Blog Archive

ಕಟ್ಟಡ ಕಾರ್ಮಿಕರಿಗೆ ಸಹಾಯಧನ: ಮುಖ್ಯಮಂತ್ರಿಗಳಿಂದ ಚಾಲನೆ

Sunday, June 6th, 2021
Construction-workers

ಬೆಂಗಳೂರು: ಕೋವಿಡ್ – 19 ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸುವುದು ಅನಿವಾರ್ಯವಾಗಿತ್ತು. ಈ ನಿರ್ಬಂಧದಿಂದಾ ಉಂಟಾದ ಆರ್ಥಿಕ ಸಂಕಷ್ಟವನ್ನು ಪರಿಹರಿಸಲು ಪ್ಯಾಕೇಜ್ ಘೋಷಣೆ ಮಾಡಿರುವ ಸರ್ಕಾರ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಲಾದ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ಕೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇಂದು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು […]

ಸಂಕಷ್ಟದಲ್ಲಿದ್ದ ಚಿತ್ರರಂಗದ ಕಾರ್ಮಿಕರಿಗೆ ಸಿಎಂ ಪ್ಯಾಕೇಜ್ ಘೋಷಣೆ

Thursday, June 3rd, 2021
NM Suresh

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಿಸಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ವಾಣಿಜ್ಯ ಮಂಡಳಿ ಹಾಗೂ ಕಾರ್ಮಿಕ ಒಕ್ಕೂಟ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನ ತಿಳಿಸಿದೆ. ಈಗಾಗಲೇ ಹಲವು ವೃತ್ತಿ ಹಾಗೂ ವಲಯಗಳ ಕಾರ್ಮಿಕರಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದ ಮುಖ್ಯಮಂತ್ರಿಗಳನ್ನ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ […]

ಮುಖ್ಯಮಂತ್ರಿಗಳಿಂದ ಮಳೆ ವಿಕೋಪ ತಡೆಯಲು ಪೂರ್ವ ಸಿದ್ದತೆಗಳ ಪರಿಶೀಲನೆ

Thursday, June 3rd, 2021
Rain

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ 209 ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ನಿರ್ದೇಶನ ನೀಡಿದರು. ಎಂಡು ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಣತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿದ್ದು, ಅನ್ – ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು ಮತ್ತು ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗೆ […]

ಜೂನ್ 7ರ ಬಳಿಕ ಲಾಕ್ಡೌನ್ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು ಗೊತ್ತಾ ?

Sunday, May 30th, 2021
yedyurappa

ಬೆಂಗಳೂರು : ಕರ್ನಾಟಕದಲ್ಲಿ ಲಾಕ್ಡೌನ್ ಅನ್ನು ಮುಂದುವರೆಸುವ ಬಗ್ಗೆ ಮತ್ತೆ ಚರ್ಚೆಗಳು ನಡೆಯುತ್ತಿದ್ದು, ಲಾಕ್ಡೌನ್ ವಿಸ್ತರಣೆ ಬಗ್ಗೆ ಜೂನ್ 5 ಅಥವಾ 6ರಂದು ನಿರ್ಧಾರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೇಂದ್ರ ಗೃಹ ಇಲಾಖೆ ಕೂಡ ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿ ಅಂತ ಸಲಹೆ ಕೊಟ್ಟಿದೆ. ಲಾಕ್ ಡೌನ್ ವಿಸ್ತರಣೆ ಮಾಡೋದು ಜನರ ಮೇಲೆ ನಿಂತಿದೆ. ಕೇಂದ್ರದ ಮಾರ್ಗಸೂಚಿ, ಮತ್ತು ರಾಜ್ಯದ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನ […]

ಸೋಂಕಿನ ಪ್ರಮಾಣ ಇಳಿಸಲು ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಿ : ಸಿಎಂ

Friday, May 28th, 2021
Tumkuru Covid

ಬೆಂಗಳೂರು / ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು. ಕೋವಿಡ್ 19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ […]

ಬಡವರು, ಕಾರ್ಮಿಕರಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

Thursday, May 27th, 2021
street-vendors

ಬೆಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ, ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ವಿವಿಧ ಭಾಗಗಳಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,”ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಿನ ಜನ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೋಂಕಿನ ವಿರುದ್ಧದ ಹೋರಾಟವನ್ನ ಮತ್ತಷ್ಟು ಪರಿಣಾಮಕಾರಿಯಾಗಿಸಲು ಲಸಿಕೆ ನೀಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಮುಂಚೂಣಿಯ ಕಾರ್ಯಕರ್ತರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. […]

ಸಿ ಎಸ್ ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ

Wednesday, May 26th, 2021
Yedyurappa

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿ ಎಸ್ ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆಗಳನ್ನು ಸುಗಮವಾಗಿ ಮುಂದುವರೆಸಲು ಸರ್ಕಾರ ಮತ್ತು ದಾನಿಗಳ ನಡುವೆ ಒಂದು ಪಾರದರ್ಶಕ ಸೇತುವೆಯಾಗಿ ಈ ಪೋರ್ಟಲ್ ಕಾರ್ಯನಿರ್ವಹಿಸಲಿದೆ. ಇದರಿಂದ ಸಿ ಎಸ್ ಆರ್ ಅನುದಾನವನ್ನು ನಿಜಕ್ಕೂ ಅಗತ್ಯವಿರುವ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಕೋವಿಡ್ ನಿಯಂತ್ರಣ […]

ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಮೆಟ್ರೋ ಕಾಮಗಾರಿ ಪರಿಶೀಲನೆ

Wednesday, May 26th, 2021
metro

ಬೆಂಗಳೂರು : ಟ್ರಾಫಿಕ್ ಸಮಸ್ಯೆ ದೂರ ಮಾಡುವ ನಿಟ್ಟಿನಲ್ಲಿ ನಗರದಲ್ಲಿ ಮತ್ತೊಂದು ಮೆಟ್ರೋ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದ್ದು, ಆ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಮಗಾರಿಯ ಪರಿಶೀಲನೆ ನಡೆಸಿದರು. ಇಂದು ಸಂಪುಟದ ಸಹೋದ್ಯೋಗಿಗಳ ಜೊತೆಗೆ ಹಂತ 2ರ ರೀಚ್ 2 ಮೈಸೂರು ರಸ್ತೆಯ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ ನೂತನ ಮಾರ್ಗದ ಕಾಮಗಾರಿಯನ್ನ ಪರಿವೀಕ್ಷಣೆ ಮಾಡಿದರು. ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಖುದ್ದು ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸಿದ ಮುಖ್ಯಮಂತ್ರಿಗಳು ಕೆಂಗೇರಿ […]

ಕರ್ನಾಟಕದ ಕೋವಿಡ್ ಲಾಕ್ ಡೌನ್ ಪ್ಯಾಕೇಜ್ ಇಲ್ಲಿದೆ ನೋಡಿ

Wednesday, May 19th, 2021
yedyurappa

ಬೆಂಗಳೂರು: ಕೊರೋನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗಿದ್ದರಿಂದ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಈ ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು 1,250 ಕೋಟಿ ರೂಪಾಯಿಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳು ಇಂದು ಪ್ರಕಟಿಸಿದ ಪರಿಹಾರ ಪ್ಯಾಕೇಜ್  ಇಲ್ಲಿದೆ ನೋಡಿ.  *ಹೂವು ಬೆಳೆಯುವ ರೈತರಿಗೆ ಹಾನಿ ಆಗಿದ್ದರೆ ಹೆಕ್ಟೇರ್‌ಗೆ ₹10,000 ನೀಡಲಾಗುವುದು. ಇದರಿಂದ 20 […]

ರಾಸಲೀಲೆ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

Wednesday, March 3rd, 2021
jarakiholi

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. ಸೆಕ್ಸ್ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಖಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ಅವರು, ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ರಾಜಿನಾಮೆ ನೀಡಿದ್ದರು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ಈ […]