ಅನುಪಮಾ ಶೆಣೈ ಯೂ ಟರ್ನ್ : ರಾಜೀನಾಮೆ ಹಿಂಪಡೆಯಲು ಸಿಎಂಗೆ ಪತ್ರ
Monday, September 19th, 2016ಮಂಗಳೂರು: ಕೂಡ್ಲಿಗಿ ಡಿವೈಎಸ್ಪಿ ಹುದ್ದೆಗೆ ನೀಡಿದ ರಾಜೀನಾಮೆ ಹಿಂಪಡೆಯುವುದಾಗಿ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ. ಆ. 29ಕ್ಕೆ ಪತ್ರ ಬರೆಯಲಾಗಿದ್ದರೂ ಪರಿಶೀಲಿಸಲಾಗುತ್ತಿದೆ ಎಂದಷ್ಟೇ ಉತ್ತರ ಬಂದಿದೆ ಎಂದು ಕೂಡ್ಲಿಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ತಿಳಿಸಿದ್ದಾರೆ. ಯುವ ಬ್ರಿಗೇಡ್ ದ.ಕ. ಜಿಲ್ಲಾ ಘಟಕದ ವತಿಯಿಂದ ನಗರದ ಟಿ.ವಿ. ರಮಣ ಪೈ ಕನ್ವೆನ್ಶನ್ ಸೆಂಟರ್ನಲ್ಲಿ ನಡೆದ “ಹೈದರಾಬಾದ್ ಸ್ವಾತಂತ್ರ್ಯ ಸಂಘರ್ಷ: ಹೈದರಾಬಾದ್ ಮುಕ್ತಿ ದಿವಸ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜೀನಾಮೆ ಹಿಂಪಡೆಯುವ ಕುರಿತು ಪತ್ರ ಬರೆದ ಅನಂತರ ಮುಖ್ಯಮಂತ್ರಿಯವರೇ […]