Blog Archive

ವಿಳಂಬಧೋರಣೆ ಭ್ರಷ್ಟಾಚಾರಕ್ಕೆ ಸಮಾನ: ಜಿಲ್ಲಾಧಿಕಾರಿ

Monday, October 27th, 2014
AB Ibrahim

ಮಂಗಳೂರು : ಸಾರ್ವಜನಿಕ ಕರ್ತವ್ಯ ನಿರ್ವಹಣೆಯಲ್ಲಿ ನಿಧಾನಗತಿ ಅನುಸರಿಸುವುದು ಮತ್ತು ಸೇವೆಯನ್ನು ಒದಗಿಸುವುದರಲ್ಲಿ ವಿಳಂಭವಾಗಿಸುವುದು ಭ್ರಷ್ಟಾಚಾರಕ್ಕೆ ಸಮಾನವಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭ್ರಾಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 27ರಿಂದ ನವೆಂಬರ್ 1ರವರೆಗೆ ನಡೆಯಲಿರುವ ಜಾಗೃತಿ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ದಕ್ಷ ಆಡಳಿತ ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಭ್ರಷ್ಟಾಚಾರವು ದೊಡ್ಡ ಪಿಡುಗಾಗಿದೆ. ಆದರೆ, ಭ್ರಷ್ಟಾಚಾರದೊಂದಿಗೆ ಹೊಂದಾಣಿಕೆಯು ಉತ್ತಮ ಸಮಾಜ ನಿರ್ಮಾಣಕ್ಕೆ […]

ಐ.ಎ.ಎಸ್. ಅಧಿಕಾರಿ ರಶ್ಮೀ ಮಹೇಶ್ ಹಲ್ಲೆಗೆ ಎಬಿವಿಪಿ ಖಂಡನೆ

Saturday, October 18th, 2014
abvp

ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ದಕ್ಷ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಹಲ್ಲೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಭ್ರಷ್ಟಾಚಾರವನ್ನು ನಿಯಂತ್ರಣದಲ್ಲಿ ಇಡಬೇಕಾದ ಸರ್ಕಾರವೇ ಭ್ರಷ್ಟಾಚಾರದ ಪರನಿಂತು ದಕ್ಷ ಅಧಿಕಾರಿಗೆ ಹಲ್ಲೆಯಾದಾಗ ಪೋಲೀಸ್ ಅಧಿಕಾರಿಗಳು ಇದ್ದರೂ ತಡೆಯಲಾಗದಿರುವುದು ವಿಷಾದನೀಯ. ಈ ವ್ಯವಸ್ಥೆಯನ್ನು ಸಾಮಾನ್ಯ ಜನರು ಸಹ ತಲೆ ತಗ್ಗಿಸುವಂತೆ ಮಾಡಿದೆ. ಈ ಘಟನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಗಂಭೀರವಾಗಿ ತೆಗೆದುಕೊಂಡು ಹಲ್ಲೆ ನಡೆಸಿದ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಿ, ಮುಂದೆಂದೂ […]

ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ದಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Monday, September 30th, 2013
yettina-hole

ಮಂಗಳೂರು : ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ದಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಆಡಳಿತಕ್ಕೆ ಬಂದಮೇಲೆ ಕಣ್ಣಿಗೆ ಕಾಣುವ ರೀತಿಯಲ್ಲಿ ಬಲಾವಣೆ ನಡೆಯಬೇಕಾಗಿದೆ. ಕಾನೂನು ಸುವ್ಯವಸ್ಥೆ, ಜನರಿಗೆ ನ್ಯಾಯ ಒದಗಿಸುವಂತಹದು ಹಾಗೂ ಇಂತಹ ಹಲವಾರು ಜನಪರ ಕಾರ್ಯಗಳ ಫಲಿತಾಂಶವನ್ನು ಜನಸಾಮಾನ್ಯರಿಗೆ ನೀಡುವಲ್ಲಿ ಡಿಸಿ, ಸಿ‌ಒ, ಹಾಗೂ ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಿದರೆ ಜನರ ಸಮಸ್ಯೆ ಪರಿಹಾರ ಮಾಡಲು ಸಾಧ್ಯ ತಿಳಿಸಿದರು. […]

ರಾಜ್ಯದಲ್ಲಾಗಲೀ, ಸ್ಥಳೀಯ ಸಂಸ್ಥೆಗಳಲ್ಲಾಗಲೀ ಅಧಿಕಾರದಲ್ಲಿರುವ ಅರ್ಹತೆಯನ್ನು ಬಿಜೆಪಿ ಕಳೆದುಕೊಂಡಿದೆ : ಜನಾರ್ಧನ ಪೂಜಾರಿ

Thursday, February 28th, 2013
BJP in polls

ಮಂಗಳೂರು : ರಾಜ್ಯದಲ್ಲಿ 5 ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಪಕ್ಷವು ಇನ್ನು ಮುಂದೆ ಅಧಿಕಾರದಲ್ಲಿರುವ ಹಕ್ಕನ್ನು ಕಳೆದುಕೊಂಡಿದ್ದು, ಈ ಸರ್ಕಾರದಲ್ಲಿರುವ ಬಹಳಷ್ಟು ಮಂತ್ರಿಗಳು ಒಂದಲ್ಲ ಒಂದು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ, ಈ ಮೂಲಕ ಬಿಜೆಪಿಯು ರಾಜ್ಯದಲ್ಲಾಗಲೀ, ಸ್ಥಳೀಯ ಸಂಸ್ಥೆಗಳಲ್ಲಾಗಲೀ ಅಧಿಕಾರದಲ್ಲಿರುವ ಅರ್ಹತೆಯನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಆರೋಪಿಸಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ,  ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿದ್ದು, […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 15 ರಿಂದ ಕಾರ್ಯಾರಂಭಿಸಲಿರುವ ಆಮ್ ಆದ್ಮಿ ಪಾರ್ಟಿ

Thursday, February 14th, 2013
Aam Admi Party

ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಜನಲೋಕಪಾಲ ಮಸೂದೆಯೆ ಸೂಕ್ತ ಎಂದು ಹೇಳಿದ ಆರ್ ಟಿಐ ಕಾರಯಕರ್ತ ಅರವಿಂದ್ ಕೆಜ್ರೀವಾಲರ ಆಮ್ ಆದ್ಮಿ ಪಕ್ಷ ಫೆಬ್ರವರಿ 15 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾರಂಭಿಸಲಿದೆ ಎಂದು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಎಸ್. ನಂದಗೋಪಾಲ್ ತಿಳಿಸಿದರು. ಅವರು ನಿನ್ನೆ ಪತ್ರಿಕಾಭಾವನದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಪ್ರಾರಂಭವಾದ ಪಕ್ಷವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ […]

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ರಾಜ್ಯದಲ್ಲಿ ಲೋಕಾಯುಕ್ತ ಹುದ್ದೆ ಭರ್ತಿ ಮಾಡುಲು ಮನವಿ

Tuesday, January 8th, 2013
Cong Human Rights Cell

ಮಂಗಳೂರು : ಲೋಕಾಯುಕ್ತರ ಹುದ್ದೆ ರಾಜ್ಯದಲ್ಲಿ ಸುಮಾರು ಒಂದೂವರೆ ವರ್ಷಗಳ ಕಾಲದಿಂದ ಖಾಲಿಯಿದ್ದು ಬಿಜೆಪಿ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸಮಯ ಕಳೆಯುತ್ತಿದೆ. ಬಿಜೆಪಿ ರಾಷ್ಟ್ರ ನಾಯಕರು, ಮುಖಂಡರು ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಇವರು ಜನರಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಇಬ್ರಾಹಿಂ ಕೋಡಿಜಾಲ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಿನ್ನೆ ರಾಜ್ಯದಲ್ಲಿ ಲೋಕಾಯುಕ್ತರನ್ನು, ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ […]

ಭಾರತಕ್ಕೆ ಜಗತ್ತಿನಲ್ಲಿ ಅಗ್ರಸ್ಥಾನ ದೊರಕಲು ಭ್ರಷ್ಟಾಚಾರ ತೊಲಗಬೇಕು : ಆಡ್ವಾಣಿ

Tuesday, November 1st, 2011
LK Advani Janachetana yatra

ಮಂಗಳೂರು: ಭ್ರಷ್ಟಾಚಾರ ವಿರೋಧಿಸಿ ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಆಡ್ವಾಣಿಯವರು ಕೈಗೊಂಡಿರುವ ರಾಷ್ಟ್ರೀಯ ಜನ ಚೇತನಾ ಯಾತ್ರೆಯು ಸೋಮವಾರ ನಗರವನ್ನು ತಲುಪಿತು .  ಮಂಗಳೂರಿನ  ಕೇಂದ್ರ ಮೈದಾನಿನಲ್ಲಿ ನಡೆದ  ಬೃಹತ್‌ ಸಮಾವೇಶದಲ್ಲಿ ಜಿಲ್ಲೆಯ ವಿವಿದೆಡೆಗಳಿಂದ ಬಂದ ಅಡ್ವಾಣಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ನೆರೆದಿದ್ದರು. ಜನಚೇತನಾ ರಥ ಮಂಗಳೂರು ತಲುಪುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿದರು. ಭ್ರಷ್ಟಾಚಾರವನ್ನು ತೊಲಗಿಸಿ, ವಿದೇಶದಲ್ಲಿರುವ ಕಪ್ಪು ಹಣವನ್ನು ಹಿಂದೆ ತಂದು ಜಗತ್ತಿನ ಅಗ್ರಸ್ಥಾನದ ದೇಶವನ್ನಾಗಿ ಭಾರತವನ್ನು ರೂಪಿಸಲು ದೇಶದ ಜನತೆ ಪಣತೊಡಬೇಕು ಎಂದು ಬಿಜೆಪಿ […]

ಶ್ರೀಮಂತಿಕೆ ಹೊಂದಲು ಭ್ರಷ್ಟಾಚಾರದ ಆದಿ ಹಿಡಿಯುವುದು ತಪ್ಪು : ನ್ಯಾ| ಹೆಗೆಡೆ

Sunday, October 16th, 2011
Anti-Corruption

ಮಂಗಳೂರು: ಭ್ರಷ್ಟಾಚಾರ ವಿರೋಧಿ ಸಮಿತಿ ಮಂಗಳೂರು ಹಾಗೂ ಕೆನರಾ ಕಾಲೇಜಿನ ಸಹಯೋಗದಲ್ಲಿ ನಗರದಲ್ಲಿ ಶನಿವಾರ ಟಿ.ವಿ ರಮಣ ಪೈ ಹಾಲ್ ನಲ್ಲಿ ಜರಗಿದ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ಸ್ವೀಕಾರ ಸಮಾರಂಭವನ್ನು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ, ಮಾಜಿ ಲೋಕಾಯುಕ್ತ ನ್ಯಾ| ಎನ್‌. ಸಂತೋಷ್‌ ಕುಮಾರ್ ಹೆಗೆಡೆ ಅವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಭ್ರಷ್ಟಾಚಾರ ಹಾಗೂ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು, ಯುವಜನತೆ ಎಚ್ಚೆತ್ತುಕೊಂಡು ಹೋರಾಟ ನಡೆಸದಿದ್ದರೆ ಈ ದೇಶ ಭವಿಷ್ಯದಲ್ಲಿ ದೊಡ್ಡ […]

ಎಲ್‌.ಕೆ. ಆಡ್ವಾಣಿ ರಥಯಾತ್ರೆ ಹಾಸ್ಯಾಸ್ಪದ : ವಿಜಯ ಕುಮಾರ್‌ ಶೆಟ್ಟಿ

Saturday, September 17th, 2011
Vijayakumar shetty

ಮಂಗಳೂರು : ಎಲ್‌.ಕೆ. ಆಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ಕೈಗೊಂಡಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ದೇಶದಲ್ಲೇ ಭ್ರಷ್ಟಾಚಾರದಲ್ಲಿ ಅಗ್ರಸ್ಥಾನದಲ್ಲಿರುವ ರಾಜ್ಯ ಕರ್ನಾಟಕ ಎಂದು ಕುಖ್ಯಾತಿಗೆ ಒಳಗಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಜನಾರ್ದನ ರೆಡ್ಡಿ ಇವರೆಲ್ಲ ಹಲವು ಹಗರಣಗಳಲ್ಲಿ ಭಾಗಿಯಾಗಿ ಜೈಲು ಸೇರಬೇಕಾಯಿತು. ನಗರ ಪಾಲಿಕೆಯಲ್ಲಿಯೂ ಆಡಳಿತಯಂತ್ರ ಸಂಪೂರ್ಣ ಕುಸಿದಿದೆ. ಖಾಲಿ […]

ಭ್ರಷ್ಟಾಚಾರದ ವಿರುದ್ದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

Saturday, August 27th, 2011
ABVP-protst/ ಎ.ಬಿ.ವಿ.ಪಿ ಪ್ರತಿಭಟನೆ

ಮಂಗಳೂರು : ನಗರದ ಕೆ.ಪಿ.ಟಿ. ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಬಸವೇಶ್ವರ ವೃತ್ತದಲ್ಲಿ ಮತ್ತು ಹಂಪನಕಟ್ಟೆ ಸಿಗ್ನಲ್‌ ವೃತ್ತದಲ್ಲಿ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಹಾಗೂ ಜನ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಎ.ಬಿ.ವಿ.ಪಿ. ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಬಿ.ವಿ.ಪಿ. ಮಂಗಳೂರು ನಗರ ಸಂಘಟನಾ ಕಾರ್ಯದರ್ಶಿ ವಿನಯ್‌ ಮತ್ತು ಮಿಥೇಶ್‌ ನೇತೃತ್ವ ವಹಿಸಿದ್ದರು. ಹಂಪನಕಟ್ಟೆ ಸಿಗ್ನಲ್‌ ವೃತ್ತದಲ್ಲಿ ಎ.ಬಿ.ವಿ.ಪಿ. ದ.ಕ. […]