Blog Archive

‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ನಾಳೆ (ಏಪ್ರಿಲ್ 27) ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್

Monday, April 26th, 2021
yedyurappa

ಬೆಂಗಳೂರು: ಕೊರೊನಾ 2 ನೇ ಅಲೆ ವ್ಯಾಪಿಸುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಮತ್ತಷ್ಟು ಬಿಗಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏಪ್ರಿಲ್ 27 ರಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ,   15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. […]

ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಎಂದು ಹೇಳಿ, ಸರಕಾರ ಈಗ ಮಾಡುತ್ತಿರುವುದೇನು ?

Friday, April 23rd, 2021
Market Bundh

ಮಂಗಳೂರು : ಕೊರೋನಾ ಮಾರ್ಗ ಸೂಚಿ ಪ್ರಕಾರ ಸರಕಾರ ಕ್ಷಣಕ್ಕೊಂದು ನಿರ್ಧಾರ ತಳೆದು ಜನರನ್ನು ಸಂಪೂರ್ಣ ಗೊಂದಲ ಹಾಗೂ ಭಯಭೀತ ಗೊಳಿಸಿದ್ದು, ಸರಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಹೇಳಿದ್ದು, ಇದೀಗ ಹಿಂಬಾಗಿಲ ಮೂಲಕ ಸಾರ್ವಜನಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಸಂಪೂರ್ಣ ಲಾಕ್ ಡೌನ್ ಸ್ಥಿತಿಗೆ ತಂದಿದೆ. ಕೊರೋನಾ ನಿಯಂತ್ರಣ ಇರುವ ಪ್ರದೇಶದಲ್ಲಿ ಕೂಡ ವ್ಯವಹಾರ ಮಳಿಗೆಗಳನ್ನು ಏಕಾಏಕಿ ಬಲವಂತ ಮುಚ್ಚಲು ಆರಂಭಿಸಿದೆ. ಸರಕಾರದ ಈ ಕ್ರಮ ಮುಂದಿನ […]

ನೈಟ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಭಾನುವಾರ ನಿರ್ಧಾರ, ಏಪ್ರಿಲ್ 20ರ ವರೆಗೆ ಯಥಾಸ್ಥಿತಿ

Friday, April 16th, 2021
yedyurappa

ಬೆಂಗಳೂರು :  ರಾಜ್ಯ ರಾಜಧಾನಿಯಲ್ಲಿ ಆತಂಕಕಾರಿ ಮಟ್ಟದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುವ ಸೂಚನೆ ಇದೆ.  ನಗರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಬಿಗಿಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ. ಆದರೆ, ಏಪ್ರಿಲ್ 20, ಮಂಗಳವಾರದವರೆಗೂ ಈಗಿರುವ ಕ್ರಮಗಳನ್ನ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ. ಜನತಾ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೊದಲಾದ ಕ್ರಮಗಳ ಬಗ್ಗೆ ಭಾನುವಾರ ನೋಡೋಣ. […]

ಕೊರೋನ ಲಾಕ್ ಡೌನ್ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳು ಆರಂಭ

Tuesday, November 17th, 2020
Degree college

ಮಂಗಳೂರು : ಕೊರೋನ ಲಾಕ್ ಡೌನ್ ಬಳಿಕ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳಲ್ಲಿ ತರಗತಿಗಳು ಇಂದಿನಿಂದ ಆರಂಭಗೊಂಡಿವೆ. ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ತರಗತಿ ಆರಂಭಿಸಲಾಗಿದೆ. ಕೋವಿಡ್-19 ನೆಗೆಟಿವ್ ವರದಿ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಅದೇರೀತಿ ಕಾಲೇಜಿಗೆ ಆಗಮಿಸುವುದಕ್ಕೆ ಸಮ್ಮತಿ ಇರುವುದಾಗಿ ಪೋಷಕರಿಂದ ಒಪ್ಪಿಗೆ ಪತ್ರ ತಂದಿರುವ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶ ನೀಡಲಾಗಿದೆ. ತರಗತಿ ಪ್ರವೇಶಿಸುವ ಮೊದಲು […]

ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ: ಅತಂತ್ರವಾದ ಗೈಡ್‌ ಗಳ ಬದುಕು

Tuesday, September 8th, 2020
Hampi

ವಿಶೇಷ ವರದಿ : ಶಂಭು – ಹಂಪಿ : ವಿಶ್ವವ್ಯಾಪಿ ಹರಡಿರುವ ಕೊರೋನಾ ಹಿನ್ನೆಲೆಯಲ್ಲಿ ಪ್ರಖ್ಯಾತ ಪ್ರವಾಸಿ ತಾಣವಾಗಿರುವ ಹಂಪಿಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದ್ದು, ಹಂಪಿ ಇತಿಹಾಸ ವಿವರಿಸುವ ಮಾರ್ಗದರ್ಶಿಗಳ ಬದುಕು ಸಂಕಷ್ಟಕ್ಕೀಡಾಗಿದೆ. ಹಂಪಿಗೆ ಆಗಮಿಸುವ ಪ್ರವಾಸಿಗರನ್ನು ನೆಚ್ಚಿಕೊಂಡು ಕಳೆದ 15-20  ವರ್ಷಗಳಿಂದ ಜೀವನ ನಡೆಸುತ್ತಿರುವ ಸುಮಾರು 180 ಮಾರ್ಗದರ್ಶಿಗಳ ಬದುಕು ಲಾಕ್‌ ಡೌನ್‌ ನ ಕಳೆದ 5 ತಿಂಗಳಿಂದ ಅತಂತ್ರದಲ್ಲಿದೆ. ಕೊರೋನಾ ವೈರಸ್‌ ಹಂಪಿಯ ಮಾರ್ಗದರ್ಶಿಗಳ ಜೀವನಕ್ಕೆ ಪೆಟ್ಟು ನೀಡಿದೆ. ಜೀವನ ನಡೆಸುವುದು ಕಷ್ಟಕರವಾಗಿದೆ. ಮಾರ್ಗದರ್ಶಿಗಳ ನೂರಾರು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ, ಇವತ್ತು ಸಂಜೆ ನಿರ್ಧಾರ

Wednesday, July 22nd, 2020
koto Srinivas

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ  ದಿನಂಪ್ರತಿ ನೂರರ ಗಡಿ ದಾಟುತ್ತಿರುವುದರಿಂದ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ […]

ಹುಬ್ಬಳ್ಳಿ : 24ರ ನಂತರ ಲಾಕ್ ಡೌನ್ ಗೆ ಪ್ಲಾನ್

Tuesday, July 21st, 2020
hubballi

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಲಾಕ್ ಡೌನ್ ಮಾಡಿದ್ರು ಸಹ ದಾರಿಗೆ ಬರದ ಕೋವಿಡ್ ಗೆ ಜಿಲ್ಲಾಡಳಿತ ತಲೆ ಕೆಡಿಸಿಕೊಂಡಿದೆ. ಅಲ್ಲದೆ ಮತ್ತೊಂದು ಸುತ್ತಿನ ಲಾಕ್ ಡೌನ್ ಮಾಡಲು ಈಗಾಗಲೇ ಸದ್ದಿಲ್ಲದೆ ಪ್ಲಾನ್ ಮಾಡಿದೆ. ಹೌದು…ರಾಜ್ಯದಲ್ಲಿ ನಿತ್ಯ ಕೊರೊನಾ ಹಾವಳಿ ಹೆಚ್ಚಾಗಿದ್ದು, ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ..ಈ ಹಿನ್ನೆಲೆ ಈಗಾಗಲೇ ಲಾಕ್ ಡೌನ್ ಘೋಷಣೆ ಸಹ ಮಾಡಿದೆ.ಆದ್ರೆ ಇಷ್ಟೆಲ್ಲಾ ಮಾಡಿದ್ರು ಸಹ ಕೊರೋನಾ ರಣಕೇಕೆ ಮಾತ್ರ ನಿಂತಿಲ್ಲ. […]

ತುರ್ತುಸೇವೆ ಪಾಸ್ ಪಡೆದು ಪಿಕಪ್ ವಾಹನ ದಲ್ಲಿ ಅಕ್ರಮ ದನ ಸಾಗಾಟ, ತಡೆದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

Monday, July 20th, 2020
cow smuggler

ಬೆಳ್ತಂಗಡಿ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದವರನ್ನ ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೆಳ್ತಂಗಡಿಯ ಸುರ್ಯಪಡ್ಪು ಎಂಬಲ್ಲಿ ನಡೆದಿದೆ ನಡೆದಿದೆ. ಆಟೋ ಚಾಲಕ ರಾಜೇಶ್ ಎಂಬವ ಮನೆಯಲ್ಲಿ ಗೋವುಗಳನ್ನು ಸಾಕಿ  ಅವುಗಳನ್ನು ಕಸಾಯಿ ಖಾನೆಗೆ ಮಾರುತ್ತಿದ್ದರು. ಇಂದು ಸಹ  ರಾಜೇಶ್ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ, ಎರಡು ಕರುವನ್ನು ಅಮಾನುಷವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದರು. ಗೋವುಗಳನ್ನು ಪಿಕಪ್ ವಾಹನದಲ್ಲಿ ಕಳುಹಿಸಿ ರಾಜೇಶ್ ಮತ್ತು ಆತನ ಸಹಚರರು ಬೆಂಗಾವಲು ವಾಹನ ಆಲ್ಟೋ ಕಾರಿನಲ್ಲಿಹೋಗುತ್ತಿದ್ದರು. ಸಂಪೂರ್ಣ ಲಾಕ್ ಡೌನ್ ವೇಳೆ […]

ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ : ಜಿಲ್ಲಾಧಿಕಾರಿ

Saturday, July 18th, 2020
Sindu B Roopesh

ಮಂಗಳೂರು : ಜುಲೈ 15ರ ರಾತ್ರಿಯಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ 11 ಗಂಟೆಯ ತನಕ ಇರುವ ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ರವಿವಾರ (ಜು.19) ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.