Blog Archive

ಐದು ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿ: ಜಮೀರ್ ಅಹಮದ್

Thursday, December 13th, 2018
jameer-ahmed

ಬೆಳಗಾವಿ: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮೇಲೆ ಕಾಂಗ್ರೆಸ್ ಯಾವುದೇ ಒತ್ತಡ ಹೇರುತ್ತಿಲ್ಲ. ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ಜಮೀರ್ ಅಹಮದ್ ಸ್ಪಷ್ಟಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಹೆಬ್ಬೆಟ್ಟು ಮುಖ್ಯಮಂತ್ರಿ ಎಂದು ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ‌ ಅದು ಅವರ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿಯವರಿಗೆ ಎಲ್ಲ ಸ್ವಾತಂತ್ರ್ಯ ಕೊಡಲಾಗಿದೆ. ನಾವು ಯಾವುದೇ ರೀತಿಯ ಒತ್ತಡ ಹಾಕಿಲ್ಲ. ಕುಮಾರಸ್ವಾಮಿ ಅವರೇ ಐದು […]

ಮಾಟ-ಮಂತ್ರಕ್ಕೆ ಬಳಸಿದ್ದ ತೆಂಗಿನಕಾಯಿ, ಬಾಳೆಹಣ್ಣು ತಿಂದು ಯುವಕರ ಚಾಲೆಂಜ್..!

Saturday, October 13th, 2018
belagavi

ಬೆಳಗಾವಿ: ಮಾಟ-ಮಂತ್ರಕ್ಕೆ ಬಳಸಿದ್ದ ತೆಂಗಿನಕಾಯಿ, ಬಾಳೆಹಣ್ಣು ಸೇವಿಸುವ ಮೂಲಕ ಬೆಳಗಾವಿಯ ಈ ಯುವಕರು ಮೌಢ್ಯಕ್ಕೆ ಸೆಡ್ಡು ಹೊಡೆದು ಗಮನ ಸೆಳೆದಿದ್ದಾರೆ. ಖಾನಾಪುರ ಪಟ್ಟಣದ ಯುವಕರು ಇಂದು ಬೆಳಗ್ಗೆ ವಾಯು ವಿಹಾರಕ್ಕೆ ಹೋದಾಗ ಕಣ್ಣಿಗೆ ಕಂಡಿರುವ ಮಾಟ-ಮಂತ್ರಕ್ಕೆ ಬಳಸಿದ್ದ ಬಾಳೆ ಹಣ್ಣು, ತೆಂಗಿನಕಾಯಿ ಸೇವಿಸಿದ್ದಾರೆ. ನಿನ್ನೆ ಮಹಾನವಮಿ ಅಮವಾಸ್ಯೆ ಆದ ಕಾರಣ ಖಾನಾಪುರ ಪಟ್ಟಣದ ನಿಟ್ಟೂರು ಕ್ರಾಸ್ ಬಳಿ ಮಾಟ-ಮಂತ್ರ ಮಾಡಿಸಲಾಗಿತ್ತು. ಮಾಟ-ಮಂತ್ರಕ್ಕೆ ತೆಂಗು, ಬಾಳೆಹಣ್ಣು, ಗಡಿಗೆ, ನಿಂಬೆಹಣ್ಣು ಸೇರಿದಂತೆ ಇನ್ನಿತರ ವಸ್ತು ಬಳಸಿದ್ದರು. ಮಾಟಕ್ಕೆ ಬಳಸಿದ್ದ ಬಾಳೆ, […]

ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ

Wednesday, October 10th, 2018
MescomMD

ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸ್ನೇಹಲ್ ರಾಯ ಮನೆ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಮೆಸ್ಕಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪೂರ್ಣಪ್ರಮಾಣದಲ್ಲಿ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯವರಾದ ಅವರು, 2013 ನೇ ಬ್ಯಾಚ್ ನ ಐಎಸ್ ಅಧಿಕಾರಿ. 2015 ರಲ್ಲಿ ಚಿಕ್ಕಮಗಳೂರು ಸಹಾಯಕ ಆಯುಕ್ತರಾದ ಕಾರ್ಯ ಆರಂಭಿಸಿ ಧಾರವಾಡ ಜಿ . ಪಂ . ಸಿಇಒ ಆಗಿದ್ದರು. ಇದೊಂದು ಸಾರ್ವಜನಿಕ ಹುದ್ದೆ, ನನಗೆ ಕೊಟ್ಟಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಿ  […]

ಗೌರಿ ಹತ್ಯೆ ಪ್ರಕರಣ… ಬೆಳಗಾವಿಗೆ ಕರೆತಂದು ಆರೋಪಿಯ ವಿಚಾರಣೆ

Thursday, September 27th, 2018
gouri-lankesh

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ ಮತ್ತೋರ್ವ ಆರೋಪಿ ಮುಂಬೈನ ಶರದ್ ಕಲಾಸ್ಕರ್ ವಿಚಾರಣೆಯನ್ನು ಎಸ್‌ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಶರತ್ ಕಲಾಸ್ಕರ್ ಪಿಸ್ತೂಲ್ ತಯಾರಿಕೆಯಲ್ಲಿ ನಿಪುಣನಾಗಿದ್ದ. ಹೀಗಾಗಿ ಗೌರಿ ಹತ್ಯೆಗೆ ಈತನೇ ಪಿಸ್ತೂಲ್ ತಯಾರಿಸಿ ಕೊಟ್ಟಿರುವ ಶಂಕೆ ಹಿನ್ನೆಲೆ ಎಸ್ಐಟಿ ಈತನನ್ನ ವಶಕ್ಕೆ ಪಡೆದಿತ್ತು. ಹೀಗಾಗಿ ಈತನನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಈತ ಈಗಾಗಲೇ ಬಂಧಿತರಾಗಿರುವ ಆರೋಪಿಗಳಿಗೆ ಬೆಳಗಾವಿಯಲ್ಲಿ ಶೂಟಿಂಗ್ ತರಬೇತಿ ನೀಡಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಕರೆತಂದು […]

ಖಾನಾಪುರ ಬಳಿ ಭಾರಿ ಮಳೆಗೆ ಕೊಚ್ಚಿಹೋಯ್ತು ಸೇತುವೆ

Monday, July 16th, 2018
bridge-collapsed

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಸೇತುವೆಯೊಂದು‌ ಕೊಚ್ಚಿ ಹೋಗಿದೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ಖಾನಾಪುರ ತಾಲೂಕಿನ ಹಲ್ತರಾ ನಾಲೆಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿತ್ತು. ಈ ಸೇತುವೆ ಖಾನಾಪುರ ಹಾಗೂ ಶಿರೋಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ನಿರ್ಮಿಸಲಾಗಿತ್ತು‌. ಕಳೆದ ಐದು ವರ್ಷಗಳಲ್ಲಿ ‌ಮೂರು ಸಲ ಈ ಸೇತುವೆ ಕೊಚ್ಚಿ ಹೋಗಿದ್ದು, ಕಾಮಗಾರಿ‌ ಗುಣಮಟ್ಟದ ಕುರಿತು ಗ್ರಾಮಸ್ಥರು ಅನುಮಾನ‌ ವ್ಯಕ್ತಪಡಿಸಿದ್ದಾರೆ.

ಕೈ ಕಾಲು ಕಟ್ಟಿ ಬಿಜೆಪಿಗೆ ಮತ ಹಾಕಿಸಿ: ಬಿಎಸ್‌ವೈ ವಿವಾದಾತ್ಮಕ ಕರೆ

Saturday, May 5th, 2018
yedeyurappa

ಬೆಳಗಾವಿ: ಬಿಜೆಪಿಗೆ ಯಾರು ಮತ ನೀಡುವುದಿಲ್ಲ ಎಂದನಿಸುತ್ತದೆಯೋ ಅಂಥವರ ಕೈ ಕಾಲು ಕಟ್ಟಿ ಕರೆತಂದು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ವಿವಾದಾತ್ಮಕ ಕರೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ‌ ಇಂದು ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಯಾರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು‌ ತಮಗೆ ಅನಿಸುತ್ತೋ ಅಂಥವರ ಕೈ ಕಾಲು ಕಟ್ಟಿ ಕರೆತಂದು ಮತ ಹಾಕಿಸಬೇಕು ಎಂದರು. ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿಎಸ್‌ವೈ, ಬಿಜೆಪಿ […]

ಬೆಳಗಾವಿ ಜಿಲ್ಲೆಯಲ್ಲಿ ಅಖಾಡಕ್ಕಿಳಿದ ಮೂವರು ಮಹಿಳೆಯರು!

Wednesday, April 25th, 2018
belagavi

ಬೆಳಗಾವಿ: ಬ್ರಿಟಿಷರ ವಿರುದ್ಧ ಹೋರಾಡಿದ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜನ್ಮಭೂಮಿ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಈ ಸಲದ ಚುನಾವಣೆಯ ಅಖಾಡದಲ್ಲಿದ್ದಾರೆ. ಒಬ್ಬರಿಗೆ ಬಿಜೆಪಿ ಗ್ರೀನ್‌ ಸಿಗ್ನಲ್‌ ನೀಡಿದರೆ ಇಬ್ಬರು ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. 18 ವಿಧಾನಸಭಾ ಕ್ಷೇತ್ರ ಹೊಂದಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಅಷ್ಟಕ್ಕಷ್ಟೆ. ಕಳೆದ ಸಲ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಶಶಿಕಲಾ ಜೊಲ್ಲೆ ಗೆಲುವು ದಾಖಲಿಸುವ ಮೂಲಕ ಜಿಲ್ಲೆಯ ಏಕೈಕ ಮಹಿಳಾ ಶಾಸಕಿ ಎಂಬ […]

ಬಿಜೆಪಿ ಕ್ಯಾನ್ಸರ್ ಇದ್ದಂತೆ… ಬಿಜೆಪಿಗೆ ಮತ ಹಾಕಬೇಡಿ : ಪ್ರಕಾಶ ರೈ

Wednesday, April 11th, 2018
prakash-rai

ಬೆಳಗಾವಿ: ಕೇಂದ್ರದ ಜತೆಗೆ ದೇಶದ 21 ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಭಾರತೀಯ ಜನತಾ ಪಕ್ಷ ಕ್ಯಾನ್ಸರ್ ಇದ್ದಂತೆ ಎಂದು ಬಹುಭಾಷಾ ನಟ ಪ್ರಕಾಶ ರೈ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋಮುವಾದಿ ಪಕ್ಷ. ಕೋಮುವಾದ ಪ್ರತಿಪಾದಿಸುವ, ಸಂವಿಧಾನ ಬದಲಿಸುತ್ತೇನೆ ಎಂದು ಹೇಳುವ ಪಕ್ಷ ಅಧಿಕಾರದಲ್ಲಿ ಇರಬಾರದು. ಪ್ರತಿಪಕ್ಷಗಳನ್ನು ನಾಯಿ, ಬೆಕ್ಕಿಗೆ ಹೋಲಿಕೆ ಮಾಡಿರುವ ಬಿಜೆಪಿ ಅಧ್ಯಕ್ಷರ ವಿರುದ್ಧ ಉತ್ತರ ಪ್ರದೇಶ ಸೇರಿದಂತೆ ಎಲ್ಲಡೆ ಆಂದೋಲನ ನಡೆಯುತ್ತಿದೆ. ಪ್ರಸ್ತುತ ಕೇಂದ್ರ ಸಹಿತ […]

ಹಣ ಕೊಟ್ಟು ಪ್ರತಿಭಟನಾಕಾರರನ್ನು ಕರೆ ತಂದು ಮೋದಿ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಗೆ ಮಖಭಂಗ

Thursday, November 24th, 2016
Modi

ಬೆಳಗಾವಿ: 500, 1000 ರೂಪಾಯಿ ನೋಟು ನಿಷೇಧಿಸಿದ ಪ್ರಧಾನಿ ನರೇಂದ್ರ ಮೋದಿ ನಿರ್ಧಾರದ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಹಣ ಕೊಟ್ಟು ಪ್ರತಿಭಟನಾಕಾರರನ್ನು ಕರೆ ತಂದು ಮೋದಿ ವಿರುದ್ಧ ಪ್ರತಿಭಟನೆ ನಡೆಸಿ ಮಖಭಂಗಕ್ಕೀಡಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ಖಾಸಗಿ ಟಿವಿ ಚಾನೆಲ್ ವೊಂದರ ವರದಿ ತಿಳಿಸಿದೆ. ರೇಷನ್ ಕಾರ್ಡ್ ಕೊಡಿಸುವುದಾಗಿ ನಂಬಿಸಿ ಕಾಂಗ್ರೆಸ್ ಪಕ್ಷದವರು ಜನರನ್ನು ಕರೆತಂದಿದ್ದರು. ಆದರೆ ಸ್ಥಳಕ್ಕೆ ಬಂದಾಗ ನೋಟು ನಿಷೇಧಿಸಿದ್ದ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದಾಗ…ಜನರು ಗರಂ […]