ಮಂಗಳೂರು ವಿವಿ ಪರೀಕ್ಷಾ ಫಲಿತಾಂಶ- ಸ್ಪಷ್ಟೀಕರಣ

Monday, January 3rd, 2022
MuLinx

ಮಂಗಳೂರು ವಿಶ್ವವಿದ್ಯಾನಿಲಯ ಆಗಸ್ಟ್-ಸೆಪ್ಟೆಂಬರ್ ಹಾಗೂ ಸಪ್ಪೆಂಬರ್-ಅಕ್ಟೋಬರ್ 2021ರಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಫಲಿತಾಂಶಗಳ ಹಿನ್ನಲೆಯಲ್ಲಿ ಕೆಲವು ಪತ್ರಿಕೆಗಳಲ್ಲಿ ಫಲಿತಾಂಶದ ಕುರಿತಾಗಿ ಏಕಪಕ್ಷೀಯ ಅಭಿಪ್ರಾಯಗಳನ್ನೊಳಗೊಂಡ ವರದಿಗಳು ಪ್ರಕಟವಾಗಿದ್ದು, ಗೊಂದಲಕ್ಕೆ ಕಾರಣವಾಗುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯವು ಸ್ವಂತಿಕೆಯೆಡೆಗೆ ಸಾಗುವ ಉದ್ದೇಶದಿಂದ MuLinx ಎನ್ನುವ Open Source Software ನ್ನು ಬಳಸಿಕೊಂಡು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಸವಾಲುಗಳನ್ನು ಎದುರಿಸಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಿ ಮಾಡಿ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವಂತಾಗಲು ಪ್ರಯತ್ನಮಾಡಲಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಒಂದರ ನಂತರ ಒಂದಾಗಿ ನಿರಂತರವಾಗಿ ಪರೀಕ್ಷೆಗಳನ್ನು ನಡೆಸಿರುವುದರಿಂದ […]

ಅಹಂಕಾರ ನಿರಸನವೇ ಸಾಮರಸ್ಯಕ್ಕೆ ದಾರಿ : ಡಾ. ಧನಂಜಯ ಕುಂಬ್ಳೆ

Wednesday, December 1st, 2021
Kanaka Jayanthi

ಮಂಗಳೂರು: ವ್ಯಕ್ತಿ ಅಹಂಕಾರ, ಜಾತಿ, ಮತಗಳ ಅಹಂಕಾರವನ್ನು ಮೀರುವುದೇ ಸಾಮರಸ್ಯದ ಸಾಮಾಜಿಕ ವಾತಾವರಣ ಸೃಷ್ಟಿಗಿರುವ ದಾರಿ. ಕನಕ ಸಾಹಿತ್ಯ ಅಂತಹ ಸಾಮರಸ್ಯದ ಸಂದೇಶಗಳನ್ನು ಕೌಟುಂಬಿಕ, ಅಧ್ಯಾತ್ಮಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ಸಾರಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಬುಧವಾರ ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗ ಮತ್ತು  ಆಂತರಿಕ ಗುಣಮಟ್ಟ ಖಾತರಿ ಕೋಶ ಏರ್ಪಡಿಸಿದ ಕನಕದಾಸ ಜಯಂತಿ ಪ್ರಯುಕ್ತ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಕನಕದಾಸರ […]

ಮಂಗಳೂರು ವಿ.ವಿ: ಉದ್ಯೋಗಮೇಳ ಮುಂದೂಡಿಕೆ

Monday, November 15th, 2021
job fair

ಮಂಗಳೂರು ವಿಶ್ವವಿದ್ಯಾನಿಲಯದ, ವಿಶ್ವವಿದ್ಯಾನಿಲಯ ತರಬೇತಿ ಮತ್ತು ಉದ್ಯೋಗ ಕೋಶ, ಹಾಗೂ ಉದ್ಯೋಗ ಮಾಹಿತಿ ಮಾರ್ಗದರ್ಶನ ಕೇಂದ್ರದ ವತಿಯಿಂದ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನವೆಂಬರ್‌ 16  ಮತ್ತು 17 (ಮಂಗಳವಾರ ಮತ್ತು ಬುಧವಾರ) ನಡೆಯಲಿದ್ದ ಉದ್ಯೋಗಮೇಳವನ್ನು ಚುನಾವಣಾ ನೀತಿಸಂಹಿತೆಯಿಂದಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

ಮಾಸಾವಧಿಯ ಯೋಗ ಶಿಬಿರ ಸಮಾರೋಪ

Tuesday, October 19th, 2021
Yoga

ಮಂಗಳೂರು : ಜವಾಹರ್ ನವೋದಯ ವಿದ್ಯಾಲಯ, ಮುಡಿಪು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗಗಳು ಜಂಟಿಯಾಗಿ ವಿದ್ಯಾಲಯದಲ್ಲಿ ಆಯೋಜಿಸಿದ್ದ ತಿಂಗಳಾವಧಿಯ ಯೋಗ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿ ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸೂಕ್ತ ಮನೋಭಾವ, ಶಿಸ್ತುಬದ್ಧ ಜೀವನ ಅಗತ್ಯ. ಇದನ್ನು ಸಾಧಿಸಲು ಯೋಗ ಸಹಕಾರಿ, ಎಂದರು. ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಮುಖ್ಯಸ್ಥ ಕೆ ಕೃಷ್ಣ ಶರ್ಮ, […]

ಕನಕದಾಸರ ಚಿಂತನೆಗಳು ಇಂದಿಗೆ ಪ್ರಸ್ತುತ : ಎಂ.ಆರ್.ಸತ್ಯನಾರಾಯಣ

Friday, October 8th, 2021
Satyaanarayana

ಮಂಗಳೂರು: ಕನಕದಾಸರ ಸಾಮಾಜಿಕ ಮತ್ತು ಅಧ್ಯಾತ್ಮಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಕೀರ್ತನೆಯ ಮೂಲಕ ಕನಕದಾಸರನ್ನು ಜನರ ಬಳಿ ತಲುಪಿಸುವ ಕಾರ್ಯ ಆಗಬೇಕು, ಎಂದು ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ, ಗಮಕಿ ಎಂ.ಆರ್. ಸತ್ಯನಾರಾಯಣ ಅವರು ಹೇಳಿದರು. ಅವರು ಶುಕ್ರವಾರ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರದ ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. […]

ಸಾಹಿತ್ಯ ರಚನೆಯಾದರೆ ಭಾಷೆಯೂ ಬೆಳೆದಂತೆ: ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ

Thursday, September 30th, 2021
Book Release

ಮಂಗಳೂರು: ಸಾಹಿತ್ಯ ಬೆಳೆದಂತೆ ಬಾಷೆಯೂ ಬೆಳೆಯುತ್ತದೆ. ಹೀಗಾಗಿ ಎಲ್ಲಾ ಪ್ರಾಕಾರಗಳಲ್ಲಿ ಸಾಹಿತ್ಯ ರಚನೆಯಾಗಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಆಶಿಸಿದ್ದಾರೆ. ವಿ.ವಿ ಕಾಲೇಜಿನ ಡಾ.ಶಿವರಾಮ ಕಾರಂತ ಸಭಾ ಭವನದಲ್ಲಿ ಗುರುವಾರ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ನಂದಾದೀಪ ಪ್ರಕಾಶನ ಕನ್ಯಾನ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼಬೇಲಿʼ ಹಾಗೂ ʼಸಾಪೊದ ಕಣ್ಣ್ʼ ನಾಟಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೂಲತಃ ಹವ್ಯಕ ಬಾಷೆಯವರಾದ ಲೇಖಕಿ ಅಕ್ಷತಾರಾಜ್ ಪೆರ್ಲ ಅವರ […]

ಕನ್ನಡದಲ್ಲಿ ವಿಜ್ಞಾನವನ್ನು ಮಾತನಾಡುವ ಪ್ರವೃತ್ತಿ ಹೆಚ್ಚಬೇಕು: ಡಾ ಎಂ ಎಸ್ ಮೂಡಿತ್ತಾಯ

Friday, September 17th, 2021
Kannada Vijnana Sammelana

ಮಂಗಳೂರು: ವಿಜ್ಞಾನದ ಅಗತ್ಯತೆ ಜನಸಾಮಾನ್ಯನಿಗೂ ಇದೆ. ಕನ್ನಡದಲ್ಲಿ ವಿಜ್ಞಾನವನ್ನು ಮಾತನಾಡುವ ಪ್ರವೃತ್ತಿ ಹೆಚ್ಚಬೇಕು. ವಿಜ್ಞಾನದ ಆವಿಷ್ಕಾರಗಳು ಜನಸಾಮಾನ್ಯರನ್ನು ತಲುಪಲು ಪ್ರಾದೇಶಿಕ ಬಾಷೆಗಳು ಮಾಧ್ಯಮವಾಗಬೇಕು, ಎಂದು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿ ಡಾ ಎಂ ಎಸ್ ಮೂಡಿತ್ತಾಯ ಅಭಿಪ್ರಾಯಪಟ್ಟರು. ಶುಕ್ರವಾರ ನಡೆದ ಸ್ವದೇಶೀ ವಿಜ್ಞಾನ ಆಂದೋಲನ ರಾಜ್ಯ ಸರ್ಕಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಸಹಯೋಗದೊಂದಿಗೆ ಮಂಗಳಾ ಸಭಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ 16 ನೇ ಕನ್ನಡ ವಿಜ್ಞಾನ ಸಮ್ಮೇಳನದ ಸಮಾರೋಪ […]

“ಎನ್ಎಸ್ಎಸ್ ಸ್ವಯಂಸೇವಕರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶ”

Friday, September 10th, 2021
NSS

ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್)ಯ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಘಟಕಗಳು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕಗಳ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯುವ ದಿನಾಚರಣೆ- 2021 ನ್ನು ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದವು. ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಡಾ. ಅನಸೂಯ ರೈ, ಕೊವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಇರುವ ಮಿತಿಯೊಳಗೆ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಿ ಅವರಲ್ಲಿನ […]

ʼದೇಶ ಮೊದಲುʼ ಎಂಬ ಭಾವನೆ ನಮ್ಮೆಲ್ಲರಲ್ಲಿ ಮೂಡಲಿ: ಡಾ. ಶಿಕಾರಿಪುರ ಕೃಷ್ಣಮೂರ್ತಿ

Sunday, August 15th, 2021
Konaje University

ಮಂಗಳೂರು: ದೇಶದಲ್ಲಿ ಜನರ ಮೂಲಭೂತ ಅಗತ್ಯಗಳಾದ ಆಹಾರ, ನೀರು ಮತ್ತು ವಿದ್ಯೆ ಉಚಿತವಾಗಿ ಸಿಗುವಂತಾಗಬೇಕು. ಇದನ್ನು ಬಿಟ್ಟು ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿಯಿಂದ ನೋಡಿದರೆ ಸಮಾಜ ಅಧೋಗತಿಗಿಳಿಯುವುದು ಖಚಿತ, ಎಂದು ನಿವೃತ್ತ ಪ್ರಾಧ್ಯಾಪಕ, ನಟ, ಚಿಂತಕ ಡಾ. ಶಿಕಾರಿಪುರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಎನ್‌ಎಸ್‌ಎಸ್‌ ಮುಂದಾಳತ್ವದಲ್ಲಿ ಆಯೋಜಿಸಲಾಗಿದ್ದ 75 ನೇ ಸ್ವಾತಂತ್ರ್ಯೋತ್ಸವದ ಉದ್ಘಾಟನೆ (ʼಆಜಾದಿ ಕ ಅಮೃತ್‌ ಮಹೋತ್ಸವ್‌ʼ) ನೆರವೇರಿಸಿ ಮಾತನಾಡಿದ ಅವರು, ದೇಶವಾಸಿಗಳು ಸ್ವಾತಂತ್ರ್ಯದ ಮೌಲ್ಯದ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. […]

ವಾರಾಂತ್ಯ ಕರ್ಫ್ಯೂ ಹಿನ್ನೆಲೆ: ಪರೀಕ್ಷೆಗಳ ಮುಂದೂಡಿಕೆ

Thursday, August 12th, 2021
Exam

ಮಂಗಳೂರು: ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಲ್ಲಿ ಕೊವಿಡ್‌- 19 ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ವಾರಾಂತ್ಯ ಕರ್ಫ್ಯೂ ನಿಂದ ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಆಗಸ್ಟ್‌ 14 ಮತ್ತು ಆಗಸ್ಟ್‌ 28 ರ ಶನಿವಾರಗಳಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳ ದಿನಾಂಕಗಳನ್ನು ಮರುನಿಗದಿಪಡಿಸಿ, ಪರೀಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇ-ಮೇಲ್‌ ಮೂಲಕ ಕಳಿಸಿಕೊಡಲಾಗುವುದು ಮತ್ತು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ (www.mangaloreuniversity.co.in) ದಲ್ಲಿ ಇಂದು (ಗುರುವಾರ) ಪ್ರಕಟಿಸಲಾಗುವುದು ಎಂದು, ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ […]