ಭುತಗಳ ಮಾದರಿಗಳನ್ನು ರಚಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಮಿನಿ ಐಫೆಲ್ ಟವರ್‌ನ್ನು ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್‌ನ ಮಾದರಿಯನ್ನು ಹೋಲುವ […]

ನಾಳೆಯಿಂದ ಎಂಡೋ ಸಂತ್ರಸ್ತರ ಪುನರ್ ಸಮೀಕ್ಷೆ: ರೈ

Friday, February 28th, 2014
Ramanda-Rai

ಬಂಟ್ವಾಳ: ಮಾ. 1ರಿಂದ ಎಂಡೋ ಸಂತ್ರಸ್ತರ ಪುನರ್ ಸಮೀಕ್ಷೆ ನಡೆಸಲಾಗುವುದು. ಅರ್ಹ ಎಂಡೋ ಸಂತ್ರಸ್ತರನ್ನು ಪತ್ತೆ ಹಚ್ಚಿ ಅವರಿಗೂ ಸರ್ಕಾರದ ಸೌಲಭ್ಯ ಒದಗಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಇಲಾಖೆ ಇದರ ಆಶ್ರಯದಲ್ಲಿ ಗುರುವಾರ ಮಂಚಿಯ ಲಯನ್ಸ್ ಮಂದಿರದಲ್ಲಿ ನಡೆದ ಎಂಡೋ ಸಂತ್ರಸ್ತರ ಮಿತವೇತನದ (ಸ್ಟೈಫಂಡ್) ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಎಂಡೋ ಸಂತ್ರಸ್ತರಿಗೆ ಆದೇಶ ಪತ್ರ ವಿತರಿಸಿ […]

ಆರ್.ಎಸ್.ಎಸ್ ಗುರು ಸುದರ್ಶನ್ ಹೇಳಿಕೆಯನ್ನು ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Tuesday, November 16th, 2010
ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಗುರು ಸುದರ್ಶನ್ ಸೋನಿಯಾಗಾಂಧಿಯವರ ಮೇಲೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತಾನಾಡಿದ ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ ಬಿಜೆಪಿ ಮತ್ತು ಆರ್.ಎಸ್.ಎಸ್ ಗಳು ಒಂದೇ ನಾಣ್ಯದ  ಎರಡು ಮುಖಗಳು ಬಿಜೆಪಿ ಮುಖಂಡರು ಬಹಿರಂಗವಾಗಿ ನಾವು ಆರ್.ಎಸ್.ಎಸ್ ಕಾರ್ಯಕರ್ತರು ಎಂದು ಹೇಳುತ್ತಿದ್ದಾರೆ. ಆರ್.ಎಸ್.ಎಸ್ ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ ಎಂದು ಅವರು […]