Blog Archive

ಮೊಬೈಲ್​ ಅವಾಂತರ.. ಫ್ಲೈ ಓವರ್​ನಿಂದ ಕೆಳಗಿಳಿಯುವಾಗ ಬಿದ್ದ ಯುವತಿ!

Tuesday, August 14th, 2018
fell-down

ಬೆಂಗಳೂರು: ಮೊಬೈಲ್ನಲ್ಲಿ ಮಾತನಾಡಿಕೊಂಡು ಬರುವಾಗ ಯುವತಿಯೋರ್ವಳು ಆಯತಪ್ಪಿ ಮೇಖ್ರಿ ವೃತ್ತದ ಮೇಲುಸೇತುವೆ ಬಳಿ ಬಿದ್ದಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಯುವತಿ ಅದೃಷ್ಟವಶಾತ್ ಪಾರಾಗಿದ್ದಾಳೆ. ಪುಣೆ‌ ಮೂಲದ ಆಯೇಷಾ ಮೊಬೈಲ್ನಲ್ಲಿ ಮಾತನಾಡುತ್ತಾ ಕೆಳಗೆ ಬಿದ್ದ ಯುವತಿ. ಈಕೆ ಇಂದು ಬೆಳಗ್ಗೆ ಜಯಮಹಲ್ ರಸ್ತೆಯಿಂದ ಮೇಖ್ರಿ ಸರ್ಕಲ್ ಕಡೆಗೆ ನಡೆದುಕೊಂಡು ಬರುತ್ತಿದ್ದಳು.‌ ಈ ವೇಳೆ ಮೊಬೈಲ್ನಲ್ಲಿ ಮಾತನಾಡುತ್ತ ಮೇಲುಸೇತುವೆ ಕೆಳಗಿಳಿಯುವಾಗ ಆಯತಪ್ಪಿ ಬಿದ್ದಿದ್ದಾರೆ. 10 ಅಡಿಯಿಂದ ಎತ್ತರದಿಂದ ಬಿದ್ದಿದ್ದರಿಂದ ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಚಿಕಿತ್ಸೆಗಾಗಿ ಎಂ.ಎಸ್ ಆಸ್ಪತ್ರೆಗೆ […]

ಪ್ರವಾಹ ಪರಿಸ್ಥಿತಿ ಎದುರಿಸಲು ಕೇರಳ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು: ಹೆಚ್. ಡಿ. ಕುಮಾರಸ್ವಾಮಿ

Friday, August 10th, 2018
kumarswamy

ಬೆಂಗಳೂರು: ಕೇರಳದಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಪ್ರವಾಹದಲ್ಲಿ 22 ಜನರು ಸಾವನ್ನಪ್ಪಿರುವ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು, ಕೇರಳಕ್ಕೆ 10 ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿ ರವಾನೆ ಮಾಡಲು ಆದೇಶಿಸಿದ್ದಾರೆ. ಆಹಾರ ಸಾಮಾಗ್ರಿಗಳ ಜೊತೆಗೆ ವೈದ್ಯರ ತಂಡ ಕಳುಹಿಸಿ ಕೊಡುವಂತೆ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ನಿರ್ದೇಶನ ನೀಡಿದ್ದಾರೆ. ಟ್ವೀಟ್ ಮಾಡಿರುವ ಸಿಎಂ, ಪ್ರವಾಹ ಪರಿಸ್ಥಿತಿ ಎದುರಿಸಲು ಕೇರಳ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಈಗಾಗಲೇ ಕಬಿನಿಯ ಹಿನ್ನಿರಿನಿಂದ […]

ಸುಮಾರು 49,000 ಕೋಟಿ ರೂ.ಗಳಷ್ಟು ಕೃಷಿ ಸಾಲ ಮನ್ನಾ..ನಾಲ್ಕೈದು ದಿನಗಳಲ್ಲಿ ಜಾರಿಗೆ!

Monday, July 30th, 2018
kumarseamy

ಬೆಂಗಳೂರು: ರಾಜ್ಯದಲ್ಲಿ ಸುಮಾರು 49,000 ಕೋಟಿ ರೂ.ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು. ಈ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಸಾಲ ಮನ್ನಾ ಕಾರ್ಯಕ್ರಮ ಯಶಸ್ವಿಯಾಗಿ […]

‘ನಮ್ಮದು ಒಂದೇ ಕರ್ನಾಟಕ‌.. ಅದು ಅಖಂಡ‌ ಕರ್ನಾಟಕ’: ಸಿದ್ದರಾಮಯ್ಯ

Monday, July 30th, 2018
siddaramaih

ಬೆಂಗಳೂರು: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಎದ್ದಿರುವ ಕೂಗಿನ ಬಗ್ಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ‘ನಮ್ಮದು ಒಂದೇ ಕರ್ನಾಟಕ.‌ ಅದು ಅಖಂಡ‌ ಕರ್ನಾಟಕ’ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಉ-ಕ ಪ್ರತ್ಯೇಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಕೆಲ ನಾಯಕರು ಹಾಗೂ ಇತರ ಸಂಘಟನೆಗಳು ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿವೆ. ಇದರ ಬಗ್ಗೆ ಮಾಜಿ […]

ಕರ್ನಾಟಕ ಒಂದೇ, ಅದರಲ್ಲಿ ಮೊದಲ ಕರ್ನಾಟಕ ಎರಡನೇ ಕರ್ನಾಟಕ ಅನ್ನೋದೇನಿಲ್ಲ: ಡಾ.ಜಿ ಪರಮೇಶ್ವರ್

Thursday, July 26th, 2018
g.parameshwar

ಬೆಂಗಳೂರು: ಕರ್ನಾಟಕ ಒಂದೇ, ಅದರಲ್ಲಿ ಮೊದಲ ಕರ್ನಾಟಕ ಎರಡನೇ ಕರ್ನಾಟಕ ಅನ್ನೋದೇನಿಲ್ಲ. ನಮ್ಮದು ಅಖಂಡ ಕರ್ನಾಟಕ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ 114 ತಾಲೂಕುಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದೇವೆ. ರಾಜ್ಯ ಸರ್ಕಾರದ ಹೋರಾಟದ ಫಲವಾಗಿಯೇ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಇದನ್ನೆಲ್ಲ ಗಮನಿಸಬೇಕು. ಯಾವುದೇ ಕಾರಣಕ್ಕೂ ರಾಜ್ಯ ವಿಭಜನೆಯ ಮಾತುಗಳನ್ನು ಆಡಬಾರದು ಎಂದು ಮನವಿ ಮಾಡಿದರು. ನಮಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬೇಡ […]

ಗ್ರಹಣದ ಮುನ್ನಾದಿನ ತಿರುಪತಿಗೆ ತೆರಳಲಿದೆ ದೇವೇಗೌಡರ ಕುಟುಂಬ..!

Tuesday, July 24th, 2018
revanna

ಬೆಂಗಳೂರು: ಜುಲೈ 27 ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಗ್ರಹಣದ ಮುನ್ನಾದಿನ (ಜುಲೈ 26) ರಂದು ಗುರುವಾರ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಹೆಚ್. ಡಿ. ಕುಮಾರಸ್ವಾಮಿ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದರು. ಅದೇ ರೀತಿ ಸಿಎಂ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರೊಂದಿಗೆ ತಿರುಪತಿ ತೆರಳಿ, ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ […]

ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌: ಎಚ್‌.ಡಿ. ಕುಮಾರಸ್ವಾಮಿ

Monday, July 23rd, 2018
kumarswamy

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಸೋಮವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌ ನೀಡಲಾಗುತ್ತದೆ, ಖಾಸಗಿ ಶಾಲೆ ಮಕ್ಕಳು 50 ರಿಂದ 1 ಲಕ್ಷ ರೂ. ನೀಡಿ ಶಾಲೆಗೆ ಹೋಗುತ್ತಾರೆ ಅವರಿಗೆ ಬಸ್‌ಚಾರ್ಜ್‌ ನೀಡುವುದು ಕಷ್ಟವಾಗುವುದಿಲ್ಲ ಎಂದು ಸ್ವಲ್ಪ ಖಾರವಾಗಿಯೇ ನುಡಿದಿದ್ದಾರೆ. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡುವಂತೆ ಹಲವು ದಿನಗಳಿಂದ […]

ಜನ‌ ನಮ್ಮ ವಿರುದ್ಧ ತಿರುಗಿ ಬಿದ್ದಿಲ್ಲ, ನಮ್ಮನ್ನು ‌ಒಪ್ಪಿಕೊಂಡಿದ್ದಾರೆ: ದಿನೇಶ್ ಗುಂಡೂರಾವ್

Saturday, July 21st, 2018
dinesh-gundu-rao

ಬೆಂಗಳೂರು: ಜನ‌ ನಮ್ಮ ವಿರುದ್ಧ ತಿರುಗಿ ಬಿದ್ದಿಲ್ಲ. ನಮ್ಮನ್ನು ‌ಒಪ್ಪಿಕೊಂಡಿದ್ದಾರೆ. ಆದರೂ ಪ್ರಜಾಪ್ರಭುತ್ವದಲ್ಲಿ ಸಂಖ್ಯೆ ಮುಖ್ಯ. ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚಿಸಿದ್ದೇವೆ. ಲೋಕಸಭೆಯಲ್ಲಿಯೂ ಉತ್ತಮ ಕೆಲಸ ಮಾಡಿ ಹೆಚ್ಚು ಸ್ಥಾನ ಗೆಲ್ಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪದಾಧಿಕಾರಿಗಳಿಗೆ ಕರೆ ನೀಡಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಕಾಂಗ್ರೆಸ್ಗೆ ಸವಾಲಾಗಿದೆ. ಡಿಸೆಂಬರ್ನಲ್ಲಿ ಲೋಕಸಭೆಗೆ ಚುನಾವಣೆ ಬರಬಹುದು‌. ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ಅಧಿಸೂಚನೆಯಾಗಲಿದೆ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಯಷ್ಟು ಸ್ಥಾನ […]

ದೇಶದಾದ್ಯಂತ ಲಾರಿ ಮುಷ್ಕರ..ಕರ್ನಾಟಕ ಸರಕು ಸಾಗಣೆದಾರರ ಸಂಘದಿಂದ ಪ್ರತಿಭಟನೆ!

Friday, July 20th, 2018
lori-protest

ಬೆಂಗಳೂರು: ದೇಶದಾದ್ಯಂತ ಲಾರಿ ಮುಷ್ಕರ ಹಿನ್ನಲೆ ನಗರದ ಟೌನ್ ಹಾಲ್ ಮುಂದೆ ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ ಹಾಗೂ ಕರ್ನಾಟಕ ಸರಕು ಸಾಗಣೆದಾರರ ಸಂಘದಿಂದ ಪ್ರತಿಭಟನೆ ನಡೆಯಿತು. ಟೋಲ್ ಮುಕ್ತ ಭಾರತಕ್ಕೆ ಒತ್ತಾಯಿಸಿ ಹಾಗೂ ಇಂಧನ ದರ ಕಡಿಮೆ ಮಾಡಬೇಕು ಹಾಗೂ ಥರ್ಡ್ ಪಾರ್ಟಿ ಇನ್ಸೂರೆನ್ಸ್ ದರ ಕಡಿಮೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು‌. ದೇಶಾದ್ಯಂತ ವಾಣಿಜ್ಯ ವಾಹನಗಳ ಸ್ಥಗಿತ ಮಾಡಲಾಗುವುದು, ದೇಶದಲ್ಲಿ 412 ಟೋಲ್ ಗೇಟ್ ಹಾಗೂ ರಾಜ್ಯದಲ್ಲಿ 29 ಟೋಲ್ ಗೇಟ್ ಗಳಿವೆ. […]

ಉಚಿತ ಬಸ್ ​ಪಾಸ್​​​ಗಾಗಿ ನಾಳೆ ಶಾಲಾ-ಕಾಲೇಜು ಬಂದ್​ಗೆ ಕರೆ

Friday, July 20th, 2018
strike

ಬೆಂಗಳೂರು: ಉಚಿತ ಬಸ್ ಪಾಸ್ಗಾಗಿ ಆಗ್ರಹಿಸಿ ನಾಳೆ ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ಮಾಡಲು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ನಿರ್ಧರಿಸಿವೆ. ಕಳೆದ ಒಂದು ತಿಂಗಳಿನಿಂದಲೂ ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳನ್ನು ಸಂಘಟಿಸಿ ಬಸ್‍ ಪಾಸ್ ಸಮಸ್ಯೆಯ ಬಗ್ಗೆ ಅಹವಾಲನ್ನು ಸರ್ಕಾರದ ಮುಂದಿಟ್ಟಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‍ ಪಾಸ್ ನೀಡುವುದಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಮತ್ತು ಈಗಾಗಲೇ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಹಣ ವಾಪಸ್ಸು ಮಾಡಬೇಕೆಂಬ ಬೇಡಿಕೆಗಳನ್ನು ವಿದ್ಯಾರ್ಥಿಗಳು ಮುಂದಿಟ್ಟಿದ್ದಾರೆ. ಈ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ […]