Blog Archive

ಪ್ರಧಾನಿ ಮೋದಿಯನ್ನು ಟೀಕಿಸುವ ಪ್ರಕಾಶ್ ರಾಜ್‌ಗೆ ಯೋಗ್ಯತೆಯಿಲ್ಲ: ಹುಚ್ಚ ವೆಂಕಟ್‌

Friday, May 4th, 2018
prakash-rai

ಮಂಗಳೂರು: ಫೈರಿಂಗ್‌ ಸ್ಟಾರ್‌‌ ಹುಚ್ಚ ವೆಂಕಟ್‌‌ ನಟ ಪ್ರಕಾಶ್ ರಾಜ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಸಿನೆಮಾದಲ್ಲಿ ತಮ್ಮ ಸಂಭಾವನೆ ದರ ಹೆಚ್ಚಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಕಾಶ್‌ ರಾಜ್‌ ಟೀಕಿಸುತ್ತಿದ್ದಾರೆ ಎಂದು ವೆಂಕಟ್‌ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯನ್ನು ಟೀಕಿಸುವ ಪ್ರಕಾಶ್ ರಾಜ್‌ಗೆ ಯೋಗ್ಯತೆಯಿಲ್ಲ. ಸಿನಿಮಾದಲ್ಲಿ ತನ್ನ ವ್ಯಾಲ್ಯೂ ಹೆಚ್ಚಿಸಲು ಮೋದಿಯನ್ನು ಟೀಕಿಸುತ್ತಿದ್ದಾರೆ ಅಷ್ಟೇ. ಯಾರಾದರೂ ದೊಡ್ಡವರನ್ನು ಟೀಕಿಸಿದರೆ ತಮ್ಮ ವ್ಯಾಲ್ಯೂ ಹೆಚ್ಚುತ್ತೆ ಎಂದು ಅವರು ತಿಳಿದುಕೊಂಡಿದ್ದಾರೆ ಎಂದು ಆಪಾದಿಸಿದರು. ಸಿನಿಮಾ ಡೈಲಾಗ್‌ […]

ಪ್ರಕಾಶ್ ರೈ ಗೆ ಮಾಡಲು ಯಾವುದೇ ಕೆಲಸಗಳಿಲ್ಲ, ಹೋದಲ್ಲೆಲ್ಲ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ: ಹುಚ್ಚ ವೆಂಕಟ್

Friday, May 4th, 2018
venkat

ಮಡಿಕೇರಿ: ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡುತ್ತಿರುವ ಚಿತ್ರನಟ ಪ್ರಕಾಶ್ ರಾಜ್‌ ವಿರುದ್ಧ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ನನ್ನ ಅಚ್ಚುಮೆಚ್ಚಿನ ನಾಯಕ ಎಂದರು. ಚಿತ್ರನಟ ಪ್ರಕಾಶ್ ರಾಜ್‌ಗೆ ಮಾಡಲು ಯಾವುದೇ ಕೆಲಸಗಳಿಲ್ಲ. ಆದ್ದರಿಂದ ಹೋದಲ್ಲೆಲ್ಲ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ. ಇದನ್ನು ಸಿನಿಮಾದಲ್ಲಿ ಮಾತ್ರ ಜನರು ಇಷ್ಟಪಡುತ್ತಾರೆಯೇ ಹೊರತು, ರಿಯಲ್ ಲೈಫ್‌ನಲ್ಲಿ ಈ ಡೈಲಾಗ್ ವರ್ಕೌಟ್ ಆಗಲ್ಲ ಎಂದರು. ಉತ್ತಮ ವಿಚಾರಗಳನ್ನು ಎಲ್ಲರೂ ಇಷ್ಟಪಡಬೇಕೆಂದೇನೂ ಇಲ್ಲ. ಹಾಗೆಯೇ ಪ್ರಧಾನಿ […]

ಮೋದಿ ನಂತರ ಕಲಬುರಗಿಗೆ ಇಂದು ರಾಹುಲ್‌‌ ಭೇಟಿ..

Friday, May 4th, 2018
rahul-gandhi

ಕಲಬುರಗಿ: ಜಿಲ್ಲೆಯಲ್ಲಿ ಸ್ಟಾರ್ ಕ್ಯಾಂಪೇನರ್ಸ್‌ ಅಬ್ಬರ ಜೋರಾಗಿದೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ರಾಹುಲ್ ಗಾಂಧಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಚಿಂಚೋಳಿ ತಾಲೂಕಿನ ಕಾಳಗಿಗೆ 12ಗಂಟೆಗೆ ಹೆಲಿಕಾಪ್ಟರ್‌‌ ಮೂಲಕ ಬಂದಿಳಿಯಲಿರುವ ರಾಗಾ ಜಿಲ್ಲೆಯ 9 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಮಾವೇಶ ಮೂಲಕ ಮತಯಾಚನೆ ಮಾಡಲಿದ್ದಾರೆ. ಇದಕ್ಕಾಗಿ ಕಾಳಗಿಯಲ್ಲಿ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಬೃಹತ್ ವೇದಿಕೆ ಹಾಕಲಾಗಿದೆ. ಜಿಲ್ಲೆಯ 9 ಕ್ಷೇತ್ರಗಳಿಂದ ಜನರನ್ನು ಸೇರಿಸುವ ಕೆಲಸವನ್ನು ಕಾಂಗ್ರೆಸ್ […]

ಮಂಗಳೂರಿನಲ್ಲಿ ಡಿಕೆಶಿ, ಉಮನ್‌ ಚಾಂಡಿ… ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ

Thursday, May 3rd, 2018
congress

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ, ಮಾಜಿ ಸಚಿವ ಗಂಗಾಧರ ಗೌಡ ಸಚಿವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಂಗಾಧರ ಗೌಡರಿಗೆ ಟಿಕೆಟ್‌ ತಪ್ಪಿದ ಹಿನ್ನೆಲೆ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗಂಗಾಧರ ಗೌಡ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಮೋದಿಯವರ ಅಚ್ಛೇ ದಿನ್ ಯಾರಿಗೂ ಬಂದಿಲ್ಲ. ಯಾರಿಗೂ 15 ಲಕ್ಷ ರೂ.‌ ಮೋದಿಯವರಿಂದ ದೊರಕಿಲ್ಲ. ನಿನ್ನೆ ಮೋದಿಯವರು ದೇವೇಗೌಡರನ್ನು ಹೊಗಳಿದ್ದರು. […]

ಮೋದಿಯವರು ನಿನ್ನೆ ನೀಡಿರುವ ಹೇಳಿಕೆ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಹೆಚ್.ಡಿ.ದೇವೇಗೌಡ

Wednesday, May 2nd, 2018
devegowda

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನೀಡಿರುವ ಹೇಳಿಕೆ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಪ್ರೆಸ್‍ ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟ ಜಂಟಿಯಾಗಿ ಇಂದು ಆಯೋಜಿಸಿದ್ದ 2018ರ ವಿಧಾನಸಭೆ ಚುನಾವಣೆ ಮಾತು ಮಂಥನ ಸಂವಾದಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ವಾಸ್ತವ ಸ್ಥಿತಿಯನ್ನು ಅರಿತು ಮಾಜಿ ಪ್ರಧಾನಿಗೆ ಗೌರವ ಕೊಡುವುದಾಗಿ ಹೇಳಿದ್ದಾರೆ. ಅದರಲ್ಲಿ ಯಾವುದೇ ಔಚಿತ್ಯವಿಲ್ಲ […]

ದೇಶದ ಜನರನ್ನು ನಾಲ್ಕು ವರ್ಷದಿಂದ ಮೋದಿ ಸರ್ಕಾರ ವಂಚಿಸಿದೆ: ಪಾಂಡಿಚೇರಿ ಸಿಎಂ ನಾರಾಯಣಸ್ವಾಮಿ

Wednesday, May 2nd, 2018
pandichaury

ಮಂಗಳೂರು: ಮೋದಿಯ ಸುನಾಮಿ ಕರ್ನಾಟಕವನ್ನು ಹಾಳುಗೆಡವಲಿದೆ ಎಂದು ಪಾಂಡಿಚೇರಿ ಸಿಎಂ ನಾರಾಯಣಸ್ವಾಮಿ ಹೇಳಿದರು. ನಗರದಲ್ಲಿಂದು ಕಾಂಗ್ರೆಸ್‌ ಪರ ಮತಯಾಚನೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಚುನಾವಣಾ ಭರವಸೆಗಳನ್ನು ಈಡೇರಿಸಿದ್ದಾರೆ. ಬಂಡವಾಳ ಹೂಡಿಕೆಯಲ್ಲಿ ಈ ರಾಜ್ಯ ಮೊದಲ ಸ್ಥಾನದಲ್ಲಿದೆ. ಐದು ವರ್ಷಗಳಿಂದ ಕರ್ನಾಟಕ ರಾಜ್ಯ ಉತ್ತಮ ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿದ್ರು. ಇನ್ನು ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ನಾರಾಯಣಸ್ವಾಮಿ, ಮೋದಿ ಸರ್ಕಾರ ರೈತರ ಪರ ಎಂದು ಹೇಳುತ್ತಾರೆ. ಆದರೆ, ಸಾಲ […]

‘ಮೋದಿಗೆ ಅಡ್ವಾಣಿಯವರ ಮೇಲೆ ಇಲ್ಲದ ಮಮಕಾರ ದೇವೇಗೌಡರ ಮೇಲೇಕೆ!: ಜೈವೀರ್ ಶೇರ್ಗಿಲ್ ವ್ಯಂಗ್ಯ

Wednesday, May 2nd, 2018
advaini

ಮಂಗಳೂರು: ಮೋದಿಯವರಿಗೆ ತನ್ನ ರಾಜಕೀಯ ಗುರು ಎಲ್.ಕೆ.ಅಡ್ವಾಣಿಯವರ ಮೇಲೆ ಇಲ್ಲದ ಮಮಕಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೇಲೆ ಹೇಗೆ ಉಕ್ಕಿ ಬಂತು ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈವೀರ್ ಶೇರ್ಗಿಲ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಪ್ರಧಾನಿಯವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮತದಾರರನ್ನು ದಾರಿ ತಪ್ಪಿಸುತ್ತಿವೆ. ಒಂದು ಕಡೆಯಿಂದ ದೇವೇಗೌಡರು ಬಿಜೆಪಿಯೊಂದಿಗೆ ಕೈಜೋಡಿಸಿದರೆ ನನ್ನ ಮಗನನ್ನು ಕುಟುಂಬದಿಂದ ಬಹಿಷ್ಕಾರ ಹಾಕುತ್ತೇನೆ ಎಂದು ಹೇಳುತ್ತಾರೆ. […]

ಸುಳ್ಳನ್ನೇ ಹೇಳುವ ಜಾಯಾಮಾನ ಬಿಜೆಪಿ ನಾಯಕರದ್ದು: ನಟ ಪ್ರಕಾಶ್ ರೈ

Saturday, April 28th, 2018
prakash-rai

ಬಂಟ್ವಾಳ: ಪ್ರಧಾನಿ ಮೋದಿಗೆ ಮತಿಭ್ರಮಣೆಯಾಗಿದೆ. 2019 ರ ಬಳಿಕ ಮೋದಿ ನಿರುದ್ಯೋಗಿ ಎಂದು ನಟ ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ. ಬಂಟ್ವಾಳದಲ್ಲಿ ನಡೆದ ಸಂವಿಧಾನ ಉಳಿವಿಗೆ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸುಳ್ಳನ್ನೇ ಹೇಳುವ ಜಾಯಾಮಾನದವರು ಬಿಜೆಪಿಯವರು. ಬೆದರು ಗೊಂಬೆಗಳ ತರಹ ಮಾತ್ರ ಬಿಜೆಪಿಯಿದೆ. ಬಿಜೆಪಿ ಪಕ್ಷಕ್ಕೆ ಸಿದ್ಧಾಂತ ಎಂಬುದೇ ಇಲ್ಲ. ಆರ್ ಎಸ್ಎಸ್ ಹೇಳಿದಂತೆ ಕೇಳುವ ಪಕ್ಷ ಎಂದು ಲೇವಡಿ ಮಾಡಿದರು. 2019 ರ ಬಳಿಕ ಮೋದಿ ನಿರುದ್ಯೋಗಿ. ಅನಂತರ ಮೋದಿ ಕರ್ನಾಟಕಕ್ಕೆ ಬಂದು ಕನ್ನಡ ಕಲಿಯಲಿ. […]

ಮೋದಿ ಬಸವಣ್ಣನ ವಚನ ಪುಸ್ತಕ ಓದಿ, ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ರಾಹುಲ್‌ ಗಾಂಧಿ

Friday, April 27th, 2018
speech-rahul

ಮಂಗಳೂರು: ಸಚಿವ ರಮಾನಾಥ ರೈ ಮತಕ್ಷೇತ್ರ ಬಂಟ್ವಾಳದಲ್ಲಿ ನಡೆದ ಕಾಂಗ್ರೆಸ್‌ನ ಬೃಹತ್‌ ಸಮಾವೇಶದಲ್ಲಿ ಎಐಸಿಸಿ ರಾಹುಲ್‌ ಗಾಂಧಿ ಭಾಗವಹಿಸಿ ಬಿಜೆಪಿ ಹಾಗೂ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೋದಿ ಹೋದಲ್ಲೆಲ್ಲಾ ಮನ್ ಕೀ ಬಾತ್ ಹೇಳ್ತಾರೆ. ನಮ್ಮದು ಕರ್ನಾಟಕದ ಜನರ ಮನದ ಮಾತು. ಜನರ ಮನವನ್ನು ನಾವು ಪ್ರಣಾಳಿಕೆಯಲ್ಲಿ ಅಳವಡಿಸಿದ್ದೇವೆ. ಮುಚ್ಚಿದ ಕೋಣೆಯಲ್ಲಿ ನಾವು ಪ್ರಣಾಳಿಕೆ ತಯಾರಿಸಿಲ್ಲ. ಬಸವಣ್ಣನ ವಚನ ನುಡಿದಂತೆ ನಡೆಯನ್ನು ನಾವು ಅನುಸರಿಸಿದ್ದೇವೆ. ರೆಡ್ಡಿ ಬ್ರದರ್ಸ್‌ಗೆ 8 ಟಿಕೆಟ್ ಕೊಟ್ಟಿದ್ದಾರೆ. ರೆಡ್ಡಿ, ಯಡಿಯೂರಪ್ಪ, […]

ಮೋದಿಯ ನವ ಭಾರತ ನಿರ್ಮಾಣದ ಕನಸಿಗೆ ರಾಜ್ಯದ ಜನ ಸ್ಪಂದಿಸಲಿದ್ದಾರೆ: ಸದಾನಂದಗೌಡ

Friday, April 27th, 2018
sadananda-gowda

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತ ನಿರ್ಮಾಣದ ಕನಸಿಗೆ ರಾಜ್ಯದ ಮತದಾರರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ಹೆಬ್ಬಾಳ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿ ಅವರೊಂದಿಗೆ ಭೂಪಸಂದ್ರ ವಾರ್ಡ್‍ನ ಸೆಂಟ್ರಲ್ ಎಕ್ಸೈಸ್ ಬಡಾವಣೆಯಲ್ಲಿ ಚುನಾವಣಾ ಪ್ರಚಾರ ನಡೆಸಿದರು. ನಂತರ ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಮಾತನಾಡಿದ ಅವರು, ರಾಜ್ಯದ ಮತದಾರರು ಮೋದಿ ನೇತೃತ್ವದ ಆಭಿವೃದ್ದಿ ಪರ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ನವ ಬೆಂಗಳೂರು-ನವ ಭಾರತ ಘೋಷಣೆ ಅಡಿಯಲ್ಲಿ ಪ್ರಧಾನಿ ಮೋದಿಯವರ […]