Blog Archive

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ

Monday, May 24th, 2021
Vinay Kulkarni

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ವಿನಯ್ ಹಾಗೂ ಅವರ ಅಭಿಮಾನಿಗಳಿಗೆ ಹೈಕೋರ್ಟ್, ಜಾಮೀನು ಅರ್ಜಿಯನ್ನೇ ವಜಾಗೊಳಿಸುವ ಮೂಲಕ ಶಾಕ್ ನೀಡಿದೆ. ಹೌದು! ಚಾರ್ಜಶೀಟ್ ಸಲ್ಲಿಕೆಯಾದ ಬಳಿಕ ವಿನಯ್ ಪರ ವಕೀಲರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ವಜಾಗೊಂಡ ಬಳಿಕ ಮತ್ತೆ ಬೆಂಗಳೂರಿನ […]

ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು, ಮನೆಮನೆಗೆ ಕಿಟ್ ಹೋಗುತ್ತಿತ್ತು : ಮಾಜಿ ಸಚಿವ ರಮಾನಥ ರೈ

Tuesday, May 18th, 2021
Ramanatha Rai

ಮಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಇದೊಂದು ರಾಷ್ಟ್ರೀಯ ವಿಪತ್ತು. ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಾ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆ ಸಿಗುತ್ತಿಲ್ಲ. ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿರುವವರ ಕೆಲಸ. ಎರಡನೇ ಡೋಸ್ ಯಾವಾಗ ಕೊಡಬೇಕೂಂತ ಸಿಎಂಗೆ ಗೊತ್ತಿಲ್ಲ. ಆಕ್ಸಿಜನ್, ಐಸಿಯು, ಚಿಕಿತ್ಸೆ […]

ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ?

Saturday, March 6th, 2021
Ramesh Jarakiholi Woman

ಬೆಂಗಳೂರು: ಸೆಕ್ಸ್ ಸಿಡಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗೆ ಭದ್ರತೆ ನೆಪವೊಡ್ಡಿ ಗುರುವಾರ ಗೈರಾಗಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ, ಶುಕ್ರವಾರ ಮಧ್ಯಾಹ್ನ ದಿಢೀರ್‌ ಆಗಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು. ಕಬ್ಬನ್‌ ಪಾರ್ಕ್ ಠಾಣೆಗೆ ಬಂದ ದಿನೇಶ್, ಇನ್‌ಸ್ಪೆಕ್ಟರ್, ಎಸಿಪಿ ಹಾಗೂ ಡಿಸಿಪಿ ಅವರ […]

ಶಾಸಕ ಯು.ಟಿ ಖಾದರ್‌ ಅವರ ಕಾರನ್ನು ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯ ಬಂಧನ

Thursday, December 24th, 2020
utKhader

ಮಂಗಳೂರು : ಮಾಜಿ ಸಚಿವ ಯು.ಟಿ ಖಾದರ್‌ ಅವರ ಕಾರನ್ನು ಬುಧವಾರ ರಾತ್ರಿ  ಬೈಕ್‌ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಬುಧವಾರ ಮಂಗಳೂರಿನ ದೇರಳಕಟ್ಟೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಭದ್ರತಾ ವಾಹನದ ಬೆಂಗಾವಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿಯೋರ್ವ ಸುಮಾರು 15 ಕಿ.ಮೀ ಖಾದರ್‌ ಅವರ ವಾಹನವನ್ನು ಫಾಲೋ ಮಾಡಿದ್ದ ಎನ್ನಲಾಗಿದ್ದು,  ಭದ್ರತಾ […]

ಪ್ರತಿದಿನ 15 ರಿಂದ 20 ಕಿ.ಮೀ.ನಷ್ಟು ಸೈಕಲ್ ಸವಾರಿ ಮಾಡುವ ಮಾಜಿ ಸಚಿವ ಜೈನ್

Friday, October 9th, 2020
AbhayachandraJain

ಮಂಗಳೂರು: ಮಾಜಿ‌ ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈಗ ಕಾರು ಬಿಟ್ಟು  ಪ್ರತಿದಿನ 15 ರಿಂದ 20 ಕಿ.ಮೀ.ನಷ್ಟು ಸೈಕಲ್ ಸವಾರಿ ಮಾಡುತ್ತಿದ್ದು ಯುವಕರಿಗೆ, ಸೈಕಲ್ ಸವಾರಿ ಮಾಡಿದರೆ ತಮ್ಮ ಆರೋಗ್ಯದ ಜತೆಗೆ ಫಿಟ್‍ನೆಸನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದಾರೆ. ಅವರು ಹೊಸದಾಗಿ ಸೈಕಲೊಂದನ್ನು ಖರೀದಿಸಿದ್ದು ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವತ್ತ ಗಮನ ಹರಿಸುತ್ತಿದ್ದಾರೆ. ಸಣ್ಣ ವಯಸ್ಸಿನಿಂದಲೂ ಕ್ರೀಡೆಯಲ್ಲಿ ಆಸಕ್ತಿಯನ್ನು ಹೊಂದಿರುವ ಅಭಯಚಂದ್ರ ಜೈನ್ ಅವರು 71ರ ಇಳಿ ವಯಸ್ಸಿನಲ್ಲಿಲ್ಲೂ ಬಾಸ್ಕೆಟ್‍ಬಾಲ್, ಶಟಲ್ ಬ್ಯಾಡ್ಮಿಂಟನ್ ಮುಂತಾದ ಕ್ರೀಡೆಗಳನ್ನು […]

ವೃದ್ಧಾಶ್ರಮದಲ್ಲಿ ಹುಟ್ಟು ಹಬ್ಬ ಆಚರಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

Monday, September 14th, 2020
Ramanatha Rai

ಬಂಟ್ವಾಳ:  ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ 68 ನೇ ಹುಟ್ಟು ಹಬ್ಬವನ್ನು ಮೇರಮಜಲುವಿನ ಶ್ರೀ ಮಾತಾ ಲಕ್ಷ್ಮಣಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಕೇಕ್ ಕಟ್  ಮಾಡಿ  ಆಶ್ರಮವಾಸಿಗಳೊಂದಿಗೆ ಸಹಭೋಜನವನ್ನು ಮಾಡುವುದರೊಂದಿಗೆ ಆಚರಿಸಿದರು. ಜೊತೆಗೆ ಬಂಟ್ವಾಳ ತಾಲೂಕಿನಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಕಾರ್ಯಕರ್ತರು ಅಲ್ಲಲ್ಲಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ಮಾತನಾಡಿದ ರೈ, ತಮ್ಮ ಹುಟ್ಟುಹಬ್ಬ ಸಂದರ್ಭ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಕಾರ್ಯಕರ್ತರು ನನ್ನ ಆಶಯವನ್ನು ಅನುಷ್ಠಾನಕ್ಕೆ […]

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​ಗೆ

Sunday, August 2nd, 2020
Ramanatha rai

ಬಂಟ್ವಾಳ : ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ  ಬೆನ್ನಲೇ  ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಐವನ್ ಡಿ ಸೋಜ ಜೊತೆ ನಾನು ಇದ್ದೆ  ಹಾಗಾಗಿ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಕ್ಷೇತ್ರದ ಜನರು […]

ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿ ವಿತರಣೆ

Tuesday, April 7th, 2020
ramanatha-rai

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ವೈಯಕ್ತಿಕ ಖರ್ಚಿನಲ್ಲಿ ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಹಸ್ತಾಂತರಿಸಿದ್ದಾರೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಆಹಾರ ಸಾಮಗ್ರಿ ಹಸ್ತಾಂತರಿಸಿದ್ದಾರೆ. ಸೋಮವಾರ ಈ ಕಾರ್ಯಕ್ಕೆ ಸ್ವತಃ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು.

ಮಾಜಿ ಸಚಿವ ಎಂ.ಸಿ.ನಾಣಯ್ಯ ಮನೆಯಲ್ಲಿ ನಾಗರಹಾವು

Sunday, November 3rd, 2019
pious pirera

ಮಡಿಕೇರಿ : ಹಾಕತ್ತೂರಿನಲ್ಲಿರುವ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ತೋಟದ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾದ ನಾಗರಹಾವನ್ನು ಹಾಕತ್ತೂರಿನ ಗ್ರಾ.ಪಂ ಸದಸ್ಯ, ಉರಗ ರಕ್ಷಕ ಸ್ನೇಕ್ ಪಿಯೂಷ್ ಪೆರೇರಾ ಅವರು ಸೆರೆ ಹಿಡಿದು ರಕ್ಷಿಸಿದ್ದಾರೆ. ಮತ್ತೊಂದೆಡೆ ಮೇಕೇರಿಯ ರಾಧಾ ಎಂಬುವವರ ಮನೆಯಲ್ಲಿ ಪತ್ತೆಯಾದ ಚೆಟ್ಟಮಂಡಲ ಹಾವನ್ನು ಕೂಡ ಪೆರೇರಾ ಸೆರೆ ಹಿಡಿದಿದ್ದಾರೆ. ಎರಡೂ ಹಾವುಗಳನ್ನು ಅವರು ಸಂಪಾಜೆಯ ಅರಣ್ಯ ಭಾಗಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಪಿಯೂಷ್ ಪೆರೇರಾ ಅವರು ಇಲ್ಲಿಯವರೆಗೆ 72 ನಾಗರಹಾವು ಹಾಗೂ 38 ವಿವಿಧ ಜಾತಿಯ ಹಾವುಗಳು ಸೇರಿದಂತೆ […]

ಮಾಜಿ ಸಚಿವ ವಿ.ಧನಂಜಯ್​ ಕುಮಾರ್ ಆರೋಗ್ಯ ಸ್ಥಿತಿ‌ ಗಂಭೀರ

Thursday, December 6th, 2018
ex-minister

ಮಂಗಳೂರು: ಕೇಂದ್ರದ ಮಾಜಿ ಸಚಿವರಾಗಿದ್ದ ವಿ.ಧನಂಜಯ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆರೋಗ್ಯ ತೀರಾ ಹದಗೆಟ್ಟಿದ್ದು, ಸದ್ಯ ಕೋಮಾ ಸ್ಥಿತಿಯಲ್ಲಿದ್ದಾರೆ. ಪರಿಸ್ಥಿತಿ ಸಂಪೂರ್ಣ ಬಿಗಡಾಯಿಸಿದ್ದು, ಧನಂಜಯ ಕುಮಾರ್ ಈಗ ಗುರುತು ಹಿಡಿಯಲಾರದಷ್ಟು ಕೃಶರಾಗಿದ್ದಾರೆ. ಅಟಲ್ […]