Blog Archive

ಕಿನ್ನಿಗೋಳಿಯ ಯುವಕ ಕುವೈಟ್‌ನ ಸಾಲ್ಮಿಯಾ ಬೀಚ್‌ನಲ್ಲಿ ನೀರು ಪಾಲು

Sunday, July 19th, 2020
Mohammed Anish

ಮಂಗಳೂರು : ಕಿನ್ನಿಗೋಳಿಯ ಯುವಕನೊಬ್ಬ ಕುವೈಟ್‌ನ ಸಾಲ್ಮಿಯಾ ಬೀಚ್‌ನಲ್ಲಿ ಮುಳುಗುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವನ ರಕ್ಷಣೆ ಮಾಡಲು ಮುಂದಾದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ  ನಡೆದಿದೆ. ಮೃತ ವ್ಯಕ್ತಿಯನ್ನು ಮಂಗಳೂರು ಹೊರವಲಯದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ (28) ಎಂದು ಗುರುತಿಸಲಾಗಿದೆ. ಭಾರತೀಯ ಕಾಲಮಾನ 8.30 ಕ್ಕೆ ಕುವೈಟ್ ರಾಷ್ಟ್ರದ ಸಾಲ್ಮಿಯಾ ಬೀಚ್‌ನಲ್ಲಿ ಅನೀಸ್ ತನ್ನ ಸ್ನೇಹಿತರ ಜೊತೆಗೂಡಿ ಈಜಲು‌ ತೆರಳಿದ್ದು ಸಮುದ್ರ ಪಾಲಾಗುತ್ತಿದ್ದ ಈಜಿಪ್ಟ್‌ನ ಅಪರಿಚಿತ ಯುವಕನ ರಕ್ಷಣೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅನೀಸ್‌ ನೀರಿನಲ್ಲಿ ಮುಳುಗಿದ್ದು […]

ಕಾರ್ಮಿಕರು ತೋಡಿದ ಗುಂಡಿಗೆ ಬಿದ್ದ ಕರುವನ್ನು ರಕ್ಷಿಸಿದ ಸ್ಥಳೀಯ ಯುವಕರು

Thursday, July 16th, 2020
nikhil-poojary

ಮಂಗಳೂರು : ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದ ಕರು ವೊಂದನ್ನು ಸ್ಥಳೀಯ ಯುವಕರ  ಗುಂಪೊಂದು ರಕ್ಷಿಸಿದೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತಿದ್ದ ನಿಖಿಲ್ ಪೂಜಾರಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನು ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ. ಪ್ರಾಣಪಾಯದಲ್ಲಿದ್ದ ಕರುವನ್ನು ರಕ್ಷಿಸಿ, ಜೀವ ಉಳಿಸಿದ್ದಾರೆ. ನಿಖಿಲ್ ಪೂಜಾರಿಗೆ ಸ್ಥಳೀಯ ಯುವಕರು, ಅಗ್ನಿಶಾಮಕ ದಳದವರು ಸಹಕರಿಸಿದ್ದಾರೆ. ನೀರು ತುಂಬಿದ ಗುಂಡಿಯಲ್ಲಿ ಮುಳುಗಿದ್ದ ಕರುವಿಗೆ ಮರು ಜೀವಕೊಟ್ಟ ನಿಖಿಲ್ ಪೂಜಾರಿ ಹಾಗು ಸಹಕರಿಸಿದ ಸ್ಥಳೀಯ […]

ಅಣ್ಣನ ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿದ ಚಿಕ್ಕಪ್ಪ

Thursday, July 16th, 2020
hasan murder

ಹಾಸನ: ಯುವತಿಯೊಬ್ಬಳನ್ನು ಒಂದು ಬಾರಿ ಅಪಹರಿಸಿ ಬುದ್ದಿ ಮಾತು ಹೇಳಿದ್ದರು ಕೇಳದೆ ಎರಡನೇ ಬಾರಿ ಅಪಹರಣಕ್ಕೆ ಯತ್ನಿಸಿದಾಗ  30 ವರ್ಷದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ. ಮಧು (30) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮಧು ಸೊಪ್ಪಿನಹಳ್ಳಿಯ ನಿವಾಸಿಯಾಗಿದ್ದು, ಇದೇ ಗ್ರಾಮದ ಮತ್ತೊಬ್ಬ ನಿವಾಸಿ ರೂಪೇಶ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಮೃತಪಟ್ಟ ಮಧು ಆರೋಪಿ ರೂಪೇಶ್ ಅಣ್ಣನ ಮಗಳನ್ನು ಪ್ರೀತಿಸಿದ್ದು, ಕೆಲ ತಿಂಗಳ ಹಿಂದಷ್ಟೇ ಆಕೆಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ […]

ಎಂಟು ಜನ ಗಾಂಜಾ ವ್ಯಸನಿಗಳ ತಂಡದಿಂದ ಯುವಕರ ಮೇಲೆ ತಲವಾರು ಹಲ್ಲೆ

Tuesday, July 14th, 2020
Bajilakeri Gangwar

ಮಂಗಳೂರು : ನಗರದ ಬಜಿಲಕೇರಿಯಲ್ಲಿ ಜುಲೈ 13 ರ ಸೋಮವಾರ ತಡರಾತ್ರಿ  ಸುಮಾರು ಎಂಟು ಜನರ ತಂಡವೊಂದು ಯುವಕನ ಮೇಲೆ ದಾಳಿ ಮಾಡಿದೆ, ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ ಮನೆ ಮುಂದಿನ ವಸ್ತುಗಳನ್ನು ಹಾನಿಗೊಳಿಸಿದೆ. ಯುವಕರು ಗಾಂಜಾ […]

ನ್ಯಾಯದ ನಿರೀಕ್ಷೆ ಮೂಡಿದೆ : ಮುನೀರ್ ಕಾಟಿಪಳ್ಳ

Wednesday, July 2nd, 2014
Muneer Katipalla

ಮಂಗಳೂರು : ಎರಡು ತಿಂಗಳ ನಿರಂತರ ಹೋರಾಟದ ನಂತರ ಸರಕಾರ ರಾಜೇಶ್ ಪೂಜಾರಿ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಿದೆ. ಸರಕಾರದ ಈ ನಿರ್ಧಾರದಿಂದ ಪ್ರಕರಣದಲ್ಲಿ ನ್ಯಾಯದ ನಿರೀಕ್ಷೆ ಮೂಡಿದೆ ಎಂದು ಆಙಈ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ರಾಜೇಶ್ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳು ಎಂದು ಮಲ್ಲೂರು ಗ್ರಾಮದ ಹುಸೈನ್, ಇಮ್ರಾನ್, ಇರ್ಷಾದ್ ಎಂಬ ಅಮಾಯಕ ಯುವಕರ ಬಂಧನವಾದಾಗಲೇ ಸಂಬಂಧಪಟ್ಟ ಜನಪ್ರತಿನಿಧಿಗಳನ್ನು ಕಂಡು ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು. ಆನಂತರ ನಿರಂತರವಾಗಿ ಹೋರಾಟಗಳನ್ನು ನಡೆಸಿ ಮರು ತನಿಖೆಗೆ ಒತ್ತಾಯಿಸಲಾಗಿತ್ತು. […]

ಮದುವೆಗೆ ಬಂದಿದ್ದ ಯುವಕ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

Monday, September 9th, 2013
Praveen

ಬಂಟ್ವಾಳ : ಸಜಿಪ ಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ ಸ್ನೇಹಿತನ ಮದುವೆಗೆಂದು ಬಂದಿದ್ದ ಯುವಕನೋರ್ವ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ರವಿವಾರ ಕಟೀಲಿನಲ್ಲಿ  ತನ್ನ ಸ್ನೆಹಿತ ಹರೀಶ್ ಎಂಬವರ ಮದುವೆಗೆ ಬಂದಿದ್ದ ಕಡೇಶ್ವಾಲ್ಯ ಗ್ರಾಮದ ಪ್ರವೀಣ್ ಕುಲಾಲ್(20) ನೀರುಪಾಲಾದ ದುರ್ದೈವಿ.  ಈತನೊಂದಿಗೆ ನದಿಗೆ ಸ್ನಾನಕ್ಕೆ ಇಳಿದಿದ್ದ ಕಿರಣ್ ಅಮ್ಟೂರು, ಅಜಯ್ ಹೊನ್ನಾವರ ಹಾಗೂ ಕಮಲಾಕ್ಷ ಶಾಂತಿಗುಡ್ಡೆ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]