Blog Archive

ಅಪಘಾತಕ್ಕೆ ಈಡಾದ ಲಾರಿ..ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ದಟ್ಟಣೆ!

Wednesday, July 18th, 2018
accident

ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ಸಾಲಾಗಿ ವಾಹನಗಳು ನಿಂತಿವೆ. ಒಂದಿಂಚು ಕದಲುವುದು ಕೂಡ ಅಸಾಧ್ಯ ಎಂಬ ಸ್ಥಿತಿ. ಇದು ಕೆಲ ಸಮಯದ ಮಟ್ಟಿಗೆ ಆದ ಅನನುಕೂಲ ಖಂಡಿತಾ ಇಲ್ಲ. ಘಾಟಿಯಲ್ಲಿ ತಾಸುಗಟ್ಟಲೆ ವಾಹನಗಳು ನಿಲ್ಲುವಂತಾಗಿದೆ. ಈ ಪರಿಯ ಸಂಚಾರ ದಟ್ಟಣೆಗೆ ಏನು ಕಾರಣ ಎಂಬ ಪ್ರಶ್ನೆ ಮೂಡುವುದು ಸಹಜ. ಅಸಲಿಗೆ ಏನಾಗಿದೆ ಅಂದರೆ, ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತಡೆಗೋಡೆಗೆ ಗುದ್ದಿದೆ. ಹಾಗೆ ಘಾಟಿಯಾ ಮಧ್ಯದಲ್ಲಿ ಅಪಘಾತ ಸಂಭವಿಸಿ, ಎರಡೂ ಬದಿಯಿಂದ ವಾಹನಗಳ ಸಂಚಾರವೇ ಸಾಧ್ಯವಿಲ್ಲ ಎಂಬ ಸನ್ನಿವೇಶ […]

ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದ ಲಾರಿ

Wednesday, August 24th, 2016
LOry

ಮಂಗಳೂರು: ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣಕ್ಕೆ ಸಿಗದ ಲಾರಿಯೊಂದು ಉರುಳಿ ಬಿದ್ದ ಘಟನೆ ಬಂಟ್ವಾಳದ ಎಸ್‌ವಿಎಸ್ ಕಾಲೇಜು ಬಳಿ ಸಂಜೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಅಭಿಲಾಷ್ (40) ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಲೀನರ್ ಮನ್ಸೂರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಲೊರೆಟ್ಟೋ ಕಡೆಯಿಂದ ಕೋಳಿ ಗೊಬ್ಬರ ಹೇರಿಕೊಂಡು ಬರುತ್ತಿದ್ದ ಲಾರಿ ಎಸ್‌‌ವಿಎಸ್ ಕಾಲೇಜು ಬಳಿಯ ಇಳಿಜಾರು ರಸ್ತೆಯಲ್ಲಿ ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿದೆ. ಇದೇ ವೇಳೆ ಕಾಲೇಜಿನ ಅನೇಕ ವಿದ್ಯಾರ್ಥಿಗಳು ಬಸ್ಸಿಗಾಗಿ ರಸ್ತೆ ಬದಿ […]