ರಾಜ್ಯದ ಭವ್ಯ ಭವಿಷ್ಯ ಬರೆಯಲು ಮತದಾನ ಮಹತ್ವದ್ದು: ಮುಖ್ಯಮಂತ್ರಿ ಬೊಮ್ಮಾಯಿ‌

Wednesday, May 10th, 2023
bommai-vote

ಹಾವೇರಿ(ಶಿಗ್ಗಾಂವ): ರಾಜ್ಯದ ಭವ್ಯ ಭವಿಷ್ಯ ಬರೆಯಲು ಮತದಾನ ಮಹತ್ವದ್ದು. ಎಲ್ಲರೂ ಮನೆಯಿಂದ ಹೊರಬಂದು ಮತದಾನ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಶಿಗ್ಗಾಂವಿಯಲ್ಲಿ ಮತದಾನ ಮಾಡಿದ ಅವರು ಮಾತನಾಡಿದರು. ಕರ್ನಾಟಕದ ಪ್ರತಿಯೊಬ್ಬ ನಾಗರಿಕನ ಕ್ಷೇಯೋಭಿವೃದ್ಧಿಗೆ ಜನರ ಮತ ಇರುತ್ತದೆ. ಭಾರತೀಯ ಜನತಾ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗುತ್ತದೆ ಎನ್ನುವ ಆತ್ಮವಿಶ್ವಾಸ ನನಗೆ ಇದೆ. ಶಾಸಕನಾಗಿ, ಮುಖ್ಯಮಂತ್ರಿಯಾಗಿ ಮತದಾನ ಮಾಡುವುದರಲ್ಲಿ ವ್ಯತ್ಯಾಸ ಏನಿಲ್ಲ. ಕರ್ನಾಟಕದ ನಾಗರಿಕನಾಗಿ ನಾ‌ನು ಮತದಾನ ಮಾಡಿದ್ದೇನೆ ಎಂದರು. ಬಜರಂಗಬಲಿ ವಿಚಾರಕ್ಕೆ ಸಂಬಂಧಿಸಿದಂತೆ […]

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಮತದಾನ

Wednesday, May 10th, 2023
ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಮತದಾನ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಪೂಂಜ ಅವರು ಇಂದು ಗರ್ಡಾಡಿಯ ಸೈಂಟ್‌ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನದ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು. ಸುಮಾರು 2.28 ಸಾವಿರ ಮತದಾರರಿದ್ದಾರೆ. 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ

ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಆರಂಭ

Friday, June 10th, 2022
vote

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾನ ಮುಕ್ತವಾಗಿರುವುದರಿಂದ ಯಾರು ಯಾವ ಅಭ್ಯರ್ಥಿಗೆ ಮತ ಹಾಕಿದ್ದಾರೆ, ಎಷ್ಟು ಅಡ್ಡ ಮತದಾನವಾಗಲಿದೆ ಎಂದು ಗೊತ್ತಾಗುತ್ತದೆ. ಶಾಸಕರು ಮತದಾನ ಮಾಡುವಾಗ ತಮ್ಮ ಪಕ್ಷದ ಏಜೆಂಟ್ ಗೆ ತೋರಿಸಿ ಮತ ಹಾಕಬೇಕಾಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.ಮತದಾನ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. […]

ದ.ಕ-ಉಡುಪಿ ಸ್ಥಳೀಯಾಡಳಿತ ವಿಧಾನ ಪರಿಷತ್‌ ಚುನಾವಣೆ, ಶೇ. 99.55 ಮತದಾನ

Friday, December 10th, 2021
kota-srinivasa-poojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವಿಧಾನ ಪರಿಷತ್‌ನ  ಚುನಾವಣೆ ಇಂದು ಶಾಂತಿಯುತವಾಗಿ ನಡೆದಿದ್ದು, ಶೇ. 99.55 ಮತದಾನವಾಗಿದೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಉಭಯ ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟು 6040 ಮತದಾರರಲ್ಲಿ ಸಂಜೆ 4 ಗಂಟೆಯ ವೇಳೆಗೆ 6013 ಮಂದಿ ಮತದಾನ ಮಾಡಿದ್ದಾರೆ. ದ.ಕ. ಜಿಲ್ಲೆಯ 3290 ಗ್ರಾ.ಪಂ. ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ 60 ಸದಸ್ಯರು, ನಗರ ಸಭೆಯ 62, ಪುರಸಭೆಯ 50, ಪಟ್ಟಣ […]

ಗ್ರಾಮ ಪಂಚಾಯತ್ ಗಳಿಗೆ ಮೊದಲ ಹಂತದ ಮತದಾನ ಬಿರುಸಿನಿಂದ ಆರಂಭ

Tuesday, December 22nd, 2020
GP vote

ಮಂಗಳೂರು :  ಗ್ರಾಮ ಪಂಚಾಯತ್ ಗಳಿಗೆ ನಡೆಯುತ್ತಿರುವ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. 10 ಗಂಟೆ ವೇಳೆಗೆ ಮಂಗಳೂರು ತಾಲೂಕಿನಲ್ಲಿ 14.6 ಶೆ., ಮೂಡುಬಿದರೆ15.64 ಶೇ. ಹಾಗೂ ಬಂಟ್ಟಾಳ ತಾಲೂಕಿನಲ್ಲಿ 13.75 ಶೇ. ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 14.48 ಶೇ. ಮತದಾನವಾಗಿರುವುದು ವರದಿಯಾಗಿದೆ. ಸ್ಯಾನಿಟೈಸರ್, ಮಾಸ್ಕ್ ಧರಿಸಿ ಸುರಕ್ಷಿತ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ಮತದಾರರು ಮತದಾನ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತರು ಥರ್ಮಾಮೀಟರ್ ನಲ್ಲಿ ದೇಹದ […]

ಎಲ್ಲಾ ಬೂತ್‌ಗಳಲ್ಲಿಯೂ ಒಂದೇ ರೀತಿಯಲ್ಲಿ ಮತದಾನ ನಡೆದಿರುವ ಬಗ್ಗೆ ಅನುಮಾನವಿದೆ : ಡಿ.ಕೆ. ಶಿವಕುಮಾರ್

Thursday, November 12th, 2020
DK Shivakumar

ಮಂಗಳೂರು : ನಾವು ಯಾರಲ್ಲೂ ಕೇಳಿದರೂ ವಿದ್ಯಾವಂತರೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿರುವುದಾಗಿ ಹೇಳುತ್ತಾರೆ. ಹಾಗಾಗಿ ಮತದಾರರು ಹೇಳಿದರಲ್ಲಿ ತಪ್ಪಿದೆಯಾ, ಮತದಾನ ಬಿದ್ದಿರುವುದರಲ್ಲಿ ತಪ್ಪಿದೆಯಾ ಎಂಬ ಬಗ್ಗೆ ವ್ಯಾಪಕವಾದ ತನಿಖೆ ನಮ್ಮ ವತಿಯಿಂದ ಮಾಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲನ್ನು ಒಪ್ಪಿದ್ದೇವೆ. ಆದರೆ ಚುನಾವಣೆಯಲ್ಲಿ ಯಾವ ರೀತಿ ಅಕ್ರಮವಾಗಿದೆ, ದುರುಪಯೋಗವಾಗಿದೆ, ಯಾವ ರೀತಿಯಲ್ಲಿ ಹಣ ಹಂಚಿಕೆಯಾಗಿದೆ ಎಂಬ ಕುರಿತಾದ ಎಲ್ಲಾ ರೀತಿಯ ಮಾಹಿತಿ ಇದೆ. ಅದರ ಬಗ್ಗೆ ವ್ಯಾಪಕವಾದ ಚರ್ಚೆ […]

ಮನಪಾ ಚುನಾವಣೆ : ಮತದಾನ ಆರಂಭ

Tuesday, November 12th, 2019
nalin-kumar

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್ ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೇಡಿಹಿಲ್ ಸಂತ ಅಲೋಶಿಯಸ್ ಶಾಲೆಯಲ್ಲಿ ಮತದಾನ ಮಾಡಿದರು. ನಂತರ ಮಾತನಾಡಿದ ನಳಿನ್, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ನಲ್ಲಿ ಒಳಜಗಳ ನಡೆದಿದ್ದು, ಇದು ಬಿಜೆಪಿಗೆ […]

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಮಧ್ಯಾಹ್ನದ ಸುಮಾರಿಗೆ 34.72 ಶೇ. ಮತದಾನ

Monday, October 21st, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದ್ದು, ಮಧ್ಯಾಹ್ನ 12:30ರ ಸುಮಾರಿಗೆ 34.72 ಶೇ. ಮತದಾನವಾಗಿದೆ. ಹಿಂದೆಂದೂ ಕಾಣದ ಬಿಗಿ ಭದ್ರತೆಯಲ್ಲಿ ಮತದಾನ ನಡೆಯುತ್ತಿದೆ. ಮುಂಜಾನೆಯಿಂದ ಮಳೆ ಸುರಿಯುತ್ತಿದ್ದರೂ ಮತದಾರರು ಅದನ್ನು ಲೆಕ್ಕಿಸದೆ ಮತಗಟ್ಟೆಗೆ ತಲುಪಿ ತಮ್ಮ ಹಕ್ಕು ಚಲಾಯಿಸಿದರು. ಕೆಲವೆಡೆ ಮತಯಂತ್ರಗಳಲ್ಲಿ ದೋಷ ಹಾಗೂ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಶಾಂತಿಯುತವಾಗಿದೆ . ಎಲ್.ಡಿ.ಎಫ್. ಅಭ್ಯರ್ಥಿ ಎಂ. ಶಂಕರ ರೈ ಇಂದು ಬೆಳಗ್ಗೆ ಅಂಗಡಿಮೊಗರು ಶಾಲೆಯ 165ನೇ ಮತಗಟ್ಟೆಯಲ್ಲಿ ಮತ […]

ದ.ಕ. ಲೋಕಸಭಾ ಚುನಾವಣೆಯಲ್ಲಿ ಶೇ.77.25 ಮತದಾನ

Friday, April 19th, 2019
Control-room

ಮಂಗಳೂರು  : ದ.ಕ. ಲೋಕಸಭಾ ಚುನಾವಣೆಯಲ್ಲಿ ಶೇ.77.25 ಮತದಾನವಾಗಿದೆ. ದ.ಕ.ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿದ ಮೇಲೆ ಬೆಳ್ತಂಗಡಿಯಲ್ಲಿ ಶೇ.80.92, ಮೂಡಬಿದ್ರೆ ಶೇ.73.17, ಬಂಟ್ವಾಳ ಶೇ. 80.31, ಪುತ್ತೂರು ಶೇ.80.71 ಸುಳ್ಯ ಶೇ.84.10, ಮಂಗಳೂರು ಉತ್ತರ ( ಸುರತ್ಕಲ್) ಶೇ.74.83, ಮಂಗಳೂರು ದಕ್ಷಿಣ ಶೇ. 69.15 ಹಾಗೂ ಮಂಗಳೂರು (ಉಳ್ಳಾಲ) ಶೇ.75.62 ಮತದಾನವಾಗಿದೆ. ಇದರಲ್ಲಿ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯದಲ್ಲಿ ಅತೀ ಹೆಚ್ಚು ಮತದಾನವಾಗಿದೆ. 2014ರ […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತದಾನ

Thursday, April 18th, 2019
Nalin Kumar

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಗ್ಗೆ 11ರ ವೇಳೆಗೆ 32.5 % ಮತದಾನವಾಗಿದೆ . ಉರ್ವ ಲೇಡಿಹಿಲ್ ಸಮೀಪದ  ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ಮತದಾರರು ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದು, ಚುರುಕಿನಿಂದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ […]