ಬೆಂಬಲಿಗರಿಗೆ ಟಿಕೆಟ್; ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಎಸ್ವೈ ತಂತ್ರ
Wednesday, March 12th, 2014ಬೆಂಗಳೂರು: ಬಿಜೆಪಿಗೆ ಮರಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತನ್ನ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಬಗ್ಗೆ ಒತ್ತಡತಂತ್ರ ಅನುಸರಿಸುತ್ತಿದ್ದು, ಇದು ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಘೋಷಣೆಗೆ ಅಡ್ಡಿಯಾಗಿ ಪರಿಣಮಿಸಿದೆ. ಒತ್ತಡ ತಂತ್ರಗಳು ಫಲಿಸದೇ ಇದ್ದಲ್ಲಿ, ಅಂತಿಮವಾಗಿ ಶಿವಮೊಗ್ಗ ಕಣದಿಂದ ಹಿಂದೆ ಸರಿಯುವ ಬೆದರಿಕೆ ಒಡ್ಡುವ ಸಿದ್ಧತೆಯಲ್ಲಿ ಯಡಿಯೂರಪ್ಪ ಇದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪತ್ರ ಬರೆವ ಮೂಲಕ ಒತ್ತಡ ತಂತ್ರ: ಲೋಕಸಭೆ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ಅಂತಿಮ ಹಂತದಲ್ಲಿ ಯಡಿಯೂರಪ್ಪ ದಾಳ ಉರುಳಿಸಿದ್ದು, ಶೋಭಾ […]