Blog Archive

ಎಸ್.ಡಿ.ಪಿ.ಐ ನಿಂದ ರಾಜಕೀಯ ಅಸ್ಥಿರತೆ ಸರಿದೂಗಿಸಲು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

Friday, October 15th, 2010
ಎಸ್.ಡಿ.ಪಿ.ಐ ನಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಜನತೆ ಹಿಂದೆಂದೂ ಕಂಡಿರದ ನಾಟಕೀಯ ರಾಜಕೀಯ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ತಮ್ಮದು ಭ್ರಷ್ಟಾಚಾರ ರಹಿತ, ರೈತರ ಬಡವರ ಪರ ಆಡಳಿತ ನೀಡುತ್ತೇವೆಂದು ಜನತೆಗೆ ಆಶ್ವಾಸನೆ ನೀಡಿ ಈ ಸರಕಾರದಿಂದ ನಿರೀಕ್ಷಿಸಿದ್ದ ಎಲ್ಲಾ ಭರವಸೆಗಳನ್ನು ಹುಸಿಯಾಗಿಸಿದೆ. ಬಿಜೆಪಿ ಸರಕಾರಕ್ಕೆ ಆಡಳಿತ ನಡೆಸಲು ಈ ರಾಜ್ಯದ ಜನತೆ ಸ್ಪಷ್ಟ ಜನಾದೇಶ ನೀಡಿದ್ದರೂ, ಇತರ ಪಕ್ಷಗಳಿಂದ ಚುನಾಯಿತರಾದ ಜನಪ್ರತಿನಿಧಿಗಳನ್ನು ಹಣ ಹಾಗೂ ಮಂತ್ರಿಗಿರಿಯ ಅಮಿಷ ತೋರಿಸಿ ಕುದುರೆ ವ್ಯಾಪಾರ  ನಡೆಸುವ ಮೂಲಕ “ಆಪರೇಶನ್ ಕಮಲ”ದ […]

ಎರಡನೇ ಬಾರಿಗೆ ಬಹುಮತ ಗೆದ್ದ ಯಡಿಯೂರಪ್ಪ ಸರಕಾರ

Thursday, October 14th, 2010
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ದೇಶದ ಇತಿಹಾಸದಲ್ಲೇ ಒಂದೇ ವಾರದಲ್ಲಿ ಎರಡೆರಡು ಬಾರಿ ವಿಶ್ವಾಸ ಮತ ಚಲಾಯಿಸಿ ದಕ್ಷಿಣ ಭಾರತದಲ್ಲಿ ಮೊದಲ ಭಾರಿಗೆ ಅಧಿಕಾರ ಹಿಡಿದ ಬಿ.ಎಸ್.ಯಡಿಯೂರಪ್ಪ ಸರಕಾರ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದೆ. ವಿಧಾನ ಸಭಾ ಸ್ಪೀಕರ್ ದ್ವನಿ ಮತದ ಮೂಲಕ ವಿಶ್ವಾಸ ಮತ ಚಲಾಯಿಸಲು ಸೂಚಿಸಿದರಾದರೂ ವಿರೋಧ ಪಕ್ಷದ ಪ್ರತಿರೋದದಿಂದಾಗಿ ತಲೆ ಎಣಿಕೆಗೆ ಸೂಚನೆ ನೀಡಿದರು. ಪರ ಹಾಗೂ ವಿರೋಧ ಪಕ್ಷಗಳ ಶಾಸಕರ ಪ್ರತಿ ಸಾಲಿನ ಮತ ಎಣಿಕೆ ಬಳಿಕ ಯಡಿಯೂರಪ್ಪ ಪರವಾಗಿ 106 ಹಾಗೂ ವಿರೋಧವಾಗಿ […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]