ಗಾಯಗೊಂಡ ರಿಕ್ಷಾ ಚಾಲಕನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ : ಗೃಹ ಸಚಿವ

Wednesday, November 23rd, 2022
Araga-Jnanedra

ಮಂಗಳೂರು : ಕುಕ್ಕರ್ ಬಾಂಬ್ ಘಟನೆಯಿಂದ ಗಾಯಗೊಂಡ ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರ ಭರಿಸಲಿದೆ. ಅವರ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡುವ ಬಗ್ಗೆ ಮುಂದೆ ನಿರ್ಣಯಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆರೋಪಿ ಶಾರೀಕ್ ಆರೋಗ್ಯ ಸುಧಾರಣೆಯಾದ ಬಳಿಕವಷ್ಟೇ ಆತನ ವಿಚಾರಣೆ ಸಾಧ್ಯವಾಗಲಿದೆ. ಎಂಟು ಮಂದಿ ತಜ್ಞ ವೈದ್ಯರು ಆತನಿಗೆ ಚಿಕಿತ್ಸೆ ನೀಡುತ್ತಿದ್ದು, ಎಲ್ಲಾ ವೈದ್ಯರೊಂದಿಗೆ ಮಾತನಾಡಿದ್ದೇನೆ ಎಂದವರು ಹೇಳಿದರು ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, […]

ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ಭೇಟಿ

Wednesday, November 23rd, 2022
Araga-Jnanedra-padil

ಮಂಗಳೂರು : ನಗರದ ನಾಗುರಿಯಲ್ಲಿ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ಅವರು‌ ನವೆಂಬರ್ 23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್‌, ಡಿಸಿಪಿ ಅನ್ಶು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ ಮತ್ತಿತರರು ಈ ವೇಳೆ ಹಾಜರಿದ್ದರು. ಸ್ಥಳ ಪರಿಶೀಲನೆ ಬಳಿಕ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡ […]

ನೇತ್ರಾವತಿ ಸೇತುವೆಯಲ್ಲಿ ರಿಕ್ಷಾ ಮತ್ತು ಕಾರು ಅಫಘಾತ, ಚಾಲಕ ಸಾವು

Saturday, March 27th, 2021
Netravathi Bridge

ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆಸಂಭವಿಸಿದೆ. ಮೃತರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ. ಶ್ಯಾಮಪ್ರಸಾದ್ ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭ ಕಾರು ಢಿಕ್ಕಿ ಹೊಡೆದಿದೆ. ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ […]

ರಸ್ತೆ ಬದಿ ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ, ಚಾಲಕ ಸಾವು

Tuesday, October 20th, 2020
Sunil Dead

ಉಡುಪಿ :  ರಿಕ್ಷಾವೊಂದು ರಸ್ತೆ ಬದಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಗುಂಡಿಬೈಲು ನಾಗನಕಟ್ಟೆ ಸಮೀಪ ಮಂಗಳವಾರ ಸಂಜೆ ವೇಳೆ ನಡೆದಿದೆ. ಮೃತರನ್ನು ಮೂಡಬೆಟ್ಟುವಿನ ಸುನೀಲ್(44) ಎಂದು ಗುರುತಿಸಲಾಗಿದೆ. ಅಂಬಾಗಿಲು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಕ್ಷಾ, ರಸ್ತೆ ಬದಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾ ಪಲ್ಟಿಯಾಗಿದ್ದು, ಈ ವೇಳೆ ಚಾಲಕ ರಿಕ್ಷಾದಿಂದ ಹೊರಗೆ ಎಸೆಯಲ್ಪಟ್ಟರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸುನೀಲ್, ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ […]

ಸಹಾಯ ಮಾಡುವ ನೆಪದಲ್ಲಿ ವೃದ್ಧೆಯೊಬ್ಬರ 4.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ರಿಕ್ಷಾ ಚಾಲಕ

Wednesday, August 19th, 2020
gold ornament

ಮಂಗಳೂರು : ರಿಕ್ಷಾ ಚಾಲಕನೋರ್ವ ವೃದ್ಧೆಯೊಬ್ಬರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿ ಬುಧವಾರ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಶಕ್ತಿನಗರ ನಿವಾಸಿ ಪ್ರವೀಣ್ ರಾಮನಾಯ್ಕಿ (40) ಬಂಧಿತ ಆರೋಪಿ. ಚಿಲಿಂಬಿಯ ಸಮೀಪ ವೃದ್ಧೆಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪದಲ್ಲಿ  ಉರ್ವ ಪೊಲೀಸರು ಬುಧವಾರ ಆತನನ್ನು ಬಂಧಿಸಿದ್ದಾರೆ. ಜೂ.7ರಂದು ಚಿಲಿಂಬಿಯ ದೇವಸ್ಥಾನವೊಂದರ ಬಳಿ 72 ವರ್ಷದ ವೃದ್ಧೆಗೆ ಸಹಾಯ ಮಾಡುವ ನೆಪದಲ್ಲಿ ಈತ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಎಂದು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ […]

ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ಪ್ರಕರಣ : 9 ಆರೋಪಿಗಳು ಬಂಧನ

Tuesday, October 22nd, 2019
talavaru-daali

ಮಂಗಳೂರು : ನೀರುಮಾರ್ಗದ ಪಡು ಬಿತ್ತ್‌ಪಾದೆ ಸಮೀಪ ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಮಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅ.17ರಂದು ಸಂಕ್ರಮಣವಾದ ಕಾರಣ ಸಂತೋಷ್ ಅವರು ಬಿತ್ತ್‌ಪಾದೆಯ ಅಂಗಡಿಯೊಂದರಲ್ಲಿ ಎಳ್ಳೆಣ್ಣೆ ಖರೀದಿಸಿ ತನ್ನ ಮನೆ ಗುತ್ತಿಗೆಯತ್ತ ರಿಕ್ಷಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಕಪ್ಪು ಬಣ್ಣದ ಆಕ್ಟೀವಾದಲ್ಲಿ ಬಂದ ಇಬ್ಬರು ಯುವಕರು ಸಂತೋಷ್‌ನನ್ನು ಅಡ್ಡಗಟ್ಟಿ ತಗಾದೆ ತೆಗೆದಿದ್ದಾರೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ತಾವು ತಂದಿದ್ದ ತಲವಾರಿನಿಂದ […]

ಪ್ರೀತಿ ನಿರಾಕರಿಸದಕ್ಕೆ ಯುವತಿಯ ಸಹೋದರಿಯ ಮೇಲೆ ಅತ್ಯಾಚಾರಕ್ಕೆ ಯತ್ನ..!

Tuesday, July 31st, 2018
attempt

ಮಂಗಳೂರು: ಯುವತಿಯು ತನ್ನನ್ನು ಪ್ರೀತಿಸುತ್ತಿಲ್ಲ ಎಂದು ಯುವಕನೊಬ್ಬ ಆಕೆ ಸಂಚರಿಸುತ್ತಿದ್ದ ರಿಕ್ಷಾಕ್ಕೆ ತನ್ನ ಪಿಕಪ್ ವಾಹನ ಡಿಕ್ಕಿ ಹೊಡೆಸಿ, ಯುವತಿ ಮತ್ತು ಆಕೆಯ ಸಹೋದರಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುವಿನಲ್ಲಿ‌ ನಡೆದಿದೆ. ಆರೋಪಿ ಥಾಮಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯರು ಆಟೋ ರಿಕ್ಷಾದಲ್ಲಿ ಅಣೆಯೂರುನಿಂದ ಗಂಡಿಬಾಗಿಲುವರೆಗೆ ತೆರಳುವಾಗ ಈ ಘಟನೆ ನಡೆದಿದೆ. ಆರೋಪಿ ಥಾಮಸ್ ತನ್ನ ಪಿಕಪ್ ವಾಹನದಲ್ಲಿ ರಿಕ್ಷಾವನ್ನು ಹಿಂಬಾಲಿಸಿಕೊಂಡು ಬಂದು ಡಿಕ್ಕಿ ಹೊಡೆಸಿದ್ದ. ರಿಕ್ಷಾ ಮಗುಚಿ ಬಿದ್ದಾಗ […]

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚನೆ..ಆರೋಪಿ ಸೆರೆ!

Saturday, July 7th, 2018
arrested

ಪುತ್ತೂರು: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದು, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಹಾರಾಡಿ ನಿವಾಸಿ ರಿಕ್ಷಾ ಚಾಲಕ ರವಿ ಎಂಬಾತ ಬಂಧಿತ ಆರೋಪಿ. ಈತ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಕಿವಿ ಓಲೆ ಹಾಗೂ ಬೇರೆ ಬೇರೆ ಸಂದರ್ಭದಲ್ಲಿ ಒಟ್ಟು 70,000 ರೂಪಾಯಿಯನ್ನು ಪಡೆದಿದ್ದ. ಜೊತೆಗೆ 2018ರ ಎಪ್ರಿಲ್ 12ರಂದು ತನ್ನ ಮನೆಯನ್ನು ತೋರಿಸುವುದಾಗಿ ಹೇಳಿ ಪುತ್ತೂರು […]

ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಬಿ .ಸಿ .ರೋಡ್ ಸರ್ವಿಸ್ ರಸ್ತೆ ದುರಸ್ತಿಗೆ ಆಗ್ರಹ

Saturday, July 1st, 2017
Bantwal Rikshwa

ಬಂಟ್ವಾಳ : ಹೊಂಡ-ಗುಂಡಿಗಳಿಂದ ಆವೃತವಾಗಿ, ಸಂಪೂರ್ಣ ಹದಗೆಟ್ಟಿರುವ ಬಿ .ಸಿ . ರೋಡ್ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಬಿ .ಸಿ . ರೋಡ್ ರಿಕ್ಷಾ ಚಾಲಕ-ಮಾಲಕರು ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ವಿನೂತನ ರೀತಿಯಲ್ಲಿ ಧರಣಿ ನಡೆಸಿದರು. 8 ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದು,ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.ಈ ಹಿನ್ನೆಲೆಯಲ್ಲಿ ಸಂಸದರು, ಜಿಲ್ಲಾ ಡಳಿತ, ರಾಷ್ಟ್ರೀಯ ಹೆzರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ […]

ರಿಕ್ಷಾ ಚಾಲಕ, ಪಡೀಲ್ ನಿವಾಸಿ ಮುಖೇಶ್ ಮೇಲೆ ಹಲ್ಲೆ

Thursday, July 7th, 2016
Mukhesh

ಮಂಗಳೂರು: ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಪಡೀಲ್ ಭಜರಂಗದಳದ ಸದಸ್ಯನೂ ಆಗಿರುವ ಯುವಕನೋರ್ವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಿನ್ನೆ ಸಂಜೆ ನಗರದ ಫೈಸಲ್‍ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಪಡೀಲ್ ನಿವಾಸಿ ಮುಖೇಶ್ ಎಂದು ಗುರುತಿಸಲಾಗಿದೆ. ಮುಖೇಶ್ ತನ್ನ ರಿಕ್ಷಾದಲ್ಲಿ ಫೈಸಲ್‍ನಗರಕ್ಕೆ ಬಾಡಿಗೆಗೆ ತೆರಳಿದ್ದ. ಈ ವೇಳೆ ರಸ್ತೆಯಲ್ಲಿ ಶೇಖರಣೆಯಾಗಿದ್ದ ಕೆಸರು ನೀರು ರಸ್ತೆ ಬದಿ ನಿಂತಿದ್ದ ಯುವಕನೋರ್ವನ ಮೇಲೆ ಎರಚಿದೆ. ಇದನ್ನೇ ನೆಪವಾಗಿರಿಸಿದ ಸ್ಥಳೀಯ ಯುವಕರು ಮುಖೇಶ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳಕ್ಕೆ […]