Blog Archive

ಈ ದೇಶದ ನಂ ಒನ್ ಸುಳ್ಳುಗಾರ ಪ್ರಧಾನಿ ಮೋದಿ: ರಮಾನಾಥ ರೈ

Wednesday, May 9th, 2018
ramanath-rai

ಕಡಬ: ನಮ್ಮಲ್ಲಿ ಇಬ್ಬರು ಸುಳ್ಳುಗಾರರಿದ್ದಾರೆ, ಅದರಲ್ಲಿ ಒಂದನೆ ಸುಳ್ಳುಗಾರ ಸಂಸದ ನಳಿನ್ ಕುಮಾರ್ ಕಟೀಲ್, ಮತ್ತೊಬ್ಬ ಮಹಾನ್ ಸುಳ್ಳುಗಾರ ಇದ್ದರೆ ಅವರು ಈ ದೇಶದ ಪ್ರಧಾನಿ ಮೋದಿಯವರು. ಇನ್ನು ಮುಂದೆ ಜನ ಅವರನ್ನು ನಂಬುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಮಂಗಳವಾರ ಕಡಬ ಮೇಲಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎಂಬ ಕಾರಣಕ್ಕಾಗಿ ನಾನು ಈ […]

2019 ರಲ್ಲಿ ನಾನೇ ಪ್ರಧಾನಿಯಾಗಿ ಆಯ್ಕೆಯಾಗುತ್ತೇನೆ: ರಾಹುಲ್ ಗಾಂಧಿ

Tuesday, May 8th, 2018
rahul-prime

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್‌ ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿ ಈ ಹೇಳಿಕೆ ನೀಡಿದ್ದಾರೆ. ‘2019 ರಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದಿಲ್ಲ,ನಾನೇ ಪ್ರಧಾನಿಯಾಗಿ ಆಯ್ಕೆಯಾಗುತ್ತೇನೆ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ‘ಬಿಜೆಪಿಯವರು ವ್ಯವಸ್ಥಿತವಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿದ್ದಾರೆ.ಪ್ರಧಾನಿ ಮೋದಿ ಅವರು ನಿರಂತರವಾಗಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನನ್ನ ಪ್ರಶ್ನೆ ಏನೆಂದರೆ ಯಾಕೆ ಭ್ರಷ್ಟ, ಜೈಲು ಪಾಲಾಗಿದ್ದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸಿದ್ದೀರಿ ? ಯಾಕೆ ಸ್ವಚ್ಛ ಚಾರಿತ್ರ್ಯ […]

ಅಮೇಠಿ ಮರೆತಿರುವ ರಾಗಾ ಇಲ್ಲಿ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ : ಸ್ಮೃತಿ ಇರಾನಿ

Tuesday, May 8th, 2018
smriti-irani

ಮಂಗಳೂರು: ತಾನು ಪ್ರತಿನಿಧಿಸುವ ಅಮೇಠಿ ಕ್ಷೇತ್ರದಲ್ಲೇ ಅಭಿವೃದ್ಧಿ ಮಾಡದ ರಾಹುಲ್‌‌, ಇಲ್ಲಿ ಬಂದು ಅಭಿವೃದ್ಧಿಯ ಭಾಷಣ ಮಾಡುತ್ತಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ. ಬೆಳ್ತಂಗಡಿಯಲ್ಲಿಂದು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಗಾಂಧಿ ಕುಟುಂಬ 60 ವರ್ಷಗಳಿಂದ ಅಮೇಠಿ ಕ್ಷೇತ್ರ ಪ್ರತಿನಿಧಿಸುತ್ತಿದೆ. ಆದರೆ, ಅಲ್ಲಿ ಕನಿಷ್ಠ ರೈಲ್ವೆ ಹಳಿಯನ್ನು ತರಲು ಸಾಧ್ಯವಾಗಿಲ್ಲ. ಅಲ್ಲಿನ ಬಡಜನರ ಕಷ್ಟವನ್ನು ನೋಡಲಾಗದು. ನಾಲ್ಕು ತಲೆಮಾರುಗಳಿಂದ ಸಾಧ್ಯವಾಗದ […]

ಪ್ರಧಾನಿ ಮೋದಿ ಅವರದ್ದು ಸುಳ್ಳಿನ ಕಂತೆ: ಆರ್.ಪಿ.ಎನ್. ಸಿಂಗ್ ಹೇಳಿಕೆ

Monday, May 7th, 2018
prime-minister

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಕಂತೆ ಕಟ್ಟುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಪಿ.ಎನ್. ಸಿಂಗ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಕಂತೆ ಕಟ್ಟುತ್ತಿದ್ದಾರೆ. 45 ನಿಮಿಷಗಳ ಭಾಷಣದಲ್ಲಿ 5 ನಿಮಿಷವೂ ಅಭಿವೃದ್ಧಿ ಬಗ್ಗೆ ಮಾತಾಡಿಲ್ಲ. ಉದ್ಯೋಗ ಸೃಷ್ಟಿ, ಅಭಿವೃದ್ಧಿ ಬಗ್ಗೆ ತಮ್ಮ ಭರವಸೆಯನ್ನು ಅವರು ಮರೆತಿದ್ದಾರೆ. 4 ವರ್ಷದಲ್ಲಿ ರೈತರ ಸಾಲದ ಒಂದು ರೂ. ಕೂಡ ಮನ್ನಾ ಮಾಡಲಿಲ್ಲ.ತನ್ನ ಸ್ವಂತ ಕ್ಷೇತ್ರದಲ್ಲಿ ಸ್ವಚ್ಚತೆ […]

ರಮಾನಾಥ ರೈ ಕಾರ್ಯಕ್ರಮದಲ್ಲಿ ಮೋದಿ ಪರ ಘೋಷಣೆ..!

Monday, May 7th, 2018
ramanath-rai

ಮಂಗಳೂರು: ಸಚಿವ ರಮಾನಾಥ ರೈ ಕಾರ್ಯಕ್ರಮದಲ್ಲಿ ಮೋದಿ ಪರ ಘೋಷಣೆ ಕೂಗಲಾಗಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಮಾನಾಥ ರೈ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು ಸಚಿವ ರಮಾನಾಥ ರೈ ಅವರನ್ನು ಅಡ್ಡಗಟ್ಟಿ ಮೋದಿ‌ ಎಂದು ಘೋಷಣೆ ಕೂಗಿದ್ದಾರೆ. ಮೋದಿ ಎಂದು ಘೋಷಣೆ ಕೂಗಿದ ವೇಳೆ ಸಚಿವ ರಮಾನಾಥ ರೈ ಏನೂ ಪ್ರತಿಕ್ರಿಯಿಸದೆ ಮೌನವಾಗಿ ನಿಂತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಚುನಾವಣೆಗೆ ಮುನ್ನ ನೀಡಿದ ಭರವಸೆ ಬಗ್ಗೆ ಹೇಳಲು ಮೋದಿಯಲ್ಲಿ ಏನೂ ಉಳಿದಿಲ್ಲ: ರಣದೀಪ್ ಸುರ್ಜೇವಾಲ

Monday, May 7th, 2018
randeep

ಮಂಗಳೂರು: 2014ರಲ್ಲಿ ಮೋದಿ ಮಂಗಳೂರಿನಲ್ಲಿ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಚುನಾವಣೆಗೆ ಮುನ್ನ ನೀಡಿದ ಭರವಸೆ ಬಗ್ಗೆ ಹೇಳಲು ಮೋದಿಯಲ್ಲಿ ಏನೂ ಉಳಿದಿಲ್ಲ ಎಂದು ಎಐಸಿಸಿ ವಕ್ತಾರ ರಣದೀಪ್ ಸುರ್ಜೇವಾಲ ಟೀಕಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಮ್ಲಾ ಹೇಳಿಕೆಗಳಿಗೆ ಈಗ ಅವರು ಕುಖ್ಯಾತಿ ಪಡೆದಿದ್ದಾರೆ. ಘರ್ ಘರ್ ಮೋದಿ ಈಗ ಬೈ ಬೈ ಮೋದಿ ಆಗಿ ಬದಲಾಗಿದೆ. ಕರ್ನಾಟಕಕ್ಕೆ ಅವರು ಮೋಸ, ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಿದರು. ರಾಜ್ಯದ ಯೋಜನೆಗಳನ್ನು ತಪ್ಪಿಸುವುದು ಬಿಜೆಪಿಯ ಡಿಎನ್ಎ ಆಗಿದೆ. […]

ಮೋದಿಗೆ ಅಂಬೇಡ್ಕರ್ ಬಗ್ಗೆ ಮಾತಾಡಲು ನೈತಿಕ ಹಕ್ಕಿಲ್ಲ: ಕಾಂಗ್ರೆಸ್ ನಾಯಕಿ ಶೆಲ್ಜಾ

Saturday, May 5th, 2018
ambedkar

ಮಂಗಳೂರು: ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಸುಳ್ಳುಗಳು ಹೊರಬರುತ್ತಿವೆ. ಪ್ರಧಾನಿ ಮೋದಿಗೆ ಅಂಬೇಡ್ಕರ್ ಬಗ್ಗೆ ಮಾತಾಡಲು ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಕುಮಾರಿ ಶೆಲ್ಜಾ ಮಂಗಳೂರಿನಲ್ಲಿ ಹೇಳಿದ್ದಾರೆ. ತಳಮಟ್ಟದಲ್ಲಿ ದಲಿತ ಸಮಸ್ಯೆಗಳು ಜ್ವಲಂತವಾಗಿ ಉಳಿದಿವೆ. ದಲಿತ ದೌರ್ಜನ್ಯ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. 1989ರಲ್ಲಿ ರಾಜೀವ್ ಗಾಂಧಿ ತಂದ ಕಾನೂನನ್ನು ಯುಪಿಎ ಎರಡನೇ ಅವಧಿಯಲ್ಲಿ ಮತ್ತಷ್ಟು ಪ್ರಬಲಗೊಳಿಸಲಾಯಿತು. ಆದರೆ ಮೋದಿ ಸರ್ಕಾರ 13 ಅಧ್ಯಾದೇಶ ಜಾರಿಗೊಳಿಸಿದೆ. ಇದರಿಂದ ದಲಿತ ದೌರ್ಜನ್ಯ ಕಾಯ್ದೆ ಹಲ್ಲಿಲ್ಲದ ಹಾವಾಗಿದೆ. ಮೋದಿಯವರದ್ದು ದಲಿತರ […]

‘ಆನ್ಸರ್ ಮಾಡಿ ಮೋದಿ’… ಪ್ರಧಾನಿಗೆ ಚಾಲೆಂಜ್ ಹಾಕಿದ ಕಾಂಗ್ರೆಸ್

Saturday, May 5th, 2018
rahul-gandhi

ಬೆಂಗಳೂರು: ಕರ್ನಾಟಕದ ಅಭಿವೃದ್ಧಿ ಬಗ್ಗೆ 15 ನಿಮಿಷ ಮಾತನಾಡಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಇತ್ತೀಚೆಗಷ್ಟೇ ಸವಾಲು ಹಾಕಿದ್ದರು. ಈ ಬೆನ್ನಲ್ಲೇ ‘ಆನ್ಸರ್ ಮಾಡಿ ಮೋದಿ’ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಟ್ವಿಟರ್‌ನಲ್ಲಿ ಪ್ರಧಾನಿಗೆ ಕಾಂಗ್ರೆಸ್‌ ಭರ್ಜರಿಯಾಗೇ ತಿರುಗೇಟು ನೀಡಿದೆ. ಮೋದಿ ಅವರೇ ನೀವು ತುಂಬಾ ಮಾತಾಡ್ತಿರಿ. ಆದ್ರೆ ನಿಮ್ಮ ಮಾತಿಗೂ ಕ್ರಿಯೆಯೂ ಹೊಂದಾಣಿಕೆ ಆಗಲ್ಲ. ಕರ್ನಾಟಕದಲ್ಲಿ ಎಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೀರಿ ಎಂಬುದಕ್ಕೆ ಇಲ್ಲಿದೆ ಚಿಕ್ಕ ವಿಡಿಯೋ ತುಣಕು. ಇದು ‘ಕರ್ನಾಟಕ ಮೋಸ್ಟ್ […]

ಮೋದಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ: ಪ್ರಕಾಶ್ ರೈ

Friday, May 4th, 2018
bollywood

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಯಾವುದೇ ಪಾತ್ರಗಳ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಟೀಕಿಸಿದ ಬಳಿಕ ತಮ್ಮನ್ನು ಹಿಂದಿ ಸಿನಿಮಾರಂಗ ಮೂಲೆಗುಂಪು ಮಾಡಿತು ಎಂದು ಸಂದರ್ಶನವೊಂದರಲ್ಲಿ ರೈ ದೂರಿದ್ದಾರೆ. ಆದರೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಯಾವುದೇ ಸಮಸ್ಯೆ […]

ಮಲ್ಲಿಕಾರ್ಜುನ ಖರ್ಗೆಗೆ ಅನ್ಯಾಯ ಆಗಿದೆ ಎಂದ ಮೋದಿಗೆ ಆನಂದ ಶರ್ಮ ತಿರುಗೇಟು

Friday, May 4th, 2018
malikarjun

ಮಂಗಳೂರು: ಮಲ್ಲಿಕಾರ್ಜುನ ಖರ್ಗೆಗೆ ಅನ್ಯಾಯ ಆಗಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಆನಂದ ಶರ್ಮ ತಿರುಗೇಟು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉನ್ನತ ಸ್ಥಾನವನ್ನು ಪಕ್ಷದಲ್ಲಿ ನೀಡಲಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವನ್ನು ನೀಡಲಾಗಿದೆ. ಆದರೆ ಮಲ್ಲಿಕಾರ್ಜುನ ಖರ್ಗೆಯ ಸ್ಥಾನಕ್ಕೆ ಸರಿಯಾದ ಮಾನ್ಯತೆಯನ್ನು ಕೇಂದ್ರ ಸರ್ಕಾರ ನೀಡಿಲ್ಲ ಎಂದರು. ಮೋದಿಯವರು ಕನಸಿನ ಸಾಮ್ರಾಜ್ಯ ಕಟ್ಟುತ್ತಿದ್ದಾರೆ. ಅವರು ಕೇವಲ ಸುಳ್ಳುಗಳನ್ನು ಮಾತ್ರ ಮಾತನಾಡುತ್ತಾರೆ. ಮೋದಿ ಕರ್ನಾಟಕ ಜನರ ಕ್ಷಮೆ ಕೇಳಬೇಕು. ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ಮೋದಿ […]