Blog Archive

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಮಧ್ಯವರ್ತಿಯಾಗಿದ್ದ ಮಹಿಳೆಯ ಬಂಧನ

Wednesday, August 26th, 2020
Sunitha

ಕಾಸರಗೋಡು : ಮಹಿಳೆ ಯೊಬ್ಬಳು  ಮಧ್ಯವರ್ತಿ ಯಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಯುವಕರಿಬ್ಬರಿಗೆ ಸಹಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ಕುಂಬ್ಳೆ ಪೊಲೀಸರು ಬಂಧಿಸಿದ್ದಾರೆ. ಕಟ್ಟದಂಗಡಿ ಪೆರಿಯಡ್ಕದ ಕಾಲನಿಯ ಸುನಿತಾ (30) ಬಂಧಿತಳು. ಘಟನೆ ಕುಂಬಳೆಯಿಂದ ಒಂದು ವರ್ಷದ ಬಳಿಕ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಂಬಳೆಯಲ್ಲಿ ಉತ್ಸವ ನೋಡಲೆಂದು 2018 ರ ಡಿಸಂಬರ್ 18 ರಂದು ರಾತ್ರಿ ಬಾಲಕಿಯನ್ನು ಕರೆದೊಯ್ದು ನಿರ್ಜನ ಸ್ಥಳದಲ್ಲಿ ಕೃತ್ಯ ನಡೆಸಿದ್ದು, ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾತ್ರಿ ಓರ್ವ […]

ಬಿಷಪ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಸಂತ್ರಸ್ತೆ ಏಕಾಏಕಿ ಯು ಟರ್ನ್

Saturday, December 14th, 2019
Mysuru

ಮೈಸೂರು : ಮೈಸೂರಿನ ಬಿಷಪ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತೆ ಇದೀಗ ಏಕಾಏಕಿ ಯು ಟರ್ನ್ ಆಗಿದ್ದಾರೆ. ನನ್ನ ಮೇಲೆ ನಿರಂತರವಾಗಿ ಕಿರುಕುಳವಾಗಿದೆ. ಜೀವ ಬೇದರಿಕೆ ಇದೆ ಎಂದು ಮೈಸೂರಿನ ಬಿಷಪ್ ವಿಲಿಯಂ ವಿರುದ್ಧ ಸಂತ್ರಸ್ತೆ ಆರೋಪಿಸಿ ಕಣ್ಣೀರು ಹಾಕಿದ್ದರು. ಈ ಬಗ್ಗೆ ಸೆಲ್ಫಿ ವಿಡಿಯೋ ದಾಖಲು ಮಾಡಿದ್ದ ಸಂತ್ರಸ್ತೆ ಸ್ವತಃ ತನ್ನದೇ ಹಸ್ತಾಕ್ಷರದಲ್ಲಿ ದೂರು ನೀಡಿದ್ದರು. ಆದರೇ ಈಗ ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಉಲ್ಟಾ ಹೊಡೆದಿದ್ದಾರೆ. ನನಗೆ ಬಿಷಪ್ ಕಡೆಯಿಂದ ತೊಂದರೆ […]

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿ ಬಂಧನ

Wednesday, June 5th, 2019
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿ ಬಂಧನ

ಮಂಗಳೂರು: ಪುತ್ತೂರು ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮಾರ್ಚ್ 9 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಬಾಲಕಿಯೋರ್ವಳನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಕೈಗೊಂಡಾಗ ಅಖ್ತರ್ ಹುಸೇನ್ ಅಪಹರಿಸಿದ ಬಗ್ಗೆ ಮಾಹಿತಿ ಸಿಕ್ಕಿತ್ತು. ಪುತ್ತೂರು ಗ್ರಾಮಾಂತರ […]

ಬೆರಳಿಗೆ ಬಿಳಿ ಬಣ್ಣವನ್ನು ಲೇಪಿಸುವ ಮೂಲಕ ಲೈಂಗಿಕ ದೌರ್ಜನ್ಯ ತಡೆಯಲು ಪ್ರಯತ್ನ

Sunday, November 18th, 2018
childline

ಮಂಗಳೂರು  : ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮವನ್ನು ದಿನಾಂಕ ಭಾನುವಾರ ರಂದು ಪೂರ್ವಾಹ್ನ 11.30ಕ್ಕೆ ಸರಿಯಾಗಿ ಮಂಗಳೂರಿನ ಲಾಲ್‌ಬಾಗ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಚೈಲ್ಡ್‌ಲೈನ್ ಸೆ ದೋಸ್ತಿ ಸಪ್ತಾಹ-2018 ರ ಅಂಗವಾಗಿ  ಆಯೋಜಿಸಲಾಯಿತು ಹಾಗೂ ಸಾರ್ವಜನಿಕರ ಕೈ ಬೆರಳಿಗೆ ಬಿಳಿ ಬಣ್ಣವನ್ನು ಲೇಪಿಸುವ ಮೂಲಕ ಲೈಂಗಿಕ ದೌರ್ಜನ್ಯವನ್ನು ವಿರೋಧಿಸುತ್ತೇವೆ ಎಂಬ ದ್ಯೇಯವಾಕ್ಯದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಶಿಕ್ಷಣ ಸಂಪನ್ಮೂಲ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರೇಮಿ ಪೆರ್ನಾಂಡಿಸ್‌ರವರು ಹಾಗೂ […]

ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ವಿಶೇಷ ಪೊಲೀಸ್ ದಳ ಅಗತ್ಯ

Thursday, November 6th, 2014
ACSU

ಮಂಗಳೂರು: ವಿದ್ಯಾರ್ಥಿಗಳ ಮೇಲೆ ರಾಜ್ಯದೆಲ್ಲೆಡೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ವಿಶೇಷ ಪೊಲೀಸ್ ದಳವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಸರ್ವ ಕಾಲೇಜ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ನ6. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರ್ವ ಕಾಲೇಜ್ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ವಿ ಶೆಟ್ಟಿ ಮಾತನಾಡಿ ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ನಡೆದಿರುವ ನಂದಿತಾ ಶಂಕಾಸ್ಪದ ಸಾವಿನ ಪ್ರಕರಣವನ್ನು ಬಯಲಿಗೆಳೆಯಲು ಪೊಲೀಸ್ ಇಲಾಖೆಯಿಂದ ಇನ್ನೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಅಕ್ಷತಾ, ರತ್ನಾ ಕೊಠಾರಿ ಸಾವು […]

ಗ್ರಾ.ಪಂ./ವಾರ್ಡ್ ಗಳಲ್ಲಿ ತಾಯಂದಿರ ವೇದಿಕೆ: ಅಮಿತಾ ಪ್ರಸಾದ್

Wednesday, September 10th, 2014
Amita prasad

ಮಂಗಳೂರು : ಸಮಾಜದಲ್ಲಿ ಆತ್ಯಾಚಾರ, ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಡಿಮೆಯಾಗಬೇಕಿದ್ದರೆ, ಮಕ್ಕಳನ್ನು ಬಾಲ್ಯದಿಂದಲೇ ಸುಸಂಸ್ಕೃತ ರೀತಿಯಲ್ಲಿ ಬೆಳಸಬೇಕಾಗಿದೆ. ಮಕ್ಕಳ ಮೇಲೆ ತಾಯಂದಿರ ಪ್ರಭಾವ ಪರಿಣಾಮಕಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತೀ ಗ್ರಾಮ ಪಂಚಾಯತ್ಗಳಲ್ಲಿ ಹಾಗೂ ನಗರ ಪ್ರದೇಶದ ವಾರ್ಡ್ ಗಳಲ್ಲಿ ತಾಯಂದಿರ ವೇದಿಕೆ ರಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯ ದರ್ಶಿ ಡಾ.ಅಮಿತಾ ಪ್ರಸಾದ್ ಹೇಳಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇವರ ಜಂಟಿ […]