Blog Archive

ವಿದ್ಯಾರ್ಥಿನಿಯರಿಗೆ ಉಚಿತ ಕಾಲೇಜು ಶಿಕ್ಷಣ.

Wednesday, February 26th, 2014
R.V-Deshpande

ಬೆಳ್ತಂಗಡಿ: ಉಜಿರೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಉದ್ಘಾಟಿಸಿದರು. ಧರ್ಮಸ್ಥಳದ ಧಮರ್ಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಮಂಗಳೂರು ವಿ.ವಿ. ಕುಲಪತಿ ಡಾ. ಟಿ.ಸಿ. ಶಿವಶಂಕರಮೂರ್ತಿ, ಪ್ರೊ.ಎಸ್. ಪ್ರಭಾಕರ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಯೋಗಾನಂದ ಉಪಸ್ಥಿತರಿದ್ದರು. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಮತ್ತು […]

ಮೇ 2ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

Tuesday, February 18th, 2014
Virender-Hegde

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಮೇ 2ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವರದಕ್ಷಿಣೆ, ವಿವಾಹಕ್ಕಾಗುವ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದು, ಪ್ರತಿವರ್ಷ ಸಾಮೂಹಿಕ ವಿವಾಹ ಏರ್ಪಡಿಸಲಾಗುತ್ತದೆ. ಕಳೆದ ವರ್ಷದವರೆಗೆ ಧರ್ಮಸ್ಥಳದಲ್ಲಿ 11,465 ಜೋಡಿ ಸಾಮೂಹಿಕ ವಿವಾಹವಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಕೊಡಲಾಗುವುದು. ವಿವಾಹವಾಗಲು ಇಚ್ಚಿಸುವವರು ಏ.28ರೊಳಗೆ ಧರ್ಮಸ್ಥಳದ ವಿವಾಹ ನೋಂದಣಿ ಕಚೇರಿಯಲ್ಲಿ ಹೆಸರು ದಾಖಲಿಸಲು […]

ಸೌಜನ್ಯಾ ಪ್ರಕರಣವನ್ನು ಹಿಡಿದು ಬೆಳ್ತಂಗಡಿ ತಾಲೂಕಿನ ಕೆಲವರು ಧರ್ಮಸ್ಥಳ ದೇವಾಲಯದ ಚಾರಿತ್ರ್ಯ ಹನನ ಮಾಡುತ್ತಿದ್ದಾರೆ

Wednesday, October 16th, 2013
Veerendra Hegde

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೆಲವರು ಸೇರಿಕೊಂಡು 2012 ರಲ್ಲಿ ನಡೆದ ಸೌಜನ್ಯಾ ಕೊಲೆ ಪ್ರಕರಣವನ್ನು ಟಿ.ವಿ. ಮಾಧ್ಯಮದಲ್ಲಿ ಹೇಳಿಕೊಂಡು ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಧರ್ಮಾಧಿಕಾರಿಯಾದ ನಮ್ಮ ಮೇಲೆ ಆರೋಪ ಹೊರಿಸುವ ಪ್ರಯತ್ನ ಮಾಡಿದ್ದಾರೆ. ಸೌಜನ್ಯಾ ಪ್ರಕರಣದಲ್ಲಿ ನಮ್ಮ ಕುಟುಂಬದ ಯಾರದ್ದೂ ಕೈವಾಡವಿಲ್ಲ. ನಾವು ಯಾವುದೇ ಆರೋಪಿಗಳನ್ನು ರಕ್ಷಿಸಿಲ್ಲ. ಯಾರೇ ಆರೋಪಿಗಳಿದ್ದರೂ ಅವರನ್ನು ತತ್‌ಕ್ಷಣ ಬಂಧಿಸಲು ನಮ್ಮ ಅಡ್ಡಿಯಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸ್ಪಷ್ಟಪಡಿಸಿದ್ದಾರೆ. […]

ಬೆಳ್ತಂಗಡಿ ತಾ.ಪಂ. ಮಾಜಿ ಅಧ್ಯಕ್ಷ ರಸ್ತೆ ಅಪಘಾತಕ್ಕೆ ಬಲಿ

Tuesday, July 9th, 2013
T G Joy

ಬೆಳ್ತಂಗಡಿ: ಬೆಳ್ತಂಗಡಿ ತಾ.ಪಂ. ಮಾಜಿ ಅಧ್ಯಕ್ಷ ಟಿ.ಜಿ. ಜೋಯ್(49) ಹಾಸನದ ಬೆಳ್ಳೂರು ಕ್ರಾಸ್ ಬಳಿ ಜುಲೈ 4ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯಿಂದ ಚೇತರಿಕೆ ಕಂಡು ಬಾರದೆ ಭಾನುವಾರ ರಾತ್ರಿ ಕೊನೆಯುಸಿರೆಳೆದರು. ಪತ್ನಿ, ತಾಯಿ, ಪುತ್ರನನ್ನು ಅಗಲಿದ್ದಾರೆ. ಸಿರಿಯನ್ ಕೆಥೋಲಿಕ್ ಸೊಸೈಟಿ ಅಧ್ಯಕ್ಷರಾಗಿದ್ದ ಜೋಯ್, ಮಲಯಾಳಿ ಕ್ರಿಶ್ಚಿಯನ್ ಅಸೋಶಿಯೇಶನ್ ಉಪಾಧ್ಯಕ್ಷರಾಗಿದ್ದರು. ತಾ.ಪಂ.ಮಾಜಿ ಅಧ್ಯಕ್ಷರಾಗಿ, ಎಪಿಎಂಸಿ […]

ಬೆಳ್ತಂಗಡಿ : ಅಂತಾರಾಜ್ಯ ಕಳ್ಳರ ಬಂಧನ

Tuesday, April 23rd, 2013
Inter state thieves

ಬೆಳ್ತಂಗಡಿ : ಸೋಮವಾರ ಉಜಿರೆಯ ಚೆಕ್ ಪೋಸ್ಟ್ ಬಳಿ ಬೆಳ್ತಂಗಡಿ ಪೊಲೀಸರು ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಮಲಾನಗರದ ಗೋಪಿ ಯಾನೆ ಗೋಪಿನಾಥ್(29), ಬೆಂಗಳೂರು ಕುರುಬರ ಹಳ್ಳಿಯ ಸೂರಿ ಯಾನೆ ಸುರೇಂದ್ರ(29), ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರು ನಿವಾಸಿ ಮಣಿ ಯಾನೆ ಮಣಿಕಂಠ (23)ಬಂಧಿತ ಆರೋಪಿಗಳು. ಬೆಳ್ತಂಗಡಿ ಎಸ್‌ಐ ಯೋಗೀಶ್ ಕುಮಾರ್ ಮತ್ತು ತಂಡ ಉಜಿರೆಯಲ್ಲಿ ಚುನಾವಣಾ ಸಂಬಂಧಿ ಕರ್ತವ್ಯದಲ್ಲಿದ್ದ ವೇಳೆ ಬೆಂಗಳೂರು ನೋಂದಣಿಯ ಕ್ವಾಲಿಸ್ ಕಾರ್‌ನಲ್ಲಿದ್ದವರನ್ನು ತಡೆದು ನಿಲ್ಲಿಸಿ ವಿಚಾರಿಸಿದ ಸಂದರ್ಭ ಆರೋಪಿಗಳು ಕಳ್ಳತನದ ಬಗ್ಗೆ […]

ಬೆಳ್ತಂಗಡಿ : ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಾಲ್ವರ ಬಂಧನ

Wednesday, March 13th, 2013
Belthangady

ಬೆಳ್ತಂಗಡಿ :14 ವರ್ಷದ ಬಾಲಕಿ ಮೇಲೆ ಬಲಾತ್ಕಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ ಆರೋಪ ಮೇಲೆ ನಾಲ್ವರನ್ನು ಬೆಳ್ತಂಗಡಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಿತ್ತಬಾಗಿಲು ಗ್ರಾಮದ ಫಯಾಜ್‌ (19), ನಾಸಿರ್‌ (18), ನೌಶಾದ್‌ (19), ಭಂಡಾರಿಕೋಡಿ ಮನೆ ಶಾಕೀರ್‌ (19)  ಬಂಧಿತ ಆರೋಪಿಗಳು. ಮಾರ್ಚ್ 9ರಂದು ಮನೆಗೆ ಒಂಟಿಯಾಗಿ ಬರುತ್ತಿದ್ದ ಬಂಡಾರಿಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಪಾದೆಗುತ್ತು ಎಂಬಲ್ಲಿ ಈ ನಾಲ್ವರು ಯುವಕರು ನೇತ್ರಾವತಿ ನದಿ ತಟದಲ್ಲಿ ಅಡ್ಡಗಟ್ಟಿ ತಮ್ಮ ಜತೆ ಬರುವಂತೆ ಒತ್ತಾಯಿಸಿದ್ದು […]

ಬೆಳ್ತಂಗಡಿಯಲ್ಲಿ ನಕ್ಸಲರೂ ಮಕ್ಕಳಾಟಿಕೆಯಾದರೂ

Tuesday, December 11th, 2012
Chaarmaadi

ಮಂಗಳೂರು :ಮನೆಯಿಂದ ಪರಾರಿಯಾಗಿದ್ದ ಬಾಲಕರಿಬ್ಬರು ಕಾಡಿನಲ್ಲಿ ದಿನಬಳಕೆ ವಸ್ತುಗಳನ್ನು ಶೇಖರಿಸಿಟ್ಟಿದ್ದು ಎಎನ್ಎಫ್ ಪೊಲೀಸರ ಕೂಂಬಿಂಗ್ ಕಾರ್ಯಾಚರಣೆ ಸಂದರ್ಭ ಪತ್ತೆಯಾಗುವ ಮೂಲಕ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಘಟನೆ ಚಾರ್ಮಾಡಿಯಲ್ಲಿ ಇತ್ತೀಚೆಗೆ ನಡೆಯಿತು. ಚಾರ್ಮಾಡಿಯ ಪೇಟೆಯ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು ಎರಡು ಕಿ. ಮೀ. ದೂರದಲ್ಲಿ ಈ ಘಟನೆ ನಡೆದಿತ್ತು. ನಕ್ಸಲ್ ನಿಗ್ರಹ ದಳದ ಪೊಲೀಸರಿಗೆ ಚಾರ್ಮಾಡಿಯಲ್ಲಿ ನಕ್ಸಲ್ ತಂಡವಿದೆ ಎಂಬ ಮಾಹಿತಿ ಬಂದಿತ್ತು. ಅದರಂತೆ ಬೆಳಗ್ಗೆ ತಂಡವೊಂದು ಚಾರ್ಮಾಡಿ ಪೇಟೆ ಬಳಿಯ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಚಾರ್ಮಾಡಿ […]

ವಿದ್ಯಾರ್ಥಿನಿ ಸೌಜನ್ಯ ಪ್ರಕರಣ:ಸಿಒಡಿ ಪೊಲೀಸರ ತನಿಖೆ ಆರಂಭ

Friday, November 30th, 2012
Sowjanya

ಬೆಳ್ತಂಗಡಿ : ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಅವರ ಕೊಲೆ, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಒಡಿ ಪೊಲೀಸರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಸಿಒಡಿ ಇನ್ಸ್‌ಪೆಕ್ಟರ್‌ ಗೋಪಾಲ್‌ ಅವರು ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಸಾರ್ವಜನಿಕರು ಹಿಡಿದುಕೊಟ್ಟ ಸಂಶಯಾಸ್ಪದ ವ್ಯಕ್ತಿಯನ್ನೇ ಪೊಲೀಸರು ಆರೋಪಿ ಎಂದು ಹೇಳಿದ್ದು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿತ್ತು. ಪ್ರಕರಣದಲ್ಲಿ ಘಟಾನುಘಟಿಗಳು ಭಾಗಿಯಾಗಿರಬಹುದು ಎಂದು ಜನತೆ ಸಂಶಯ ವ್ಯಕ್ತಪಡಿಸಿದ್ದರು. ಅಲ್ಲದೆ ನೈಜ ಆರೋಪಿಯನ್ನು ಪತ್ತೆಹಚ್ಚಲು ಪ್ರಕರಣದ ತನಿಕೆಯನ್ನು ಸಿಒಡಿ ಪೊಲೀಸರಿಗೆ ಒಪ್ಪಿಸಬೇಕೆಂದು ಪ್ರತಿಭಟನೆಗಳೂ […]

ಅಡ್ಡಹೊಳೆ ಮನೆಯಲ್ಲಿ ಊಟ ಮಾಡಿದ ನಕ್ಸಲರ ತಂಡ, ಮುಂದುವರಿದ ಕೂಂಬಿಂಗ್ ಕಾರ‍್ಯಾಚರಣೆ

Saturday, July 21st, 2012
naxal

ಪುತ್ತೂರು:  ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಪ್ರದೇಶದಲ್ಲಿ ನಕ್ಸಲ್ ತಂಡ ಮತ್ತೆ ಕಾಣಿಸಿ ಕೊಂಡಿದೆ. ಬೆಳ್ತಂಗಡಿ ಶಿಶಿಲ ಪ್ರದೇಶದಲ್ಲಿ ನಕ್ಸಲರಿಗಾಗಿ ಎಎನ್‌ಎಫ್ ಹಾಗೂ ಪೊಲೀಸರು ಕೂಂಬಿಂಗ್ ಕಾರ್ಯಚರಣೆ ನಡೆಸುತ್ತಿದ್ದು ಈ ನಡುವೆ ಶಿರಾಡಿಯಲ್ಲಿ ನಕ್ಸಲ್ ತಂಡ ಪ್ರತ್ಯಕ್ಷ ವಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಡ್ಡಹೊಳೆಯ ವರ್ಗೀಸ್ ಎಂಬವರ ಮನೆಗೆ ಹಾಗೂ ಸಮೀಪದ ಇನ್ನೆರಡು ಮನೆಗಳಿಗೆ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗಿನ ಜಾವ ಬಂದ ಐದು ಮಂದಿಯ ತಂಡ ಆ ಮನೆಯಲ್ಲಿ ಊಟ ನೀಡುವಂತೆ ಕೇಳಿಕೊಂಡಿದೆ, ಊಟ ಮುಗಿಸಿ ಬಳಿಕ […]

ಖೋಟಾ ರಶೀದಿ ನೀಡಿ ರೂ.28 ಸಾವಿರ ಹಣ ವಸೂಲಿ: ಮುಖ್ಯ ಶಿಕ್ಷಕ ಕೆ.ಜಿ.ಲಕ್ಷ್ಮಣ ಶೆಟ್ಟಿ ಅಮಾನತು

Friday, July 8th, 2011
head master suspended

ಮಂಗಳೂರು: ಬೆಳ್ತಂಗಡಿ ತಾಲೂಕು ಬಂಗಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಕೆ.ಜಿ.ಲಕ್ಷ್ಮಣ ಶೆಟ್ಟಿ ಮತ್ತು ಅದೇ ಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾದ ಶ್ರೀ ಬಿ.ರಾಜು ಇವರು ಶಾಲೆಯಲ್ಲಿ ಸರಕಾರ ನಿಗಧಿಪಡಿಸಿರುವ ಶುಲ್ಕಗಿಂತ ಹೆಚ್ಚುವರಿಯಾಗಿ ಶುಲ್ಕ ರೂ.28,071 ಗಳನ್ನು ಖೋಟಾ ರಶೀದಿ ನೀಡಿ ವಸೂಲಿ ಮಾಡಿದ ಕಾರಣ ಇವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಬೆಳ್ತಂಗಡಿಗೆ ಭೇಟಿ ನೀಡಿದಾಗ, ಪತ್ರಕರ್ತರು ಮೌಖಿಕ ದೂರು ನೀಡಿದ ಮೇರೆಗೆ, ಜಿಲ್ಲಾಧಿಕಾರಿ   ಡಾ.ಎನ್.ಎಸ್.ಚೆನ್ನಪ್ಪ ಗೌಡ ಅವರು  ತನಿಖೆ ಕೈಗೊಳ್ಳುವಂತೆ, ಸಾರ್ವಜನಿಕ […]