Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ವೇಳೆಗೆ 24 ಹೊಸ ಕೋವಿಡ್ ಪ್ರಕರಣ ದೃಢ

Thursday, May 28th, 2020
corona-virus

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ಆರೋಗ್ಯ ಇಲಾಖೆ ಯ ವರದಿಯಲ್ಲಿ ಮತ್ತೆ 18 ಜನರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಜಿಲ್ಲೆಯ ಈಗಿನ 18 ಸೇರಿದಂತೆ ಇಂದಿನ ಎಲ್ಲಾ 24 ಮಂದಿ ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರು ಆಗಿದ್ದಾರೆ. ಇವರಿಗೆ ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಶತಕದ ಅಂಚಿಗೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು 97 […]

ದಕ್ಷಿಣ ಕನ್ನಡದಲ್ಲಿ ಗುರುವಾರ 6 ಮಂದಿಯಲ್ಲಿ ಕೊರೊನಾ ದೃಢ

Thursday, May 28th, 2020
corona-virus

ಮಂಗಳೂರು : ದೇಶದಲ್ಲಿ ಹಂತ ಹಂತವಾಗಿ ಲಾಕ್ ಡೌನ್ ತೆರವು ಗೊಳ್ಳುತ್ತಿದ್ದಂತೆ ಕೊರೊನಾ ಸೋಂಕು ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಏರಿದೆ. ಇಂದು ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿಗೆ ಒಳಗಾದ ಬಹುತೇಕ ಮಂದಿ ಮಹಾರಾಷ್ಟ್ರದ ಮುಂಬಯಿಂದಲೇ ಬಂದವರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಗುರುವಾರ ಒಂದೇ ದಿನ 6 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು , 61, 18 ವರ್ಷದ ಮಹಿಳೆ, 62 , 50 , 24, 36 ವರ್ಷದ ಪುರುಷರಲ್ಲಿ ಕೊರೊನಾ ಪತ್ತೆಯಾಗಿದೆ. ಇವರೆಲ್ಲರೂ ಮಹಾರಾಷ್ಟ್ರದ ರಾಜ್ಯದಿಂದ […]

ಉಡುಪಿ ಜಿಲ್ಲೆಯಲ್ಲಿ ಬಾಲಕ ಸೇರಿ, 9 ಕೊರೊನಾ ಸೋಂಕಿತರು

Wednesday, May 27th, 2020
udupi-covid19

ಉಡುಪಿ : ಜಿಲ್ಲೆಯಲ್ಲಿ ಮೇ 27 ರ ಮಧ್ಯಾಹ್ನ 12 ರವರೆಗೆ 9 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆಯ ಬುಲಿಟಿನ್ ತಿಳಿಸಿದೆ . ಜಿಲ್ಲೆಯಲ್ಲಿ 9 ವರ್ಷದ ಬಾಲಕ ಸೇರಿ 7 ಪುರುಷರಿಗೆ ಹಾಗೂ 2 ಮಹಿಳೆಯರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಕೇವಲ ಮೂರು ಪ್ರಕರಣಗಳು ದಾಖಲಾಗಿತ್ತು. ಈ  9 ಕೊರೊನಾ ಸೋಂಕಿತರು ಕೂಡಾ ಮಹಾರಾಷ್ಟ್ರದಿಂದ ವಾಪಾಸ್‌ ಬಂದವರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 120 […]

ಮಹಾರಾಷ್ಟ್ರದಿಂದ ಹಿಂತಿರುಗಿದ ಉಡುಪಿಯ ಮೂವರಲ್ಲಿ ಕೊರೋನಾ ದೃಢ

Tuesday, May 26th, 2020
corona-virus19

ಉಡುಪಿ : ಮಹಾರಾಷ್ಟ್ರದಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ಮೂರು ಮಂದಿಗೆ ಕೊರೊನಾ ದೃಢಪಟ್ಟಿದ್ದು ಇವರಲ್ಲಿ 9 ವರ್ಷದ ಹೆಣ್ಣು ಮಗು, 30 ವರ್ಷದ ಮಹಿಳೆ ಹಾಗೂ 27 ವರ್ಷದ ಯುವಕ ಒಳಗೊಂಡಿದ್ದರೆ, ಚಿಕಿತ್ಸೆಗಾಗಿ ಇವರನ್ನು ನಿಗದಿತ ಕೊವೀಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಾಹ್ನದ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 111 ಸೋಂಕು ಪ್ರಕರಣ ಪತ್ತೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆ ಆಯಾ ದಿನದ ಸೋಂಕು ಪೀಡಿತರ ವಿವರಗಳನ್ನು ದಿನಕ್ಕೆ  ಎರಡು ಆವೃತ್ತಿಯಲ್ಲಿ ಬಿಡುಗಡೆ ಮಾಡುತ್ತಿದ್ದು, […]

ಉಡುಪಿ ಜಿಲ್ಲೆಯಲ್ಲಿ ಎಂಟು ಮಕ್ಕಳು ಸೇರಿ 16 ಜನರಿಗೆ ಕೊರೋನಾ ಸೋಂಕು ದೃಢ

Monday, May 25th, 2020
Udupi Covid19

ಉಡುಪಿ: ಜಿಲ್ಲೆಯಲ್ಲಿ ಮತ್ತೆ 16 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸೋಂಕು ದೃಢವಾದವರ ಸಂಖ್ಯೆ32 ಕ್ಕೆ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಶತಕ ದಾಟಿದ್ದು 108 ಆಗಿದೆ. ಇಂದು ಸಂಜೆ ವರದಿಯಾದ 16 ಪ್ರಕರಣಗಳ ಪೈಕಿ 13 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇದರಲ್ಲಿ ಒಂದು ವರ್ಷದ ಮಗುವೂ ಸೇರಿದೆ. ಸೋಂಕಿತ ಸಂಖ್ಯೆ 1435ರ ಸಂಪರ್ಕದಿಂದ 65 ವರ್ಷದ ಮಹಿಳೆಗೆ ಸೋಂಕು ತಾಗಿದ್ದು, ಕಂಟೈನ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿದ […]

ಉಡುಪಿಯಲ್ಲಿ ಮೂವರು ಮಕ್ಕಳು ಸೇರಿ 18 ಮಂದಿಗೆ ಕೊರೊನಾ ಸೋಂಕು

Sunday, May 24th, 2020
Udupi-Corona

ಉಡುಪಿ : ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿ ಮತ್ತೆ 18 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಈ ಪೈಕಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಈ 18 ಕೊರೊನಾ ಪ್ರಕರಣಗಳ ಪೈಕಿ 7 ಮಂದಿ ಮಹಿಳೆಯರಾಗಿದ್ದು ಮೂವರು ಮಕ್ಕಳಾಗಿದ್ದಾರೆ. ಇಬ್ಬರಿಗೆ ಕಂಟೈನ್‌ಮೆಂಟ್‌ ಝೋನ್‌ ಸಂಪರ್ಕದಿಂದ ಕೊರೊನಾ ದೃಢಪಟ್ಟಿದ್ದು ಮತ್ತಿಬ್ಬರಿಗೆ ಕೊರೊನಾ ಹರಡಿದ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಇನ್ನುಳಿದ 14 ಮಂದಿಯೂ ಕೂಡಾ ಮಹಾರಾಷ್ಟ್ರದಿಂದ ವಾಪಾಸ್‌ ಆದವರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಕೊರೊನಾ ಸೋಂಕು ಪತ್ತೆ

Saturday, May 23rd, 2020
Udupi Covid

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಶನಿವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 4 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಿಗೆ ಹಾಗೂ ದುಬೈನಿಂದ ಜಿಲ್ಲೆಗೆ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. 37, 57, 31 ವರ್ಷದ ಪುರುಷ ಹಾಗೂ 48, 34 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಜಿಲ್ಲೆಯಲ್ಲಿ ಸೋಂಕಿಗೆ ಪೀಡಿತರಾದವರ ಸಂಖ್ಯೆ 55 ಕ್ಕೆ ಏರಿದೆ. ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗಿದ್ದು ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ 51 ಸಕ್ರಿಯ ಪ್ರಕರಣಗಳಿವೆ.

ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಮುಂಬಯಿಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ

Monday, May 11th, 2020
okkaliga sangha mumbai

ಮುಂಬಯಿ : ಲಾಕ್ ಡೌನ್ ನಿಂದಾಗಿ ಈಗಾಗಲೇ ಸಮಾಜ ಬಾಂಧವರು ಮಾತ್ರವಲ್ಲದೆ ಮಹಾನಗರದಲ್ಲಿ ನೆಲೆಸಿರುವ ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ಸಂಕಷ್ಟಕ್ಕೊಳಗಾಗಿದ್ದು, ಒಕ್ಕಲಿಗರ ಸಂಘ ಮಹಾರಾಷ್ಟ್ರವು ಅಧ್ಯಕ್ಷರಾದ ಜಿತೇಂದ್ರ ಗೌಡ ಇವರ ನೇತೃತ್ವದಲ್ಲಿ ಸಮಾಜ ಬಾಂಧವರೂ ಸೇರಿ 610 ಕ್ಕೂ ಅಧಿಕ ತುಳು ಕನ್ನಡಿಗ ಕುಟುಂಬಗಳಿಗೆ ಲಕ್ಷಾಂತರ ರೂಪಾಯಿಗಳ ಕಿಟ್ ವಿತರಿಸಿ ಸಹಕರಿಸಿದೆ. ನಮ್ಮ ಸಮಾಜದಲ್ಲಿ ಅನೇಕರು ಹೋಟೇಲು ಕಾರ್ಮಿಕರು, ಸಣ್ಣ ವ್ಯಾಪಾರಿಗಳಾಗಿದ್ದು ದೈನಂದಿನ ಖರ್ಚಿಗೆ ಬೇಕಾದಷ್ಟು ಮಾತ್ರ ಸಂಪಾದಿಸುತ್ತಿದ್ದು ಲಾಕ್ ಡೌನ್ ನಿಂದಾಗಿ ಇದೀಗ ಸಂಕಷ್ಟದಲ್ಲಿ […]

24 ಗಂಟೆಗಳಲ್ಲಿ ಭಾರತದಲ್ಲಿ 56 ಕೊರೋನಾ ಸೋಂಕಿತರು ಮೃತ್ಯು

Sunday, April 26th, 2020
corona

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25 ಸಾವಿರ ಗಡಿಯತ್ತ ಸಾಗಿದ್ದು, ಒಂದೇ ದಿನ 1,490 ಹೊಸ ಪಾಸಿಟಿವ್ ಪ್ರಕರಣ ದಾಖಲಾಗುವುದರೊಂದಿಗೆ ಶನಿವಾರ ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 24,942ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 56 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 779ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 24,942 ಪ್ರಕರಣಗಳ ಪೈಕಿ ಈವರೆಗೂ 5,209 ಮಂದಿ ಸೋಂಕಿತರು ಗುಣಮುಖರಾಗಿದ್ದು, […]

ಮಹಾರಾಷ್ಟ್ರದ ಪಾಲಘರನಲ್ಲಿ ಪೊಲೀಸರ ಎದುರೇ ಇಬ್ಬರು ಸಂತರ ಹತ್ಯೆ ಖಂಡನೀಯ : ರಮೇಶ ಶಿಂದೆ

Friday, April 24th, 2020
mumbai-sains-murder

ಮುಂಬೈ :  ಪಾಲಘರದಲ್ಲಿ ‘ಶ್ರೀ ಪಂಚ ದಶನಾಮ ಜುನಾ ಆಖಾಡಾ’ದ ಸಂತ ಕಲ್ಪವೃಕ್ಷಗಿರಿ ಮಹಾರಾಜ ಹಾಗೂ ಸುಶೀಲಗಿರಿ ಮಹಾರಾಜ, ಅದೇರೀತಿ ಅವರ ವಾಹನ ಚಾಲಕನನ್ನು ಹಿಂಸಾತ್ಮಕ ಜನಸಮೂಹವು ಪೊಲೀಸರ ಎದುರೇ ತೀವ್ರವಾಗಿ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಸಂದರ್ಭದ ಬಹಿರಂಗಗೊಂಡಿದ್ದ ಒಂದು ವಿಡಿಯೋದಲ್ಲಿ ಪೊಲೀಸರೇ ಆ ವೃದ್ಧ ಸಂತರನ್ನು ಹಿಂಸಾತ್ಮಕ ಸಮೂಹದವರಿಗೆ ಒಪ್ಪಿಸುತ್ತಿರುವ ಹಾಗೂ ಪೊಲೀಸರ ಎದುರೇ ಅವರ ಬರ್ಬರವಾಗಿ ಹತ್ಯೆಯಾಗುತ್ತಿರುವ ಭಯಾನಕ ಸತ್ಯವು ಬಹಿರಂಗವಾಗಿದೆ. ಒಂದು ವೇಳೆ ಜನರ ರಕ್ಷಣೆಯ ಜವಾಬ್ದಾರಿಯನ್ನು ಹೊಂದಿರುವ ಪೊಲೀಸರೇ […]