ವಿವಿ ಕಾಲೇಜಿನಲ್ಲಿ ʼರತ್ನಾಕರವರ್ಣಿಯ ಶತಕಗಳು- ಒಂದು ಅವಲೋಕನʼ- ರಾಜ್ಯಮಟ್ಟದ ವಿಚಾರ ಸಂಕಿರಣ ಸಂಪನ್ನ
Wednesday, March 17th, 2021ಮಂಗಳೂರು: ರತ್ನಾಕರವರ್ಣಿ ಕೇವಲ ಜೈನ ಕವಿಯಲ್ಲ, ಆತ ವಿಶ್ವಕವಿ, ಸರ್ವಮಾನ್ಯ. ಆತನ ಸಾಹಿತ್ಯದ ಅವಲೋಕನದ ಜೊತೆಗೆ ಹೊಸ ತಲೆಮಾರಿಗೆ ಪರಿಚಯಿಸುವ ಕೆಲಸವಾಗಬೇಕಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಎಸ್ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗಗಳು ಜಂಟಿಯಾಗಿ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ʼರತ್ನಾಕರವರ್ಣಿಯ ಶತಕಗಳು- ಒಂದು ಅವಲೋಕನʼ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. […]