Blog Archive

ವರದಕ್ಷಿಣೆಗಾಗಿ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

Sunday, October 11th, 2020
suraj Singh

ಬೆಂಗಳೂರು : 15 ಲಕ್ಷ ರು. ವೆಚ್ಚ ಮಾಡಿ ಮದುವೆ ಮಾಡಿದರೂ ಪದೇ ಪದೇ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊನೆಗೆ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದ ಪತಿ ಸೇರಿದಂತೆ ನಾಲ್ವರನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಪತಿ ಸೂರಜ್‌ ಸಿಂಗ್‌ ಮತ್ತು ಆರೋಪಿಗೆ ಪ್ರಚೋದಿಸಿದ ಆತನ ತಂದೆ ಲೌನೇಶ್‌, ತಾಯಿ ಮತ್ತು ಮತ್ತೊಬ್ಬ ಮಹಿಳೆಯನ್ನು ಟಿ.ಸಿ.ಪಾಳ್ಯದ ನಿವಾಸಿದಿಂದ ಬಂಧಿಸಲಾಗಿದೆ. ಸಂತ್ರಸ್ತೆಯು ತೀವ್ರ ಆಘಾತಗೊಂಡು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀಡಾ ಅಂಗಡಿಯನ್ನಿಟ್ಟುಕೊಂಡಿದ್ದ  ಸೂರಜ್‌ ಸಿಂಗ್  ಕಳೆದ ಒಂದು ವರ್ಷದ […]

ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡ ಮಾಲೀಕ

Tuesday, September 8th, 2020
petty Shop

ಪುತ್ತೂರು : ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡು ನಂದಿಸಲು ಬಂದವರನ್ನು ಬಿಡದೆ  ಅಂಗಡಿಯೊಳಗಿನ ಸಾಮಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ಘಟನೆ ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ. ಸ್ಟೇಶನರಿ ಸಾಮಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಗೆ  ಮಾವಿನಕಟ್ಟೆ ನಿವಾಸಿ ಮಹಮ್ಮದ್ ಬೆಂಕಿ ಹಚ್ಚಿದವರು. ಕಳೆದ ನಾಲ್ಕು ವರ್ಷಗಳಿಂದ ಇದೇ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್, ಅಂಗಡಿ ಬಾಗಿಲು […]

ಬೀಜ ಫ್ಯಾಕ್ಟರಿಯಲ್ಲಿ ಬೆಂಕಿ, ಕೋಟ್ಯಂತರ ಮೌಲ್ಯದ ವಸ್ತುಗಳು ಭಸ್ಮ

Tuesday, August 25th, 2020
cashew

ಕಾರ್ಕಳ : ಸೋಮವಾರ ರಾತ್ರಿ  ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅನಾಹುತದಿಂದ ಹಿರ್ಗಾನ ಗ್ರಾಮದ ಗೇರು ಬೀಜ ಫ್ಯಾಕ್ಟರಿಯಲ್ಲಿ ಕೋಟ್ಯಂತರ ಮೌಲ್ಯದ ಗೇರು ಬೀಜ, ಎಣ್ಣೆ ಮಿಷನರಿಗಳು ಸುಟ್ಟು ಹೋಗಿದೆ. ಸೋಮವಾರ ತಡರಾತ್ರಿ ರಾತ್ರಿ  12.30 ರ ವೇಳೆಗೆ ಪಕ್ಕದಲ್ಲಿ ಮಲಗಿದ್ದ ಕೆಲಸಗಾರರ ಗಮನಕ್ಕೆ ಬೆಂಕಿ ತಗುಲಿದ ವಿಚಾರ ಬಂದಿದ್ದು ಕೂಡಲೇ ಮಾಲಕರಿಗೆ ಮಾಹಿತಿ ನೀಡಿ ಅಗ್ನಿ ಶಾಮಕ ದಳದವರನ್ನು ಕರೆಸಲಾಗಿದೆ. ಗೇರು ಬೀಜದ ಸಿಪ್ಪೆ ಮತ್ತು ಎಣ್ಣೆ ಇರುವುದರಿಂದ ಬೆಂಕಿಯು ಪಸರಿಸುತ್ತಲೇ  ಇತ್ತು ಎಂದು ಹೇಳಲಾಗಿದೆ. ಫ್ಯಾಕ್ಟರಿ ಮಾಲಕ […]

ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ 15 ಲಕ್ಷ ರೂ. ನಷ್ಟ

Monday, July 13th, 2020
fida Enterprises

ಬಂಟ್ವಾಳ: ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಕಲ್ಲಡ್ಕದಲ್ಲಿನ ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಕಲ್ಲಡ್ಕ ದ ಪೀದಾ ಎಂಟರ್ ಪ್ರೈಸಸ್ ವಾಣಿಜ್ಯ ಸಂಕೀರ್ಣದಲ್ಲಿ ವಿದ್ಯುತ್ ಸಲಕರಣೆಗಳನ್ನು ದಾಸ್ತಾನು ಇಡಲಾಗಿದ್ದ ಕೊಠಡಿಗೆ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಎಲೆಕ್ಟ್ರಾನಿಕ್ ವಸ್ತುಗಳು ಸೋಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ಹಾಗೂ ಸ್ಥಳೀಯರು ತೆರಳಿ ಬೆಂಕಿ […]

ಬೈಕಂಪಾಡಿ ಮೆಟಲ್ ರಿಪೈನರೀಸ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

Monday, April 13th, 2020
Mookambike

ಮಂಗಳೂರು: ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿನ ಮೂಗಾಂಬಿಕೈ ಕಾರ್ಖಾನೆಯ ಕಚ್ಛಾ ವಸ್ತುಗಳ ಸಂಗ್ರಹ ಘಟಕದಲ್ಲಿದಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದಾಗಿ ಅಪಾರ ಪ್ರಮಾಣದ ಕಚ್ಛಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇದು ಮೆಟಲ್ ರಿಪೈನರೀಸ್ ಕಾರ್ಖಾನೆಯಾಗಿತ್ತು. ಬೆಂಕಿಯ ತೀವ್ರತೆ ಅಕ್ಕ ಪಕ್ಕದ ಕಂಪೆನಿಗಳ ಮಾಲಕರನ್ನೂ ಸಹ ಆತಂಕಕ್ಕೀಡುಮಾಡಿದೆ. ಕಾರ್ಖಾನೆ ಹರಿಸೂದನಾ ಎಂಬವರಿಗೆ ಸಂಬಂಧಿಸಿದ ಲಾಕ್ ಡೌನ್ ಹಿನ್ನಲೆಯಲ್ಲಿ ಕಾರ್ಖಾನೆಗೆ ರಜೆ ಘೋಷಣೆ ಮಾಡಲಾಗಿತ್ತು. ಹಾಗಾಗಿ ಕಾರ್ಮಿಕರು ಯಾರೂ ಕಂಪೆನಿಯಲ್ಲಿ ಇರಲಿಲ್ಲ. ಅದಿಲ್ಲವಾದರೆ ಬೆಂಕಿ ಅನಾಹುತಕ್ಕೆ ಪ್ರಾಣಹಾನಿ ಸಂಭವಿಸುವ ಅಪಾಯಗಳಿದ್ದವು. ಘಟನಾ ಸ್ಥಳಕ್ಕೆ […]

ಕೊಣಾಜೆ : ದೇರಳಕಟ್ಟೆ ಅಟೋ ಮೊಬೈಲ್ ಅಂಗಡಿಗೆ ಬೆಂಕಿ

Friday, January 17th, 2020
konaje

ಕೊಣಾಜೆ : ದೇರಳಕಟ್ಟೆಯ ಅಟೋ ಮೊಬೈಲ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರಬಹುದು ಎಂದು ಸಂಶಯಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸುತ್ತಿದ್ದಾರೆ. ದೇರಳಕಟ್ಟೆಯ ಸುರೇಶ್ ರೈ ಮಾಲಕತ್ವದ ಈ‌ ಅಂಗಡಿ ಬೆಂಕಿಗಾಹುತಿಯಾಗಿದ್ದು, ಅಪಾರ ನಷ್ಟ‌ ಉಂಟಾಗಿದೆ‌ ಎಂದು ತಿಳಿದು ಬಂದಿದೆ. ದೇರಳಕಟ್ಟೆ ವಿದ್ಯಾರತ್ನ ಕ್ರಾಸ್ ನಲ್ಲಿರುವ ಭಾರತ್ ಅಟೋ ಮೊಬೈಲ್ ಅಂಗಡಿ ಮಾಲಕ ಗುರುವಾರ ರಾತ್ರಿ ಎಂದಿನಂತೆ ಅಂಗಡಿ ಮುಚ್ಚಿ ತೆರಳಿದ್ದರು. ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ […]

ಕುಂಬಳೆ ಟೈಲರಿಂಗ್, ಜೀನಸು ಅಂಗಡಿ ಬೆಂಕಿಗಾಹುತಿ

Thursday, January 21st, 2016
tailor-Shop fire

ಕುಂಬಳೆ: ಮೊಗ್ರಾಲ್ ಪುತ್ತೂರು ಕಡವತ್‌ನಲ್ಲಿ ಎರಡು ಅಂಗಡಿಗಳು ಬೆಂಕಿ ತಗಲಿ ಉರಿದು ನಾಶಗೊಂಡಿದ್ದು, ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ. ಕಡವತ್‌ನ ಕಸಬ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಮೊಗ್ರಾಲ್ ಪುತ್ತೂರು ನಿವಾಸಿ ಕೃಷ್ಣ ಅವರ ಟೈಲರಿಂಗ್ ಅಂಗಡಿ ಹಾಗೂ ಮಾಲಿಂಗ ಶೆಟ್ಟಿ ಅವರ ಜೀನಸು ಅಂಗಡಿ ಉರಿದು ನಾಶಗೊಂಡಿದೆ. ಜ.19 ರಂದು ರಾತ್ರಿ ಈ ಘಟನೆ ನಡೆದಿದೆ. ಟೈಲರಿಂಗ್ ಅಂಗಡಿಯಲ್ಲಿ ಹೊಲಿಗೆಗೆಂದು ಇರಿಸಲಾಗಿದ್ದ ಸೀರೆಗಳು, ಪ್ಯಾಂಟ್, ಶರ್ಟ್, ಚೂಡಿದಾರ, ಎರಡು ಕಪಾಟುಗಳು, ಒಂದು ಕಟ್ಟಿಂಗ್ ಟೇಬಲ್, ಒಂದು ಟೈಲರಿಂಗ್ ಮೆಶಿನ್ […]

ಪೆರುವಾಡು-ಪೆಟ್ರೋಲ್ ಬಂಕ್ ಬಳಿ ಬೆಂಕಿ

Saturday, January 9th, 2016
fire

ಕುಂಬಳೆ: ರಾಷ್ಟ್ರೀಯ ಹೆದ್ದಾರಿ ಪೆರುವಾಡು ಪೆಟ್ರೋಲ್ ಬಂಕ್ ಸಮೀಪದ ಹಿತ್ತಿಲಿಗೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಭೀತಿ ಸೃಷ್ಟಿಸಿದ ವಾತಾವರಣ ಉಂಟಾಗಿದೆ. ಪೆಟ್ರೋಲ್ ಬಂಕ್ ಹತ್ತಿರದ ಖಾಸಗೀ ವ್ಯಕ್ತಿಯೊಬ್ಬರ ಹಿತ್ತಿಲಿನಲ್ಲಿ ಕಾಣಿಸಿಕೊಂಡ ಬೆಂಕಿ. ಹಿತ್ತಿಲಿನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ತೆಂಗಿನ ಮರಗಳು ಸೇರಿದಂತೆ ಅನೇಕ ಮರಗಳು ಹೊತ್ತಿ ಉರಿದು ನಾಶಗೊಂಡಿವೆ. ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು, ಭಾರೀ ಅನಾಹುತ ಸಂಭವಿಸುವ ಅಪಾಯ ಎದುರಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡು ಮಾಡಿತ್ತು. ಆದರೆ ಹಿತ್ತಿಲಿಗೆ ಬೆಂಕಿ ತಗುಲಿದ ಕೆಲವೇ ಗಂಟೆಗಳಲ್ಲಿ ಕಾಸರಗೋಡು […]

ಬಿಗ್ ಬಜಾರ್ ಗೋದಾಮಿಗೆ ಬೆಂಕಿ, 30 ಕೋಟಿ ನಷ್ಟ

Saturday, February 1st, 2014
Bigbazar godown

ಬೆಂಗಳೂರು : ಬಿಗ್ ಬಜಾರ್ ಗ್ರೂಪ್‍ನ ಗೋದಾಮಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಸುಮಾರು 30 ಕೋಟಿ ನಷ್ಟ ಉಂಟಾಗಿದೆ. ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 220ಕ್ಕೂ ಹೆಚ್ಚು ಸಿಬ್ಬಂದಿ ಹೊರಗೋಡಿ ಬಂದಿದ್ದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. 12 ಅಗ್ನಿ ಶಾಮಕ ದಳದ ವಾಹನಗಳು ಸತತ ಆರು ಗಂಟೆ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ಆನೇಕಲ್ ಪಟ್ಟಣದ ಇಂಡ್ಲವಾಡಿ ಕ್ರಾಸ್‍ನಲ್ಲಿರುವ ಬಿಗ್ ಬಜಾರ್ ಗ್ರೂಪ್‍ಗೆ ಸೇರಿದ ಫೀಚರ್ ಸಪ್ಲೈ ಗೋದಾಮಿನಲ್ಲಿ ಗುರುವಾರ ಮಧ್ಯಾಹ್ನ 2.30ರ ಸುಮಾರಿನಲ್ಲಿ ಶಾರ್ಟ್ […]

ಭಾರತೀಯ ನೌಕಾಪಡೆ ಹೆಲಿಕಾಪ್ಟರ್‌ನಲ್ಲಿ ದಿಢೀರ್‌ ಬೆಂಕಿ ತಪ್ಪಿದ ಅನಾಹುತ

Tuesday, December 13th, 2011
ಭಾರತೀಯ ನೌಕಾಪಡೆ ಹೆಲಿಕಾಪ್ಟರ್‌ನಲ್ಲಿ ದಿಢೀರ್‌ ಬೆಂಕಿ ತಪ್ಪಿದ ಅನಾಹುತ

ಮಂಗಳೂರು : ಬಜಪೆಯ ಹಳೆಯ ವಿಮಾನ ನಿಲ್ದಾಣದಲ್ಲಿ ಭಾರತೀಯ ನೌಕಾಪಡೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ದಿಢೀರ್‌ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆಯಿತು. ಕೊಚ್ಚಿಯ ಗರುಡ ನೌಕೆಯಿಂದ ಹೊರಟ ಹೆಲಿಕಾಪ್ಟರ್‌ ಇಂಧನ ತುಂಬಿಸಿಕೊಳ್ಳಲು ಬೆಳಗ್ಗೆ 10.45ರ ವೇಳೆ ಬಜಪೆ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ನಿಲುಗಡೆಗೊಂಡಿದ್ದ ಕಾಪ್ಟರ್‌ನ ರೋಟಾರ್ ಬಳಿ 10.56ರ ವೇಳೆ ಹೊಗೆ ಚಿಮ್ಮುತ್ತಿದ್ದು ಇದೇ ವೇಳೆ ಬೆಂಕಿಯೂ ಕಾಣಿಸಿಕೊಂಡಿತು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಗ್ನಿಶಾಮಕ ಸಿಬಂದಿ ಕಾಪ್ಟರ್‌ನ ಸಿಬಂದಿಗಳ ಸಹಕಾರದಿಂದ ಅಗ್ನಿಶಮನ […]