Blog Archive

ವಾರಾಂತ್ಯ ಕರ್ಫ್ಯೂ ಹಿನ್ನೆಲೆ: ಪರೀಕ್ಷೆಗಳ ಮುಂದೂಡಿಕೆ

Thursday, August 12th, 2021
Exam

ಮಂಗಳೂರು: ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಲ್ಲಿ ಕೊವಿಡ್‌- 19 ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ವಾರಾಂತ್ಯ ಕರ್ಫ್ಯೂ ನಿಂದ ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಆಗಸ್ಟ್‌ 14 ಮತ್ತು ಆಗಸ್ಟ್‌ 28 ರ ಶನಿವಾರಗಳಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳ ದಿನಾಂಕಗಳನ್ನು ಮರುನಿಗದಿಪಡಿಸಿ, ಪರೀಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇ-ಮೇಲ್‌ ಮೂಲಕ ಕಳಿಸಿಕೊಡಲಾಗುವುದು ಮತ್ತು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ (www.mangaloreuniversity.co.in) ದಲ್ಲಿ ಇಂದು (ಗುರುವಾರ) ಪ್ರಕಟಿಸಲಾಗುವುದು ಎಂದು, ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ […]

ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳು ಆಗಸ್ಟ್‌ 11 (ಬುಧವಾರ) ರಿಂದ ಮರು ಪ್ರಾರಂಭ

Thursday, August 5th, 2021
Mangalore University

ಮಂಗಳೂರು :  ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ನಿರ್ದೇಶನ ಮತ್ತು ಮಾನ್ಯ ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು (ಆಗಸ್ಟ್‌ 05) ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್‌ 11 (ಬುಧವಾರ) ರಿಂದ ಕೊವಿಡ್‌ ಶಿಷ್ಟಾಚಾರದೊಂದಿಗೆ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕಾಲೇಜಿನ ವೆಬ್‌ಸೈಟ್‌ ಮೂಲಕ ತಿಳಿಸಲಾಗುವುದು. ವಾಹನ ಸೌಲಭ್ಯ ಅಥವಾ ಕೊವಿಡ್‌ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು.

ಕೊರೋನಾ ಹೆಚ್ಚಳ – ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳು ರದ್ದು

Tuesday, August 3rd, 2021
Mangalore University

  ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣ್ಗಾವಲು , ನಿಯಂತ್ರಣ ಮತ್ತು ಜಾಗೃತೆಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ನಿರ್ದೇಶಿಸಿರುತ್ತದೆ. ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳ ರಾಜ್ಯದ ಕಾಸರಗೋಡು […]

ಮಂಗಳೂರು ವಿವಿ: ಆಗಸ್ಟ್‌ 2 ರಿಂದ ಪದವಿ, 5 ರಿಂದ ಸ್ನಾತಕೋತ್ತರ ಪರೀಕ್ಷೆ

Tuesday, July 20th, 2021
Mangalore VV

ಮಂಗಳೂರು: ಕೋವಿಡ್-19ರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟು ನಡೆಸಲು ಬಾಕಿ ಇರುವ ಎಪ್ರಿಲ್‌ 2021 ರ 1, 3, 5 ಮತ್ತು 7 ನೇ ಸೆಮಿಸ್ಟರ್‌ ಪದವಿ ಪರೀಕ್ಷೆಗಳನ್ನು ಆಗಸ್ಟ್‌ 2, 2021 ರಿಂದ ನಡೆಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ಇದೇ ವೇಳೆ 1 ಮತ್ತು 3 ನೇ ಸೆಮಿಸ್ಟರ್‌ನ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನೂ ಆಗಸ್ಟ್‌ 5, 2021 ರಿಂದ ನಡೆಸಲು ಉದ್ದೇಶಿಸಲಾಗಿದೆ. ಸರ್ಕಾರ ಸೂಚಿಸಿರುವ ಕೋವಿಡ್‌ ನಿಯಂತ್ರಣ ನಿಯಮಗಳ ಕಠಿಣ ಪಾಲನೆಯೊಂದಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂಚಿತವಾಗಿ […]

ವಿವಿ ಕಾಲೇಜು: 806 ವಿದ್ಯಾರ್ಥಿಗಳಿಗೆ ಉಚಿತ ಕೊವಿಡ್‌ ಲಸಿಕೆ

Tuesday, July 6th, 2021
UCM

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್‌) ಘಟಕಗಳ ಸಹಯೋಗದೊಂದಿಗೆ ವಿವಿ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕೊವಿಡ್‌- 19 ಉಚಿತ ಲಸಿಕಾ ಶಿಬಿರದಲ್ಲಿ 806 ಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದುಕೊಂಡರು. ನಗರದಲ್ಲಿ ಖಾಸಗಿ ಬಸ್‌ಗಳ ಓಡಾಟ ಆರಂಭವಾಗಿರುವುದೂ ವಿದ್ಯಾರ್ಥಿಗಳಿಗೆ ಅನುಕೂಲವಾಗಿ ಪರಿಣಮಿಸಿತು. ವಿಶ್ವವಿದ್ಯಾನಿಲಯ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳ ಪದವಿ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಕೊವಿಡ್‌-19 ವಿರುದ್ಧದ […]

ಯೋಗ ಉಸಿರಾಟದಷ್ಟೇ ಸಹಜವಾಗಿರಲಿ: ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ

Monday, June 21st, 2021
yadapaditaya

ಮಂಗಳೂರು: ಯೋಗ ಉಸಿರಾಟದಷ್ಟೇ ಸಹಜ ಮತ್ತು ದೈನಂದಿನ ಪ್ರಕ್ರಿಯೆಯಾಗಬೇಕು. ವಿಶೇಷವಾಗಿ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ದೈಹಿಕ ಆರೋಗ್ಯ ಮತ್ತು ಅದಕ್ಕೆ ಪೂರಕವಾದ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸೂಕ್ತ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜು ಸೋಮವಾರ ಆನ್‌ಲೈನ್‌ ನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಮ್ಮ ಸ್ವಾಸ್ಥ್ಯಕ್ಕೆ ಅಗತ್ಯವಾದ ಶಾರೀರಿಕ ದಂಡನೆ, ಮಾನಸಿಕ- ಬೌದ್ಧಿಕ ಆರೋಗ್ಯ, ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಿಗೆ […]

ಮಂಗಳೂರು ವಿವಿ: ಕಾಲೇಜುಗಳ ಸಂಯೋಜನೆಗೆ ಅರ್ಜಿ ಆಹ್ವಾನ

Monday, June 14th, 2021
Mangalore University

ಮಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಗಳ ಅಧಿನಿಯಮ ದಡಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಎಲ್ಲಾ ಕಾಲೇಜು/ವಿದ್ಯಾಸಂಸ್ಥೆಗಳಿಂದ ಶೈಕ್ಷಣಿಕ ವರ್ಷ 2021-22 ನೇ ಸಾಲಿಗೆ ಶಾಶ್ವತ/ಮುಂದುವರಿಕೆ/ವಿಸ್ತರಣಾ ಮತ್ತು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಆಸಕ್ತ ಸಂಸ್ಥೆಗಳಿಂದ ಹೊಸ ಸಂಯೋಜನೆ ಕುರಿತಂತೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು www.onlineaffiliation.karnataka.gov.in ಪೋರ್ಟಲ್‌ ಮುಖಾಂತರ ಜುಲೈ 08, 2021 ರ ಒಳಗಾಗಿ ಸಲ್ಲಿಸಬಹುದು. ಅರ್ಜಿಶುಲ್ಕ ರೂ.1000 ಪಾವತಿಸಿ (ಡಿಡಿ/ಚಲನ್‌/ಆರ್‌ಟಿಜಿಎಸ್‌) ಅರ್ಜಿಗಳ ಪ್ರತಿಯನ್ನು ಕುಲಸಚಿವರ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌- www.mangaloreuniversity.ac.in ಗೆ ಭೇಟಿ […]

ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಕಿಶೋರ್‌ ಕುಮಾರ್‌ ಸಿಕೆ ಅಧಿಕಾರ ಸ್ವೀಕಾರ

Wednesday, April 21st, 2021
Dr Kishor Kumar

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕಿಶೋರ್‌ ಕುಮಾರ್‌ ಸಿಕೆ (ಎಂ.ಪಿ.ಎಡ್‌, ಪಿ.ಹೆಚ್‌.ಡಿ) ಅವರು ನೂತನ ಕುಲಸಚಿವರಾಗಿ (ಆಡಳಿತ) ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ (ಉನ್ನತ ಶಿಕ್ಷಣ ಇಲಾಖೆ) ಮಹೇಶ್‌ ಆರ್‌ ಹೊರಡಿಸಿದ ಆದೇಶಾನುಸಾರ, ಮಾರ್ಚ್‌ 22 ರಿಂದ ಕೆ. ರಾಜು ಮೊಗವೀರ (ಕೆ.ಎ.ಎಸ್‌) ಅವರ ವರ್ಗಾವಣೆಯ ಬಳಿಕ ಉಸ್ತುವಾರಿ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ ಧರ್ಮ ಅವರು ಅಧಿಕಾರ ಹಸ್ತಾಂತರಿಸಿದರು. ಸುಮಾರು ಮೂರು […]

ಮಂಗಳೂರು ವಿಶ್ವವಿದ್ಯಾನಿಲಯ ಪರೀಕ್ಷೆಗಳು ನಿಗದಿಪಡಿಸಿದ ವೇಳಾಪಟ್ಟಿಯಂತೆ ನಡೆಯಲಿದೆ

Wednesday, April 14th, 2021
exam

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ದಿನಾಂಕ 15.04.2021ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದ್ದು, ಯಾವುದೇ ಬಲಾವಣೆ ಇರುವುದಿಲ್ಲ, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯಲು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಜಿಸ್ಟ್ರಾರ್ (ಮೌಲ್ಯಮಾಪನ) ಮಂಗಳೂರು ವಿಶ್ವವಿದ್ಯಾಲಯ, ಮಂಗಳಗಂಗೋತ್ರಿ, ಮಂಗಳೂರು -574199. ದೂರವಾಣಿಗಳು: +918242287327: ಫ್ಯಾಕ್ಸ್: + 918242287452 / + 918242287367 / + 918242287424

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿಗೆ ಮೂರು ರ‍್ಯಾಂಕ್

Sunday, March 28th, 2021
Mangalore VV

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಕಳೆದ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ನಗರದ ಶೋಭಾ ಪಿ ಮತ್ತು ಕೆ ಎಸ್‌ ಪ್ರೇಂಕುಮಾರ್‌ ಅವರ ಪುತ್ರಿ ಸಾಯಿ ಸೂರ್ಯ ಕೆ ಪಿ 6 ನೇ ರ‍್ಯಾಂಕ್ ಮತ್ತು ಆಕಾಶಭವನದ ಪ್ರೇಮನಾಥ ಆಚಾರ್ಯ ಅವರ ಪತ್ನಿ, ಪಾರ್ವತಿ- ಪ್ರಭಾಕರ ಆಚಾರ್ಯ ದಂಪತಿಯ ಪುತ್ರಿ ಸಂಧ್ಯಾ 9 ನೇ ರ‍್ಯಾಂಕ್ ಗಳಿಸಿದ್ದಾರೆ. ಸಂಧ್ಯಾ ಬೆಳ್ಮದೋಟದ ದಕ್ಷಿಣ ಕನ್ನಡ ಜಿಲ್ಲಾ […]