Blog Archive

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಆಡಳಿತಾವಧಿಯಲ್ಲಿ ಸಾಕಾರಗೊಂಡಿದೆ : ಡಿ.ವಿ.ಎಸ್

Friday, March 1st, 2013
BJP Election Campaign

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಹಿನ್ನಲೆಯಲ್ಲಿ ಮಂಗಳೂರು ಪುರಭವನದಲ್ಲಿ ಗುರುವಾರ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ ೨೫ ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಕೇವಲ ೫ ವರ್ಷಗಳಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಸಾಕಾರಗೊಂಡಿದೆ, ಕಳೆದ ೫ ವರ್ಷಗಳ ಆಡಳಿತದಲ್ಲಿ ಬಿಜೆಪಿ ರೂಪಾಯಿ ೫೨೦ ಕೋಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಹಿಂದಿನ ೨೫ ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್ […]

ಮಹಾನಗರ ಪಾಲಿಕೆ ಚುನಾವಣೆ ಜೆಡಿಎಸ್ ನಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

Thursday, February 28th, 2013
ಮಹಾನಗರ ಪಾಲಿಕೆ ಚುನಾವಣೆ ಜೆಡಿಎಸ್ ನಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ಮಾರ್ಚ್  7ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಜಾತ್ಯಾತೀತ ಜನತಾ ದಳದ ರಾಜ್ಯ ಉಪಾಧ್ಯಕ್ಷ- ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಜಾತ್ಯಾತೀತ ಜನತಾದಳದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಜೆಡಿ‌ಎಸ್, ಮನಪಾ ವ್ಯಾಪ್ತಿಯ 60ವಾರ್ಡ್‌ಗಳಿಗೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳನ್ನು ಗಮನದಲ್ಲಿ ಇರಿಸಿಕೊಂಡು ವಿವಿಧ ನಾಗರಿಕ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾಗರಾಜ […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

Thursday, February 21st, 2013
MCC administrator

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರು ಇಂದು ಪಾಲಿಕೆಯ ಆಯುಕ್ತರಾಗಿರುವ ಹರೀಶ್ ಕುಮಾರ್ ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು. ಮಾರ್ಚ್ 7ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು  ನಡೆಸಲು ಚುನಾವಣಾ ಆಯೋಗವು ನಿರ್ಧರಿಸಿರುವುದರಿಂದ, ಹಾಗು ಈಗಾಗಲೇ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳ ಅಧಿಕಾರ ವ್ಯಾಪ್ತಿಯು ಮುಗಿದಿರುವುದರಿಂದ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರು ಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ಮಾತನಾಡಿದ ಅವರು ಈಗಾಗಲೇ ಪ್ರಾರಂಭವಾಗಿರುವ ಎಲ್ಲಾ ಕಾಮಗಾರಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು […]

ಮೇಯರ್, ಕಮಿಷನರ್ ನಡುವೆ ಶೀತಲ ಸಮರ

Wednesday, February 13th, 2013
Mayor vs comissioner

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಗುಲ್ಜಾರ್ ಬಾನು ಮತ್ತು ಕಮಿಷನರ್ ಡಾ. ಹರೀಶ್ ಕುಮಾರ್ ಮಧ್ಯೆ ಬಿರುಕು ಮೂಡಿದೆಯೇ? ಹೌದು ಎನ್ನುತ್ತದೆ, ಮೂಲಗಳು. ತನ್ಮಧ್ಯೆ ತನ್ನನ್ನು ನಿರ್ಲಕ್ಷಿಸಲು, ತನ್ನ ಹುದ್ದೆಗೆ ಅಗೌರವವಾಗಲು ಕಮಿಷನರ್ರೇ ಕಾರಣ ಎಂದು ಗುಲ್ಜಾರ್ ಬಾನು ಹೇಳಿಕೊಳ್ಳುತ್ತಿರುವುದು ಕೂಡ ಗುಟ್ಟಾಗಿ ಉಳಿದಿಲ್ಲ. ಮನಪಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಹೇರುವ ಸಂದರ್ಭ ಕಮಿಷನರ್ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ… ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಸಂದರ್ಭ ಜಿಲ್ಲಾಡಳಿತ ಮುದ್ರಿಸಿದ ಆಮಂತ್ರಣ ಪತ್ರಿಕೆಯಲ್ಲಿ ತನ್ನ ಹೆಸರು […]

ಮಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಬ್ಯಾಂಕ್ ಗಳ ಜಂಟಿ ಯೋಜನೆಯಲ್ಲಿ ನಗರದಲ್ಲಿ ಭಿತ್ತಿ ಚಿತ್ರ ಅಭಿಯಾನಕ್ಕೆ ಚಾಲನೆ

Tuesday, February 12th, 2013
novel project in city

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಬ್ಯಾಂಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಗ್ಗೆ ನಗರದ ಪ್ರಮುಖ ಸ್ಥಳಗಳಲ್ಲಿನ ಆವರಣ ಗೋಡೆಗಳಲ್ಲಿ ಭಿತ್ತಿ ಚಿತ್ರಗಳನ್ನು ರಚಿಸುವ ಅಭಿಯಾನಕ್ಕೆ  ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಪಿ.ಜಯರಾಮ್ ಭಟ್  ಚಾಲನೆ ನೀಡಿದರು. ನಗರ ಸೌಂದರ್ಯ ಮತ್ತು ನಗರ ನೈರ್ಮಲ್ಯವನ್ನು ಕಾಪಾಡುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಬ್ಯಾಂಕ್ ಈ ಅಭಿಯಾನವನ್ನು ಹಮ್ಮಿಕೊಂಡಿವೆ. ಈ ಸಂದರ್ಭ ಮಾತನಾಡಿದ ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಪಿ.ಜಯರಾಮ್ ಭಟ್  ನಗರದ ಸೌಂದರ್ಯವನ್ನು ಕಾಪಾಡುವ ಉದ್ದೇಶದಿಂದ […]

ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಕಷ್ಟ ಸಾಧ್ಯ ಮನಪಾ ಆಯುಕ್ತ

Friday, December 21st, 2012
Dr Harish Kumar

ಮಂಗಳೂರು :ಪ್ಲಾಸ್ಟಿಕ್ ನ್ನು ನಿಷೇಧಿಸಿ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆಯಾದರೂ ಇದನ್ನು ಸಂಪೂರ್ಣವಾಗಿ ನಿಷೇಧಿಸುವ ಮತ್ತು ಇದಕ್ಕೆ ಸೂಕ್ತವಾದ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಶ್ರಮದಾಯಕವಾದ ಕೆಲಸ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್ ಅಭಿಪ್ರಾಯಪಟ್ಟರು. ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಈ ಹಿಂದಿನ ಜಿಲ್ಲಾಧಿಕಾರಿಯವರು ನಗರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಕಾನೂನು ಜಾರಿಗೊಳಿಸಿ ಆದೇಶ ನೀಡಿದ್ದರೂ ಇದನ್ನು ಜಾರಿಗೊಳಿಸಲು ನ್ಯಾಯಾಲಯದ ತೀರ್ಮಾನ ಬರಬೇಕಿದೆ ಎಂದರು. ಪ್ಲಾಸ್ಟಿಕ್ ಕೈ ಚೀಲಗಳಿಗೆ […]

ಪ್ರತಿ ಮನೆಗೂ ನೀರಿನ ಮೀಟರ್‌ ಕಡ್ಡಾಯಗೊಳಿಸಿ : ಎ.ಜಿ. ಕೊಡ್ಗಿ

Wednesday, May 9th, 2012
Ag Kodgi Mcc

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೂರನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನಗಳ ಪರಿಶೀಲನಾ ಸಭೆಯು ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನ ಆಯೋಗದ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕುಡಿಯಲು ಉಪಯೋಗಿಸಬೇಕಾದ ನೀರನ್ನು ಶ್ರೀಮಂತರು ಕೃಷಿ ಮತ್ತಿತರ ಉದ್ದೇಶಗಳಿಗೂ ಬಳಸುತ್ತಿರುವುದು ಕಂಡುಬರುತ್ತಿದೆ. ನೀರಿನ ದುರುಪಯೋಗ ತಡೆದು ಎಲ್ಲರಿಗೂ ಮೀಟರ್‌ ಕಡ್ಡಾಯಗೊಳಿಸಲು ಪಾಲಿಕೆ ಕಠಿನ ಕ್ರಮ ಕೈಗೊಳ್ಳಬೇಕು. ಪಾಲಿಕೆಯ ವ್ಯಾಪ್ತಿಯಲ್ಲಿ ಹಲವೆಡೆ ಬಡವರ ಹೆಸರಿನಲ್ಲಿ ಕುಡಿಯುವ ನೀರಿನ ಅಪವ್ಯಯವಾಗುತ್ತಿದೆ ಎಂದು ಎ.ಜಿ. ಕೊಡ್ಗಿ […]

ಮೇಯರ್‌ ಗುಲ್ಜಾರ್‌ಬಾನು ಅವರಿಂದ ಮಂಗಳೂರು ಪಾಲಿಕೆಯ ಬಜೆಟ್ ಮಂಡನೆ

Saturday, March 31st, 2012
MCC Budjet

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್‌ ಗುಲ್ಜಾರ್‌ಬಾನು ಅವರು 2012-13 ರ ಸಾಲಿನ 228.39 ಕೋ.ರೂ. ಮೊತ್ತದ ಬಜೆಟ್‌ ಶುಕ್ರವಾರ ಮಂಡಿಸಿದರು. ಬಹುಮತ ವಿರುವ ಬಿಜೆಪಿ ಮತ್ತು ಬಹುಮತ ವಿಲ್ಲದ ಕಾಂಗ್ರೆಸ್ಸ್ ನಡುವೆ ವಾದ ವಾಗ್ವದಗಳು ನಡೆದು ಬಜೆಟ್ ಮಂಡನೆಯಾಯಿತು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪಾಲಿಕೆಯ ಬಜೆಟ್‌ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸದನಕ್ಕೆ ಹಾಜರಾದರು. ಬಿಜೆಪಿ ಸದಸ್ಯೆ ಶಾಂತಾ ಅವರಿಗೆ ಬಜೆಟ್‌ ಮಂಡಿಸುವಂತೆ ಮೇಯರ್‌ ಸೂಚಿಸಿದರು. ಶಾಂತಾ ಅವರು ಬಜೆಟ್‌ ಓದಲು ಆರಂಭಿಸುತ್ತಿದ್ದಂತೆ […]

ನೋ ಪಾರ್ಕಿಂಗ್‌ : ಪಾಲಿಕೆಯ ಆರೋಗ್ಯ ಅಧಿಕಾರಿಗೆ ದಂಡ

Saturday, September 10th, 2011
Manjayya-Shetty-Car

ಮಂಗಳೂರು : ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಅವರ ವಾಹನಕ್ಕೆ ಮಂಗಳೂರು ನಗರದ ಟ್ರಾಫಿಕ್‌ ಪೊಲೀಸರು ಲಾಕ್‌ ಮಾಡಿ ಪ್ರಕರಣ ದಾಖಲಿಸುವ ಮೂಲಕ ಕಾನೂನು ಪಾಲನಾ ನಿಯಮಕ್ಕೆ ಮತ್ತೊಮ್ಮೆ ಚಾಲನೆ ನೀಡಿದ್ದಾರೆ. ಮಂಜಯ್ಯ ಶೆಟ್ಟಿ ಅವರು ಶುಕ್ರವಾರ ಸಂಜೆ 5.15 ರ ವೇಳೆಗೆ ತನ್ನ ಕಾರನ್ನು ಪಿ.ವಿ.ಎಸ್‌. ಜಂಕ್ಷನ್‌ ಬಳಿ ಎಂ.ಜಿ. ರಸ್ತೆಯಲ್ಲಿ ಮಾನಸ ಟವರ್ ಎದುರು ನಿಲ್ಲಿಸಿ ಹೋಗಿದ್ದರು. ಈ ಮಾರ್ಗವಾಗಿ ಬಂದ ಟ್ರಾಫಿಕ್‌ […]

ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಬಾಂಬ್‌ ಬೆದರಿಕೆ

Wednesday, August 31st, 2011
MCC BOMB

ಮಂಗಳೂರು : ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ಅನಾಮಧೇಯ ಪತ್ರವೊಂದು ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರ ಕಚೇರಿಗೆ ತಲುಪಿದ ಹಿನ್ನಲೆಯಲ್ಲಿ ಪೊಲೀಸರು ಪಾಲಿಕೆಯ ಕಟ್ಟಡ ವನ್ನು ತೀವ್ರ ಶೋಧ ನಡೆಸಿದರು. ಪೊಲೀಸ್‌ ಆಯುಕ್ತರಿಗೆ ಸಿಕ್ಕಿದ ಪತ್ರದಲ್ಲಿ ಪಾಲಿಕೆಯ ಕಚೇರಿಗೆ ಬಾಂಬ್‌ ಇಟ್ಟು ಸ್ಫೋಟಿಸುವುದಾಗಿ ಬರೆಯಲಾಗಿತ್ತು. ಪಾಲಿಕೆಯ ಸಾಮಾನ್ಯ ಸಭೆ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿತ್ತು. ಕೂಡಲೇ ಜಾಗೃತರಾದ ಪೊಲೀಸರು ಪಾಲಿಕೆ ಕಚೇರಿ ಹಾಗೂ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದರು. […]