Blog Archive

ಪಕ್ಷದ ನಿರ್ಣಯಕ್ಕೆ ನಾನು ಬದ್ಧ : ಬಿ.ಶ್ರೀರಾಮುಲು

Wednesday, August 28th, 2019
sri-ramulu

ಬಳ್ಳಾರಿ : ಭಾರತೀಯ ಜನತಾ ಪಕ್ಷ ನನಗೆ ತಾಯಿಯ ಸಮಾನ ಇದ್ದಂತೆ. ಪಕ್ಷದ ನಿರ್ಣಯಕ್ಕೆ ನಾನು ಬದ್ಧನಾಗಿದ್ದು, ವೈಯಕ್ತಿಕ ಅಭಿಪ್ರಾಯವನ್ನು ಬದಿಗಿರಿಸಿ ನಾವೆಲ್ಲರೂ ಪಕ್ಷಕ್ಕಾಗಿ ದುಡಿಯಬೇಕು ಎಂದು ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು, ತಮ್ಮ ಪರವಾಗಿ ಯಾರೂ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡದಿರುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪಕ್ಷದೊಂದಿಗೆ ನಾನು […]

ಮಂಗಳೂರು : ಮೀನುಗಾರರಿಗೆ ತೆರಿಗೆ ರಹಿತ ಡೀಸೆಲ್, ಪ್ರಮಾಣ ಹೆಚ್ಚಳ; ಯಡಿಯೂರಪ್ಪ

Thursday, August 22nd, 2019
Meenugaarike

ಮಂಗಳೂರು : ಕರಾವಳಿಯ ಮೀನುಗಾರರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಂತ್ರೀಕೃತ ಮೀನುಗಾರರಿಗೆ ನೀಡಲಾಗುವ ತೆರಿಗೆ ರಹಿತ ಡೀಸೆಲ್ ವಿತರಣೆಯ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರಕಾರ ಸ್ಪಂದಿಸಿದೆ. ಬುಧವಾರದಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಕೃಷ್ಣಾದಲ್ಲಿ ಭೇಟಿಯಾಗಿ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಲ್ಪೆ ಮೀನುಗಾರರ ನಿಯೋಗದ ಸದಸ್ಯರು ಹಾಜರಿದ್ದರು. ಮೀನುಗಾರರ […]

ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕಾನೂನಿಗೆ ಅಡ್ಡಿ ಮಾಡಬೇಡಿ ಅಧಿಕಾರಿಗಳಿಗೆ ಮುಖ್ಯಮಂತ್ರಿಸೂಚನೆ

Monday, August 12th, 2019
Yedyurappa Dharmasthala

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಹಾನಿ ವೀಕ್ಷಣೆ ಮಾಡಿದ ಬಳಿಕ ಧರ್ಮಸ್ಥಳದಲ್ಲಿ ಅಧಿಕಾರಿಗಳು, ಶಾಸಕರು ಮತ್ತು ಸಂಸದರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಮನೆ ಕಳೆದುಕೊಂಡವರಿಗೆ 5 ಲಕ್ಷ, ಭಾಗಶಃ ಮನೆ ಕಳೆದುಕೊಂಡವರಿಗೆ‌ 1 ಲಕ್ಷ, ಮತ್ತು ಮನೆ ಕಟ್ಟುವ ಇನ್ನೂ ಏಳೆಂಟು ತಿಂಗಳ ತನಕ ಪ್ರತಿ ತಿಂಗಳಿಗೆ 5 ಸಾವಿರ ಬಾಡಿಗೆ ಮತ್ತು ತಕ್ಷಣದ ಪರಿಹಾರ 10 ಸಾವಿರ ಇವತ್ತೆ ನೀಡುವಂತೆ ಘೋಷಿಸಿದ್ದೇನೆ. ಇದನ್ನು ಸಂತ್ರಸ್ತರಿಗೆ ನೀಡುವಲ್ಲಿ […]

ಬೆಳ್ತಂಗಡಿ : ಮನೆ ಕಟ್ಟಲು ಐದು ಲಕ್ಷ, ಮನೆಯಿಲ್ಲದವರಿಗೆ ಐದು ಸಾವಿರ ಬಾಡಿಗೆ , ತಕ್ಷಣದ ಪರಿಹಾರ ಹತ್ತು ಸಾವಿರ ಘೋಷಿಸಿದ ಸಿಎಂ

Monday, August 12th, 2019
Kakkavu bridge

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಮರೋಪಾದಿ ಯಲ್ಲಿ ಪರಿಹಾರ ಘೋಷಿಸಿದ್ದಾರೆ. ವಿಮಾನದ ಮೂಲಕ ಮಂಗಳೂರಿಗೆ 11.20 ಕ್ಕೆ ಬಂದಿಳಿದ ಸಿಎಂ ಬೆಳ್ತಂಗಡಿ ಗೆ ತೆರಳಿ ನೆರೆಯಿಂದ ಕೊಚ್ಚಿ ಹೋದ ಕುಕ್ಕಾವು ಸೇತುವೆಗೆ ಭೇಟಿ ನೀಡಿದ ಬಳಿಕ ಕುಕ್ಕಾವು ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಾಣದ ತನಕ 5 ಸಾವಿರ ತಿಂಗಳಿಗೆ ಬಾಡಿಗೆ ಹಣ ಮತ್ತು 5 ಲಕ್ಷ ಪರಿಹಾರ ನೀಡಲಾಗುವುದು […]

ದಕ್ಷಿಣ ಕನ್ನಡದಲ್ಲಿ ಯಾರೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಿಲ್ಲ : ಶಾಸಕ ಸಂಜೀವ ಮಠಂದೂರು

Thursday, August 8th, 2019
matandoor

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಿಂದ ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾರನ್ನು ಮಂತ್ರಿ ಮಾಡಿದರೂ, ಅದನ್ನು ಒಂದೇ ರೀತಿಯಲ್ಲಿ ಸ್ವೀಕರಿಸಲಾಗುತ್ತೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಶಾಸಕರಿಂದ ಪತ್ರಿಕಾಗೋಷ್ಠಿಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ದಕ್ಷಿಣ ಕನ್ನಡದಲ್ಲಿ ಯಾರೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಿಲ್ಲ. ಕೇಂದ್ರ ವರಿಷ್ಠರು, ಮುಖ್ಯಮಂತ್ರಿ ಗಳು ಯಾರನ್ನು ಉಸ್ತುವಾರಿ ಸಚಿವ ಮಾಡಿದರೂ ಅದನ್ನು ಸಮಾನವಾಗಿ ಸ್ವೀಕರಿಸುತ್ತೇವೆ ಎಂದರು. […]

ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಕರಾವಳಿಗೆ ಮೂರು ಸಚಿವ ಸ್ಥಾನ

Tuesday, July 30th, 2019
bsy

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಕರಾವಳಿಗೆ ಎರಡು ಸಚಿವ ಸ್ಥಾನ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹುದ್ದೆ ಲಭ್ಯವಾಗುವ ಸಾಧ್ಯತೆ  ಇದೆ ಎಂದು ಹೇಳಲಾಗಿದೆ. ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶಾಸಕ ಅಂಗಾರ , ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಸುನಿಲ್‌ ಕುಮಾರ್‌ ಅವರ ಹೆಸರು ಮುಂಚೂಣಿಯಲ್ಲಿವೆ.  ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಳಿ ಚರ್ಚಿಸಿದ ಬಳಿಕ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಅಗ್ರಪಂಕ್ತಿಯ ನಾಯಕರಿಗೆ, ಪ್ರಾದೇಶಿಕ ಮತ್ತು […]

ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಅಭಿಮಾನಿಗಳಿಂದ ಗೋಗಲ್ಲಮ್ಮನಿಗೆ ವಿಶೇಷ ಪೂಜೆ

Tuesday, July 16th, 2019
gogalamma

ಮಂಡ್ಯ :  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥಿಸಿ ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಮಂಗಳವಾರ ಅಭಿಮಾನಿಗಳು, ಬಿಜೆಪಿ ಮುಖಂಡರು ಗ್ರಾಮದೇವತೆ ಗೋಗಲ್ಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ರಾತ್ರಿಯಿಂದಲೇ ಗ್ರಾಮದ ಹಲವು ದೇವಾಲಯಗಳನ್ನು ಸ್ವಚ್ಛಗೊಳಿಸಿ ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಮಂಗಳವಾರ ನಸುಕಿನಿಂದಲೇ ಗಣಹೋಮ, ಅಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಯಡಿಯೂರಪ್ಪ ಅವರ ಮನೆ ದೇವರಾದ ಕಾಪನಹಳ್ಳಿ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ಸನ್ನಧಿಯಲ್ಲಿಯೂ ವಿಶೇಷ ಪೂಜೆ […]

ಸಿದ್ದರಾಮಯ್ಯಗೆ ಸನ್ಮಾನ ಮಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು..!

Saturday, November 10th, 2018
siddaramaih

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಮುಸ್ಲಿಂ ಧಾರ್ಮಿಕ ಮುಖಂಡರು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತೆರಳಿದ ಹಲವು ಮುಸ್ಲಿಂ ಧರ್ಮಗುರುಗಳು, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಸಿದ್ದರಾಮಯ್ಯರನ್ನು ಧರ್ಮಗುರುಗಳು ಸನ್ಮಾನಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಸಮಯದಲ್ಲಿ ಟಿಪ್ಪು ಜಯಂತಿಯನ್ನು ಆರಂಭಿಸಿದ್ದರು. ಹಾಗಾಗಿ ಅವರ ಕಾರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸಿದ್ದರಾಮಯ್ಯ ಚಿತ್ರದುರ್ಗಕ್ಕೆ ತೆರಳುವ […]

ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ: ಸಿಎಂ ಕುಮಾರಸ್ವಾಮಿ

Tuesday, October 30th, 2018
byndoor

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಚುನಾವಣಾ ಪ್ರಚಾರ ಸಂದರ್ಭ ಅವರು ಮಾತನಾಡಿದರು. ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ. ಹಿಂದೂ-ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ನಾವು ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಇದ್ದೇವೆ. ಭಾವನಾತ್ಮಕ ವಿಚಾರವನ್ನು ಜನರ ಮುಂದಿಡುತ್ತ ಬಿಜೆಪಿ ಚುನಾವಣೆ ನಡೆಸುತ್ತೆ ಎಂದು ಸಿಎಂ ಗುಡುಗಿದರು. ನಾನು ಯಾವುದೇ ತಪ್ಪು ಮಾಡಿಲ್ಲ. ಚುನಾವಣೆ ಸಂದರ್ಭ ವೈಯುಕ್ತಿಕ ವಿಚಾರದ ಬಗ್ಗೆ ಚರ್ಚೆ ಮಾಡಲ್ಲ. ಕುಮಾರ್ ಬಂಗಾರಪ್ಪನ ಅಭಿರುಚಿ ಪ್ರದರ್ಶನವಾಗಿದೆ. ನಾನು ಈ ಬಗ್ಗೆ ಮಾತನಾಡಲ್ಲ. ಎಲ್ಲವನ್ನು ಎದುರಿಸುವ ಸಾಮರ್ಥ್ಯವನ್ನು ದೇವರು ಕೊಟ್ಟಿದ್ದಾನೆ […]

ನಿಮಗೆ ಅಧಿಕಾರ ನಡೆಸಲು ಹೇಳಿ ಕೊಟ್ಟವರೇ ನಾವು: ಯಡಿಯೂರಪ್ಪಗೆ ಸಿಎಂ ಟಾಂಗ್

Tuesday, October 30th, 2018
kumarswamy

ಶಿವಮೊಗ್ಗ: ನಿಮಗೆ ಅಧಿಕಾರ ನಡೆಸಲು ಹೇಳಿ ಕೊಟ್ಟವರೇ ನಾವು. ಇಲ್ಲದಿದ್ದರೆ ನಿಮಗೆ ಅಧಿಕಾರ ನಡೆಸಲು ಬರುತ್ತಿರಲಿಲ್ಲ ಎಂದು ಶಿವಮೊಗ್ಗದಲ್ಲಿ ಸಿಎಂ ಕುಮಾರಸ್ವಾಮಿ ಮಾಜಿ ಸಿಎಂ ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ. ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ರಚನೆಯಾದಾಗಿನಿಂದ ಮಾಧ್ಯಮದವರನ್ನು ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ. ಕೇವಲ ಡೆಡ್ಲೈನ್ ನೀಡುತ್ತಾ ಬರುತ್ತಿದ್ದಾರೆ. ಇವರೇನು ಜ್ಯೋತಿಷ್ಯಗಳಾ..? ಎಂದು ಟಾಂಗ್ ನೀಡಿದರು. ಅಧಿಕಾರಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ಶಾಸಕರನ್ನು ಕೊಂಡುಕೊಂಡಿದ್ದೇವೆ. ದೀಪವಾಳಿಯ ನಂತರ ಸರ್ಕಾರ ಬಿದ್ದು ಹೋಗುತ್ತೆ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ. […]