Blog Archive

ಜಿಲ್ಲಾಧಿಕಾರಿ ಪೊನ್ನುರಾಜ್ ವರ್ಗಾವಣೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

Wednesday, November 3rd, 2010
ಜಿಲ್ಲಾಧಿಕಾರಿ ಪೊನ್ನುರಾಜ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವಿ.ಪೊನ್ನುರಾಜ್ ಅವರ ಶಿವಮೊಗ್ಗ ವರ್ಗಾವಣೆಯ ಆದೇಶವನ್ನು ರಾಜ್ಯ ಸರಕಾರ ರದ್ದುಗೊಳಿಸಿದ್ದು ಪಂಕಜ್‌ಕುಮಾರ್ ಪಾಂಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿಯೇ ಮುಂದುವರಿಸಲು ಸೂಚಿಸಿದೆ. ಇವರ ಜೊತೆ ವರ್ಗಾವಣೆಗೊಂಡ ಇನ್ನು ಮೂರು ಜನ ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾಪಂಚಾಯತ್ ಸಿಇಓ ಪಿ ಶಿವಶಂಕರ್ ಅವರ ಆದೇಶವನ್ನು ತಡೆ ಹಿಡಿಯಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ವಿ.ಬಿ.ಪಾಟೀಲರ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. […]