Blog Archive

ನಗರದಲ್ಲಿ ಆರ್‌ಸಿ-ಕೆಎಸ್‌ಸಿಎ ಕ್ರಿಕೆಟ್‌ ಅಕಾಡೆಮಿಗೆ ಚಾಲನೆ

Tuesday, December 11th, 2012
Cricket Academy Mangalore

ಮಂಗಳೂರು :ಮಂಗಳೂರಿನ ಕ್ರಿಕೆಟ್ ಅಭಿಮಾನಿಗಳು ಬಹಳ ದಿನಗಳಿಂದ ಕಾದು ಕುಳಿತ್ತಿದ್ದ ಆರ್‌ಸಿ-ಕೆಎಸ್‌ಸಿಎ ಕ್ರಿಕೆಟ್‌ ಆಕಾಡೆಮಿ ಸೋಮವಾರ ನಗರದ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಎಂಡ್ ಮ್ಯಾನೇಜ್‌ಮೆಂಟ್‌ನ ಆವರಣದಲ್ಲಿ ಉದ್ಘಾಟನೆಗೊಂಡಿತು. ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿ ಪ್ರೊ|. ಡಾ| ಎಂ. ಶಾಂತಾರಾಮ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ದ.ಕನ್ನಡ ಜಿಲ್ಲೆ ಬ್ಯಾಂಕಿಂಗ್‌, ಶಿಕ್ಷಣ, ಉದ್ದಿಮೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತನ್ನ ಹಿರಿಮೆಯನ್ನು ಸಾಧಿಸಿದೆ ಆದರೆ ಕ್ರಿಕೆಟ್‌ ಕ್ಷೇತ್ರದಲ್ಲಿ ಹಿಂದುಳಿದಿದೆ. ಇದಕ್ಕೆ ಮುಖ್ಯ ಕಾರಣ ಮೂಲಭೂತ ಸೌಲಭ್ಯಗಳ ಕೊರತೆ. ಇದೀಗ […]

ಜುವೆಲ್ಲರಿಗೆ ಕನ್ನ ಲಕ್ಷ ರೂಪಾಯಿ ಮೌಲ್ಯದ ಆಭರಣಗಳ ಕಳವು

Tuesday, December 11th, 2012
Manjushree Jewellers

ಮಂಗಳೂರು :ಭಾನುವಾರ ರಾತ್ರಿ ನಗರದ ಲೋವರ್ ಬೆಂದೂರ್‌ನ ಮಂಜುಶ್ರೀ ಜುವೆಲ್ಲರ್ಸ್‌ಗೆ ನುಗ್ಗಿದ ಕಳ್ಳರು ಸುಮಾರು 7.3 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದಾರೆ. ಜುವೆಲ್ಲರಿ ಹಿಂಬದಿ ಒಂದು ಕಿರಿದಾದ ದಾರಿ ಇದ್ದು ಈ ದಾರಿಯಿಂದ ಬಂದ ಕಳ್ಳರು ಗೋಡೆಯನ್ನು ಕೊರೆದು ಒಳನುಗ್ಗಿದ್ದಾರೆ. ಅಂಗಡಿ ಮಾಲೀಕರಾದ ಮಂಜುನಾಥ ಶೇಟ್ ಭಾನುವಾರ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಎಂದಿನಂತೆ ಅಂಗಡಿ ಬಾಗಿಲು ತೆರೆದು ನೋಡಿದಾಗ ಒಳಗಡೆ […]

ಇಂಧನ ಟ್ಯಾಂಕರ್ ಗೆ ಕಣ್ಣ ಹಾಕಿ ಹಣ ದೋಚುತ್ತಿದ್ದ ಜಾಲ ಪತ್ತೆ

Tuesday, December 11th, 2012
Fuel theft racket

ಮಂಗಳೂರು :ಪೆಟ್ರೋಲ್ ಟ್ಯಾಂಕರ್ ನ ಒಳಭಾಗದಲ್ಲಿ ರಹಸ್ಯವಾಗಿ ಮತ್ತೊಂದು ಟ್ಯಾಂಕ್ ನಿರ್ಮಿಸಿ ಪೆಟ್ರೋಲ್ ಸಂಸ್ಥೆ ಹಾಗೂ ಬಂಕ್ ಗಳಿಗೆ ವಂಚಿಸಿ, ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಕಳವು ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಪತ್ತೆಹಚ್ಚುವ ಮೂಲಕ ಬೃಹತ್ ಕಾರ್ಯಚರಣೆ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 69 ಲಕ್ಷ ರೂ. ಮೌಲ್ಯದ 5 ಟ್ಯಾಂಕರ್ ಹಾಗೂ ನಗದು 3 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕು ಮಾಣಿ ಮನೆ […]

ಕಲಾಂಗಣ್‌ನಲ್ಲಿ 4 ನೇ ವಿಶ್ವ ಕೊಂಕಣಿ ಸಂಗೀತ ಪ್ರಶಸ್ತಿ ಪ್ರದಾನ ಸಮಾರಂಭ

Monday, December 10th, 2012
Global Konkani Music Award

ಮಂಗಳೂರು : ಮಂಗಳೂರು ಶಕ್ತಿನಗರದ ಕಲಾಂಗಣ್‌ ಸಭಾಂಗಣದಲ್ಲಿ ಮಾಂಡ್ ಸೋಭಾಣ್ ಸಂಸ್ಥೆ ವತಿಯಿಂದ ನಾಲ್ಕನೇ ವಿಶ್ವ ಕೊಂಕಣಿ ಸಂಗೀತ ಪ್ರಶಸ್ತಿ ಪ್ರದಾನ ಸಮಾರಂಭವು ಭಾನುವಾರ ಸಂಜೆ ನಡೆಯಿತು. 2011ರ ಅತ್ಯುತ್ತಮ ಮಹಿಳಾ ಗಾಯಕಿ ಪ್ರಶಸ್ತಿಯನ್ನು ಲವಿಟಾ ಲೋಬೊ ಹಾಗೂ ಅತ್ಯುತ್ತಮ ಪುರುಷ ಗಾಯಕ ಪ್ರಶಸ್ತಿಯನ್ನು ಬೆಂಗಳೂರಿನ ಬುಟ್ಟೋ ಪಡೆದುಕೊಂಡರು. ಅತ್ಯುತ್ತಮ ಸಂಗೀತ ಸಾಹಿತ್ಯ ಪ್ರಶಸ್ತಿಯನ್ನು ಅಂಜಲೋರಿನ ರೋಶನ್ ಡಿಸೋಜ, ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ದಿವಂಗತ ಚಾಫ್ರಾ ಡಿಕೋಸ್ತಾ, ಅತ್ಯುತ್ತಮ ಸಂಗೀತ ಸಂಯೋಜಕ ಪ್ರಶಸ್ತಿಯನ್ನು ಹೊನ್ನಾವರದ ಕಜೆತನ್ […]

ವಾರ್ತಾ ಇಲಾಖೆಯ ಪ್ರಾಯೋಜಕತ್ವದಲ್ಲಿನ ವಿಧಾನ ಸಭೆ-60 ಛಾಯಾಚಿತ್ರ ಪ್ರದರ್ಶನ

Saturday, December 8th, 2012
Karnataka Vidhana Sabha 60

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಡಿಸೆಂಬರ್ 7 ರಂದು ವಿಧಾನ ಸೌಧದ ಅಪರೂಪದ ಛಾಯಾಚಿತ್ರಗಳ ಛಾಯಾಚಿತ್ರ ಪ್ರದರ್ಶನ ವಿಧಾನ ಸಭೆ-60 ನಡೆಯಿತು. ರಾಜ್ಯ ವಿಧಾನ ಸಭೆಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ವಾರ್ತಾ ಇಲಾಖೆಯ ಪ್ರಾಯೋಜಕತ್ವದಲ್ಲಿ ಈ ಪ್ರದರ್ಶನ ಏರ್ಪಡಿಸಲಾಗಿತ್ತು. ವಿಧಾನಸೌಧ ನಿರ್ಮಾಣದಿಂದ ಹಿಡಿದು, ವಿವಿಧ ಹಂತದ ಕಾಮಗಾರಿಗಳ ಛಾಯಾಚಿತ್ರಗಳು, ವಿಧಾನ ಸೌಧ ನಿರ್ಮಾಣದ ಕಾರ್ಯನೆರವೇರಿಸಿದ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ, ರಾಜ್ಯಪಾಲ ಜಯಚಾಮರಾಜೇಂದ್ರ ಒಡೆಯರ್ ರಿಂದ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿನ ಛಾಯಾಚಿತ್ರಗಳು […]

ನಗರದ ಕಲ್ಲಾಪು ಬಳಿ ಬಸ್ -ಜೀಪ್ ಡಿಕ್ಕಿ ಆರುಮಂದಿಗೆ ಗಾಯ

Friday, December 7th, 2012
Jeep bus hit at Kallaup

ಮಂಗಳೂರು : ಗುರುವಾರ ಬೆಳಗ್ಗೆ ತೊಕ್ಕೊಟ್ಟು ಸಮೀಪ ಕಲ್ಲಾಪು ಬಳಿ ಬಸ್ ಮತ್ತು ಕಾರ್ ನಡುವೆ ಮುಖಾಮುಕಿ ಸಂಭವಿಸಿದ ಡಿಕ್ಕಿಯಲ್ಲಿ ಜೀಪ್ ನಲ್ಲಿದ್ದ 6 ಮಂದಿ ಗಾಯಗೊಂಡಿದ್ದು ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ವಿದೇಶಕ್ಕೆ ತೆರಳಲಿದ್ದ ಮನೆಮಂದಿಯೊಬ್ಬರನ್ನು ಬಜ್ಪೆ ವಿಮಾನ ನಿಲ್ದಾಣಕ್ಕೆ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಕುಂಪಲದಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ ಸಿಟಿ ಬಸ್ ಡಿಕ್ಕಿ ಹೊಡೆದಿದೆ. ಕಾಸರಗೋಡು ವಿದ್ಯಾನಗರದ ನಾಸಿರ್, ಅಬ್ದುಲ್ ಕುಂಞ, ಅನ್ಫಾಲ, ಅಶ್ರಫ್, ನೌಫಾರ ಹಾಗೂ ಜೀಪ್ ಚಾಲಕ ಅಬೂಬಕರ್ ಗಾಯಾಳುಗಳಾಗಿದ್ದು ಈ […]

ಮೀನುಗಾರಿಕೆಗೆ ತೆರಳಿದ ಬೋಟ್‌ ಮುಳುಗಡೆ, ಲಕ್ಷಾಂತರ ರೂಪಾಯಿ ನಷ್ಟ

Thursday, December 6th, 2012
Boat collision

ಮಂಗಳೂರು : ಮೀನುಗಾರಿಕೆಗೆ ತೆರಳಿದ ಎಫ್‌. ಎಂ. ಫಯಾಜ್‌ ಎಂಬುವವರಿಗೆ ಸೇರಿದ ಬೋಟೊಂದು ಮಂಗಳವಾರ ಮುಳುಗಡೆಗೊಂಡು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ . ಮಂಗಳವಾರ ಮಲ್ಪೆ ಬಂದರಿನಿಂದ ಹೊರಟ ಬೋಟ್‌ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಂದರಿನ ನೇರ ತೆಲ್‌ಕಲ್‌ ಸಮೀಪ ಸಾಗುತ್ತಿದ್ದಾಗ ಬೋಟ್‌ನ ಅಡಿಭಾಗ ಕಲ್ಲಿಗೆ ತಾಗಿ ಹಲಗೆ ಮುರಿದು ನೀರು ಒಳನುಗ್ಗಿ ಬೋಟ್‌ ಮುಳುಗಡೆಗೊಂಡಿದೆ. ಬೋಟ್‌ನಲ್ಲಿದ್ದ 7 ಮಂದಿ ಮೀನುಗಾರರು ಹಾಗೂ ಬೋಟನ್ನು ಸಮೀಪದಲ್ಲಿದ್ದ ಹನುಮಬೆನಕ ಬೋಟಿನವರು ರಕ್ಷಿಸಿ ದಡ ಸೇರಿಸಿದ್ದಾರೆ. ಸುಮಾರು […]

ವೇತನ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ನಗರದಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Thursday, December 6th, 2012
Asha Workers

ಮಂಗಳೂರು :ಭಾರತೀಯ ಮಜ್ದೂರ್ ಸಂಘದ ಸಂಯೋಜನೆಗೆ ಒಳಪಟ್ಟ ಭಾರತೀಯ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಮೊದಲು ನಗರದ ಭಾರತೀಯ ಮಜ್ದೂರ್ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಆಶಾ ಕಾರ್ಯಕರ್ತೆಯರು ಕಾಲ್ನಡಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ತೆರಳಿದರು. ಭಾರತೀಯ ಮಜ್ದೂರ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸೂರ್ಯ ನಾರಾಯಣರಾವ್ ಮಾತನಾಡಿ ಸ್ವಾತಂತ್ರ್ಯ ಹೋರಾಟದ ಸಂದರ್ಭ ಮಹಾತ್ಮ ಗಾಂಧಿಯವರು ಪ್ರತಿ ಕಾರ್ಮಿಕರಿಗೆ ಗರಿಷ್ಟ ಸೌಲಭ್ಯ ನೀಡಬೇಕು ಆಗ ಮಾತ್ರ ನಮ್ಮ […]

ಮಂಗಳೂರು : ರಿಕ್ಷಾ ಪ್ರಯಾಣ ದರ ಹೆಚ್ಚಿಸುವಂತೆ ರಿಕ್ಷಾ ಚಾಲಕರ ವಿವಿಧ ಸಂಘಟನೆಗಳಿಂದ ಜಿಲ್ಲಾಡಳಿತಕ್ಕೆ ಮನವಿ

Tuesday, December 4th, 2012
Auto drivers protest

ಮಂಗಳೂರು : ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ರಿಕ್ಷಾ ಚಾಲಕರ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ದಿನನಿತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದ್ದು ರಿಕ್ಷಾ ಪ್ರಯಾಣ ದರವು ಕಡಿಮೆ ಇರುವುದರಿಂದ ರಿಕ್ಷಾ ಚಾಲಕರು ಜೀವನ ಸಾಗಿಸಲು ಕಷ್ಟವಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತವು ಈ ಕೂಡಲೇ ರಿಕ್ಷಾ ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಲಾಯಿತು. ದಿನ ಬಳಕೆಯ ವಸ್ತುಗಳ ಬೆಲೆ, ರಿಕ್ಷಾ ಬಿಡಿ ಭಾಗಗಳು, ವಿಮೆ ಹಾಗೂ ಇನ್ನಿತರ ವಸ್ತುಗಳ ಬೆಲೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ರಿಕ್ಷಾ […]

ಬಟ್ಟೆ ಚೀಲಕ್ಕೆ ಬದಲಾಗಿ ಪರ್ಯಾಯ ಚೀಲ ಒದಗಿಸುವಂತೆ ಸಲಹೆ

Tuesday, December 4th, 2012
Distribution of Cloth Bags

ಮಂಗಳೂರು :ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳ ಉಪಯೋಗ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ನಿಷೇಧವನ್ನು ಈಗಾಗಲೇ ಜಾರಿಗೊಳಿಸಲಾಗಿದ್ದು, ಆ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಸೋಮವಾರ ನಿರ್ಗಮನ ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ ರವರು ನಗರದ ಸ್ಟೇಟ್‌ಬ್ಯಾಂಕ್‌ ಬಳಿ ಇರುವ ಮೀನು ಮಾರುಕಟ್ಟೆಯಲ್ಲಿ ಬಟ್ಟೆ ಚೀಲ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ದ.ಕ.ಜಿಲ್ಲಾಧಿಕಾರಿಗಳು ಮೀನು ಮಾರುಕಟ್ಟೆಗೆ ಇತರ ಅಧಿಕಾರಿಗಳೊಂದಿಗೆ ತೆರಳಿ ಅಲ್ಲಿನ ವ್ಯಾಪಾರಸ್ಥರಿಗೆ ಬಟ್ಟೆ ಕೈ ಚೀಲ ವಿತರಿಸಲು ಮುಂದಾದಾಗ ಪ್ಲಾಸ್ಟಿಕ್ ನಿಷೇಧದ ನಿರ್ಧಾರದಿಂದ ಆಕ್ರೋಶಗೊಂಡಿದ್ದ ಮೀನು ಮಾರಾಟ […]