Blog Archive

ಪರ್ಷಿಯನ್ ಬೋಟ್ ಮುಳುಗಡೆ ಇಬ್ಬರ ಮೃತದೇಹ ಪತ್ತೆ, ನಾಲ್ವರಿಗೆ ಶೋಧ

Tuesday, December 1st, 2020
Sri Raksha

ಮಂಗಳೂರು : ಶ್ರೀ ರಕ್ಷಾ ಹೆಸರಿನ ಪರ್ಷಿಯನ್ ಬೋಟ್ ಮುಳುಗಡೆಯಾಗಿ ನಾಪತ್ತೆಯಾದ ಆರು ಮೀನುಗಾರರ ಪೈಕಿ ಇಬ್ಬರ ಮೃತದೇಹ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿವೆ. ಮಂಗಳೂರಿನ ಬೊಕ್ಕಪಟ್ಣದ ಪಾಂಡುರಂಗ ಸುವರ್ಣ, ಪ್ರೀತಂ ಎಂಬುವರ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಘಟನೆ ನಡೆದ ಸುತ್ತಲ ಪ್ರದೇಶದಲ್ಲಿ ಮುಳುಗು ತಜ್ಞರು, ಸ್ಥಳೀಯ ಮೀನುಗಾರರು ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಗ ಇಬ್ಬರ ಮೃತದೇಹವನ್ನು ಮುಳುಗು ತಜ್ಞರು ಮೇಲಕ್ಕೆತ್ತಿದ್ದಾರೆ. ಸೋಮವಾರ ಸಂಜೆ  ಮೀನುಗಾರಿಕೆಗೆ ತೆರಳಿ ಮೀನು ತುಂಬಿಸಿಕೊಂಡು ವಾಪಸ್ […]

ಕಂಕನಾಡಿ ಬಾರ್&ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಹೆಣ

Thursday, August 20th, 2020
bar

ಮಂಗಳೂರು : ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ, ಪ್ರಾಯ: ಸುಮಾರು 53 ವರ್ಷ. […]

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

Friday, August 7th, 2020
wonman-deadbody

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಜತ್ತೂರು ಗ್ರಾಮದ ನೀರಕಟ್ಟೆ ಡ್ಯಾಮ್ ಬಳಿಯ ನೇತ್ರಾವತಿ ನದಿಯಲ್ಲಿ ಆ. 6ರಂದು ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದೇಹವೂ ನದಿ ನೀರಿನಲ್ಲಿ ತೇಲಿಕೊಂಡು ಬಂದು ನೀರಕಟ್ಟೆ ವಿದ್ಯುತ್ ಸ್ಥಾವರದ ಆಣೆಕಟ್ಟಿನ ಕಸದ ರಾಶಿ ಜೊತೆ ಸೇರಿತ್ತು.ಈ ಬಗ್ಗೆ ವಿದ್ಯುತ್ ಸ್ಥಾವರದ ಕೆಲಸಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ತನಿಖೆ ಮುಂದುವರೆಸಿದ್ದಾರೆ. ಸುಮಾರು 40 ರಿಂದ 50 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು, ಮೃತ […]

ಕಿನ್ನಿಗೋಳಿಯ ಯುವಕ ಕುವೈಟ್‌ನ ಸಾಲ್ಮಿಯಾ ಬೀಚ್‌ನಲ್ಲಿ ನೀರು ಪಾಲು

Sunday, July 19th, 2020
Mohammed Anish

ಮಂಗಳೂರು : ಕಿನ್ನಿಗೋಳಿಯ ಯುವಕನೊಬ್ಬ ಕುವೈಟ್‌ನ ಸಾಲ್ಮಿಯಾ ಬೀಚ್‌ನಲ್ಲಿ ಮುಳುಗುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವನ ರಕ್ಷಣೆ ಮಾಡಲು ಮುಂದಾದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ  ನಡೆದಿದೆ. ಮೃತ ವ್ಯಕ್ತಿಯನ್ನು ಮಂಗಳೂರು ಹೊರವಲಯದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ (28) ಎಂದು ಗುರುತಿಸಲಾಗಿದೆ. ಭಾರತೀಯ ಕಾಲಮಾನ 8.30 ಕ್ಕೆ ಕುವೈಟ್ ರಾಷ್ಟ್ರದ ಸಾಲ್ಮಿಯಾ ಬೀಚ್‌ನಲ್ಲಿ ಅನೀಸ್ ತನ್ನ ಸ್ನೇಹಿತರ ಜೊತೆಗೂಡಿ ಈಜಲು‌ ತೆರಳಿದ್ದು ಸಮುದ್ರ ಪಾಲಾಗುತ್ತಿದ್ದ ಈಜಿಪ್ಟ್‌ನ ಅಪರಿಚಿತ ಯುವಕನ ರಕ್ಷಣೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅನೀಸ್‌ ನೀರಿನಲ್ಲಿ ಮುಳುಗಿದ್ದು […]

ಸಮಾಜ ಸೇವೆಗೆಂದು ಲಭ್ಯವಿದ್ದ 30 ಮೃತದೇಹ ಮಣ್ಣುಪಾಲು !

Wednesday, May 27th, 2020
ಸಮಾಜ ಸೇವೆಗೆಂದು ಲಭ್ಯವಿದ್ದ 30 ಮೃತದೇಹ ಮಣ್ಣುಪಾಲು !

ಬೆಳಗಾವಿ: ತಮ್ಮ ಸಾವಿನ ನಂತರವೂ ನಮ್ಮ ದೇಹ ಸಮಾಜಕ್ಕೆ ಉಪಯೋಗವಾಗಲಿ ಎಂದು ಎಷ್ಟೋ ಜನರು ಆಸ್ಪತ್ರೆಗಳಿಗೆ ತಮ್ಮ ಸಾವಿನ ನಂತರ ವೈದ್ಯ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆಂದು ದೇಹದಾನ ಮಾಡುತ್ತಾರೆ. ಆದರೆ, ವಿಶ್ವಕ್ಕೆ ವಕ್ಕರಿಸಿದ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 30 ಕ್ಕೂ ಹೆಚ್ಚು ದಾನ ಮಾಡಿದ ದೇಹಗಳನ್ನು ಸ್ವೀಕರಿಸಲಾಗದೆ ಅಂತ್ಯಸಂಸ್ಕಾರ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಬೆಳಗಾವಿಯ ಡಾ.ರಾಮಣ್ಣವರ ಚಾರಿಟೇಬಲ್‌ ಟ್ರಸ್ಟ್‌ ನ ಡಾ. ಮಹಾಂತೇಶ ರಾಮಣ್ಣವರ, ಲಾಕ್ ಡೌನ ಸಂದರ್ಭದಲ್ಲಿ ಸರಕಾರವು ದೇಹದಾನದ ಕುರಿತು ಸರಿಯಾದ ಮಾಹಿತಿ ಮತ್ತು […]

ಕಡಬ : ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

Friday, February 28th, 2020
kumaradhara

ಕಡಬ : ಸ್ನಾನಕ್ಕೆಂದು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಾರಧಾರ ನದಿಯಲ್ಲಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನನ್ನು ಕೊಯಿಲ ಗ್ರಾಮದ ಜನತಾ ಕಾಲೋನಿ ನಿವಾಸಿ ಯೂಸುಫ್ ಎಂಬವರ ಪುತ್ರ ಅರ್ಫಾಝ್ (22) ಎಂದು ಗುರುತಿಸಲಾಗಿದೆ. ಅರ್ಫಾಝ್ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕೊಯಿಲ ಗ್ರಾಮದ ಸುದೆಂಗಳ ಸಮೀಪ ಕುಮಾರಧಾರ ನದಿಗಿಳಿದಿದ್ದು, ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದ ಕಡಬ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸ್ಥಳೀಯ ಮುಳುಗು ತಜ್ಞರ ಸಹಕಾರದೊಂದಿಗೆ ನದಿಯಲ್ಲಿ ಶೋಧ […]

ನೇತ್ರಾವತಿ ಸೇತುವೆಯಿಂದ ನದಿಗೆ ದುಮುಕಿದ ಯುವಕನ ಮೃತದೇಹ ಪತ್ತೆ

Friday, January 3rd, 2020
naveesh

ಮಂಗಳೂರು : ಮಂಗಳೂರಿನ ಹೊರವಲಯದ ನೇತ್ರಾವತಿ ಸೇತುವೆಯಿಂದ ನದಿಗೆ ದುಮುಕಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜ.3 ರ ಬೆಳಿಗ್ಗೆ 6:30 ಕ್ಕೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ನದಿಗೆ ಹಾರಿದ ಯುವಕನನ್ನು ಉಳ್ಳಾಲಬೈಲ್ ನಿವಾಸಿ ನವೀಶ್ ಎಂದು ಗುರುತಿಸಲಾಗಿದೆ. ಬೆಳಗ್ಗಿನ ಜಾವ ಮನೆಯಿಂದ ಹೊರಟವರು ನೇತ್ರಾವತಿ ನದಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆ ನಡೆಸಿದ್ದಾರೆ. ನವೀಶ್ ಅವರು ಕುತ್ತಾರು ಸನಿಹ ಶಾಮಿಯಾನ ಹಾಗೂ ನೀರಿನ ಟ್ಯಾಂಕರ್ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಯ ಹಿಂದೆ […]

ಕಂಕನಾಡಿ ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರು ಯುವಕರ ಶವ ಪತ್ತೆ

Thursday, February 16th, 2017
kankanady

ಮಂಗಳೂರು: ನಗರದ ಕಂಕನಾಡಿ ಬೈಪಾಸ್ ನಲ್ಲಿನ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಸುಮಾರು 40 ವರ್ಷ ಪ್ರಾಯದ ಇಬ್ಬರು ಅಪರಿಚಿತ ಪುರುಷರ ಮೃತದೇಹ ಭಾಗಶ: ಕೊಳೆತ ಸ್ಥಿತಿಯಲ್ಲಿ ಬುಧವಾರದಂದು ಪತ್ತೆಯಾಗಿವೆ. ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಇನ್ನು ತಿಳಿದು ಬಂದಿಲ್ಲ. ಕಟ್ಟಡದ ಆರನೇ ಮಹಡಿಯಲ್ಲಿ ಅಂಗಾತ ಮಲಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿವೆ. ಶವದ ಬಳಿ ಮರದ ದೊಣ್ಣೆಗಳೂ ಪತ್ತೆಯಾಗಿವೆ. ಕಟ್ಟಡದ ಕಾಮಗಾರಿ ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿದೆ. ಸ್ಥಳಕ್ಕೆ ಆಗಮಿಸಿರುವ ಕದ್ರಿ ಪೊಲೀಸರು […]

ಎಂಡೋ ಸಂತ್ರಸ್ತ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ

Thursday, January 5th, 2017
belthangady

ಬೆಳ್ತಂಗಡಿ: ಎಂಡೋ ಸಂತ್ರಸ್ತ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕ ಗ್ರಾಮದಲ್ಲಿ ನಡೆದಿದೆ. ಕೊಕ್ಕ ಗ್ರಾಮದ ನಿವಾಸಿಗಳಾದ ಬಾಬು ಗೌಡ (62), ಪತ್ನಿ ಗಂಗಮ್ಮ (55), ಮಗ ಸದಾನಂದ (32) ಹಾಗೂ ಮತ್ತೊಬ್ಬ ಮಗ ನಿತ್ಯಾನಂದ (30) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮನೆಯಲ್ಲಿನ ಇಬ್ಬರು ಮಾರಕ ಎಂಡೋ ಸಲ್ಫಾನ್‌ ಅಡ್ಡಪರಿಣಾಮದಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. […]

ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆ

Saturday, November 5th, 2016
Bunder murder

ಮಂಗಳೂರು: ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಹಳೆ ಬಂದರಿನ ರೈಲ್ವೆ ಸಿಮೆಂಟ್ ಗೋದಾಮಿನಲ್ಲಿ ಪತ್ತೆಯಾಗಿದೆ. ಕೊಲೆಗೀಡಾದ ವ್ಯಕ್ತಿ ಕೂಲಿ ಕಾರ್ಮಿಕ ಎನ್ನಲಾಗಿದ್ದು, ಮುಖ ಜಜ್ಜಿ ಹೋಗಿದ್ದು, ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ಕಳೆದ ತಡರಾತ್ರಿ ಕೊಲೆ ನಡೆದಿರಬಹುದು ಎನ್ನಲಾಗಿದೆ. ಎಸಿಪಿ ಶ್ರುತಿ ಎನ್. ಎಸ್., ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್‍ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.