Blog Archive

ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ನಂಬರ್‌ 1: ಹೇಳಿಕೆ ನೀಡಿ ಮುಜುಗರಕ್ಕೊಳಗಾದ ಶಾ

Tuesday, March 27th, 2018
amit-shah

ದಾವಣಗೆರೆ: ಮಾತನಾಡುವ ಭರದಲ್ಲಿ, ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ನಂಬರ್‌‌ 1 ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮುಜುಗರಕ್ಕೊಳಗಾಗಿರುವ ಘಟನೆ ನಡೆದಿದೆ. ದಾವಣಗೆರೆ ತಾಲೂಕಿನ ದೊಡ್ಡ ಬಾತಿ ಗ್ರಾಮದಲ್ಲಿ ಐದು ರೈತರ ಮನೆಗಳಲ್ಲಿ ಮುಷ್ಠಿ ಅಕ್ಕಿ ಸಂಗ್ರಹಿಸಿ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ರೀತಿಯ ಹೇಳಿಕೆ ನೀಡಿ ಮುಜುಗರಕ್ಕೆ ಒಳಗಾಗಿದ್ದಾರೆ. ಸುದ್ದಿಗೋಷ್ಠಿ ವೇಳೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾ ಮಾತಿನ ಭರದಲ್ಲಿ ಈ ರೀತಿ […]

ಸಿದ್ಧಗಂಗಾ ಶ್ರೀಗಳ ಭೇಟಿಯಾಗಿ ಆಶೀರ್ವಾದ ಪಡೆದ ಅಮಿತ್ ಶಾ

Monday, March 26th, 2018
amit-shah

ತುಮಕೂರು: ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಇದೇ ಮೊದಲ ಬಾರಿ ಅಮಿತ್ ಶಾ ಮಠಕ್ಕೆ ಭೇಟಿ ಕೊಟ್ಟಿದ್ದು ಶ್ರೀಗಳ ದರ್ಶನದಿಂದ ಹರ್ಷಗೊಂಡಿದ್ದಾರೆ. ಬೆಳಗ್ಗೆ 10.55 ರಿಂದ 11.5 ರವರೆಗೆ ಸುಮಾರು 10 ನಿಮಿಷಗಳ ಕಾಲ ಶಿವಕುಮಾರ ಶ್ರೀಗಳೊಂದಿಗೆ ಅಮಿತ್ ಶಾ ಕುಶಲೋಪರಿ ನಡೆಸಿದರು. ಶ್ರೀಗಳ ಕಚೇರಿ ಪ್ರವೇಶಿಸುತಿದ್ದಂತೆ ಅಮಿತ್ ಶಾ, ಶಿವಕುಮಾರ ಸ್ವಾಮಿಗಳ ಪಾದಕ್ಕೆ ಎರಗಿ ನಮಸ್ಕರಿಸಿದ್ರು. ಅಲ್ಲದೆ ಏಪ್ರಿಲ್ 1 ರಂದು […]

ಮಕ್ಕಳಿಗೆ ಆಕ್ಸಿಜನ್ ಪೂರೈಸಲಾಗದ ಆದಿತ್ಯನಾಥ್ : ಎಚ್ ಡಿಕೆ ವಾಗ್ದಾಳಿ

Wednesday, March 7th, 2018
kumarswamy

ಮಂಗಳೂರು: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಲ್ಲಿನ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳಿಗೆ ಆಕ್ಸಿಜನ್ ಪೂರೈಸಲು ಆಗಲಿಲ್ಲ. ರಾಜ್ಯದಲ್ಲಿ ಸುರಕ್ಷತೆ ಸಂದೇಶ ಕೊಡಲು ಇಲ್ಲಿಯ ಬಿಜೆಪಿಯ ನಾಯಕರು ಅವರನ್ನು ಕರೆಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿ, ರಾಜ್ಯದ ಬಿಜೆಪಿ ನಾಯಕರು ಭೋಗಿಗಳಾಗಿದ್ದಕ್ಕೆ, ಯೋಗಿ ಆದವರನ್ನು ರಾಜ್ಯಕ್ಕೆ ಕರೆಸಿದ್ದಾರೆ. ವಿಧಾನಸೌಧದಲ್ಲಿ ನೀಲಿ ಚಿತ್ರಗಳನ್ನು ನೋಡಿ ಬಿಜೆಪಿಯ ಕೆಲವರು ಭೋಗಿಗಳಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ […]

ಸಿದ್ದರಾಮಯ್ಯ ಉಳುಮೆ ಮಾಡಿ ತೋರಿಸಲಿ: ಯಡಿಯೂರಪ್ಪ ಸವಾಲು

Saturday, March 3rd, 2018
congress

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ಅಕ್ರಮಗಳ ದಾಖಲೆಗಳನ್ನು ಶೀಘ್ರವೇ ಬಯಲುಗೊಳಿಸುವುದಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೇರಳ ತಳಿಪರಂಬ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮೊದಲು ಚಾರ್ಜ್‌ಶೀಟ್ ಮೊದಲು ಬಿಡುಗಡೆಗೊಳಿಸಲಿ. ಮುಖ್ಯಮಂತ್ರಿ ನಡೆಸಿದ ಅಕ್ರಮಗಳ ದಾಖಲೆ ನಮ್ಮ ಬಳಿಯೂ ಇದೆ. ಅದನ್ನು ನಾವು ಕೂಡಾ ಬಿಡುಗಡೆಗೊಳಿಸುತ್ತೇವೆ ಎಂದರು. ಮುಖ್ಯಮಂತ್ರಿ ತಲೆ ತಿರುಕನಂತೆ ಮಾತನಾಡುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಮುಖ್ಯಮಂತ್ರಿ ಕೇಳುವ ಪ್ರಶ್ನೆಗೆ ಚುನಾವಣೆಯಲ್ಲಿ ರಾಜ್ಯದ ಜನತೆ […]

ಸಿದ್ದರಾಮಯ್ಯನವರಿಗೆ ನೇಗಿಲು ಹಿಡಿಯುವ ಸವಾಲು ಹಾಕಿದ ಯಡಿಯೂರಪ್ಪ

Saturday, March 3rd, 2018
yedeyorappa

ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ . ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಲೆ ತಿರುಕನಂತೆ ಮಾತನ್ನಾಡುವ ಭ್ರಷ್ಟ ಮುಖ್ಯಮಂತ್ರಿಗೆ ರಾಜ್ಯದ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ. “ಯಾರು ಮಣ್ಣಿನ ಮಕ್ಕಳು, ಯಾರು ಅಲ್ಲ ಎಂಬುದಕ್ಕಿಂತ, ರೈತ ಪರವಾಗಿ ನಾವು ಹೋರಾಟ ಮಾಡಿದ್ದೇವೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿ, ರೈತರ ಸಾಲ ಮನ್ನಾ ಮಾಡಿದ್ದೇವೆ. ಹಲವು ರೈತಪರ ಯೋಜನೆಗಳನ್ನು ರಾಜ್ಯದಲ್ಲಿ ತಂದಿದ್ದೇವೆ,” ಎಂದು ಅವರು […]

ಕುತ್ತಾರಿನಲ್ಲಿ ಯಡಿಯೂರಪ್ಪಅವರ 75 ನೇ ಜನ್ಮದಿನಾಚರಣೆ

Friday, March 2nd, 2018
Raveendra shetty

ಕುತ್ತಾರು : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರ 75 ನೇ  ಜನ್ಮದಿನಾಚರಣೆಯ ಪ್ರಯುಕ್ತ ಕುತ್ತಾರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಧಾರ್ಮಿಕ ಪರಿಷತ್ ಜಿಲ್ಲಾ ಮಾಜಿ ಸದಸ್ಯ ಕೆ.ಟಿ ಸುವರ್ಣ ಮಾತನಾಡಿ ಯಡಿಯೂರಪ್ಪನವರಿಗೆ ಸಾಕಷ್ಟೂ ಅಭಿಮಾನಿಗಳಿದ್ದಾರೆ. ಅವರ ಜನ್ಮದಿನವನ್ನು ಮನಃಪೂರ್ವಕ […]

ಬಿಜೆಪಿಯವರು ಚುನಾವಣಾ ಆಯೋಗವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದಾರಾ?

Monday, February 19th, 2018
u-t-kader

ಮಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆ ಘೋಷಣೆಯ ದಿನಾಂಕವನ್ನು ಮಾರ್ಚ್‌ ಅಂತ್ಯದವರೆಗೆ ಮುಂದೂಡುವಂತೆ ಆಹಾರ ಸಚಿವ ಯು.ಟಿ. ಖಾದರ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಚುನಾವಣೆ ಘೋಷಣೆ ದಿನಾಂಕವನ್ನು ಮುಂದೂಡಿದಂತೆ ಇಲ್ಲಿಯೂ ಮುಂದೂಡಬೇಕು. ಗುಜರಾತ್‌‌ನಲ್ಲಿ ಕೇವಲ 20 ದಿನ ಇರುವಾಗ ಹಾಗೂ ಹಿಮಾಚಲ ಪ್ರದೇಶದಲ್ಲಿ 30 ದಿನ ಇರುವಾಗ ಚುನಾವಣೆ ಘೋಷಣೆಯಾಗಿತ್ತು. ಇನ್ನು ಚುನಾವಣೆಗೆ ಒಂದು ವಾರ ಇರುವಾಗ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿತ್ತು […]

ಮೈಸೂರಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ… ಸಿಎಂ ವಿರುದ್ಧ ಅಮಿತ್‌ ಷಾ ತೀವ್ರ ವಾಗ್ದಾಳಿ

Thursday, January 25th, 2018
amit-shah

ಮೈಸೂರು: ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಹೇಳುತ್ತಾ ಹೋದರೆ 7 ದಿನ ಬೇಕಾಗುತ್ತದೆ. ಅಷ್ಟು ಮಾಹಿತಿ ನನ್ನ ಬಳಿ ಇದೆ, ಭ್ರಷ್ಟ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಲೇಬೇಕೆಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದರು. ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಭಾವಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ತಮ್ಮ ಭಾಷಣ ಆರಂಭಿಸಿದರು. ಮುಖ್ಯಮಂತ್ರಿಗಳ ಬಂದ್ ನಡುವೆಯೇ ಸಾಕಷ್ಟು ಸಂಖ್ಯೆಗಳಲ್ಲಿ ಜನರು ಆಗಮಿಸಿದ್ದೀರಾ. ಭ್ರಷ್ಟ, […]

ಅಮಿತ್ ಶಾ ಭಯದಿಂದ ಬಂದ್‌‌ ಬದಲಾವಣೆ ಮಾಡುತ್ತಿದೆ

Wednesday, January 24th, 2018
shobha-karandlaje

ಮಂಗಳೂರು: ಜ.25ರಂದು ಯಡಿಯೂರಪ್ಪ ನೇತೃತ್ವದ ಪರಿವರ್ತನಾ ಸಮಾವೇಶವು ಮೈಸೂರಿನಲ್ಲಿ ಸಮಾಪನಗೊಳ್ಳಲಿದೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುತ್ತಿರುವುದರಿಂದ ಕಾಂಗ್ರೆಸ್ ಸರ್ಕಾರ ಭಯಬಿದ್ದು ಜ.27ರಂದು ನಿಗದಿಯಾಗಿದ್ದ ಬಂದ್‌ ಅನ್ನು 25ಕ್ಕೆ ವಿವಿಧ ಸಂಘಟನೆಗಳ ಮೂಲಕ ಮಾಡಿಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿಯೇ ರಾಜ್ಯದ ಕಾಂಗ್ರೆಸ್‌ ಸರ್ಕಾರ ದರೋಡೆ, ದೌರ್ಜನ್ಯದಲ್ಲಿ ಎರಡನೇ ಸ್ಥಾನ ಗಳಿಸಿದೆ. ಇದು ಕಾಂಗ್ರೆಸ್ ದುರಾಡಳಿತಕ್ಕೆ […]

ನಾವು ಪಾಂಡವರು, ಬಿಜೆಪಿಯವರು ಕೌರವರು: ಸಿದ್ದರಾಮಯ್ಯ

Tuesday, January 16th, 2018
yedeyorappa

ಬೆಂಗಳೂರು: ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ಬಿಜೆಪಿಯವರು ಕೌರವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆ ಯುದ್ಧವಿದ್ದಂತೆ, ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ತಪ್ಪು ಹಾದಿಯಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ಅವರು ಪಕ್ಷದ ಸದಸ್ಯರನ್ನು ಮಹಾಭಾರತ ಪಾತ್ರಗಳಿಗೆ ಹೋಲಿಸಿದರು. ಯಡಿಯೂರಪ್ಪ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೋವಾ ನೀರಾವರಿ ಸಚಿವರು ಕರ್ನಾಟಕದ ಬಗ್ಗೆ ಮಾತನಾಡಿದ ಹೇಳಿಕೆ ವಿರುದ್ಧ ಹರಿಹಾಯ್ದರು. “ಆತನ ಭಾಷೆ ಆತನ […]