Blog Archive

ಮಲ್ಪೆ ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಯುವತಿಯ ಮೃತ ದೇಹ ಪತ್ತೆ

Monday, August 2nd, 2021
Dejamma

ಮಲ್ಪೆ : ಮೈಸೂರಿನಿಂದ ಪ್ರವಾಸ ಬಂದಿದ್ದ ತಂಡದಲ್ಲಿ ಮಲ್ಪೆ ಬೀಚ್‌ನಲ್ಲಿ ರವಿವಾರ ನಾಪತ್ತೆಯಾಗಿದ್ದ ಯುವತಿಯ ಮೃತ ದೇಹ ಪತ್ತೆಯಾಗಿದೆ. ಕೊಡಗು ಮೂಲದ ಮೈಸೂರು ನಿವಾಸಿ ದೇಚಮ್ಮ ಯು.ಜೆ.(20) ರವಿವಾರ ನಾಪತ್ತೆಯಾಗಿದ್ದರು. ಈಕೆಯ ಜೊತೆ ಇದ್ದ ಸ್ನೆಹಿತರಾದ ಮೈಸೂರು ವಿಜಯಪುರದ ಎಂ.ಯು.ಶೈನಿ(20), ನವ್ಯ ಮಂದಣ್ಣ (20), ನಿಖಿಲ್ ಗೌಡ (20) ಎಂಬವರನ್ನು ಸ್ಥಳೀಯರು ರಕ್ಷಿಸಿದ್ದರು. ಇವರಲ್ಲಿ ತೀವ್ರ ಅಸ್ವಸ್ಥಗೊಂಡ ನಿಖಿಲ್ ಗೌಡ ಉಡುಪಿ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದಾರೆ. ಇವರು  ಮಂಗಳೂರಿಗೆ ಬಂದಿದ್ದು ಮಂಗಳೂರಿನಿಂದ ಜು.31ರಂದು ಮಧ್ಯಾಹ್ನ ಮಲ್ಪೆ […]

ಮೈಸೂರಿನಿಂದ ಪ್ರವಾಸ ಬಂದಿದ್ದ ಯುವತಿ ಮಲ್ಪೆ ಬೀಚ್‌ನಲ್ಲಿ ನಾಪತ್ತೆ, ಮೂವರ ರಕ್ಷಣೆ

Sunday, August 1st, 2021
dejamma

ಮಲ್ಪೆ : ಮೈಸೂರಿನಿಂದ ಪ್ರವಾಸ ಬಂದಿದ್ದ ಯುವತಿಯೊಬ್ಬಳು ಮಲ್ಪೆ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಸಮುದ್ರ ಪಾಲಾಗಿದ್ದು, ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ ನಡೆದಿದೆ. ಕೊಡಗು ಮೂಲದ ಮೈಸೂರು ನಿವಾಸಿ ದೇಚಮ್ಮ ಯು.ಜೆ.(20) ನಾಪತ್ತೆಯಾಗಿರುವ ಯುವತಿ. ಈಕೆಯ ಜೊತೆ ಇದ್ದ ಸ್ನೆಹಿತರಾದ ಮೈಸೂರು ವಿಜಯಪುರದ ಎಂ.ಯು.ಶೈನಿ(20), ನವ್ಯ ಮಂದಣ್ಣ (20), ನಿಖಿಲ್ ಗೌಡ (20) ಎಂಬವರನ್ನು ರಕ್ಷಿಸಲಾಗಿದೆ. ಇವರಲ್ಲಿ ತೀವ್ರ ಅಸ್ವಸ್ಥಗೊಂಡ ನಿಖಿಲ್ ಗೌಡ ಉಡುಪಿ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದಾರೆ. ಇವರು  ಮಂಗಳೂರಿಗೆ ಬಂದಿದ್ದು ಮಂಗಳೂರಿನಿಂದ ಜು.31ರಂದು […]

ಬೆಂಗಳೂರಲ್ಲಿ ನಡೆದ ಸಾಮೂಹಿಕ ರೇಪ್, ಪ್ರಮುಖ ಆರೋಪಿಯನ್ನು ಗುಂಡುಹಾರಿಸಿ ಬಂದಿಸಿದ ಪೊಲೀಸರು

Wednesday, June 2nd, 2021
Saboob

ಬೆಂಗಳೂರು : ನಗರದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶೂಬೂಜ್ ಪೇಪರ್ ಆಯುವವರ ಶೆಡ್ ನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.  ಆದರೆ ಆತ ಪೊಲೀಸರಿಂದ ತಪ್ಪಿಸಲೆತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಶೂಬೂಜ್ ಯುವತಿಯ ಗುಪ್ತಾಂಗಕ್ಕೆ ಕಾಲಲ್ಲಿ ಒದ್ದು, ವಿಕೃತಿ ಮೆರೆದಿದ್ದ.   ಆತನನ್ನು ಕರೆ ತರುವಾಗ ಮೂತ್ರ ಬರುತ್ತಿದೆ ಎಂದು ಹೇಳಿದ್ದ ಒಂದು ವೇಳೆ ನಿಲ್ಲಿಸದೇ ಇದ್ದರೆ ಜೀಪ್ ಒಳಗಡೆಯೇ ಮೂತ್ರ ಮಾಡುತ್ತೇನೆ ಎಂದು ಪೊಲೀಸರಿಗೆ ಧಮ್ಕಿ ಹಾಕಿದ್ದ. ಆರ್ […]

ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಮದ್ಯದ ಬಾಟ್ಲಿಇಟ್ಟ ಬಾಂಗ್ಲಾದೇಶಿ ಕಾಮುಕರು

Friday, May 28th, 2021
Gang Rape

ಬೆಂಗಳೂರು : ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ಆಧಾರ್ ಕಾರ್ಡ್ ಪಡೆದು  ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಆರ್ ಐ ಲೇಔಟ್  ನಲ್ಲಿ ಇದ್ದ ಗುಂಪೊಂದು ಯುವತಿಯೊಬ್ಬಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಆಕೆಯ ಖಾಸಗಿ ಅಂಗಕ್ಕೆ ಮದ್ಯದ ಬಾಟಲಿ ಇಟ್ಟು ಪೈಶಾಚಿಕ ಕೃತ್ಯವೆಸಗಿದ ಆಘಾತಕಾರಿ ಘಟನೆ ಎನ್ ಆರ್ ಐ ಲೇಔಟ್‌ನಲ್ಲಿ ನಡೆದಿದೆ. ಎನ್ ಆರ್ ಐ ಲೇಔಟ್‌ನಲ್ಲಿರುವ ಮನೆಗೆ ಆಗಾಗ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದರು. 6 ದಿನಗಳ ಹಿಂದಷ್ಟೇ ಆತ್ಯಾಚಾರಕ್ಕೆ ಒಳಗಾದ […]

ಶೋ ರೂಮ್​ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಆತ್ಮಹತ್ಯೆ

Monday, April 5th, 2021
deeksha

ಕಡಬ : ಶೋ ರೂಮ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬುವವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಮೃತ ಯುವತಿ. ಕಡಬದ ಶೋ ರೂಮ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ದೀಕ್ಷಾ, ತನ್ನ ಮನೆ ಸಮೀಪವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿಯೊಂದಿಗಿದ್ದ ಅನ್ಯ ಕೋಮಿನ ಯುವಕನಿಗೆ ಹಲ್ಲೆ : ಎಂಟು ಶಂಕಿತರು ವಶಕ್ಕೆ

Friday, April 2nd, 2021
Shashikumar

ಮಂಗಳೂರು : ಬೆಂಗಳೂರಿಗೆ ಕೆಲಸ ಹುಡುಕಲು ಅನ್ಯ ಕೋಮಿನ ಯುವಕನೊಂದಿಗೆ ಗುರುವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವತಿಯೊಂದಿಗಿದ್ದ ಇದ್ದ ಯುವಕನ ಮೇಲೆ ಹಿಂದೂ ಸಂಘಟನೆಗಳು ಹಲ್ಲೆ ನಡೆಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಎನ್.ಶಶಿಕುಮಾರ್,  ಕಂಕನಾಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ತಡೆದು ಅದರಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,  ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 8 ಶಂಕಿತರನ್ನು ವಿಚಾರಣೆಗಾಗಿ […]

ಕುಂಪಲ ಆಶ್ರಯ ಕಾಲೋನಿಯ ಮನೆಯಲ್ಲಿ ಮಾಡೆಲ್ ಶವ ಪತ್ತೆ, ಮೂವರ ಮೇಲೆ ಅನುಮಾನ !

Wednesday, March 10th, 2021
Preksha

ಉಳ್ಳಾಲ : ಮಾಡೆಲಿಂಗ್ ಯುವತಿ, ಪೋಟೋ ಶೂಟ್ ನಲ್ಲಿ ಭಾಗವಹಿಸಲು  ಬೆಂಗಳೂರಿಗೆ ತೆರಳಲು ಸಿದ್ದತೆ ಮಾಡಿಕೊಂಡಿದ್ದವಳು ಕುಂಪಲದ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೃತ ಯುವತಿಯನ್ನು ಆಶ್ರಯ ಕಾಲನಿ ನಿವಾಸಿ ಎಚ್ಪಿ ಗ್ಯಾಸ್ ಏಜನ್ಸಿಯಲ್ಲಿ ಕಾರ್ಮಿಕರಾಗಿರುವ ಚಿತ್ತಪ್ರಸಾದ್ ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ವನಿತಾ ದಂಪತಿಯ ಕಿರಿಯ ಪುತ್ರಿ ಪ್ರೇಕ್ಷಾ (17)  ಎಂದು ಗುರುತಿಸಲಾಗಿದೆ. ಮಂಗಳೂರು ನಂತೂರು ಬಳಿಯ ನಿಟ್ಟೆ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ಇಂದು ರಜೆ ಪಡೆದುಕೊಂಡು ಮನೆಯಲ್ಲೇ […]

ಕೈರಂಗಳದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

Tuesday, February 2nd, 2021
Rape

ಕೊಣಾಜೆ :  ಹದಿನೆಂಟರ ಹರೆಯದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳದಲ್ಲಿ ನಡೆದಿದೆ. ಕೈರಂಗಳ‌ ಗ್ರಾಮದಲ್ಲಿ ಹದಿನೆಂಟರ ಹರೆಯದ ಮೂಗಿ ಯುವತಿಯೊಬ್ಬಳ ಮೇಲೆ ಯಾರು ಇಲ್ಲದೆ ಇರುವುದನ್ನು ಗಮನಿಸಿ ದುಷ್ಕರ್ಮಿಯೊಬ್ಬ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಮನೆ ಮಂದಿ ರವಿವಾರ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೊಬ್ಬ ಮನೆಗೆ ನುಗ್ಗಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಯುವತಿಯನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಆರೋಪಿಯನ್ನು […]

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಗರ್ಭಪಾತ ಮಾಡಿಸಿದ ಯುವಕ

Tuesday, January 19th, 2021
Rakshith

ಸುಬ್ರಹ್ಮಣ್ಯ: ಫೇಸ್‌ಬುಕ್ ಮೂಲಕ ಪರಿಚಯವಾಗಿ ಯುವತಿಯನ್ನು ಮದುವೆಯಾಗುವುದಾಗಿ  ನಂಬಿಸಿ  ದೈಹಿಕ ಸಂಪರ್ಕ ಬೆಳೆಸಿ ಗರ್ಭಪಾತ ಮಾಡಿಸಿ ದ್ದಾನೆಂದು ಯುವತಿ ದೂರು ನೀಡಿದ್ದಾಳೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ರಕ್ಷಿತ್ ಎಂಬಾತ  ಮದುವೆಯಾಗುವ ಭರವಸೆ ನೀಡಿ ತನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆಕೆ ಹೇಳಿದ್ದು, ಗರ್ಭಪಾತ ಸಹ ಮಾಡಿಸಿದ್ದಾನೆ ಎಂದು ತಿಳಿಸಿದ್ದಾನೆ. ಆದರೆ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡುತ್ತಿದ್ದಾನೆಂದು ತುಮಕೂರಿನ ವಸಂತಾ ಎಂಬ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿ ನೀಡಿರುವ ದೂರಿನ ಆಧಾರದ ಮೇರೆಗೆ ಕ್ರಮ ಕೈಗೊಂಡ […]

ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ಡಿಕ್ಕಿ, ಯುವತಿ ಸಾವು

Sunday, November 29th, 2020
Shreya

ಕೋಟ: ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟಿದ್ದು, ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25)ಸ್ಥಿತಿ ಚಿಂತಾಜನಕವಾಗಿದೆ. ಕೋಟದ ರಾಷ್ಟ್ರೀಯ ಹೆದ್ದಾರಿ ಕೃಷ್ಣಭವನ ಹೋಟೆಲ್ ಎದುರುಗಡೆ ಶನಿವಾರ ಕುಂದಾಪುರದಿಂದ ಉಡುಪಿ ಕಡೆ ಸ್ಕೂಟಿಯಲ್ಲಿ ಇಬ್ಬರು ಯುವತಿಯರು ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಪ್ರಜ್ಞಾ […]