Blog Archive

ವೇದಿಕೆಯ ಮೇಲೆಯೇ ಕುಸಿದು ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ

Monday, February 15th, 2021
Roopani

ಅಹಮದಾಬಾದ್:   ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ. ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದರು. ನಗರದ ನಿಜಾಂಪುರ ಪ್ರದೇಶದಲ್ಲಿ ನಡೆದ ಮೂರನೇ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಮತ್ತು  ಬಿಜೆಪಿ ನಾಯಕರು ಧಾವಿಸಿದರೂ ಅಷ್ಟರಲ್ಲೇ […]

ದಕ್ಷಿಣ ಕನ್ನಡ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ 120 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Thursday, February 11th, 2021
ದಕ್ಷಿಣ ಕನ್ನಡ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ 120 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯ ಡಿಟಿ ನಾಗರಾಜ್ ಬಂಟ್ವಾಳ ವೃತ್ತ (ಸಿಪಿಐ), ಕಬ್ಬಾಳ್ ರಾಜ್ ಉಳ್ಳಾಲ್ ಪೊಲೀಸ್ ಠಾಣೆ (ಪಿಎಸೈ), ಪುರುಷೋತ್ತಮ ಎ, ಸಿಐಡಿ ಪೊಲೀಸ್ ಅರಣ್ಯ ಘಟಕ ಮಂಗಳೂರು, ವೆಂಕಟೇಶ್ ನಾಯಕ್ (ಸಿಹೆಚ್ ಸಿ) ಬೆಳ್ತಂಗಡಿ ವೃತ್ತ ಸೇರಿದಂತೆ 120 ವಿವಿಧ ವರ್ಗದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಸೋಮವಾರ  ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2019ರ ಮುಖ್ಯಮಂತ್ರಿ ಪದಕ ಪುರಸ್ಕೃತ ಪೊಲೀಸ್ ಅಧಿಕಾರಿಗಳು […]

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ 7 ಹೊಸ ಮಂತ್ರಿಗಳೊಂದಿಗೆ ವಿಸ್ತರಣೆ

Wednesday, January 13th, 2021
BSY Cabinate

ಬೆಂಗಳೂರು  : ರಾಜಭವನದಲ್ಲಿ ಬುಧವಾರದಂದು 7 ಮಂದಿ ಶಾಸಕರಿಗೆ ರಾಜ್ಯಪಾಲ ವಜುಭಾಯಿವಾಲ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಏಳು ಮಂದಿ ಶಾಸಕರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಸೇರಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ಮಧ್ಯಾಹ್ನ 3.50 ಕ್ಕೆ ಪದ ಗ್ರಹಣ ನಡೆಯಿತು. ಎಲ್ಲರೂ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಕ್ರಮವಾಗಿ ಉಮೇಶ ಕತ್ತಿ, ಮುರುಗೇಶ ನಿರಾಣಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್‌, […]

ಗೋಮಾತೆಯನ್ನು‌ ನಿಂದಿಸಿದ ಪಕ್ಷಗಳು ನೆಲಕಚ್ಚಿ ಹೋಗಿವೆ : ಕೆಎಸ್ ಈಶ್ವರಪ್ಪ

Tuesday, January 12th, 2021
ks Eshwarappa

ಬಂಟ್ವಾಳ :  ಜಿಲ್ಲಾ ಬಿಜೆಪಿ ವತಿಯಿಂದ ಜನಸೇವಕ ಸಮಾವೇಶ ಬಂಟ್ವಾಳದ ಬಂಟರ ಭವನದಲ್ಲಿಸೋಮವಾರ  ನಡೆಯಿತು. ಸಮಾವೇಶವನ್ನು ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆಎಸ್ ಈಶ್ವರಪ್ಪ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಗೋಮಾತೆಯ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿಯನ್ನು ಕಳೆದುಕೊಂಡಿದ್ದಾರೆ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಪಾಕಿಸ್ಥಾನ ಝಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸುವ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಾರೆ. ಅವರು ಗೋ ಮಾಂಸ ತಿಂದು ಸಾಯಲಿ […]

ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Thursday, December 24th, 2020
yedyurappa

ಬೆಂಗಳೂರು: ಬ್ರಿಟನ್  ದೇಶದಲ್ಲಿ  ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು  ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ […]

ಮಂಗಳೂರು ವ್ಯಾಪ್ತಿಯ ಎಂಟು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

Friday, November 20th, 2020
Police Medal

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಎಸ್ಪಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಎಂಟು ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಪಶ್ಚಿಮ ವಲಯದ ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಎ.ಸಿ., ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದು, ಪ್ರಸ್ತುತ ಬೆಂಗಳೂರು ವಿವೇಕ ನಗರ ಇನ್‌ಸ್ಪೆಕ್ಟರ್ ಆಗಿರುವ ರಫೀಕ್ ಕೆ.ಎಂ., ಸಿಸಿಬಿ ಎಎಸ್‌ಐ ಆಗಿರುವ ಹರೀಶ್ ಪದವಿನಂಗಡಿ, ಎನ್‌ಸಿಪಿಎಸ್‌ನ ಚಂದ್ರಶೇಖರ್, ಡಿಸಿಐಬಿನ ಉದಯ ರೈ ಮಂದಾರ, ಸಿಎಆರ್ ಹೆಡ್ ಕಾನ್‌ಸ್ಟೇಬಲ್ […]

ಮುಖ್ಯಮಂತ್ರಿ ಗಳಿಂದ ಸೇವಾಂಜಲಿ ಆರೋಗ್ಯ ಕಾರ್ಡ್ ಬಿಡುಗಡೆ

Thursday, November 5th, 2020
Sevanjali Health Card

ಮಂಗಳೂರು :  ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಕೊಡುಗೆ ಸೇವಾಂಜಲಿ ಆರೋಗ್ಯ ಕಾರ್ಡ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಮಂಗಳೂರಿನ ಓಶಿಯನ್ ಪರ್ಲ್ ಹೋಟೇಲಿನಲ್ಲಿ ಬಿಡುಗಡೆಗೊಳಿಸಿದರು. ಸೇವಾಂಜಲಿ ಟ್ರಸ್ಟ್ ಕಾರ್ಯಗಳು ಹೀಗೆ ನಿರಂತರವಾಗಿ ನಡೆದು ಸಮಾಜದ ದುರ್ಬಲ, ಅಶಕ್ತರಿಗೆ ಸಹಾಯವಾಗಲಿ, ಈ ಟ್ರಸ್ಟ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪ್ರಮುಖರಿಗೆ, ಕಾರ್ಯಕರ್ತರಿಗೆ ಶುಭವಾಗಲಿ ಎಂದು ಸಿಎಂ ಯಡಿಯೂರಪ್ಪ ಅವರು ಆರೋಗ್ಯ ಕಾರ್ಡ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, […]

ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕ, ಆತ್ಮಹತ್ಯೆಗೆ ಶರಣು

Thursday, October 8th, 2020
Youth Hangs

ಬೆಂಗಳೂರು : ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕನೊರ್ವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ. ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ […]

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ 117 ಕೋಟಿ ರೂ. ವಂಚಿಸಲು ಪ್ಲಾನ್, ದಕ್ಷಿಣ ಕನ್ನಡದ ಆರು ಮಂದಿ ವಶ

Tuesday, October 6th, 2020
Andra police

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಅಲ್ಲಿನ  ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ಹಿನ್ನಲೆಯಲ್ಲಿ ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40), ಉದಯ ಶೆಟ್ಟಿ ಕಾಂತಾವರ( 35), ಮಂಗಳೂರಿನ ಬ್ರಿಜೆಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರದ ಕಂದಾಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಪಿ.ಮುರಳೀಕೃಷ್ಣ ರಾವ್ ನೀಡಿದ ದೂರಿನ ಆಧಾರ ಮೇರೆಗೆ ಸೆ. 21ರಂದು ಆಂಧ್ರ ಪ್ರದೇಶದ ತುಲ್ಲೂರು ಪೊಲೀಸ್ ಠಾಣೆಯಲ್ಲಿ […]

ನೂತನ ಪ್ರವಾಸೋದ್ಯಮ ನೀತಿಯು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 

Sunday, September 27th, 2020
Tourism day

ಬೆಂಗಳೂರು : ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ […]