Blog Archive

ದೇವರ ಹಣ ಕಳ್ಳತನ, ಕಳ್ಳನ ಪತ್ತೆಗಾಗಿ ದೇವರಿಗೆ ವಿಶೇಷ ಪ್ರಾರ್ಥನೆ, ಎರಡೇ ದಿನದಲ್ಲಿ ಕಳ್ಳನನ್ನು ಕರೆಸಿಕೊಂಡ ದೇವರು

Saturday, August 1st, 2020
Mallipady

ಬೆಳ್ತಂಗಡಿ: ಕಳ್ಳನೊಬ್ಬ ದೇವರ ಹುಂಡಿಯಲ್ಲಿರುವ ಹಣವನ್ನು ಕಳುವು ಮಾಡಿರುವ ಘಟನೆ ಬೆಳ್ತಂಗಡಿ ಸಮೀಪ ನಡೆದಿದ್ದು ಕೇವಲ ಎರಡೇ ದಿನದಲ್ಲಿ ಕಳ್ಳನು ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾನೆ. ಪಡಂಗಡಿಯ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿಈ ಘಟನೆ ಸಂಭವಿಸಿದ್ದು, ಬರಾಯ ನಿವಾಸಿ ಶ್ರೀಧರ (36) ದೇವರ ಹಣ ಕದ್ದು ಸಿಕ್ಕಿಬಿದ್ದಿರುವ ವ್ಯಕ್ತಿ. ದೇವರ ಹಣ ಕಳ್ಳತನ ಆಗಿರುವ ವಿಷಯ ತಿಳಿದ ಕೂಡಲೇ ದೇವಾಲಯದ ಆಡಳಿತ ಮಂಡಳಿ ಹಾಗು ಊರವರು ಕಳ್ಳನ ಪತ್ತೆಗಾಗಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದು ದಿನಬೆಳಗಾಗೋ ಮುಂಚೆಯೇ […]

ಬೆಳ್ತಂಗಡಿ ಸಮೀಪದ ಪಣೆತ್ತಡಿ ಜಮೀನಿನಲ್ಲಿ ಪುರಾತನ ನಿಧಿ, ಸ್ಥಳಕ್ಕೆ ತಹಶೀಲ್ದಾರ್ ಎಸ್.ಐ, ಗ್ರಾಮಾಧಿಕಾರಿ ದೌಡು

Wednesday, July 22nd, 2020
nidhi

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಜಮೀನಿನಲ್ಲಿ ನಿಧಿ ಪತ್ತೆಯಾಗಿದೆಯೆಂದು ತಹಶೀಲ್ದಾರ್, ಬೆಳ್ತಂಗಡಿ ಎಸ್.ಐ, ಗ್ರಾಮ  ಲೆಕ್ಕಿಗ ಅಧಿಕಾರಿಗಳು ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಬರಾಯ ಕನ್ಯಾಡಿ ಗ್ರಾಮದ ಪಣೆತ್ತಡಿಯಲ್ಲಿನಿಧಿ ಶೋಧಕ್ಕೆ‌ ಕಾರ್ಯಕ್ಕೆ ಮುಂದಾಗಿದ್ದಾರೆ. ಒಂದು ತಿಂಗಳ ಹಿಂದೆ ಇಲ್ಲಿನ ಆನಂದ ಶೆಟ್ಟಿ ಅವರಿಗೆ ನಿಧಿ ಲಭಿಸಿತ್ತು ಇದೀಗ ಅವರು ನಿಧಿ ಸಿಕ್ಕಿದ ಜಾಗವನ್ನು ಸಮತಟ್ಟು ಮಾಡಿದ್ದಾರೆ ಎಂದು ಯಾರೋ ಸ್ಥಳೀಯರು ವಿಡಿಯೋ ಮಾಡಿ ಎಸಿ ಯವರಿಗೆ ಕಳುಹಿಸಿ ದ್ದರಂತೆ. ತಹಶೀಲ್ದಾರ್ ಸಮ್ಮುಖದಲ್ಲಿ ಬುಧವಾರ ನಿಧಿ ಶೋಧಕ್ಕೆ‌ ಸಿದ್ಧತೆಗಳು ನಡೆಯುತ್ತಿದ್ದು ಬೆಳ್ತಂಗಡಿ ಎಸ್.ಐ. ನಂದಕುಮಾರ್, ನಡ […]

ಕೊರೋನ ಸೋಂಕು ಜುಲೈ 20 : ದಕ್ಷಿಣ ಕನ್ನಡ 89, ಉಡುಪಿ ಜಿಲ್ಲೆ 99, ಕಾಸರಗೋಡು 28

Tuesday, July 21st, 2020
CORONA

ಮಂಗಳೂರು :  ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸೋಮವಾರ  89 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,685ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಮಂದಿ, ಶೀತ-45, ತೀವ್ರ ಉಸಿರಾಟ ತೊಂದರೆ-16, ವಿದೇಶದಿಂದ ಆಗಮಿಸಿದ ಇಬ್ಬರು, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ […]

ತುರ್ತುಸೇವೆ ಪಾಸ್ ಪಡೆದು ಪಿಕಪ್ ವಾಹನ ದಲ್ಲಿ ಅಕ್ರಮ ದನ ಸಾಗಾಟ, ತಡೆದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

Monday, July 20th, 2020
cow smuggler

ಬೆಳ್ತಂಗಡಿ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದವರನ್ನ ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೆಳ್ತಂಗಡಿಯ ಸುರ್ಯಪಡ್ಪು ಎಂಬಲ್ಲಿ ನಡೆದಿದೆ ನಡೆದಿದೆ. ಆಟೋ ಚಾಲಕ ರಾಜೇಶ್ ಎಂಬವ ಮನೆಯಲ್ಲಿ ಗೋವುಗಳನ್ನು ಸಾಕಿ  ಅವುಗಳನ್ನು ಕಸಾಯಿ ಖಾನೆಗೆ ಮಾರುತ್ತಿದ್ದರು. ಇಂದು ಸಹ  ರಾಜೇಶ್ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ, ಎರಡು ಕರುವನ್ನು ಅಮಾನುಷವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದರು. ಗೋವುಗಳನ್ನು ಪಿಕಪ್ ವಾಹನದಲ್ಲಿ ಕಳುಹಿಸಿ ರಾಜೇಶ್ ಮತ್ತು ಆತನ ಸಹಚರರು ಬೆಂಗಾವಲು ವಾಹನ ಆಲ್ಟೋ ಕಾರಿನಲ್ಲಿಹೋಗುತ್ತಿದ್ದರು. ಸಂಪೂರ್ಣ ಲಾಕ್ ಡೌನ್ ವೇಳೆ […]

ಬೆಳ್ತಂಗಡಿ : 70 ರ ವೃದ್ಧೆಯನ್ನು ಹೆತ್ತ ಮಗ ಮತ್ತು ಮೊಮ್ಮಗ ಸೇರಿ ಹಲ್ಲೆ ಮಾಡುವ ವಿಡಿಯೋ ವೈರಲ್

Friday, July 17th, 2020
Belthangady assult

ಬೆಳ್ತಂಗಡಿ : ಈ ದೃಶ್ಯ ನೋಡಿದ್ರೆ ಎಂಥವರ ಮನಸ್ಸು ಕರಗದೇ ಇರದು. ತಾಯಿ ಮಕ್ಕಳನ್ನು ಹೆತ್ತು ಅದೆಷ್ಟೋ ಕಷ್ಟಗಳನ್ನು ಸಹಿಸಿ ಬೆಳೆಸುತ್ತಾಳೆ. ಆದರೆ ಕೆಲವೊಂದು ಮಕ್ಕಳು ಹೆತ್ತವರು ಅಸಹಾಯಕರಾದಾಗ ಯಾವರೀತಿ  ನೆಡಿಕೊಳ್ಳುತ್ತಾರೆ ಎಂಬುದನ್ನು ಈ ಘಟನೆಯಿಂದ ಅರಿತುಕೊಳ್ಳಿ. ಹೆತ್ತ ಮಗ ಮತ್ತು ಮೊಮ್ಮಗ ಸೇರಿ ವೃದ್ಧೆ ತಾಯಿಯನ್ನು ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ ರಾಕ್ಷಸಿ ಕೃತ್ಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ ಅವರ ಮಗ […]

ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಲಿ, ಜುಲೈ 14 ರಿಂದ ಮಧ್ಯಾಹ್ನ ಸ್ವಯಂಪ್ರೇರಿತ ಬಂದ್

Sunday, July 12th, 2020
Corona death

ಬೆಳ್ತಂಗಡಿ : ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಲಿ ಆಗಿದ್ದು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೊಂಡಿಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶಕ್ಕೆ […]

ದಕ್ಷಿಣ ಕನ್ನಡ ಜಿಲ್ಲೆ ಭಾನುವಾರ ಏಳು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

Monday, June 22nd, 2020
Dk Corona

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಭಾನುವಾರ, ಜೂನ್ 21ರಂದು  ಏಳು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ರೋಗಿ ಸಂಖ್ಯೆ 6619 ವ್ಯಕ್ತಿಯ ಸಂಪರ್ಕದಿಂದ ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದರೆ. ಮೂವರು ಕುವೈಟ್ ನಿಂದ ಮರಳಿದವರಾಗಿದ್ದಾರೆ. ಇನ್ನುಳಿದಂತೆ ಪುತ್ತೂರಿನ ಒಬ್ಬರಿಗೆ ಐಎಲ್ ಐನಿಂದ ಸೋಂಕು ದೃಢಪಟ್ಟರೆ, ಬೆಳ್ತಂಗಡಿ ನಿವಾಸಿಯೊಬ್ಬರಿಗೆ ಎಸ್ ಆರ್ ಐನಿಂದ ಸೋಂಕು ತಗುಲಿದೆ. ಭಾನುವಾರ ಉಡುಪಿ ಜಿಲ್ಲೆ ಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು ಉಡುಪಿ ಜಿಲ್ಲೆಯಲ್ಲಿ 12 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. […]

ಬೆಳ್ತಂಗಡಿಯ ಆರಂಬೋಡಿಯ 29 ವರ್ಷದ ಯುವತಿಗೆ ಕೊರೋನಾ ಸೋಂಕು ದೃಢ

Friday, May 22nd, 2020
belthangady Girl

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಆರಂಬೋಡಿಯ 29 ವರ್ಷದ ಯುವತಿಗೆ ಸೋಂಕು ತಾಗಿರುವುದು ದೃಢವಾಗಿದೆ.  ಮಹಾರಾಷ್ಟ್ರದಿಂದ  ಮೇ  18ರಂದು ಆಗಮಿಸಿದ್ದ ಯುವತಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದಾಗಿ  ಶುಕ್ರವಾರದ ವರದಿಯಲ್ಲಿ ಜಿಲ್ಲೆಯಲ್ಲಿ ಏಕೈಕ ಸೋಂಕು ಪ್ರಕರಣ ವರದಿಯಾಗಿದೆ. ಈಕೆ ಕಳೆದ ಮೇ 18ರಂದು ಮಹಾರಾಷ್ಟ್ರ ರಾಜ್ಯದ ದೊಂಬಿವಿಲಿ, ಥಾಣೆ, ಮುಂಬೈನಿಂದ ಪ್ರಯಾಣ ಬೆಳೆಸಿದ್ದರು. ಇವರನ್ನು ಬೆಳ್ತಂಗಡಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ಥಾಪಿಸಲಾದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ರಾಜ್ಯದಲ್ಲಿ ಇಂದು ಒಟ್ಟು 105 ಹೊಸ […]

ಬೆಳ್ತಂಗಡಿಗೂ ಕಾಲಿಟ್ಟ ಕೋವಿಡ್ 19 ವೈರಸ್ : ದುಬಾಯಿಯಿಂದ ಹಿಂತಿರುಗಿದ ಯುವಕನಿಗೆ ಪಾಸಿಟಿವ್

Friday, March 27th, 2020
Belthangady

ಬೆಳ್ತಂಗಡಿ: ಕರಾಯ ಗ್ರಾಮದ 21 ವರ್ಷದ ಯುವಕನಲ್ಲಿ ಕೋವಿಡ್ 19 ವೈರಸ್ ಪಾಸಿಟಿವ್ ಆಗಿರುವುದು  ಪತ್ತೆಯಾಗಿದೆ. ಈ ಯುವಕ ಮಾರ್ಚ್ 21ರಂದು ದುಬಾಯಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ಆ ಬಳಿಕ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಮೂಲಕ ಕರಾಯದಲ್ಲಿರುವ ತನ್ನ ಮನೆಗೆ ಬಂದಿದ್ದ. ಬಳಿಕ ಈ ಯುವಕನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದ ಕಾರಣದಿಂದ ಮಾರ್ಚ್ 24ರಂದು ಪುತ್ತೂರಿನ ಆಸ್ಪತ್ರೆ ದಾಖಲುಗೊಂಡಿದ್ದ. ಈ ಸಂದರ್ಭದಲ್ಲಿ ಈತನ ಗಂಟಲು ಸ್ರಾವ ಮಾದರಿಯನ್ನು ತಪಾಸಣೆಗೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಇಂದು ಕೈಸೇರಿದ್ದು ಇದರಲ್ಲಿ […]

ಬೆಳ್ತಂಗಡಿ : ಹಲ್ಲು ನೋವಿನ ಚಿಕಿತ್ಸೆಗೆ ಬಂದ ಮಹಿಳಾ ರೋಗಿಯೊಂದಿಗೆ ಅಸಭ್ಯ ವರ್ತನೆ; ದೂರು ದಾಖಲು

Thursday, January 30th, 2020
sudhakar

ಬೆಳ್ತಂಗಡಿ : ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ ಕುರಿತು, ಯುವತಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಮೂಲತಃ ನೆಲ್ಯಾಡಿಯವರಾಗಿರುವ. ಡಾ. ಸುಧಾಕರ್ ಅವರು ವಿಟ್ಲ ಮತ್ತು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು […]