Blog Archive

ಇನ್ನ ಎರಡು ಮೂರು ದಿನದಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸ್ತಾರೆ: ಶೋಭಾ ಕರಂದ್ಲಾಜೆ

Thursday, May 17th, 2018
shobha-karandlaje

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಇದ್ರಿಂದ ಬೇರೆ ಪಕ್ಷಗಳು ರೆಸಾರ್ಟ್‌ ರಾಜಕಾರಣ ಮಾಡ್ತಿದಾರೆ. ಜೆಡಿಎಸ್‌ನಲ್ಲಿ ಬಂಡಾಯ ಎದ್ದವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಈಗಲಾದ್ರು ಬುದ್ಧಿ ಬರಬೇಕಿತ್ತು. ಸಿದ್ದರಾಮಯ್ಯರದು ದುರಾಂಕಾರ, ಜಾತಿ , ಷಡ್ಯಂತ್ರದ ರಾಜಕಾರಣ. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸದಂತೆ ಕುತಂತ್ರ ನಡೆಸಿದ್ರು. ಆದರೆ ಯಾರು ಏನೇ ಮಾಡಿದ್ರು ಇನ್ನ ಎರಡು ಮೂರು ದಿನದಲ್ಲಿ ಯಡಿಯೂರಪ್ಪ ಬಹುಮತ […]

ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತ..!

Wednesday, May 16th, 2018
governor

ಬೆಂಗಳೂರು: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿದರೆ ನಾಳೆ ರಾಜಭವನದಲ್ಲಿ ಯಡಿಯೂರಪ್ಪ ಒಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಬಹುಮತ ಸಾಬೀತಿನ ನಂತರ ಸಂಪುಟ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತವಾಗಿದ್ದು, ಇಂದು ಸಂಜೆ 6 ಗಂಟೆ ಬಳಿಕ ರಾಜ್ಯಪಾಲ ವಜುಭಾಯ್ ವಾಲಾ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ. ರಾಜ್ಯಪಾಲರು ಅನುಮತಿ ಕೊಟ್ಟರೆ ಮಾತ್ರ ನಾಳೆ ಯಡಿಯೂರಪ್ಪ ಒಬ್ಬರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ರಾಜಭವನದಲ್ಲಿ ನಾಳೆ ಮಧ್ಯಾಹ್ನ […]

ಜೆಡಿಎಸ್-ಕಾಂಗ್ರೆಸ್ ಮೈತ್ರಿ, ಪ್ರಜಾತಂತ್ರದ ಕಟು ಅಣಕ!

Tuesday, May 15th, 2018
kumaraswamy

ಬೆಂಗಳೂರು: ಕರ್ನಾಟಕದ ಜನತೆಯ ಮತಗಳಿಗೆ, ಮತ ಪ್ರಹಾಪ್ರಭುವಿನ ನಾಲ್ಕು ಕಾಸಿನ ಕಿಮ್ಮತ್ತಿಲ್ಲದಂತೆ, ಪ್ರಜಾಪ್ರಭುತ್ವಕ್ಕೂ ಬೆಲೆಯಿಲ್ಲದಂತೆ ಕಾಂಗ್ರೆಸ್ ಪಕ್ಷ ಜಾತ್ಯತೀಯ ಜನತಾದಳಕ್ಕೆ ಸರಕಾರ ರಚಿಸಲು ಬೆಂಬಲ ನೀಡಿದೆ. ಕುಮಾರಸ್ವಾಮಿಯವರ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ. ಜಾತ್ಯತೀತ ಜನತಾದಳವನ್ನು ಭಾರತೀಯ ಜನತಾ ಪಕ್ಷದ ‘ಬಿ ಟೀಮ್’ ಎಂದು ಪ್ರಚಾರ ಸಮಾವೇಶವೊಂದರಲ್ಲಿ ಬಹಿರಂಗವಾಗಿ ಜರಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈಗ ಬಹಿರಂಗವಾಗಿಯೇ ಅದೇ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇಲ್ಲಿ ಏನು ಬೇಕಾದರೂ ಆಗಬಹುದು. ಅವರಿಗೆ ಅಧಿಕಾರ ಸಿಗಬಾರದೆಂದು ಎಂಥ ಅಪವಿತ್ರ ಮೈತ್ರಿಗೂ […]

ವಂಚನೆಯಲ್ಲಿ ಮೋದಿ, ಯಡಿಯೂರಪ್ಪ ಸಮಾನರು: ಶಾಸಕಿ ಶಕುಂತಳಾ ಶೆಟ್ಟಿ

Thursday, May 10th, 2018
shakuntala-shetty

ಪುತ್ತೂರು: ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿ ಪ್ರಕಾರ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಾಗಿ ಹೇಳಿದ ಕೇಂದ್ರ ಸರಕಾರ ಅನಂತರ ಪ್ರತ್ಯೇಕವಾದಿಗಳ ಜತೆ ಸೇರಿ ಸರಕಾರ ರಚಿಸಿದೆ. ಅದೇ ರೀತಿ ಯಡಿಯೂರಪ್ಪ ಅವರು ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ತಾವೇ ಸಿಕ್ಕಿ ಬೀಳಲಿಲ್ಲವೇ? ಎಂದು ಕಾಂಗ್ರೆಸ್‌ ಅಭ್ಯರ್ಥಿ ಶಕುಂತಳಾ ಟಿ. ಶೆಟ್ಟಿ ಪ್ರಶ್ನಿಸಿದ್ದಾರೆ. ಬುಧವಾರ ಚುನಾವಣಾ ಪ್ರಚಾರ ಕಾರ್ಯದ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ ಯಾವ […]

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಲೀಗಲ್‌ ನೋಟಿಸ್‌ , ಕ್ಷಮೆ ಕೇಳದಿದ್ದರೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ..!

Monday, May 7th, 2018
narendra-modi

ಬೆಂಗಳೂರು: ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್‌ ಸರ್ಕಾರ ಎಂದು ಜರಿದಿದ್ದಕ್ಕೆ ಪ್ರತಿಯಾಗಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ರಾಜ್ಯ ಚುನಾವಣಾ ಪ್ರಚಾರದ ವೇಳೆ, ಪ್ರಧಾನಿ ಮೋದಿ ನಿರಂತರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವುಗಳಿಗೆ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪ್ರಧಾನಿ ಬಳಸಿದ ‘ಸೀದಾ ರೂಪಯ್ಯ’ ಸರ್ಕಾರ ಎಂಬ ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಮಾನನಷ್ಟವಾಗಿರುವ ಬಗ್ಗೆ ಲೀಗಲ್‌ ನೋಟಿಸ್‌ ನೀಡಿದ್ದಾರೆ. ಅಷ್ಟೇ ಅಲ್ಲ ಪ್ರಧಾನಿ ನರೇಂದ್ರ ಮೋದಿ, […]

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ 1 ಲಕ್ಷ ರೂ. ಸಾಲ ಮನ್ನಾ: ಯಡಿಯೂರಪ್ಪ

Friday, May 4th, 2018
yedeyurappa

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ 1 ಲಕ್ಷ ರೂ. ಸಾಲ ಮನ್ನಾ ಹಾಗೂ ಸಹಕಾರಿ ಸಂಘಗಳಲ್ಲಿನ ಸಾಲ50 ಸಾವಿರದಿಂದ 1 ಲಕ್ಷಕ್ಕೆ ವಿಸ್ತರಣೆ ಮಾಡಲಾಗುತ್ತದೆ ಎಂದು ಘೋಷಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಶಾಸಕ ವಿಜಯಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಬಳಿಕ ಸುರೇಶ್ ಕುಮಾರ್ ನೇತೃತ್ವದ ಸಮಿತಿ ರಚಿಸಿರುವ ಪ್ರಣಾಳಿಕೆಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ […]

ಮಂಗಳೂರಿನಲ್ಲಿ ಡಿಕೆಶಿ, ಉಮನ್‌ ಚಾಂಡಿ… ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ

Thursday, May 3rd, 2018
congress

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ, ಮಾಜಿ ಸಚಿವ ಗಂಗಾಧರ ಗೌಡ ಸಚಿವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಂಗಾಧರ ಗೌಡರಿಗೆ ಟಿಕೆಟ್‌ ತಪ್ಪಿದ ಹಿನ್ನೆಲೆ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗಂಗಾಧರ ಗೌಡ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಮೋದಿಯವರ ಅಚ್ಛೇ ದಿನ್ ಯಾರಿಗೂ ಬಂದಿಲ್ಲ. ಯಾರಿಗೂ 15 ಲಕ್ಷ ರೂ.‌ ಮೋದಿಯವರಿಂದ ದೊರಕಿಲ್ಲ. ನಿನ್ನೆ ಮೋದಿಯವರು ದೇವೇಗೌಡರನ್ನು ಹೊಗಳಿದ್ದರು. […]

ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಯಡಿಯೂರಪ್ಪ ವಾಗ್ದಾಳಿ

Thursday, April 26th, 2018
yedeyorappa

ಶಿವಮೊಗ್ಗ: ಹಿಂದಿನ ಬಿಜೆಪಿ ಸರ್ಕಾರ ಹಾಗೂ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಾಡಿರುವ ಟ್ವೀಟ್‌ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಒಬ್ಬ ತಲೆ ತಿರುಕ. ಮಾತನಾಡುವ ಮುನ್ನಾ ತಾನೇನು ಎಂದು ತಿಳಿದುಕೊಳ್ಳಬೇಕು. ಇನ್ನೊಬ್ಬರ ಬಗ್ಗೆ ಮಾತನಾಡುವಾಗ, ಟೀಕೆ-ಟಿಪ್ಪಣಿ ಮಾಡುವಾಗ ತನ್ನ ಸುತ್ತ ಯಾರು ಇದ್ದಾರೆರೆ ಎಂದು ನೋಡಿಕೊಳ್ಳಬೇಕು ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯವನ್ನು ಹಾಳು ಮಾಡಿದಂತಹ ಭ್ರಷ್ಟ ಸಿಎಂರನ್ನು ಇಟ್ಟುಕೊಂಡು ಬೇರೆಯವರ ಮೇಲೆ ಬೊಟ್ಟು ಮಾಡುತ್ತಾರೆ. ಇಂತಹವರಿಗೆ […]

ಕೇಂದ್ರ ಕಾನೂನು ಸಚಿವ, ಯಡಿಯೂರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರತಿಭಾ ಕುಳಾಯಿ

Wednesday, April 4th, 2018
prathibha-kulai

ಮಂಗಳೂರು: ತನ್ನ ಭಾವಚಿತ್ರ ಹಾಗೂ ಹೆಸರು ಬಳಸಿ ಮಾನಸಿಕ ಹಿಂಸೆ, ಮಾನಹಾನಿ ಮಾಡಿದ್ದಾರೆಂದು ಆರೋಪಿಸಿ ಕೇಂದ್ರ ಕಾನೂನು ಸಚಿವ ಹಾಗೂ ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಸಹಿತ ವಿರುದ್ಧ ಮೂವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಮಹಿಳಾ ಕಾಂಗ್ರೆಸ್ ಮುಖಂಡೆ, ಕಾರ್ಪೊರೇಟರ್ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇತ್ತೀಚೆಗೆ ಬಿಡುಗಡೆ ಮಾಡಿದ ಕಾಂಗ್ರೆಸ್ ಪಕ್ಷದ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ ನನಗೆ ಸಂಬಂಧಪಡದ ವಿಷಯದಲ್ಲಿ ನನ್ನ ಭಾವಚಿತ್ರ ಹಾಗೂ ಹೆಸರು ಬಳಸಿ ಮಾನಹಾನಿ […]

ಯಡಿಯೂರಪ್ಪ – ನಾನು ರಾಮ-ಲಕ್ಷ್ಮಣರಂತೇ ಸಹೋದರರು: ಈಶ್ವರಪ್ಪ

Wednesday, March 28th, 2018
eshwarappa

ಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವಾರು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಅಹಿಂದ ವರ್ಗಕ್ಕೆ ದ್ರೋಹ ಎಸಗಿದೆ. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ವರ್ಗದ ಜನರಿಗೆ ಎಷ್ಟು ಅನುದಾನ ನೀಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸಮಾಜದಲ್ಲಿ ಗೊಂದಲ ಮೂಡಿಸುವ ಅನೇಕ ಪ್ರಯತ್ನ ನಡೆಸಿದ್ದಾರೆ. ಹಿಂದುಳಿದ […]