ವೃದ್ಧನನ್ನು ಅಪಹರಿಸಿ ಕೊಲೆ, ನಾಲ್ವರು ಆರೋಪಿಗಳ ಬಂಧನ

Tuesday, November 3rd, 2020
Palliyabba

ಮಂಗಳೂರು : ಇರಾ ಗ್ರಾಮದ ಮೂಳೂರು  ಡಬಲ್ ರೋಡ್ ನಿರ್ಜನ ಪ್ರದೇಶದ ಗುಡ್ಡ ಜಾಗದಲ್ಲಿ 71 ವರ್ಷದ ವೃದ್ಧನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕೋಣಾಜೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಮಲಾರ್ನ ಪಳ್ಳಿಯಬ್ಬ (71) ಎಂಬ ವೃದ್ಧರೊಬ್ಬರನ್ನು ಅ. 29ರಂದು ಅಪಹರಿಸಿ ಇರಾ ಗ್ರಾಮದ ಮೂಳೂರು ಡಬಲ್ ರೋಡ್ ನಿರ್ಜನ ಪ್ರದೇಶದ ಗುಡ್ಡ ಜಾಗದಲ್ಲಿ ಕೊಲೆ ಮಾಡಿ ಮೃತದೇಹವನ್ನು ಹೊಂಡ ತೆಗೆದು ಮುಚ್ಚಲಾಗಿತ್ತು. ಈ ಕೊಲೆ ಪ್ರಕರಣ ನಿನ್ನೆ ಬೆಳಕಿಗೆ ಬಂದಿದ್ದು, ಈ […]

ಮುಡಿಪು-ಮೂಳೂರು ರಸ್ತೆ ಅವ್ಯವಸ್ಥೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Tuesday, March 13th, 2018
protest

ಮಂಗಳೂರು: ಮುಡಿಪು ಚೆಕ್‌ಪೋಸ್ಟ್‌ನಿಂದ ಮೂಳೂರುವರೆಗಿನ ರಸ್ತೆ ದುರವಸ್ಥೆಯ ವಿರುದ್ಧ ಮಂಗಳೂರು ಕ್ಷೇತ್ರ ಎಸ್‌ಡಿಪಿಐ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಹಾರೀಶ್ ಮಲಾರ್ ಅವರು, ನಾವು ಪ್ರತಿಭಟನೆ ಮಾಡಿದರೆ ರಾಜಕೀಯ ಎಂದು ಆರೋಪಿಸಲಾಗುತ್ತದೆ, ಆದರೆ ಎಂದಿಗೂ ರಾಜಕೀಯಕ್ಕಾಗಿ ಯಾವುದೇ ಹೋರಾಟ ಮಾಡಿಲ್ಲ. ಈಗ ಮಾಡುತ್ತಿರುವ ಪ್ರತಿಭಟನೆಯೂ ಸಮಸ್ಯೆಯ ವಿರುದ್ಧ ಆಗಿದೆ ಎಂದು ಹೇಳಿದರು. ಮುಡಿಪು ಮೂಳೂರು ರಸ್ತೆಯು ಮಂಚಿ, ಕಲ್ಲಡ್ಕ ಸಂಪರ್ಕಿಸುವ […]